AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಕನ್ನಡಿಗನನ್ನು ಕೈಬಿಟ್ಟು ಕೆಟ್ಟ RCB

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್​ 2024) ಆರ್​ಸಿಬಿ ಫ್ರಾಂಚೈಸಿ ಕನ್ನಡಿಗರನ್ನು ಕಡೆಗಣಿಸುತ್ತಾರೆಂಬ ಮಾತುಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಇದೀಗ ಅತ್ಯುತ್ತಮ ಪ್ರದರ್ಶನ ನೀಡಿದರೂ ಕರ್ನಾಟಕದ ಆಟಗಾರ ವಿಜಯಕುಮಾರ್ ವೈಶಾಕ್​ಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ನೀಡದಿರುವ ಬಗ್ಗೆ ಪ್ರಶ್ನೆಗಳೆದ್ದಿವೆ.

TV9 Web
| Edited By: |

Updated on: Apr 03, 2024 | 8:30 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಆಡಿದ 4 ಪಂದ್ಯಗಳಲ್ಲಿ ಮೂರರಲ್ಲಿ ಸೋತಿದೆ. ಸಿಎಸ್​ಕೆ ವಿರುದ್ದದ ಸೋಲಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದ ಆರ್​ಸಿಬಿ, ಆ ಬಳಿಕ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು ಸಾಧಿಸಿತ್ತು. ಇದಾದ ಬಳಿಕ ಕೆಕೆಆರ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಗ್ಗರಿಸಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಆಡಿದ 4 ಪಂದ್ಯಗಳಲ್ಲಿ ಮೂರರಲ್ಲಿ ಸೋತಿದೆ. ಸಿಎಸ್​ಕೆ ವಿರುದ್ದದ ಸೋಲಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದ ಆರ್​ಸಿಬಿ, ಆ ಬಳಿಕ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು ಸಾಧಿಸಿತ್ತು. ಇದಾದ ಬಳಿಕ ಕೆಕೆಆರ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಗ್ಗರಿಸಿದೆ.

1 / 6
ಅದರಲ್ಲೂ ಲಕ್ನೋ ಸೂಪರ್ ಜೈಂಟ್ಸ್​ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ತವರು ಮೈದಾನದಲ್ಲಿ ಮುಗ್ಗರಿಸುವ ಮೂಲಕ ಆರ್​ಸಿಬಿ ಭಾರೀ ಮುಖಭಂಗಕ್ಕೆ ಒಳಗಾಗಿದೆ. ಇದರ ನಡುವೆ ಆರ್​ಸಿಬಿ ತಂಡದ ಸ್ಟ್ರಾಟಜಿ ಬಗ್ಗೆ ಕೂಡ ಭಾರೀ ಟೀಕೆಗಳು ಕೇಳಿ ಬರುತ್ತಿದೆ. ಇದಕ್ಕೆ ಮುಖ್ಯ ಕಾರಣ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಿಂದ ಕನ್ನಡಿಗ ವಿಜಯಕುಮಾರ್ ವೈಶಾಕ್ ಅವರನ್ನು ಕೈಬಿಟ್ಟಿರುವುದು.

ಅದರಲ್ಲೂ ಲಕ್ನೋ ಸೂಪರ್ ಜೈಂಟ್ಸ್​ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ತವರು ಮೈದಾನದಲ್ಲಿ ಮುಗ್ಗರಿಸುವ ಮೂಲಕ ಆರ್​ಸಿಬಿ ಭಾರೀ ಮುಖಭಂಗಕ್ಕೆ ಒಳಗಾಗಿದೆ. ಇದರ ನಡುವೆ ಆರ್​ಸಿಬಿ ತಂಡದ ಸ್ಟ್ರಾಟಜಿ ಬಗ್ಗೆ ಕೂಡ ಭಾರೀ ಟೀಕೆಗಳು ಕೇಳಿ ಬರುತ್ತಿದೆ. ಇದಕ್ಕೆ ಮುಖ್ಯ ಕಾರಣ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಿಂದ ಕನ್ನಡಿಗ ವಿಜಯಕುಮಾರ್ ವೈಶಾಕ್ ಅವರನ್ನು ಕೈಬಿಟ್ಟಿರುವುದು.

2 / 6
ಬೆಂಗಳೂರಿನಲ್ಲಿ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ವಿಜಯಕುಮಾರ್ ವೈಶಾಕ್ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಈ ಪಂದ್ಯದಲ್ಲಿ ಆರ್​ಸಿಬಿ ಬೌಲರ್​ಗಳು ದುಬಾರಿಯಾಗಿದ್ದರೂ, ಒಂದೆಡೆ ವೈಶಾಕ್ ಅತ್ಯುತ್ತಮ ದಾಳಿ ಸಂಘಟಿಸಿದ್ದರು. ಅಲ್ಲದೆ 4 ಓವರ್​ಗಳಲ್ಲಿ ಕೇವಲ 23 ರನ್ ನೀಡಿ 1 ವಿಕೆಟ್ ಕಬಳಿಸಿ ಮಿಂಚಿದ್ದರು.

ಬೆಂಗಳೂರಿನಲ್ಲಿ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ವಿಜಯಕುಮಾರ್ ವೈಶಾಕ್ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಈ ಪಂದ್ಯದಲ್ಲಿ ಆರ್​ಸಿಬಿ ಬೌಲರ್​ಗಳು ದುಬಾರಿಯಾಗಿದ್ದರೂ, ಒಂದೆಡೆ ವೈಶಾಕ್ ಅತ್ಯುತ್ತಮ ದಾಳಿ ಸಂಘಟಿಸಿದ್ದರು. ಅಲ್ಲದೆ 4 ಓವರ್​ಗಳಲ್ಲಿ ಕೇವಲ 23 ರನ್ ನೀಡಿ 1 ವಿಕೆಟ್ ಕಬಳಿಸಿ ಮಿಂಚಿದ್ದರು.

3 / 6
ಇಂತಹ ಅತ್ಯುತ್ತಮ ಪ್ರದರ್ಶನ ನೀಡಿದರೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ವಿಜಯಕುಮಾರ್ ವೈಶಾಕ್ ಅವರನ್ನು ಆರ್​ಸಿಬಿ ಕಣಕ್ಕಿಳಿಸಿರಲಿಲ್ಲ. ಮತ್ತೊಮ್ಮೆ ಅದೇ ಮಯಾಂಕ್ ಡಾಗರ್ ಅವರಿಗೆ ಚಾನ್ಸ್ ನೀಡಿದ್ದರು.

ಇಂತಹ ಅತ್ಯುತ್ತಮ ಪ್ರದರ್ಶನ ನೀಡಿದರೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ವಿಜಯಕುಮಾರ್ ವೈಶಾಕ್ ಅವರನ್ನು ಆರ್​ಸಿಬಿ ಕಣಕ್ಕಿಳಿಸಿರಲಿಲ್ಲ. ಮತ್ತೊಮ್ಮೆ ಅದೇ ಮಯಾಂಕ್ ಡಾಗರ್ ಅವರಿಗೆ ಚಾನ್ಸ್ ನೀಡಿದ್ದರು.

4 / 6
ಇದೀಗ ತವರು ಮೈದಾನದಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದರೂ ವಿಜಯಕುಮಾರ್ ವೈಶಾಕ್ ಅವರನ್ನು ಕೈ ಬಿಡಲು ಕಾರಣವೇನು? ಎಂದು ಪ್ರಶ್ನಿಸಿದ್ದಾರೆ ಮಾಜಿ ಆಟಗಾರ ರಾಬಿನ್ ಉತ್ತಪ್ಪ. ಕಳೆದ ಪಂದ್ಯದಲ್ಲಿ ಮಿಂಚಿನ ದಾಳಿ ಸಂಘಟಿಸಿದ ವೈಶಾಕ್​ಗೆ ಅವಕಾಶ ನೀಡದಿರುವ ಆರ್​ಸಿಬಿ ಮ್ಯಾನೇಜ್ಮೆಂಟ್ ನಡೆಯ ಬಗ್ಗೆ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಕೂಡ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಇದೀಗ ತವರು ಮೈದಾನದಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದರೂ ವಿಜಯಕುಮಾರ್ ವೈಶಾಕ್ ಅವರನ್ನು ಕೈ ಬಿಡಲು ಕಾರಣವೇನು? ಎಂದು ಪ್ರಶ್ನಿಸಿದ್ದಾರೆ ಮಾಜಿ ಆಟಗಾರ ರಾಬಿನ್ ಉತ್ತಪ್ಪ. ಕಳೆದ ಪಂದ್ಯದಲ್ಲಿ ಮಿಂಚಿನ ದಾಳಿ ಸಂಘಟಿಸಿದ ವೈಶಾಕ್​ಗೆ ಅವಕಾಶ ನೀಡದಿರುವ ಆರ್​ಸಿಬಿ ಮ್ಯಾನೇಜ್ಮೆಂಟ್ ನಡೆಯ ಬಗ್ಗೆ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಕೂಡ ಅಚ್ಚರಿ ವ್ಯಕ್ತಪಡಿಸಿದ್ದಾರೆ.

5 / 6
ಒಟ್ಟಿನಲ್ಲಿ ಬಲಿಷ್ಠ ಬ್ಯಾಟಿಂಗ್ ಲೈನಪ್ ಹೊಂದಿದ್ದ ಕೆಕೆಆರ್ ವಿರುದ್ಧವೇ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದ ಕನ್ನಡಿಗನನ್ನು ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದಿಂದ ಕೈ ಬಿಟ್ಟು ಇದೀಗ ಆರ್​ಸಿಬಿ ತಂಡವು ಪರಿತಪಿಸುವಂತಾಗಿದೆ. ಅದು ಕೂಡ ಬ್ಯಾಕ್ ಟು ಬ್ಯಾಕ್ ಸೋಲಿನೊಂದಿಗೆ ಎಂಬುದು ವಿಶೇಷ.

ಒಟ್ಟಿನಲ್ಲಿ ಬಲಿಷ್ಠ ಬ್ಯಾಟಿಂಗ್ ಲೈನಪ್ ಹೊಂದಿದ್ದ ಕೆಕೆಆರ್ ವಿರುದ್ಧವೇ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದ ಕನ್ನಡಿಗನನ್ನು ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದಿಂದ ಕೈ ಬಿಟ್ಟು ಇದೀಗ ಆರ್​ಸಿಬಿ ತಂಡವು ಪರಿತಪಿಸುವಂತಾಗಿದೆ. ಅದು ಕೂಡ ಬ್ಯಾಕ್ ಟು ಬ್ಯಾಕ್ ಸೋಲಿನೊಂದಿಗೆ ಎಂಬುದು ವಿಶೇಷ.

6 / 6
Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು