AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಔಟ್ ಮಾಡಿದ ಬೌಲರ್​ಗೆ ಗಿಫ್ಟ್ ನೀಡಿದ ವಿರಾಟ್ ಕೊಹ್ಲಿ

IPL 2024 RCB vs GT: ಐಪಿಎಲ್ 2024 ರ 52ನೇ ಪಂದ್ಯದಲ್ಲಿ ಟಾಸ್ ಗೆದ್ದ ಫಾಫ್ ಡುಪ್ಲೆಸಿಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ 147 ರನ್​ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡವು 13.4 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ 4 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

TV9 Web
| Edited By: |

Updated on: May 05, 2024 | 1:09 PM

Share
ಐಪಿಎಲ್​ನಲ್ಲಿ (IPL 2024) ಶನಿವಾರ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಆರ್​ಸಿಬಿ ತಂಡ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಗುಜರಾತ್ ಟೈಟಾನ್ಸ್ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ಕಲೆಹಾಕಿದ್ದು ಕೇವಲ 147 ರನ್​ಗಳು ಮಾತ್ರ.

ಐಪಿಎಲ್​ನಲ್ಲಿ (IPL 2024) ಶನಿವಾರ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಆರ್​ಸಿಬಿ ತಂಡ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಗುಜರಾತ್ ಟೈಟಾನ್ಸ್ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ಕಲೆಹಾಕಿದ್ದು ಕೇವಲ 147 ರನ್​ಗಳು ಮಾತ್ರ.

1 / 6
148 ರನ್​ಗಳ ಗುರಿ ಪಡೆದ ಆರ್​ಸಿಬಿ ತಂಡಕ್ಕೆ ಫಾಫ್ ಡುಪ್ಲೆಸಿಸ್ (64) ಹಾಗೂ ವಿರಾಟ್ ಕೊಹ್ಲಿ (42) ಉತ್ತಮ ಆರಂಭ ಒದಗಿಸಿದ್ದರು. ಇದರ ನಡುವೆ ಅರ್ಧಶತಕದತ್ತ ಸಾಗಿದ್ದ ಕೊಹ್ಲಿಯನ್ನು ಔಟ್ ಮಾಡುವಲ್ಲಿ ಸ್ಪಿನ್ನರ್ ನೂರ್ ಅಹ್ಮದ್ ಯಶಸ್ವಿಯಾಗಿದ್ದರು.

148 ರನ್​ಗಳ ಗುರಿ ಪಡೆದ ಆರ್​ಸಿಬಿ ತಂಡಕ್ಕೆ ಫಾಫ್ ಡುಪ್ಲೆಸಿಸ್ (64) ಹಾಗೂ ವಿರಾಟ್ ಕೊಹ್ಲಿ (42) ಉತ್ತಮ ಆರಂಭ ಒದಗಿಸಿದ್ದರು. ಇದರ ನಡುವೆ ಅರ್ಧಶತಕದತ್ತ ಸಾಗಿದ್ದ ಕೊಹ್ಲಿಯನ್ನು ಔಟ್ ಮಾಡುವಲ್ಲಿ ಸ್ಪಿನ್ನರ್ ನೂರ್ ಅಹ್ಮದ್ ಯಶಸ್ವಿಯಾಗಿದ್ದರು.

2 / 6
ನೂರ್ ಅಹ್ಮದ್ ಎಸೆದ 11ನೇ ಓವರ್​ನ 4ನೇ ಎಸೆತವನ್ನು ಕೊಹ್ಲಿ ಕವರ್ಸ್​ನತ್ತ ಬಾರಿಸಲು ಯತ್ನಿಸಿದ್ದರು. ಆದರೆ ಚೆಂಡು ಬ್ಯಾಟ್​ ಅನ್ನು ಸವರಿ ವಿಕೆಟ್ ಕೀಪರ್ ಕೈ ಸೇರಿತು. ಇತ್ತ ಕಿಂಗ್ ಕೊಹ್ಲಿಯ ವಿಕೆಟ್ ಸಿಗುತ್ತಿದ್ದಂತೆ ನೂರ್ ಅಹ್ಮದ್ ಕುಣಿದು ಕುಪ್ಪಳಿಸಿದರು.

ನೂರ್ ಅಹ್ಮದ್ ಎಸೆದ 11ನೇ ಓವರ್​ನ 4ನೇ ಎಸೆತವನ್ನು ಕೊಹ್ಲಿ ಕವರ್ಸ್​ನತ್ತ ಬಾರಿಸಲು ಯತ್ನಿಸಿದ್ದರು. ಆದರೆ ಚೆಂಡು ಬ್ಯಾಟ್​ ಅನ್ನು ಸವರಿ ವಿಕೆಟ್ ಕೀಪರ್ ಕೈ ಸೇರಿತು. ಇತ್ತ ಕಿಂಗ್ ಕೊಹ್ಲಿಯ ವಿಕೆಟ್ ಸಿಗುತ್ತಿದ್ದಂತೆ ನೂರ್ ಅಹ್ಮದ್ ಕುಣಿದು ಕುಪ್ಪಳಿಸಿದರು.

3 / 6
ಏಕೆಂದರೆ ನೂರ್​ ಅಹ್ಮದ್​ ಅವರ ನೆಚ್ಚಿನ ಕ್ರಿಕೆಟಿಗರಲ್ಲಿ ವಿರಾಟ್ ಕೊಹ್ಲಿ ಕೂಡ ಒಬ್ಬರು. ಇದೇ ಮೊದಲ ಬಾರಿಗೆ ತನ್ನ ಫೇವರೇಟ್ ಕ್ರಿಕೆಟಿಗನ ವಿಕೆಟ್ ಪಡೆದ ನೂರ್ ಅವರ ಸಂತಸಕ್ಕೆ ಪಾರವೇ ಇರಲಿಲ್ಲ. ಇದೀಗ ಈ ಸಂತಸವನ್ನು ವಿರಾಟ್ ಕೊಹ್ಲಿ ಇಮ್ಮಡಿಗೊಳಡಿಸಿದ್ದಾರೆ.

ಏಕೆಂದರೆ ನೂರ್​ ಅಹ್ಮದ್​ ಅವರ ನೆಚ್ಚಿನ ಕ್ರಿಕೆಟಿಗರಲ್ಲಿ ವಿರಾಟ್ ಕೊಹ್ಲಿ ಕೂಡ ಒಬ್ಬರು. ಇದೇ ಮೊದಲ ಬಾರಿಗೆ ತನ್ನ ಫೇವರೇಟ್ ಕ್ರಿಕೆಟಿಗನ ವಿಕೆಟ್ ಪಡೆದ ನೂರ್ ಅವರ ಸಂತಸಕ್ಕೆ ಪಾರವೇ ಇರಲಿಲ್ಲ. ಇದೀಗ ಈ ಸಂತಸವನ್ನು ವಿರಾಟ್ ಕೊಹ್ಲಿ ಇಮ್ಮಡಿಗೊಳಡಿಸಿದ್ದಾರೆ.

4 / 6
ಪಂದ್ಯದ ಬಳಿಕ ಕಿಂಗ್ ಕೊಹ್ಲಿ ತಮ್ಮ ಜೆರ್ಸಿಯನ್ನು ನೂರ್ ಅಹ್ಮದ್​ಗೆ ನೀಡಿದ್ದಾರೆ. ಅದ್ಭುತವಾಗಿ ಬೌಲಿಂಗ್ ಮಾಡಿದ್ದೀಯ, ಒಳ್ಳೆಯದಾಗಲಿ ಎಂದು ಆಟೋಗ್ರಾಫ್​ನೊಂದಿಗೆ ಕೊಹ್ಲಿ ಅಫ್ಘಾನ್ ಸ್ಪಿನ್ನರ್​ಗೆ ತಮ್ಮ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.

ಪಂದ್ಯದ ಬಳಿಕ ಕಿಂಗ್ ಕೊಹ್ಲಿ ತಮ್ಮ ಜೆರ್ಸಿಯನ್ನು ನೂರ್ ಅಹ್ಮದ್​ಗೆ ನೀಡಿದ್ದಾರೆ. ಅದ್ಭುತವಾಗಿ ಬೌಲಿಂಗ್ ಮಾಡಿದ್ದೀಯ, ಒಳ್ಳೆಯದಾಗಲಿ ಎಂದು ಆಟೋಗ್ರಾಫ್​ನೊಂದಿಗೆ ಕೊಹ್ಲಿ ಅಫ್ಘಾನ್ ಸ್ಪಿನ್ನರ್​ಗೆ ತಮ್ಮ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.

5 / 6
ಈ ಉಡುಗೊರೆಯ ಫೋಟೋವನ್ನು ಗುಜರಾತ್ ಟೈಟಾನ್ಸ್ ತಂಡದ ಸ್ಪಿನ್ನರ್ ನೂರ್ ಅಹ್ಮದ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ನೀವು ಯಾವತ್ತೂ ನನ್ನ ನೆಚ್ಚಿನವರಲ್ಲಿ ಒಬ್ಬರು ಎಂದು ವಿರಾಟ್​ ಕೊಹ್ಲಿಗೆ ಧನ್ಯವಾದ ತಿಳಿಸಿದ್ದಾರೆ.

ಈ ಉಡುಗೊರೆಯ ಫೋಟೋವನ್ನು ಗುಜರಾತ್ ಟೈಟಾನ್ಸ್ ತಂಡದ ಸ್ಪಿನ್ನರ್ ನೂರ್ ಅಹ್ಮದ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ನೀವು ಯಾವತ್ತೂ ನನ್ನ ನೆಚ್ಚಿನವರಲ್ಲಿ ಒಬ್ಬರು ಎಂದು ವಿರಾಟ್​ ಕೊಹ್ಲಿಗೆ ಧನ್ಯವಾದ ತಿಳಿಸಿದ್ದಾರೆ.

6 / 6
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ