AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಟಿ20 ವಿಶ್ವಕಪ್​ನಲ್ಲಿ ಕಿಂಗ್ ಕೊಹ್ಲಿ ಕಣಕ್ಕಿಳಿಯುವುದು ಕನ್ಫರ್ಮ್​

IPL 2024: ಐಪಿಎಲ್ ಸೀಸನ್ 17 ರಲ್ಲಿ ವಿರಾಟ್ ಕೊಹ್ಲಿ ಇದುವರೆಗೆ 5 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 216 ಎಸೆತಗಳನ್ನು ಎದುರಿಸಿ 316 ರನ್​ ಕಲೆಹಾಕಿದ್ದಾರೆ. ಇದರ ನಡುವೆ 1 ಭರ್ಜರಿ ಶತಕ ಹಾಗೂ 2 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಈ ಮೂಲಕ IPL 2024 ರ ಟಾಪ್ ರನ್ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

TV9 Web
| Edited By: |

Updated on: Apr 09, 2024 | 5:30 PM

Share
ಐಪಿಎಲ್ (IPL 2024) ಸೀಸನ್ 17 ರಲ್ಲಿ ಟಾಪ್ ರನ್​ ಸ್ಕೋರರ್​ ಆಗಿ ಮಿಂಚುತ್ತಿರುವ ವಿರಾಟ್ ಕೊಹ್ಲಿ (Virat Kohli) ಮುಂಬರುವ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವುದು ಖಚಿತವಾಗಿದೆ. ಉತ್ತಮ ಫಾರ್ಮ್​​ನಲ್ಲಿರುವ ಕೊಹ್ಲಿಯನ್ನು ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಲು ಬಿಸಿಸಿಐ ನಿರ್ಧರಿಸಿದೆ ಎಂದು ವರದಿಯಾಗಿದೆ.

ಐಪಿಎಲ್ (IPL 2024) ಸೀಸನ್ 17 ರಲ್ಲಿ ಟಾಪ್ ರನ್​ ಸ್ಕೋರರ್​ ಆಗಿ ಮಿಂಚುತ್ತಿರುವ ವಿರಾಟ್ ಕೊಹ್ಲಿ (Virat Kohli) ಮುಂಬರುವ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವುದು ಖಚಿತವಾಗಿದೆ. ಉತ್ತಮ ಫಾರ್ಮ್​​ನಲ್ಲಿರುವ ಕೊಹ್ಲಿಯನ್ನು ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಲು ಬಿಸಿಸಿಐ ನಿರ್ಧರಿಸಿದೆ ಎಂದು ವರದಿಯಾಗಿದೆ.

1 / 6
ಈ ಹಿಂದೆ ಟಿ20 ವಿಶ್ವಕಪ್​ನಿಂದ ಹೊರಗುಳಿಯುವಂತೆ ವಿರಾಟ್ ಕೊಹ್ಲಿಯನ್ನು ಮನವೊಲಿಸಬೇಕೆಂದು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಅವರಿಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸೂಚಿಸಿದ್ದಾರೆ ಎಂದು ವರದಿಯಾಗಿತ್ತು. ಆದರೆ ಈ ಜವಾಬ್ದಾರಿಯಿಂದ ಅಗರ್ಕರ್ ಹಿಂದೆ ಸರಿದಿದ್ದರು. ಇದಾದ ಬಳಿಕ ರೋಹಿತ್ ಶರ್ಮಾ ಅವರಲ್ಲಿ ಜಯ್ ಶಾ ಈ ವಿಚಾರವನ್ನು ಪ್ರಸ್ತಾಪಿಸಿದ್ದರು ಎಂದು ಮಾಜಿ ಕ್ರಿಕೆಟಿಗ ಕೀರ್ತಿ ಆಝಾದ್ ಬಹಿರಂಗಪಡಿಸಿದ್ದರು.

ಈ ಹಿಂದೆ ಟಿ20 ವಿಶ್ವಕಪ್​ನಿಂದ ಹೊರಗುಳಿಯುವಂತೆ ವಿರಾಟ್ ಕೊಹ್ಲಿಯನ್ನು ಮನವೊಲಿಸಬೇಕೆಂದು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಅವರಿಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸೂಚಿಸಿದ್ದಾರೆ ಎಂದು ವರದಿಯಾಗಿತ್ತು. ಆದರೆ ಈ ಜವಾಬ್ದಾರಿಯಿಂದ ಅಗರ್ಕರ್ ಹಿಂದೆ ಸರಿದಿದ್ದರು. ಇದಾದ ಬಳಿಕ ರೋಹಿತ್ ಶರ್ಮಾ ಅವರಲ್ಲಿ ಜಯ್ ಶಾ ಈ ವಿಚಾರವನ್ನು ಪ್ರಸ್ತಾಪಿಸಿದ್ದರು ಎಂದು ಮಾಜಿ ಕ್ರಿಕೆಟಿಗ ಕೀರ್ತಿ ಆಝಾದ್ ಬಹಿರಂಗಪಡಿಸಿದ್ದರು.

2 / 6
ಆದರೆ ವಿರಾಟ್ ಕೊಹ್ಲಿ ತಂಡದಲ್ಲಿ ಇರಲೇಬೇಕೆಂದು ರೋಹಿತ್ ಶರ್ಮಾ ಬಿಸಿಸಿಐ ಕಾರ್ಯದರ್ಶಿಗೆ ಖಂಡತುಂಡವಾಗಿ ಹೇಳಿದ್ದಾರೆಂದು ಕೀರ್ತಿ ಆಝಾದ್ ತಿಳಿಸಿದ್ದರು. ಇದಾಗ್ಯೂ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿಯ ಪ್ರದರ್ಶನದ ಮೇಲೆ ಬಿಸಿಸಿಐ ಆಯ್ಕೆ ಸಮಿತಿ ಕಣ್ಣಿಟ್ಟಿದ್ದರು.

ಆದರೆ ವಿರಾಟ್ ಕೊಹ್ಲಿ ತಂಡದಲ್ಲಿ ಇರಲೇಬೇಕೆಂದು ರೋಹಿತ್ ಶರ್ಮಾ ಬಿಸಿಸಿಐ ಕಾರ್ಯದರ್ಶಿಗೆ ಖಂಡತುಂಡವಾಗಿ ಹೇಳಿದ್ದಾರೆಂದು ಕೀರ್ತಿ ಆಝಾದ್ ತಿಳಿಸಿದ್ದರು. ಇದಾಗ್ಯೂ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿಯ ಪ್ರದರ್ಶನದ ಮೇಲೆ ಬಿಸಿಸಿಐ ಆಯ್ಕೆ ಸಮಿತಿ ಕಣ್ಣಿಟ್ಟಿದ್ದರು.

3 / 6
ಆದರೀಗ ಕೇವಲ 5 ಪಂದ್ಯಗಳ ಮೂಲಕ ವಿರಾಟ್ ಕೊಹ್ಲಿ 316 ರನ್ ಕಲೆಹಾಕಿದ್ದಾರೆ. ಈ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಇನ್ನುಳಿದ ಪಂದ್ಯಗಳಲ್ಲೂ ಕೊಹ್ಲಿ ಕಡೆಯಿಂದ ಉತ್ತಮ ಬ್ಯಾಟಿಂಗ್ ಅನ್ನು ನಿರೀಕ್ಷಿಸಬಹುದು.

ಆದರೀಗ ಕೇವಲ 5 ಪಂದ್ಯಗಳ ಮೂಲಕ ವಿರಾಟ್ ಕೊಹ್ಲಿ 316 ರನ್ ಕಲೆಹಾಕಿದ್ದಾರೆ. ಈ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಇನ್ನುಳಿದ ಪಂದ್ಯಗಳಲ್ಲೂ ಕೊಹ್ಲಿ ಕಡೆಯಿಂದ ಉತ್ತಮ ಬ್ಯಾಟಿಂಗ್ ಅನ್ನು ನಿರೀಕ್ಷಿಸಬಹುದು.

4 / 6
ಹೀಗಾಗಿ ಮುಂಬರುವ ಟಿ20 ವಿಶ್ವಕಪ್​ಗೆ ವಿರಾಟ್ ಕೊಹ್ಲಿಯನ್ನು ಆಯ್ಕೆ ಮಾಡಲೇಬೇಕಾದ ಅನಿವಾರ್ಯತೆ ಬಿಸಿಸಿಐ ಎದುರಾಗಿದೆ. ಏಕೆಂದರೆ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿರುವ ಕೊಹ್ಲಿಯನ್ನು ಯಾವುದೇ ಕಾರಣದಿಂದಲೂ ತಂಡದಿಂದ ಕೈ ಬಿಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಅವರು ಟಿ20 ವಿಶ್ವಕಪ್​ಗೆ ಆಯ್ಕೆಯಾಗುವುದು ಖಚಿತ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ ಎಂದು ಕ್ರಿಕ್ ಬಝ್ ವರದಿ ಮಾಡಿದೆ.

ಹೀಗಾಗಿ ಮುಂಬರುವ ಟಿ20 ವಿಶ್ವಕಪ್​ಗೆ ವಿರಾಟ್ ಕೊಹ್ಲಿಯನ್ನು ಆಯ್ಕೆ ಮಾಡಲೇಬೇಕಾದ ಅನಿವಾರ್ಯತೆ ಬಿಸಿಸಿಐ ಎದುರಾಗಿದೆ. ಏಕೆಂದರೆ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿರುವ ಕೊಹ್ಲಿಯನ್ನು ಯಾವುದೇ ಕಾರಣದಿಂದಲೂ ತಂಡದಿಂದ ಕೈ ಬಿಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಅವರು ಟಿ20 ವಿಶ್ವಕಪ್​ಗೆ ಆಯ್ಕೆಯಾಗುವುದು ಖಚಿತ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ ಎಂದು ಕ್ರಿಕ್ ಬಝ್ ವರದಿ ಮಾಡಿದೆ.

5 / 6
ಅದರಂತೆ ಜೂನ್ 1 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್​ಗಾಗಿ ಆಯ್ಕೆ ಮಾಡಲಾಗುವ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು. ಅಲ್ಲದೆ ಇದು ಕಿಂಗ್ ಕೊಹ್ಲಿಯ ಕೊನೆಯ ಟಿ20 ವಿಶ್ವಕಪ್ ಆಗಿರಲಿದೆ. ಈ ಮೂಲಕ ಕೊಹ್ಲಿ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.

ಅದರಂತೆ ಜೂನ್ 1 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್​ಗಾಗಿ ಆಯ್ಕೆ ಮಾಡಲಾಗುವ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು. ಅಲ್ಲದೆ ಇದು ಕಿಂಗ್ ಕೊಹ್ಲಿಯ ಕೊನೆಯ ಟಿ20 ವಿಶ್ವಕಪ್ ಆಗಿರಲಿದೆ. ಈ ಮೂಲಕ ಕೊಹ್ಲಿ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.

6 / 6
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ