AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಟಿ20 ವಿಶ್ವಕಪ್​ನಲ್ಲಿ ಕಿಂಗ್ ಕೊಹ್ಲಿ ಕಣಕ್ಕಿಳಿಯುವುದು ಕನ್ಫರ್ಮ್​

IPL 2024: ಐಪಿಎಲ್ ಸೀಸನ್ 17 ರಲ್ಲಿ ವಿರಾಟ್ ಕೊಹ್ಲಿ ಇದುವರೆಗೆ 5 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 216 ಎಸೆತಗಳನ್ನು ಎದುರಿಸಿ 316 ರನ್​ ಕಲೆಹಾಕಿದ್ದಾರೆ. ಇದರ ನಡುವೆ 1 ಭರ್ಜರಿ ಶತಕ ಹಾಗೂ 2 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಈ ಮೂಲಕ IPL 2024 ರ ಟಾಪ್ ರನ್ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

TV9 Web
| Edited By: |

Updated on: Apr 09, 2024 | 5:30 PM

Share
ಐಪಿಎಲ್ (IPL 2024) ಸೀಸನ್ 17 ರಲ್ಲಿ ಟಾಪ್ ರನ್​ ಸ್ಕೋರರ್​ ಆಗಿ ಮಿಂಚುತ್ತಿರುವ ವಿರಾಟ್ ಕೊಹ್ಲಿ (Virat Kohli) ಮುಂಬರುವ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವುದು ಖಚಿತವಾಗಿದೆ. ಉತ್ತಮ ಫಾರ್ಮ್​​ನಲ್ಲಿರುವ ಕೊಹ್ಲಿಯನ್ನು ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಲು ಬಿಸಿಸಿಐ ನಿರ್ಧರಿಸಿದೆ ಎಂದು ವರದಿಯಾಗಿದೆ.

ಐಪಿಎಲ್ (IPL 2024) ಸೀಸನ್ 17 ರಲ್ಲಿ ಟಾಪ್ ರನ್​ ಸ್ಕೋರರ್​ ಆಗಿ ಮಿಂಚುತ್ತಿರುವ ವಿರಾಟ್ ಕೊಹ್ಲಿ (Virat Kohli) ಮುಂಬರುವ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವುದು ಖಚಿತವಾಗಿದೆ. ಉತ್ತಮ ಫಾರ್ಮ್​​ನಲ್ಲಿರುವ ಕೊಹ್ಲಿಯನ್ನು ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಲು ಬಿಸಿಸಿಐ ನಿರ್ಧರಿಸಿದೆ ಎಂದು ವರದಿಯಾಗಿದೆ.

1 / 6
ಈ ಹಿಂದೆ ಟಿ20 ವಿಶ್ವಕಪ್​ನಿಂದ ಹೊರಗುಳಿಯುವಂತೆ ವಿರಾಟ್ ಕೊಹ್ಲಿಯನ್ನು ಮನವೊಲಿಸಬೇಕೆಂದು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಅವರಿಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸೂಚಿಸಿದ್ದಾರೆ ಎಂದು ವರದಿಯಾಗಿತ್ತು. ಆದರೆ ಈ ಜವಾಬ್ದಾರಿಯಿಂದ ಅಗರ್ಕರ್ ಹಿಂದೆ ಸರಿದಿದ್ದರು. ಇದಾದ ಬಳಿಕ ರೋಹಿತ್ ಶರ್ಮಾ ಅವರಲ್ಲಿ ಜಯ್ ಶಾ ಈ ವಿಚಾರವನ್ನು ಪ್ರಸ್ತಾಪಿಸಿದ್ದರು ಎಂದು ಮಾಜಿ ಕ್ರಿಕೆಟಿಗ ಕೀರ್ತಿ ಆಝಾದ್ ಬಹಿರಂಗಪಡಿಸಿದ್ದರು.

ಈ ಹಿಂದೆ ಟಿ20 ವಿಶ್ವಕಪ್​ನಿಂದ ಹೊರಗುಳಿಯುವಂತೆ ವಿರಾಟ್ ಕೊಹ್ಲಿಯನ್ನು ಮನವೊಲಿಸಬೇಕೆಂದು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಅವರಿಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸೂಚಿಸಿದ್ದಾರೆ ಎಂದು ವರದಿಯಾಗಿತ್ತು. ಆದರೆ ಈ ಜವಾಬ್ದಾರಿಯಿಂದ ಅಗರ್ಕರ್ ಹಿಂದೆ ಸರಿದಿದ್ದರು. ಇದಾದ ಬಳಿಕ ರೋಹಿತ್ ಶರ್ಮಾ ಅವರಲ್ಲಿ ಜಯ್ ಶಾ ಈ ವಿಚಾರವನ್ನು ಪ್ರಸ್ತಾಪಿಸಿದ್ದರು ಎಂದು ಮಾಜಿ ಕ್ರಿಕೆಟಿಗ ಕೀರ್ತಿ ಆಝಾದ್ ಬಹಿರಂಗಪಡಿಸಿದ್ದರು.

2 / 6
ಆದರೆ ವಿರಾಟ್ ಕೊಹ್ಲಿ ತಂಡದಲ್ಲಿ ಇರಲೇಬೇಕೆಂದು ರೋಹಿತ್ ಶರ್ಮಾ ಬಿಸಿಸಿಐ ಕಾರ್ಯದರ್ಶಿಗೆ ಖಂಡತುಂಡವಾಗಿ ಹೇಳಿದ್ದಾರೆಂದು ಕೀರ್ತಿ ಆಝಾದ್ ತಿಳಿಸಿದ್ದರು. ಇದಾಗ್ಯೂ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿಯ ಪ್ರದರ್ಶನದ ಮೇಲೆ ಬಿಸಿಸಿಐ ಆಯ್ಕೆ ಸಮಿತಿ ಕಣ್ಣಿಟ್ಟಿದ್ದರು.

ಆದರೆ ವಿರಾಟ್ ಕೊಹ್ಲಿ ತಂಡದಲ್ಲಿ ಇರಲೇಬೇಕೆಂದು ರೋಹಿತ್ ಶರ್ಮಾ ಬಿಸಿಸಿಐ ಕಾರ್ಯದರ್ಶಿಗೆ ಖಂಡತುಂಡವಾಗಿ ಹೇಳಿದ್ದಾರೆಂದು ಕೀರ್ತಿ ಆಝಾದ್ ತಿಳಿಸಿದ್ದರು. ಇದಾಗ್ಯೂ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿಯ ಪ್ರದರ್ಶನದ ಮೇಲೆ ಬಿಸಿಸಿಐ ಆಯ್ಕೆ ಸಮಿತಿ ಕಣ್ಣಿಟ್ಟಿದ್ದರು.

3 / 6
ಆದರೀಗ ಕೇವಲ 5 ಪಂದ್ಯಗಳ ಮೂಲಕ ವಿರಾಟ್ ಕೊಹ್ಲಿ 316 ರನ್ ಕಲೆಹಾಕಿದ್ದಾರೆ. ಈ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಇನ್ನುಳಿದ ಪಂದ್ಯಗಳಲ್ಲೂ ಕೊಹ್ಲಿ ಕಡೆಯಿಂದ ಉತ್ತಮ ಬ್ಯಾಟಿಂಗ್ ಅನ್ನು ನಿರೀಕ್ಷಿಸಬಹುದು.

ಆದರೀಗ ಕೇವಲ 5 ಪಂದ್ಯಗಳ ಮೂಲಕ ವಿರಾಟ್ ಕೊಹ್ಲಿ 316 ರನ್ ಕಲೆಹಾಕಿದ್ದಾರೆ. ಈ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಇನ್ನುಳಿದ ಪಂದ್ಯಗಳಲ್ಲೂ ಕೊಹ್ಲಿ ಕಡೆಯಿಂದ ಉತ್ತಮ ಬ್ಯಾಟಿಂಗ್ ಅನ್ನು ನಿರೀಕ್ಷಿಸಬಹುದು.

4 / 6
ಹೀಗಾಗಿ ಮುಂಬರುವ ಟಿ20 ವಿಶ್ವಕಪ್​ಗೆ ವಿರಾಟ್ ಕೊಹ್ಲಿಯನ್ನು ಆಯ್ಕೆ ಮಾಡಲೇಬೇಕಾದ ಅನಿವಾರ್ಯತೆ ಬಿಸಿಸಿಐ ಎದುರಾಗಿದೆ. ಏಕೆಂದರೆ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿರುವ ಕೊಹ್ಲಿಯನ್ನು ಯಾವುದೇ ಕಾರಣದಿಂದಲೂ ತಂಡದಿಂದ ಕೈ ಬಿಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಅವರು ಟಿ20 ವಿಶ್ವಕಪ್​ಗೆ ಆಯ್ಕೆಯಾಗುವುದು ಖಚಿತ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ ಎಂದು ಕ್ರಿಕ್ ಬಝ್ ವರದಿ ಮಾಡಿದೆ.

ಹೀಗಾಗಿ ಮುಂಬರುವ ಟಿ20 ವಿಶ್ವಕಪ್​ಗೆ ವಿರಾಟ್ ಕೊಹ್ಲಿಯನ್ನು ಆಯ್ಕೆ ಮಾಡಲೇಬೇಕಾದ ಅನಿವಾರ್ಯತೆ ಬಿಸಿಸಿಐ ಎದುರಾಗಿದೆ. ಏಕೆಂದರೆ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿರುವ ಕೊಹ್ಲಿಯನ್ನು ಯಾವುದೇ ಕಾರಣದಿಂದಲೂ ತಂಡದಿಂದ ಕೈ ಬಿಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಅವರು ಟಿ20 ವಿಶ್ವಕಪ್​ಗೆ ಆಯ್ಕೆಯಾಗುವುದು ಖಚಿತ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ ಎಂದು ಕ್ರಿಕ್ ಬಝ್ ವರದಿ ಮಾಡಿದೆ.

5 / 6
ಅದರಂತೆ ಜೂನ್ 1 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್​ಗಾಗಿ ಆಯ್ಕೆ ಮಾಡಲಾಗುವ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು. ಅಲ್ಲದೆ ಇದು ಕಿಂಗ್ ಕೊಹ್ಲಿಯ ಕೊನೆಯ ಟಿ20 ವಿಶ್ವಕಪ್ ಆಗಿರಲಿದೆ. ಈ ಮೂಲಕ ಕೊಹ್ಲಿ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.

ಅದರಂತೆ ಜೂನ್ 1 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್​ಗಾಗಿ ಆಯ್ಕೆ ಮಾಡಲಾಗುವ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು. ಅಲ್ಲದೆ ಇದು ಕಿಂಗ್ ಕೊಹ್ಲಿಯ ಕೊನೆಯ ಟಿ20 ವಿಶ್ವಕಪ್ ಆಗಿರಲಿದೆ. ಈ ಮೂಲಕ ಕೊಹ್ಲಿ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.

6 / 6
Web contact
Web contact

TV9 Kannada

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ