AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಕೈ ಕೊಟ್ಟ ಬೌಲರ್​ಗಳು: ಸಂಕಷ್ಟಕ್ಕೆ ಸಿಲುಕಿದ CSK ತಂಡ..!

IPL 2024: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2024) ಸಿಎಸ್​ಕೆ ತಂಡವು ಈವರೆಗೆ 10 ಪಂದ್ಯಗಳನ್ನಾಡಿದೆ. ಈ ಹತ್ತು ಪಂದ್ಯಗಳಲ್ಲಿ 5 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 10 ಅಂಕಗಳೊಂದಿಗೆ ಪಾಯಿಂಟ್ಸ್​ ಟೇಬಲ್​ನಲ್ಲಿ 4ನೇ ಸ್ಥಾನದಲ್ಲಿದೆ. ಅತ್ತ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಎಸ್​ಆರ್​ಹೆಚ್​ ತಂಡಗಳು ಕೂಡ 10 ಅಂಕಗಳನ್ನು ಹೊಂದಿದ್ದು, ಈ ಮೂಲಕ ಪ್ಲೇಫ್ ರೇಸ್​ನಲ್ಲಿದೆ. ಹೀಗಾಗಿ ಸಿಎಸ್​ಕೆ ತಂಡವು ಮುಂದಿನ 4 ಪಂದ್ಯಗಳಲ್ಲಿ ಗೆದ್ದರೆ ಮಾತ್ರ ನೇರವಾಗಿ ಪ್ಲೇಆಫ್ ಹಂತಕ್ಕೇರಲಿದೆ.

TV9 Web
| Edited By: |

Updated on: May 02, 2024 | 11:02 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್​ 17ರ ಲೀಗ್ ಪಂದ್ಯಗಳು ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಎಲ್ಲಾ ತಂಡಗಳು 10 ಪಂದ್ಯಗಳನ್ನಾಡಿದ್ದು, ಇನ್ನುಳಿದಿರುವುದು ಕೇವಲ 4 ಪಂದ್ಯಗಳು ಮಾತ್ರ. ಈ ಪಂದ್ಯಗಳ ಮೂಲಕ ಪ್ಲೇಆಫ್ ಹಂತಕ್ಕೇರುವ 4 ತಂಡಗಳಾವುವು ಎಂಬುದು ನಿರ್ಧಾರವಾಗಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್​ 17ರ ಲೀಗ್ ಪಂದ್ಯಗಳು ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಎಲ್ಲಾ ತಂಡಗಳು 10 ಪಂದ್ಯಗಳನ್ನಾಡಿದ್ದು, ಇನ್ನುಳಿದಿರುವುದು ಕೇವಲ 4 ಪಂದ್ಯಗಳು ಮಾತ್ರ. ಈ ಪಂದ್ಯಗಳ ಮೂಲಕ ಪ್ಲೇಆಫ್ ಹಂತಕ್ಕೇರುವ 4 ತಂಡಗಳಾವುವು ಎಂಬುದು ನಿರ್ಧಾರವಾಗಲಿದೆ.

1 / 8
ಆದರೆ ಈ ನಿರ್ಣಾಯಕ ಹಂತದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ತಂಡವು ಸಂಕಷ್ಟಕ್ಕೆ ಸಿಲುಕಿದೆ. ಅದು ಕೂಡ ಬೌಲರ್​ಗಳಿಂದ ಎಂಬುದು ವಿಶೇಷ. ಅಂದರೆ ಸಿಎಸ್​ಕೆ ತಂಡದ ಮುಂದಿನ ಪಂದ್ಯಗಳಿಗೆ ಕೆಲ ಆಟಗಾರರು ಅಲಭ್ಯರಾಗುವುದು ಖಚಿತ. ಇವರಲ್ಲಿ ಪ್ರಮುಖ ವೇಗಿಳಾದ ಮುಸ್ತಫಿಜುರ್ ರೆಹಮಾನ್ ಹಾಗೂ ಮಥೀಶ ಪತಿರಾಣ ಕೂಡ ಸೇರಿದ್ದಾರೆ.

ಆದರೆ ಈ ನಿರ್ಣಾಯಕ ಹಂತದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ತಂಡವು ಸಂಕಷ್ಟಕ್ಕೆ ಸಿಲುಕಿದೆ. ಅದು ಕೂಡ ಬೌಲರ್​ಗಳಿಂದ ಎಂಬುದು ವಿಶೇಷ. ಅಂದರೆ ಸಿಎಸ್​ಕೆ ತಂಡದ ಮುಂದಿನ ಪಂದ್ಯಗಳಿಗೆ ಕೆಲ ಆಟಗಾರರು ಅಲಭ್ಯರಾಗುವುದು ಖಚಿತ. ಇವರಲ್ಲಿ ಪ್ರಮುಖ ವೇಗಿಳಾದ ಮುಸ್ತಫಿಜುರ್ ರೆಹಮಾನ್ ಹಾಗೂ ಮಥೀಶ ಪತಿರಾಣ ಕೂಡ ಸೇರಿದ್ದಾರೆ.

2 / 8
ಝಿಂಬಾಬ್ವೆ ವಿರುದ್ಧದ ಟಿ20 ಸರಣಿಗಾಗಿ ಮುಸ್ತಫಿಜುರ್ ರೆಹಮಾನ್ ತವರಿಗೆ ಮರಳಿದ್ದಾರೆ. ಮೇ 3 ರಿಂದ ಶುರುವಾಗಲಿರುವ ಬಾಂಗ್ಲಾದೇಶ್-ಝಿಂಬಾಬ್ವೆ ಒಟ್ಟು 5 ಟಿ20 ಪಂದ್ಯಗಳನ್ನಾಡಲಿದೆ. ಈ ಸರಣಿಯಲ್ಲಿ ಕಣಕ್ಕಿಳಿಯುವ ಕಾರಣ ಮುಸ್ತಫಿಜುರ್ ರೆಹಮಾನ್ ಸಿಎಸ್​ಕೆ ತಂಡದ ಮುಂದಿನ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ.

ಝಿಂಬಾಬ್ವೆ ವಿರುದ್ಧದ ಟಿ20 ಸರಣಿಗಾಗಿ ಮುಸ್ತಫಿಜುರ್ ರೆಹಮಾನ್ ತವರಿಗೆ ಮರಳಿದ್ದಾರೆ. ಮೇ 3 ರಿಂದ ಶುರುವಾಗಲಿರುವ ಬಾಂಗ್ಲಾದೇಶ್-ಝಿಂಬಾಬ್ವೆ ಒಟ್ಟು 5 ಟಿ20 ಪಂದ್ಯಗಳನ್ನಾಡಲಿದೆ. ಈ ಸರಣಿಯಲ್ಲಿ ಕಣಕ್ಕಿಳಿಯುವ ಕಾರಣ ಮುಸ್ತಫಿಜುರ್ ರೆಹಮಾನ್ ಸಿಎಸ್​ಕೆ ತಂಡದ ಮುಂದಿನ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ.

3 / 8
ಮತ್ತೊಂದೆಡೆ ಮಥೀಶ ಪತಿರಾಣ ಹಾಗೂ ಮಹೀಶ್ ತೀಕ್ಷಣ ಶ್ರೀಲಂಕಾಗೆ ಹಿಂತಿರುಗಿದ್ದಾರೆ. ಸಿಎಸ್​ಕೆ ತಂಡದ ಇಬ್ಬರು ಆಟಗಾರರು ಮುಂಬರುವ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದೀಗ ವೀಸಾ ಸಂಬಂಧಿಸಿದ ಕೆಲಸಗಳಿಗಾಗಿ ಲಂಕಾ ಆಟಗಾರರು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ತೊರೆದು ಕೊಲಂಬೊಗೆ ತೆರಳಿದ್ದಾರೆ. ಹೀಗಾಗಿ ಈ ಇಬ್ಬರು ಆಟಗಾರರು ಕೂಡ ಮುಂದಿನ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆಯಿದೆ.

ಮತ್ತೊಂದೆಡೆ ಮಥೀಶ ಪತಿರಾಣ ಹಾಗೂ ಮಹೀಶ್ ತೀಕ್ಷಣ ಶ್ರೀಲಂಕಾಗೆ ಹಿಂತಿರುಗಿದ್ದಾರೆ. ಸಿಎಸ್​ಕೆ ತಂಡದ ಇಬ್ಬರು ಆಟಗಾರರು ಮುಂಬರುವ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದೀಗ ವೀಸಾ ಸಂಬಂಧಿಸಿದ ಕೆಲಸಗಳಿಗಾಗಿ ಲಂಕಾ ಆಟಗಾರರು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ತೊರೆದು ಕೊಲಂಬೊಗೆ ತೆರಳಿದ್ದಾರೆ. ಹೀಗಾಗಿ ಈ ಇಬ್ಬರು ಆಟಗಾರರು ಕೂಡ ಮುಂದಿನ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆಯಿದೆ.

4 / 8
ಹಾಗೆಯೇ ಕಳೆದ ಪಂದ್ಯದ ವೇಳೆ ದೀಪಕ್ ಚಹರ್ ಗಾಯಗೊಂಡಿದ್ದು, ಹೀಗಾಗಿ ಅವರು ಮೈದಾನದಿಂದ ಹೊರನಡೆದಿದ್ದರು. ಇದಾದ ಬಳಿಕ ಅವರು ಮತ್ತೆ ಮೈದಾನಕ್ಕೆ ಹಿಂತಿರುಗಲಿಲ್ಲ. ಅಂದರೆ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ದೀಪಕ್ ಚಹರ್ ಕೂಡ ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನ.

ಹಾಗೆಯೇ ಕಳೆದ ಪಂದ್ಯದ ವೇಳೆ ದೀಪಕ್ ಚಹರ್ ಗಾಯಗೊಂಡಿದ್ದು, ಹೀಗಾಗಿ ಅವರು ಮೈದಾನದಿಂದ ಹೊರನಡೆದಿದ್ದರು. ಇದಾದ ಬಳಿಕ ಅವರು ಮತ್ತೆ ಮೈದಾನಕ್ಕೆ ಹಿಂತಿರುಗಲಿಲ್ಲ. ಅಂದರೆ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ದೀಪಕ್ ಚಹರ್ ಕೂಡ ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನ.

5 / 8
ಇನ್ನು ಮತ್ತೋರ್ವ ವೇಗಿ ತುಷಾರ್ ದೇಶಪಾಂಡೆ ಜ್ವರದಿಂದ ಬಳಲುತ್ತಿದ್ದಾರೆ. ಇದೇ ಕಾರಣದಿಂದಾಗಿ ಅವರು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಒಂದು ವೇಳೆ ಸಂಪೂರ್ಣವಾಗಿ ಗುಣಮುಖರಾಗದಿದ್ದರೆ, ತುಷಾರ್ ಕೂಡ ಮುಂದಿನ ಪಂದ್ಯದಿಂದ ಹೊರಗುಳಿಯಲಿದ್ದಾರೆ.

ಇನ್ನು ಮತ್ತೋರ್ವ ವೇಗಿ ತುಷಾರ್ ದೇಶಪಾಂಡೆ ಜ್ವರದಿಂದ ಬಳಲುತ್ತಿದ್ದಾರೆ. ಇದೇ ಕಾರಣದಿಂದಾಗಿ ಅವರು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಒಂದು ವೇಳೆ ಸಂಪೂರ್ಣವಾಗಿ ಗುಣಮುಖರಾಗದಿದ್ದರೆ, ತುಷಾರ್ ಕೂಡ ಮುಂದಿನ ಪಂದ್ಯದಿಂದ ಹೊರಗುಳಿಯಲಿದ್ದಾರೆ.

6 / 8
ಅಂದರೆ ಮೇ 5 ರಂದು ನಡೆಯಲಿರುವ ಪಂಜಾಬ್ ಕಿಂಗ್ಸ್​ ವಿರುದ್ಧದ ಪಂದ್ಯದಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಐವರು ಬೌಲರ್​ಗಳು ಹೊರಗುಳಿಯುವ ಸಾಧ್ಯತೆಯಿದೆ. ಇದು ಸಿಎಸ್​ಕೆ ತಂಡದ ಮೇಲೆ ಪರಿಣಾಮ ಬೀರುವುದರಲ್ಲಿ ಅನುಮಾನವೇ ಇಲ್ಲ.

ಅಂದರೆ ಮೇ 5 ರಂದು ನಡೆಯಲಿರುವ ಪಂಜಾಬ್ ಕಿಂಗ್ಸ್​ ವಿರುದ್ಧದ ಪಂದ್ಯದಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಐವರು ಬೌಲರ್​ಗಳು ಹೊರಗುಳಿಯುವ ಸಾಧ್ಯತೆಯಿದೆ. ಇದು ಸಿಎಸ್​ಕೆ ತಂಡದ ಮೇಲೆ ಪರಿಣಾಮ ಬೀರುವುದರಲ್ಲಿ ಅನುಮಾನವೇ ಇಲ್ಲ.

7 / 8
ಏಕೆಂದರೆ ಚೆನ್ನೈ ಸೂಪರ್ ಕಿಂಗ್ಸ್​ ತಂಡವು ಮುಂದಿನ 4 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಮಾತ್ರ ನೇರವಾಗಿ ಪ್ಲೇಆಫ್​​ಗೆ ಪ್ರವೇಶಿಸಲಿದೆ. ಒಂದು ವೇಳೆ ನಿರ್ಣಾಯಕ ಪಂದ್ಯಗಳ ವೇಳೆ ಈ ಆಟಗಾರರು ಹೊರಗುಳಿದರೆ ಸಿಎಸ್​ಕೆ ತಂಡದ ಫಲಿತಾಂಶದ ಮೇಲೆ ಪರಿಣಾಮ ಬೀರುವುದರಲ್ಲಿ ಅನುಮಾನವೇ ಇಲ್ಲ.

ಏಕೆಂದರೆ ಚೆನ್ನೈ ಸೂಪರ್ ಕಿಂಗ್ಸ್​ ತಂಡವು ಮುಂದಿನ 4 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಮಾತ್ರ ನೇರವಾಗಿ ಪ್ಲೇಆಫ್​​ಗೆ ಪ್ರವೇಶಿಸಲಿದೆ. ಒಂದು ವೇಳೆ ನಿರ್ಣಾಯಕ ಪಂದ್ಯಗಳ ವೇಳೆ ಈ ಆಟಗಾರರು ಹೊರಗುಳಿದರೆ ಸಿಎಸ್​ಕೆ ತಂಡದ ಫಲಿತಾಂಶದ ಮೇಲೆ ಪರಿಣಾಮ ಬೀರುವುದರಲ್ಲಿ ಅನುಮಾನವೇ ಇಲ್ಲ.

8 / 8
Web contact
Web contact

TV9 Kannada

Read More
Follow Us
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು