IPL 2024: RCB ಕಪ್ ಗೆಲ್ಲದಿರಲು ವಿರಾಟ್ ಕೊಹ್ಲಿಯೇ ಕಾರಣ: ಅಂಬಾಟಿ ರಾಯುಡು

Edited By:

Updated on: Apr 04, 2024 | 12:53 PM

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2024) RCB ತಂಡವು ಮೂರು ಬಾರಿ ಫೈನಲ್ ಆಡಿದೆ. 2009 ರ ಐಪಿಎಲ್​ನಲ್ಲಿ ಮೊದಲ ಬಾರಿ ಫೈನಲ್​ಗೆ ಪ್ರವೇಶಿಸಿದ್ದ ಆರ್​ಸಿಬಿ ಅಂತಿಮ ಹಣಾಹಣಿಯಲ್ಲಿ ಸೋಲನುಭವಿಸಿತ್ತು. ಇದಾದ ಬಳಿಕ 2011 ಮತ್ತು 2016 ರಲ್ಲಿ ಐಪಿಎಲ್​ ಫೈನಲ್ ಆಡಿದ್ದರೂ ಪ್ರಶಸ್ತಿ ಮುಡಿಗೇರಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ.

1 / 8
16 ವರ್ಷಗಳು... 16 ಸೀಸನ್​ಗಳು... ಆದರೆ ಒಮ್ಮೆಯೂ ಚಾಂಪಿಯನ್ ಪಟ್ಟ ಅಲಂಕರಿಸಿಲ್ಲ... ಪ್ರತಿ ಸೀಸನ್​ನಲ್ಲೂ ಲೆಕ್ಕಾಚಾರ...ಕೊನೆಗೆ ನೋವಿನ ವಿದಾಯ. ಹೀಗೆ ಕಳೆದ 16 ಸೀಸನ್​ಗಳಲ್ಲಿ RCB ತಂಡದ ನೋವಿನ ವಿದಾಯದಲ್ಲಿ ಕಾಣಿಸಿಕೊಂಡ ಏಕೈಕ ಆಟಗಾರ ವಿರಾಟ್ ಕೊಹ್ಲಿ (Virat Kohli).

16 ವರ್ಷಗಳು... 16 ಸೀಸನ್​ಗಳು... ಆದರೆ ಒಮ್ಮೆಯೂ ಚಾಂಪಿಯನ್ ಪಟ್ಟ ಅಲಂಕರಿಸಿಲ್ಲ... ಪ್ರತಿ ಸೀಸನ್​ನಲ್ಲೂ ಲೆಕ್ಕಾಚಾರ...ಕೊನೆಗೆ ನೋವಿನ ವಿದಾಯ. ಹೀಗೆ ಕಳೆದ 16 ಸೀಸನ್​ಗಳಲ್ಲಿ RCB ತಂಡದ ನೋವಿನ ವಿದಾಯದಲ್ಲಿ ಕಾಣಿಸಿಕೊಂಡ ಏಕೈಕ ಆಟಗಾರ ವಿರಾಟ್ ಕೊಹ್ಲಿ (Virat Kohli).

2 / 8

ಹೀಗೆ ಪ್ರತಿ ಬಾರಿಯೂ ಕಪ್ ಗೆಲ್ಲುವ ವಿಶ್ವಾಸದೊಂದಿಗೆ ಕಣಕ್ಕಿಳಿದಿದ್ದ ಕೊಹ್ಲಿ, ಕಳೆದ 16 ವರ್ಷಗಳಿಂದ ಚೊಚ್ಚಲ ಟ್ರೋಫಿಯನ್ನು ಎದುರು ನೋಡುತ್ತಿದ್ದಾರೆ. ಈ ಸುದೀರ್ಘ ಕಾಲದ ಕನಸು ಈ ಬಾರಿಯಾದರೂ ಈಡೇರುತ್ತಾ ಎಂಬುದನ್ನು ಕಾದು ನೋಡಬೇಕಿದೆ.

3 / 8

ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಳೆದ 16 ಸೀಸನ್​ಗಳಲ್ಲಿ ಕಪ್ ಗೆಲ್ಲದಿರಲು ವಿರಾಟ್ ಕೊಹ್ಲಿ ಕೂಡ ಕಾರಣಕರ್ತರು ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ಅಂಬಾಟಿ ರಾಯುಡು. ಇದಕ್ಕೆ ಅವರದ್ದೇ ಆದ ಸ್ಪಷ್ಟನೆಗಳನ್ನು ಸಹ ನೀಡಿದ್ದಾರೆ.

4 / 8

ಅಂಬಾಟಿ ರಾಯುಡು ಪ್ರಕಾರ, ಆರ್​ಸಿಬಿ ಕಳೆದ 16 ಸೀಸನ್​ಗಳಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸದಿರಲು ವಿರಾಟ್ ಕೊಹ್ಲಿ ಕೂಡ ಕಾರಣ. ಏಕೆಂದರೆ ಕೊಹ್ಲಿ ಹಲವು ವರ್ಷಗಳ ಕಾಲ ಆರ್​ಸಿಬಿ ತಂಡದ ಕ್ಯಾಪ್ಟನ್ ಆಗಿದ್ದರು. ಆ ಸಮಯದಲ್ಲಿ ಆಟಗಾರರ ರಿಟೈನ್, ರಿಲೀಸ್​ ಮತ್ತು ಹರಾಜಿನಲ್ಲಿ ಅವರ ಅಭಿಪ್ರಾಯಗಳು ಖಂಡಿತವಾಗಿಯೂ ಇದ್ದಿರುತ್ತೆ.

5 / 8

ಇದಾಗ್ಯೂ ಆರ್​ಸಿಬಿ ತಂಡವು ಎಂದಿಗೂ ಅತ್ಯುತ್ತಮ ಬೌಲರ್​ಗಳನ್ನು ಮಾತ್ರ ಖರೀದಿಸಲೇ ಇಲ್ಲ. ಉತ್ತಮವಾಗಿ ಆಡುವ ಆಟಗಾರರಿಗೂ ಬೆಂಬಲ ನೀಡಿಲ್ಲ. ಹೀಗೆ ಆರ್​ಸಿಬಿ ತಂಡದಿಂದ ಹೊರಬಿದ್ದ ಆಟಗಾರರು ಬೇರೆ ತಂಡಗಳ ಪರ ಅದ್ಭುತವಾಗಿ ಆಡಿದ್ದಾರೆ. ಇದಕ್ಕೆ ಕಾರಣ ಬೇರೆ ಫ್ರಾಂಚೈಸಿಗಳು ಮತ್ತು ನಾಯಕರುಗಳು ಅವರಿಗೆ ನೀಡಿದ ಬೆಂಬಲ ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

6 / 8

ಈ ಹಿಂದೆ ತಂಡದಲ್ಲಿದ್ದ ಶೇನ್ ವ್ಯಾಟ್ಸನ್, ಯುಜ್ವೇಂದ್ರ ಚಹಾಲ್, ಮಿಚೆಲ್ ಸ್ಟಾರ್ಕ್ ಮತ್ತು ಶಿವಂ ದುಬೆ ಅವರಂತಹ ಮ್ಯಾಚ್ ವಿನ್ನರ್‌ಗಳನ್ನು ಆರ್​ಸಿಬಿ ಫ್ರಾಂಚೈಸಿಯು ತಂಡದಿಂದ ಕೈ ಬಿಟ್ಟಿತು. ಈ ಆಟಗಾರರು ಬೇರೆ ತಂಡಗಳ ಪರ ಅದ್ಭುತ ಪ್ರದರ್ಶನ ನೀಡಿದ್ದಾರೆ. ಈಗಲೂ ಆರ್​ಸಿಬಿ ತಂಡದ ಕೆಲ ಮಾಜಿ ಆಟಗಾರರು ಉತ್ತಮ ಆಟ ಮುಂದುವರೆಸಿದ್ದಾರೆ. ಇದರರ್ಥ ಉತ್ತಮ ಸಾಮರ್ಥ್ಯವಿದ್ದ ಆಟಗಾರರನ್ನು ಆರ್​ಸಿಬಿ ಪ್ರೋತ್ಸಾಹಿಸಿಲ್ಲ ಎಂಬುದು.

7 / 8

ವಿರಾಟ್ ಕೊಹ್ಲಿ ಆರ್​ಸಿಬಿ ಪರ 7 ಸಾವಿರ ರನ್​ ಗಳಿಸಿದ್ದಾರೆ ಎಂಬುದನ್ನು ನಾನು ಸಹ ಒಪ್ಪಿಕೊಳ್ಳುತ್ತೇನೆ. ಆದರೆ ಒಬ್ಬ ಆಟಗಾರನಿಂದ ಕಪ್ ಗೆಲ್ಲಲು ಸಾಧ್ಯವಿಲ್ಲ ಎಂಬುದಕ್ಕೆ ಆರ್​ಸಿಬಿ ತಂಡವೇ ದೊಡ್ಡ ಉದಾಹರಣೆ.

8 / 8

ಅಲ್ಲದೆ ನಾಯಕನಾದವನು ಉತ್ತಮ ತಂಡ ಕಟ್ಟದಿರುವುದರಿಂದ ಇಂದಿಗೂ ಆರ್​ಸಿಬಿ ತಂಡಕ್ಕೆ ಕಪ್ ಗೆಲ್ಲಲು ಸಾಧ್ಯವಾಗಿಲ್ಲ. ಇದಕ್ಕೆ ಆರ್​ಸಿಬಿ ತಂಡವನ್ನು ಅತೀ ಹೆಚ್ಚು ವರ್ಷ ಮುನ್ನಡೆಸಿದ ವಿರಾಟ್ ಕೊಹ್ಲಿ ಕೂಡ ಕಾರಣ ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

Loading...
Unable to load recommendations.
Follow Us