AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಎಲ್ಲಾ ಊಹಾಪೋಹಗಳಿಗೆ ತೆರೆ: RCB ತಂಡ ಸೇರಿಕೊಂಡ ಸ್ಟಾರ್ ಆಟಗಾರ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್-17 ಆರಂಭಕ್ಕೆ ಇನ್ನು ಉಳಿದಿರುವುದು ಕೇವಲ ದಿನಗಳು ಮಾತ್ರ. ಈಗಾಗಲೇ ಆರ್​ಸಿಬಿ ತಂಡದ ಎಲ್ಲಾ ಆಟಗಾರರು ಆಗಮಿಸಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಅದರಂತೆ ಮಾರ್ಚ್ 22 ರಂದು ನಡೆಯುವ ಐಪಿಎಲ್​ನ ಮೊದಲ ಪಂದ್ಯದಲ್ಲಿ ಆರ್​ಸಿಬಿ ಮತ್ತು ಸಿಎಸ್​ಕೆ ತಂಡಗಳು ಮುಖಾಮುಖಿಯಾಗಲಿದೆ.

TV9 Web
| Edited By: |

Updated on: Mar 19, 2024 | 7:02 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರ ಟಾಮ್ ಕರನ್ (Tom Curran) ಆಗಮಿಸಿದ್ದಾರೆ. ಅದು ಕೂಡ ಸಂಪೂರ್ಣ ಫಿಟ್​ನೆಸ್​ನೊಂದಿಗೆ. ಇದರೊಂದಿಗೆ ಕರನ್ ಸ್ಥಾನದಲ್ಲಿ ಬೇರೆವರಿಗೆ ಅವಕಾಶ ಸಿಗಲಿದೆ ಎಂಬ ಸುದ್ದಿಗಳಿಗೆ ಬ್ರೇಕ್ ಬಿದ್ದಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರ ಟಾಮ್ ಕರನ್ (Tom Curran) ಆಗಮಿಸಿದ್ದಾರೆ. ಅದು ಕೂಡ ಸಂಪೂರ್ಣ ಫಿಟ್​ನೆಸ್​ನೊಂದಿಗೆ. ಇದರೊಂದಿಗೆ ಕರನ್ ಸ್ಥಾನದಲ್ಲಿ ಬೇರೆವರಿಗೆ ಅವಕಾಶ ಸಿಗಲಿದೆ ಎಂಬ ಸುದ್ದಿಗಳಿಗೆ ಬ್ರೇಕ್ ಬಿದ್ದಿದೆ.

1 / 6
ಇದಕ್ಕೂ ಮುನ್ನ ಗಾಯಗೊಂಡಿರುವ ಟಾಮ್ ಕರನ್ ಅವರ ಬದಲಿಗೆ  RCB ತಂಡದಲ್ಲಿ ಜೋಫ್ರಾ ಆರ್ಚರ್ ಅಥವಾ ಬೇರೊಬ್ಬ ಆಟಗಾರ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೀಗ ತಡವಾಗಿಯಾದರೂ ಕರನ್ ಆರ್​ಸಿಬಿ ಬಳಗವನ್ನು ಕೂಡಿಕೊಂಡಿದ್ದಾರೆ. ಈ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಇದಕ್ಕೂ ಮುನ್ನ ಗಾಯಗೊಂಡಿರುವ ಟಾಮ್ ಕರನ್ ಅವರ ಬದಲಿಗೆ RCB ತಂಡದಲ್ಲಿ ಜೋಫ್ರಾ ಆರ್ಚರ್ ಅಥವಾ ಬೇರೊಬ್ಬ ಆಟಗಾರ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೀಗ ತಡವಾಗಿಯಾದರೂ ಕರನ್ ಆರ್​ಸಿಬಿ ಬಳಗವನ್ನು ಕೂಡಿಕೊಂಡಿದ್ದಾರೆ. ಈ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

2 / 6
ಜನವರಿ ತಿಂಗಳಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಬಿಗ್ ಬ್ಯಾಷ್ ಲೀಗ್​ನ ಪಂದ್ಯದ ವೇಳೆ ಟಾಮ್ ಕರನ್ ಅವರ ಮೊಣಕಾಲಿಗೆ ಗಾಯವಾಗಿತ್ತು. ಹೀಗಾಗಿ ಅವರು ಈ ಬಾರಿಯ ಐಪಿಎಲ್​ಗೆ ಅಲಭ್ಯರಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಇದೀಗ ತಿಂಗಳುಗಳ ಅಂತರದಲ್ಲಿ ಫಿಟ್​ನೆಸ್ ಸಾಧಿಸುವಲ್ಲಿ ಯಶಸ್ವಿಯಾಗಿರುವ ಇಂಗ್ಲೆಂಡ್ ಆಲ್​ರೌಂಡರ್ ಐಪಿಎಲ್​ಗೆ ಆಗಮಿಸಿದ್ದಾರೆ.

ಜನವರಿ ತಿಂಗಳಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಬಿಗ್ ಬ್ಯಾಷ್ ಲೀಗ್​ನ ಪಂದ್ಯದ ವೇಳೆ ಟಾಮ್ ಕರನ್ ಅವರ ಮೊಣಕಾಲಿಗೆ ಗಾಯವಾಗಿತ್ತು. ಹೀಗಾಗಿ ಅವರು ಈ ಬಾರಿಯ ಐಪಿಎಲ್​ಗೆ ಅಲಭ್ಯರಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಇದೀಗ ತಿಂಗಳುಗಳ ಅಂತರದಲ್ಲಿ ಫಿಟ್​ನೆಸ್ ಸಾಧಿಸುವಲ್ಲಿ ಯಶಸ್ವಿಯಾಗಿರುವ ಇಂಗ್ಲೆಂಡ್ ಆಲ್​ರೌಂಡರ್ ಐಪಿಎಲ್​ಗೆ ಆಗಮಿಸಿದ್ದಾರೆ.

3 / 6
ಇದರೊಂದಿಗೆ ಈ ಬಾರಿಯ ಐಪಿಎಲ್​ನಲ್ಲಿ ಟಾಮ್ ಕರನ್ ಆರ್​ಸಿಬಿ ಪರ ಆಡಲಿರುವುದು ಖಚಿತವಾಗಿದೆ. ಹಾಗೆಯೇ ಕರನ್ ಆಗಮನದೊಂದಿಗೆ ಆರ್​ಸಿಬಿ ಬಳಗ ಪೂರ್ಣಗೊಂಡಂತಾಗಿದೆ. ಅದರಂತೆ ಇಂದು (ಮಾ.19) ನಡೆಯಲಿರುವ ಆರ್​ಸಿಬಿ ಅನ್​ಬಾಕ್ಸ್ ಕಾರ್ಯಕ್ರಮದಲ್ಲಿ ತಂಡದ 25 ಆಟಗಾರರು ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಇದರೊಂದಿಗೆ ಈ ಬಾರಿಯ ಐಪಿಎಲ್​ನಲ್ಲಿ ಟಾಮ್ ಕರನ್ ಆರ್​ಸಿಬಿ ಪರ ಆಡಲಿರುವುದು ಖಚಿತವಾಗಿದೆ. ಹಾಗೆಯೇ ಕರನ್ ಆಗಮನದೊಂದಿಗೆ ಆರ್​ಸಿಬಿ ಬಳಗ ಪೂರ್ಣಗೊಂಡಂತಾಗಿದೆ. ಅದರಂತೆ ಇಂದು (ಮಾ.19) ನಡೆಯಲಿರುವ ಆರ್​ಸಿಬಿ ಅನ್​ಬಾಕ್ಸ್ ಕಾರ್ಯಕ್ರಮದಲ್ಲಿ ತಂಡದ 25 ಆಟಗಾರರು ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ.

4 / 6
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಮಾರ್ಚ್ 22 ರಿಂದ ಶುರುವಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಕಣಕ್ಕಿಳಿಯಲಿದೆ. ಈ ಹೈವೋಲ್ಟೇಜ್ ಪಂದ್ಯದೊಂದಿಗೆ ಐಪಿಎಲ್​ನ 17ನೇ ಆವೃತ್ತಿಗೆ ಚಾಲನೆ ಸಿಗಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಮಾರ್ಚ್ 22 ರಿಂದ ಶುರುವಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಕಣಕ್ಕಿಳಿಯಲಿದೆ. ಈ ಹೈವೋಲ್ಟೇಜ್ ಪಂದ್ಯದೊಂದಿಗೆ ಐಪಿಎಲ್​ನ 17ನೇ ಆವೃತ್ತಿಗೆ ಚಾಲನೆ ಸಿಗಲಿದೆ.

5 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

6 / 6
Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್