AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿ RCB ತಂಡವನ್ನು ತೊರೆಯಲು ಇದು ಸಕಾಲ: ಕೆವಿನ್ ಪೀಟರ್ಸನ್

IPL 2024 Virat Kohli: ಐಪಿಎಲ್ 2024ರಲ್ಲಿ ವಿರಾಟ್ ಕೊಹ್ಲಿ ಒಟ್ಟು 15 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 1 ಭರ್ಜರಿ ಶತಕ ಹಾಗೂ 5 ಅರ್ಧಶತಕಗಳೊಂದಿಗೆ 741 ರನ್ ಕಲೆಹಾಕಿದ್ದಾರೆ. ಇದೀಗ ಈ ಬಾರಿಯ ಐಪಿಎಲ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಇದಾಗ್ಯೂ ಫೈನಲ್​ ರೇಸ್​ನಲ್ಲಿ ಆರ್​​ಸಿಬಿ ತಂಡವಿಲ್ಲ ಎಂಬುದೇ ಬೇಸರ.

ಝಾಹಿರ್ ಯೂಸುಫ್
|

Updated on:May 23, 2024 | 1:10 PM

Share
IPL 2024: ಸತತ 17 ವರ್ಷಗಳಿಂದ ಆರ್​ಸಿಬಿ ತಂಡದ ಕಪ್ ಗೆಲ್ಲುವ ಕನಸು ಮರೀಚಿಕೆಯಾಗಿಯೇ ಉಳಿದಿದೆ. ಇತ್ತ ಕಳೆದ ಹದಿನೇಳು ವರ್ಷಗಳಿಂದ ಒಂದೇ ಒಂದು ಟ್ರೋಫಿಗಾಗಿ ತನು ಮನ ಅರ್ಪಿಸಿ ಆಡುತ್ತಿರುವ ವಿರಾಟ್ ಕೊಹ್ಲಿಗೆ (Virat Kohli) ಈ ಬಾರಿ ಕೂಡ ನಿರಾಸೆಯಾಗಿದೆ. ಈ ನಿರಾಸೆಯ ಬೆನ್ನಲ್ಲೇ ಕಿಂಗ್ ಕೊಹ್ಲಿ ಆರ್​ಸಿಬಿ ತಂಡವನ್ನು ತೊರೆಯಲು ಇದು ಸಕಾಲ ಎಂದು ಅಭಿಪ್ರಾಯಪಟ್ಟಿದ್ದಾರೆ ಮಾಜಿ ಆಟಗಾರ ಕೆವಿನ್ ಪೀಟರ್ಸನ್.

IPL 2024: ಸತತ 17 ವರ್ಷಗಳಿಂದ ಆರ್​ಸಿಬಿ ತಂಡದ ಕಪ್ ಗೆಲ್ಲುವ ಕನಸು ಮರೀಚಿಕೆಯಾಗಿಯೇ ಉಳಿದಿದೆ. ಇತ್ತ ಕಳೆದ ಹದಿನೇಳು ವರ್ಷಗಳಿಂದ ಒಂದೇ ಒಂದು ಟ್ರೋಫಿಗಾಗಿ ತನು ಮನ ಅರ್ಪಿಸಿ ಆಡುತ್ತಿರುವ ವಿರಾಟ್ ಕೊಹ್ಲಿಗೆ (Virat Kohli) ಈ ಬಾರಿ ಕೂಡ ನಿರಾಸೆಯಾಗಿದೆ. ಈ ನಿರಾಸೆಯ ಬೆನ್ನಲ್ಲೇ ಕಿಂಗ್ ಕೊಹ್ಲಿ ಆರ್​ಸಿಬಿ ತಂಡವನ್ನು ತೊರೆಯಲು ಇದು ಸಕಾಲ ಎಂದು ಅಭಿಪ್ರಾಯಪಟ್ಟಿದ್ದಾರೆ ಮಾಜಿ ಆಟಗಾರ ಕೆವಿನ್ ಪೀಟರ್ಸನ್.

1 / 6
ರಾಜಸ್ಥಾನ್ ರಾಯಲ್ಸ್​ ವಿರುದ್ಧದ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ಸೋತ ಬೆನ್ನಲ್ಲೇ, ವಿರಾಟ್ ಕೊಹ್ಲಿ ಇನ್ನಾದರೂ ಒಂದೇ ತಂಡದ ಪರ ಆಡುವುದನ್ನು ನಿಲ್ಲಿಸಬೇಕೆಂದು ಇಂಗ್ಲೆಂಡ್ ಮಾಜಿ ಆಟಗಾರ ಕೆವಿನ್ ಪೀಟರ್ಸನ್ ಒತ್ತಾಯಿಸಿದ್ದಾರೆ. ಅಲ್ಲದೆ ಹೊಸ ತಂಡದ ಪರ ಕಣಕ್ಕಿಳಿಯಲು ಇದು ಸಕಾಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಜಸ್ಥಾನ್ ರಾಯಲ್ಸ್​ ವಿರುದ್ಧದ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ಸೋತ ಬೆನ್ನಲ್ಲೇ, ವಿರಾಟ್ ಕೊಹ್ಲಿ ಇನ್ನಾದರೂ ಒಂದೇ ತಂಡದ ಪರ ಆಡುವುದನ್ನು ನಿಲ್ಲಿಸಬೇಕೆಂದು ಇಂಗ್ಲೆಂಡ್ ಮಾಜಿ ಆಟಗಾರ ಕೆವಿನ್ ಪೀಟರ್ಸನ್ ಒತ್ತಾಯಿಸಿದ್ದಾರೆ. ಅಲ್ಲದೆ ಹೊಸ ತಂಡದ ಪರ ಕಣಕ್ಕಿಳಿಯಲು ಇದು ಸಕಾಲ ಎಂದು ಅಭಿಪ್ರಾಯಪಟ್ಟಿದ್ದಾರೆ.

2 / 6
ವಿರಾಟ್ ಕೊಹ್ಲಿ ಕಳೆದ 17 ಸೀಸನ್​ಗಳಿಂದ ಆರ್​ಸಿಬಿ ಪರ ಆಡುತ್ತಿದ್ದಾರೆ. ಆದರೆ ಒಮ್ಮೆಯೂ ಅವರು ಟ್ರೋಫಿ ಎತ್ತಿ ಹಿಡಿಯಲು ಸಾಧ್ಯವಾಗಿಲ್ಲ. ಹೀಗಾಗಿ ಅವರು ಬೇರೊಂದು ತಂಡದ ಪರ ಕಣಕ್ಕಿಳಿಯುವುದು ಉತ್ತಮ. ಏಕೆಂದರೆ ವಿರಾಟ್ ಕೊಹ್ಲಿ ಪ್ರತಿ ಬಾರಿಯೂ ಉತ್ತಮ ಪ್ರದರ್ಶನ ನೀಡಿದರೂ ಪ್ರಶಸ್ತಿ ಗೆಲ್ಲಲಾಗುತ್ತಿಲ್ಲ. ಹೀಗಾಗಿ ಅವರು ಆರ್​ಸಿಬಿ ತಂಡದಿಂದ ಹೊರಬರುವುದು ಉತ್ತಮ ಎಂದು ಪೀಟರ್ಸನ್ ಹೇಳಿದ್ದಾರೆ.

ವಿರಾಟ್ ಕೊಹ್ಲಿ ಕಳೆದ 17 ಸೀಸನ್​ಗಳಿಂದ ಆರ್​ಸಿಬಿ ಪರ ಆಡುತ್ತಿದ್ದಾರೆ. ಆದರೆ ಒಮ್ಮೆಯೂ ಅವರು ಟ್ರೋಫಿ ಎತ್ತಿ ಹಿಡಿಯಲು ಸಾಧ್ಯವಾಗಿಲ್ಲ. ಹೀಗಾಗಿ ಅವರು ಬೇರೊಂದು ತಂಡದ ಪರ ಕಣಕ್ಕಿಳಿಯುವುದು ಉತ್ತಮ. ಏಕೆಂದರೆ ವಿರಾಟ್ ಕೊಹ್ಲಿ ಪ್ರತಿ ಬಾರಿಯೂ ಉತ್ತಮ ಪ್ರದರ್ಶನ ನೀಡಿದರೂ ಪ್ರಶಸ್ತಿ ಗೆಲ್ಲಲಾಗುತ್ತಿಲ್ಲ. ಹೀಗಾಗಿ ಅವರು ಆರ್​ಸಿಬಿ ತಂಡದಿಂದ ಹೊರಬರುವುದು ಉತ್ತಮ ಎಂದು ಪೀಟರ್ಸನ್ ಹೇಳಿದ್ದಾರೆ.

3 / 6
ಒಂದು ವೇಳೆ ವಿರಾಟ್ ಕೊಹ್ಲಿ ಆರ್​ಸಿಬಿ ತಂಡದಿಂದ ಹೊರಬಂದರೆ, ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಖರೀದಿಸಬಹುದು. ಈ ಮೂಲಕ ಮುಂಬರುವ ಸೀಸನ್​ಗಳಲ್ಲಿ ಕೊಹ್ಲಿ ತಮ್ಮ ತವರು ತಂಡದ ಪರ ಕಣಕ್ಕಿಳಿಯಬಹುದು. ಹೀಗಾಗಿ ನಾನು ಕೊಹ್ಲಿ ಆರ್​ಸಿಬಿ ತಂಡದಿಂದ ಹೊರಬರಬೇಕೆಂದು ಬಯಸುತ್ತೇನೆ ಎಂದು ಕೆವಿನ್ ಪೀಟರ್ಸನ್ ಹೇಳಿದ್ದಾರೆ.

ಒಂದು ವೇಳೆ ವಿರಾಟ್ ಕೊಹ್ಲಿ ಆರ್​ಸಿಬಿ ತಂಡದಿಂದ ಹೊರಬಂದರೆ, ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಖರೀದಿಸಬಹುದು. ಈ ಮೂಲಕ ಮುಂಬರುವ ಸೀಸನ್​ಗಳಲ್ಲಿ ಕೊಹ್ಲಿ ತಮ್ಮ ತವರು ತಂಡದ ಪರ ಕಣಕ್ಕಿಳಿಯಬಹುದು. ಹೀಗಾಗಿ ನಾನು ಕೊಹ್ಲಿ ಆರ್​ಸಿಬಿ ತಂಡದಿಂದ ಹೊರಬರಬೇಕೆಂದು ಬಯಸುತ್ತೇನೆ ಎಂದು ಕೆವಿನ್ ಪೀಟರ್ಸನ್ ಹೇಳಿದ್ದಾರೆ.

4 / 6
ಇಲ್ಲಿ ತಂಡಗಳನ್ನು ಬದಲಿಸುವುದರಿಂದ ಯಾವುದೇ ಸಮಸ್ಯೆಯಾಗುವುದಿಲ್ಲ. ವಿಶ್ವದ ಖ್ಯಾತ ಫುಟ್​ಬಾಲ್ ಆಟಗಾರರಾದ ಲಿಯೊನೆಲ್ ಮೆಸ್ಸಿ, ಕ್ರಿಸ್ಟಿಯಾನೊ ರೊನಾಲ್ಡೊ ಸೇರಿದಂತೆ ಎಲ್ಲರೂ ತಂಡಗಳನ್ನು ಬದಲಿಸಿದ್ದಾರೆ. ಹೀಗಾಗಿ ಒಂದೇ ತಂಡದ ಪರ ಆಡುತ್ತಿರುವ ವಿರಾಟ್ ಕೊಹ್ಲಿ ಬೇರೆ ತಂಡದ ಪರ ಕಣಕ್ಕಿಳಿಯಬೇಕೆಂದು ಪೀಟರ್ಸನ್ ಸಲಹೆ ನೀಡಿದ್ದಾರೆ.

ಇಲ್ಲಿ ತಂಡಗಳನ್ನು ಬದಲಿಸುವುದರಿಂದ ಯಾವುದೇ ಸಮಸ್ಯೆಯಾಗುವುದಿಲ್ಲ. ವಿಶ್ವದ ಖ್ಯಾತ ಫುಟ್​ಬಾಲ್ ಆಟಗಾರರಾದ ಲಿಯೊನೆಲ್ ಮೆಸ್ಸಿ, ಕ್ರಿಸ್ಟಿಯಾನೊ ರೊನಾಲ್ಡೊ ಸೇರಿದಂತೆ ಎಲ್ಲರೂ ತಂಡಗಳನ್ನು ಬದಲಿಸಿದ್ದಾರೆ. ಹೀಗಾಗಿ ಒಂದೇ ತಂಡದ ಪರ ಆಡುತ್ತಿರುವ ವಿರಾಟ್ ಕೊಹ್ಲಿ ಬೇರೆ ತಂಡದ ಪರ ಕಣಕ್ಕಿಳಿಯಬೇಕೆಂದು ಪೀಟರ್ಸನ್ ಸಲಹೆ ನೀಡಿದ್ದಾರೆ.

5 / 6
ಅಂದಹಾಗೆ ಇಂಗ್ಲೆಂಡ್ ಆಟಗಾರ ಕೆವಿನ್ ಪೀಟರ್ಸನ್ 2009 ಹಾಗೂ 2010 ರಲ್ಲಿ ಆರ್​ಸಿಬಿ ಪರ ಆಡಿದ್ದರು. ಈ ವೇಳೆ 6 ಪಂದ್ಯಗಳಲ್ಲಿ ಆರ್​ಸಿಬಿ ತಂಡವನ್ನು ಕೂಡ ಮುನ್ನಡೆಸಿದ್ದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಒಟ್ಟು 13 ಪಂದ್ಯಗಳನ್ನಾಡಿದ್ದ ಪೀಟರ್ಸನ್ 329 ರನ್​ ಕಲೆಹಾಕಿದ್ದರು.

ಅಂದಹಾಗೆ ಇಂಗ್ಲೆಂಡ್ ಆಟಗಾರ ಕೆವಿನ್ ಪೀಟರ್ಸನ್ 2009 ಹಾಗೂ 2010 ರಲ್ಲಿ ಆರ್​ಸಿಬಿ ಪರ ಆಡಿದ್ದರು. ಈ ವೇಳೆ 6 ಪಂದ್ಯಗಳಲ್ಲಿ ಆರ್​ಸಿಬಿ ತಂಡವನ್ನು ಕೂಡ ಮುನ್ನಡೆಸಿದ್ದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಒಟ್ಟು 13 ಪಂದ್ಯಗಳನ್ನಾಡಿದ್ದ ಪೀಟರ್ಸನ್ 329 ರನ್​ ಕಲೆಹಾಕಿದ್ದರು.

6 / 6

Published On - 1:07 pm, Thu, 23 May 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?