AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ರಿಂಕು ಸಿಂಗ್​ಗೆ ವಿಶೇಷ ಗಿಫ್ಟ್ ನೀಡಿದ ವಿರಾಟ್ ಕೊಹ್ಲಿ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ (ಐಪಿಎಲ್ 2024) ಸೀಸನ್ 17 ರಲ್ಲಿ ಆರ್​ಸಿಬಿ ತಂಡವು ಇದುವರೆಗೆ 3 ಪಂದ್ಯಗಳನ್ನಾಡಿದೆ. ಮೊದಲ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ಸೋತಿದ್ದ ಆರ್​ಸಿಬಿ ತಂಡವು 2ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು ದಾಖಲಿಸಿತ್ತು. ಇನ್ನು ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಮತ್ತೆ ಸೋಲನುಭವಿಸುವ ಮೂಲಕ RCB ನಿರಾಸೆ ಮೂಡಿಸಿದೆ.

TV9 Web
| Edited By: |

Updated on: Mar 31, 2024 | 7:53 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 10ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಈ ಗೆಲುವಿನ ಬಳಿಕ ಕೆಕೆಆರ್ ತಂಡದ ಬ್ಯಾಟರ್ ರಿಂಕು ಸಿಂಗ್ ಆರ್​ಸಿಬಿ ತಂಡದ ಡ್ರೆಸ್ಸಿಂಗ್ ರೂಮ್​ನಲ್ಲಿ ಕಾಣಿಸಿಕೊಂಡಿದ್ದರು.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 10ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಈ ಗೆಲುವಿನ ಬಳಿಕ ಕೆಕೆಆರ್ ತಂಡದ ಬ್ಯಾಟರ್ ರಿಂಕು ಸಿಂಗ್ ಆರ್​ಸಿಬಿ ತಂಡದ ಡ್ರೆಸ್ಸಿಂಗ್ ರೂಮ್​ನಲ್ಲಿ ಕಾಣಿಸಿಕೊಂಡಿದ್ದರು.

1 / 5
ವಿರಾಟ್ ಕೊಹ್ಲಿಯನ್ನು ಭೇಟಿಯಾಗಲು ಆಗಮಿಸಿದ್ದ ರಿಂಕು ಸಿಂಗ್ ಕೆಲ ಹೊತ್ತು ಕುಶಲೋಪರಿ ನಡೆಸಿದರು. ಅಲ್ಲದೆ ಕಿಂಗ್ ಕೊಹ್ಲಿ ಕಡೆಯಿಂದ ಬ್ಯಾಟಿಂಗ್ ಸಲಹೆಗಳನ್ನು ಪಡೆದುಕೊಂಡರು. ಇದೇ ವೇಳೆ ಯುವ ಎಡಗೈ ದಾಂಡಿಗನಿಗೆ ವಿರಾಟ್ ಕೊಹ್ಲಿ ವಿಶೇಷ ಉಡುಗೊರೆ ನೀಡಿದ್ದಾರೆ.

ವಿರಾಟ್ ಕೊಹ್ಲಿಯನ್ನು ಭೇಟಿಯಾಗಲು ಆಗಮಿಸಿದ್ದ ರಿಂಕು ಸಿಂಗ್ ಕೆಲ ಹೊತ್ತು ಕುಶಲೋಪರಿ ನಡೆಸಿದರು. ಅಲ್ಲದೆ ಕಿಂಗ್ ಕೊಹ್ಲಿ ಕಡೆಯಿಂದ ಬ್ಯಾಟಿಂಗ್ ಸಲಹೆಗಳನ್ನು ಪಡೆದುಕೊಂಡರು. ಇದೇ ವೇಳೆ ಯುವ ಎಡಗೈ ದಾಂಡಿಗನಿಗೆ ವಿರಾಟ್ ಕೊಹ್ಲಿ ವಿಶೇಷ ಉಡುಗೊರೆ ನೀಡಿದ್ದಾರೆ.

2 / 5
ಮಾತುಕತೆ ಮುಗಿಸಿ ಇನ್ನೇನು ಹೊರಡುವಷ್ಟರಲ್ಲಿ ರಿಂಕು ಸಿಂಗ್​ಗೆ ವಿರಾಟ್ ಕೊಹ್ಲಿ ತಮ್ಮ ಬ್ಯಾಟ್​ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಕಿಂಗ್ ಕೊಹ್ಲಿ ಬಳಸುವುದು ಉತ್ಕೃಷ್ಟ ಗುಣಮಟ್ಟದ ಬ್ಯಾಟ್. ಹೀಗಾಗಿಯೇ ಅನೇಕ ಆಟಗಾರರು ಕಿಂಗ್ ಕೊಹ್ಲಿಯಿಂದ ಬ್ಯಾಟ್​ ಅನ್ನು ಕೇಳಿ ಪಡೆಯುತ್ತಾರೆ. ಇದೀಗ ಕಿಂಗ್ ಕೊಹ್ಲಿ ರಿಂಕು ಸಿಂಗ್​ಗೆ ತಮ್ಮ ಬ್ಯಾಟ್​ ಅನ್ನು ಗಿಫ್ಟ್ ಆಗಿ ನೀಡಿದ್ದು, ಇದರ ಫೋಟೋಗಳನ್ನು ಕೆಕೆಆರ್ ಫ್ರಾಂಚೈಸಿಯು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಮಾತುಕತೆ ಮುಗಿಸಿ ಇನ್ನೇನು ಹೊರಡುವಷ್ಟರಲ್ಲಿ ರಿಂಕು ಸಿಂಗ್​ಗೆ ವಿರಾಟ್ ಕೊಹ್ಲಿ ತಮ್ಮ ಬ್ಯಾಟ್​ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಕಿಂಗ್ ಕೊಹ್ಲಿ ಬಳಸುವುದು ಉತ್ಕೃಷ್ಟ ಗುಣಮಟ್ಟದ ಬ್ಯಾಟ್. ಹೀಗಾಗಿಯೇ ಅನೇಕ ಆಟಗಾರರು ಕಿಂಗ್ ಕೊಹ್ಲಿಯಿಂದ ಬ್ಯಾಟ್​ ಅನ್ನು ಕೇಳಿ ಪಡೆಯುತ್ತಾರೆ. ಇದೀಗ ಕಿಂಗ್ ಕೊಹ್ಲಿ ರಿಂಕು ಸಿಂಗ್​ಗೆ ತಮ್ಮ ಬ್ಯಾಟ್​ ಅನ್ನು ಗಿಫ್ಟ್ ಆಗಿ ನೀಡಿದ್ದು, ಇದರ ಫೋಟೋಗಳನ್ನು ಕೆಕೆಆರ್ ಫ್ರಾಂಚೈಸಿಯು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

3 / 5
ಅಲ್ಲದೆ ಆರ್​ಸಿಬಿ ತಂಡದ ಡ್ರೆಸ್ಸಿಂಗ್ ರೂಮ್​ನಿಂದ ಹೊರಡುವ ಮುನ್ನ ವಿರಾಟ್ ಕೊಹ್ಲಿಯಿಂದ ರಿಂಕು ಸಿಂಗ್ ಅದೃಷ್ಟದ ಅಪ್ಪುಗೆಯನ್ನು ಸಹ ಪಡೆದರು. ಇದೀಗ ರಿಂಕು-ಕೊಹ್ಲಿ ನಡುವಣ ಬಾಂಧವ್ಯದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

ಅಲ್ಲದೆ ಆರ್​ಸಿಬಿ ತಂಡದ ಡ್ರೆಸ್ಸಿಂಗ್ ರೂಮ್​ನಿಂದ ಹೊರಡುವ ಮುನ್ನ ವಿರಾಟ್ ಕೊಹ್ಲಿಯಿಂದ ರಿಂಕು ಸಿಂಗ್ ಅದೃಷ್ಟದ ಅಪ್ಪುಗೆಯನ್ನು ಸಹ ಪಡೆದರು. ಇದೀಗ ರಿಂಕು-ಕೊಹ್ಲಿ ನಡುವಣ ಬಾಂಧವ್ಯದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

4 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಮುಂದಿನ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದೆ. ಏಪ್ರಿಲ್ 2 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳುವ ವಿಶ್ವಾಸದಲ್ಲಿದೆ ಆರ್​ಸಿಬಿ ಪಡೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಮುಂದಿನ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದೆ. ಏಪ್ರಿಲ್ 2 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳುವ ವಿಶ್ವಾಸದಲ್ಲಿದೆ ಆರ್​ಸಿಬಿ ಪಡೆ.

5 / 5
TV9 Web
TV9 Web

TV9 Kannada

Read More
Follow Us
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಕಾಕ್ಸ್​
24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಕಾಕ್ಸ್​
ರಾಮ್ ಚರಣ್ ಬಾಡಿಗಾರ್ಡ್ ಕೆವಿನ್ ಭರ್ಜರಿ ಕಸರತ್ತು; ವಿಡಿಯೋ ವೈರಲ್
ರಾಮ್ ಚರಣ್ ಬಾಡಿಗಾರ್ಡ್ ಕೆವಿನ್ ಭರ್ಜರಿ ಕಸರತ್ತು; ವಿಡಿಯೋ ವೈರಲ್
ಬಿಡದಿ ಟೌನ್‌ಶಿಪ್ ಯೋಜನೆ: ಜೂನ್ 20ಕ್ಕೆ ರೈತರ ಬೃಹತ್ ಪ್ರತಿಭಟನೆ
ಬಿಡದಿ ಟೌನ್‌ಶಿಪ್ ಯೋಜನೆ: ಜೂನ್ 20ಕ್ಕೆ ರೈತರ ಬೃಹತ್ ಪ್ರತಿಭಟನೆ
ಬೆಂಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಕೆರೆಯಂತಾದ ರಸ್ತೆಗಳು
ಬೆಂಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಕೆರೆಯಂತಾದ ರಸ್ತೆಗಳು