AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ರಿಂಕು ಸಿಂಗ್​ಗೆ ವಿಶೇಷ ಗಿಫ್ಟ್ ನೀಡಿದ ವಿರಾಟ್ ಕೊಹ್ಲಿ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ (ಐಪಿಎಲ್ 2024) ಸೀಸನ್ 17 ರಲ್ಲಿ ಆರ್​ಸಿಬಿ ತಂಡವು ಇದುವರೆಗೆ 3 ಪಂದ್ಯಗಳನ್ನಾಡಿದೆ. ಮೊದಲ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ಸೋತಿದ್ದ ಆರ್​ಸಿಬಿ ತಂಡವು 2ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು ದಾಖಲಿಸಿತ್ತು. ಇನ್ನು ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಮತ್ತೆ ಸೋಲನುಭವಿಸುವ ಮೂಲಕ RCB ನಿರಾಸೆ ಮೂಡಿಸಿದೆ.

TV9 Web
| Edited By: |

Updated on: Mar 31, 2024 | 7:53 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 10ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಈ ಗೆಲುವಿನ ಬಳಿಕ ಕೆಕೆಆರ್ ತಂಡದ ಬ್ಯಾಟರ್ ರಿಂಕು ಸಿಂಗ್ ಆರ್​ಸಿಬಿ ತಂಡದ ಡ್ರೆಸ್ಸಿಂಗ್ ರೂಮ್​ನಲ್ಲಿ ಕಾಣಿಸಿಕೊಂಡಿದ್ದರು.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 10ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಈ ಗೆಲುವಿನ ಬಳಿಕ ಕೆಕೆಆರ್ ತಂಡದ ಬ್ಯಾಟರ್ ರಿಂಕು ಸಿಂಗ್ ಆರ್​ಸಿಬಿ ತಂಡದ ಡ್ರೆಸ್ಸಿಂಗ್ ರೂಮ್​ನಲ್ಲಿ ಕಾಣಿಸಿಕೊಂಡಿದ್ದರು.

1 / 5
ವಿರಾಟ್ ಕೊಹ್ಲಿಯನ್ನು ಭೇಟಿಯಾಗಲು ಆಗಮಿಸಿದ್ದ ರಿಂಕು ಸಿಂಗ್ ಕೆಲ ಹೊತ್ತು ಕುಶಲೋಪರಿ ನಡೆಸಿದರು. ಅಲ್ಲದೆ ಕಿಂಗ್ ಕೊಹ್ಲಿ ಕಡೆಯಿಂದ ಬ್ಯಾಟಿಂಗ್ ಸಲಹೆಗಳನ್ನು ಪಡೆದುಕೊಂಡರು. ಇದೇ ವೇಳೆ ಯುವ ಎಡಗೈ ದಾಂಡಿಗನಿಗೆ ವಿರಾಟ್ ಕೊಹ್ಲಿ ವಿಶೇಷ ಉಡುಗೊರೆ ನೀಡಿದ್ದಾರೆ.

ವಿರಾಟ್ ಕೊಹ್ಲಿಯನ್ನು ಭೇಟಿಯಾಗಲು ಆಗಮಿಸಿದ್ದ ರಿಂಕು ಸಿಂಗ್ ಕೆಲ ಹೊತ್ತು ಕುಶಲೋಪರಿ ನಡೆಸಿದರು. ಅಲ್ಲದೆ ಕಿಂಗ್ ಕೊಹ್ಲಿ ಕಡೆಯಿಂದ ಬ್ಯಾಟಿಂಗ್ ಸಲಹೆಗಳನ್ನು ಪಡೆದುಕೊಂಡರು. ಇದೇ ವೇಳೆ ಯುವ ಎಡಗೈ ದಾಂಡಿಗನಿಗೆ ವಿರಾಟ್ ಕೊಹ್ಲಿ ವಿಶೇಷ ಉಡುಗೊರೆ ನೀಡಿದ್ದಾರೆ.

2 / 5
ಮಾತುಕತೆ ಮುಗಿಸಿ ಇನ್ನೇನು ಹೊರಡುವಷ್ಟರಲ್ಲಿ ರಿಂಕು ಸಿಂಗ್​ಗೆ ವಿರಾಟ್ ಕೊಹ್ಲಿ ತಮ್ಮ ಬ್ಯಾಟ್​ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಕಿಂಗ್ ಕೊಹ್ಲಿ ಬಳಸುವುದು ಉತ್ಕೃಷ್ಟ ಗುಣಮಟ್ಟದ ಬ್ಯಾಟ್. ಹೀಗಾಗಿಯೇ ಅನೇಕ ಆಟಗಾರರು ಕಿಂಗ್ ಕೊಹ್ಲಿಯಿಂದ ಬ್ಯಾಟ್​ ಅನ್ನು ಕೇಳಿ ಪಡೆಯುತ್ತಾರೆ. ಇದೀಗ ಕಿಂಗ್ ಕೊಹ್ಲಿ ರಿಂಕು ಸಿಂಗ್​ಗೆ ತಮ್ಮ ಬ್ಯಾಟ್​ ಅನ್ನು ಗಿಫ್ಟ್ ಆಗಿ ನೀಡಿದ್ದು, ಇದರ ಫೋಟೋಗಳನ್ನು ಕೆಕೆಆರ್ ಫ್ರಾಂಚೈಸಿಯು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಮಾತುಕತೆ ಮುಗಿಸಿ ಇನ್ನೇನು ಹೊರಡುವಷ್ಟರಲ್ಲಿ ರಿಂಕು ಸಿಂಗ್​ಗೆ ವಿರಾಟ್ ಕೊಹ್ಲಿ ತಮ್ಮ ಬ್ಯಾಟ್​ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಕಿಂಗ್ ಕೊಹ್ಲಿ ಬಳಸುವುದು ಉತ್ಕೃಷ್ಟ ಗುಣಮಟ್ಟದ ಬ್ಯಾಟ್. ಹೀಗಾಗಿಯೇ ಅನೇಕ ಆಟಗಾರರು ಕಿಂಗ್ ಕೊಹ್ಲಿಯಿಂದ ಬ್ಯಾಟ್​ ಅನ್ನು ಕೇಳಿ ಪಡೆಯುತ್ತಾರೆ. ಇದೀಗ ಕಿಂಗ್ ಕೊಹ್ಲಿ ರಿಂಕು ಸಿಂಗ್​ಗೆ ತಮ್ಮ ಬ್ಯಾಟ್​ ಅನ್ನು ಗಿಫ್ಟ್ ಆಗಿ ನೀಡಿದ್ದು, ಇದರ ಫೋಟೋಗಳನ್ನು ಕೆಕೆಆರ್ ಫ್ರಾಂಚೈಸಿಯು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

3 / 5
ಅಲ್ಲದೆ ಆರ್​ಸಿಬಿ ತಂಡದ ಡ್ರೆಸ್ಸಿಂಗ್ ರೂಮ್​ನಿಂದ ಹೊರಡುವ ಮುನ್ನ ವಿರಾಟ್ ಕೊಹ್ಲಿಯಿಂದ ರಿಂಕು ಸಿಂಗ್ ಅದೃಷ್ಟದ ಅಪ್ಪುಗೆಯನ್ನು ಸಹ ಪಡೆದರು. ಇದೀಗ ರಿಂಕು-ಕೊಹ್ಲಿ ನಡುವಣ ಬಾಂಧವ್ಯದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

ಅಲ್ಲದೆ ಆರ್​ಸಿಬಿ ತಂಡದ ಡ್ರೆಸ್ಸಿಂಗ್ ರೂಮ್​ನಿಂದ ಹೊರಡುವ ಮುನ್ನ ವಿರಾಟ್ ಕೊಹ್ಲಿಯಿಂದ ರಿಂಕು ಸಿಂಗ್ ಅದೃಷ್ಟದ ಅಪ್ಪುಗೆಯನ್ನು ಸಹ ಪಡೆದರು. ಇದೀಗ ರಿಂಕು-ಕೊಹ್ಲಿ ನಡುವಣ ಬಾಂಧವ್ಯದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

4 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಮುಂದಿನ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದೆ. ಏಪ್ರಿಲ್ 2 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳುವ ವಿಶ್ವಾಸದಲ್ಲಿದೆ ಆರ್​ಸಿಬಿ ಪಡೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಮುಂದಿನ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದೆ. ಏಪ್ರಿಲ್ 2 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳುವ ವಿಶ್ವಾಸದಲ್ಲಿದೆ ಆರ್​ಸಿಬಿ ಪಡೆ.

5 / 5
Follow Us
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ