AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ವಿರಾಟ್ ಕೊಹ್ಲಿಯನ್ನು ಅತೀ ಹೆಚ್ಚು ಬಾರಿ ಔಟ್ ಮಾಡಿದ ಬೌಲರ್ ಯಾರು ಗೊತ್ತಾ?

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಫಾರ್ಮ್ ಪ್ರದರ್ಶಿಸಿದ್ದಾರೆ. ಆಡಿರುವ 6 ಪಂದ್ಯಗಳಿಂದ ಒಟ್ಟು 319 ರನ್ ಕಲೆಹಾಕುವ ಮೂಲಕ ಕೊಹ್ಲಿ IPL 2024 ರ ರನ್ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಹಾಗೆಯೇ ಈ ಬಾರಿಯ ಐಪಿಎಲ್ ಮೂಲಕ ಕಿಂಗ್ ಕೊಹ್ಲಿ 8ನೇ ಶತಕವನ್ನೂ ಸಹ ಪೂರೈಸಿದ್ದಾರೆ.

TV9 Web
| Edited By: |

Updated on:Apr 14, 2024 | 10:10 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಇತಿಹಾಸದಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ ಯಾರೆಂದರೆ ಥಟ್ಟನೆ ಬರುವ ಉತ್ತರ ವಿರಾಟ್ ಕೊಹ್ಲಿ (Virat Kohli). ಕಿಂಗ್ ಕೊಹ್ಲಿ ಇದುವರೆಗೆ 8 ಶತಕಗಳೊಂದಿಗೆ 7582 ರನ್ ಪೇರಿಸಿದ್ದಾರೆ. ಹೀಗೆ ರನ್ ಮೇಲೆ ರನ್ ಪೇರಿಸುತ್ತಾ ಸಾಗುತ್ತಿರುವ ವಿರಾಟ್ ಕೊಹ್ಲಿ ಕೆಲ ಬೌಲರ್​ಗಳ ವಿರುದ್ಧ ಆಡಲು ಪರದಾಡಿದ್ದಾರೆ. ಇದಕ್ಕೆ ಸಾಕ್ಷಿಯೇ ಈ ಅಂಕಿ ಅಂಶಗಳು.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಇತಿಹಾಸದಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ ಯಾರೆಂದರೆ ಥಟ್ಟನೆ ಬರುವ ಉತ್ತರ ವಿರಾಟ್ ಕೊಹ್ಲಿ (Virat Kohli). ಕಿಂಗ್ ಕೊಹ್ಲಿ ಇದುವರೆಗೆ 8 ಶತಕಗಳೊಂದಿಗೆ 7582 ರನ್ ಪೇರಿಸಿದ್ದಾರೆ. ಹೀಗೆ ರನ್ ಮೇಲೆ ರನ್ ಪೇರಿಸುತ್ತಾ ಸಾಗುತ್ತಿರುವ ವಿರಾಟ್ ಕೊಹ್ಲಿ ಕೆಲ ಬೌಲರ್​ಗಳ ವಿರುದ್ಧ ಆಡಲು ಪರದಾಡಿದ್ದಾರೆ. ಇದಕ್ಕೆ ಸಾಕ್ಷಿಯೇ ಈ ಅಂಕಿ ಅಂಶಗಳು.

1 / 5
ಅಂದರೆ ಐಪಿಎಲ್​ ಇತಿಹಾಸದಲ್ಲಿ ವಿರಾಟ್ ಕೊಹ್ಲಿಯನ್ನು ಅತೀ ಹೆಚ್ಚು ಬಾರಿ ಔಟ್ ಮಾಡಿದ ಬೌಲರ್​ಗಳ ಪಟ್ಟಿಯನ್ನು ತೆಗೆದುಕೊಂಡರೆ, ಸಂದೀಪ್ ಶರ್ಮಾ ಹೆಸರು ಮುಂಚೂಣಿಯಲ್ಲಿ ಕಾಣಸಿಗುತ್ತದೆ. 15 ಇನಿಂಗ್ಸ್​ಗಳಲ್ಲಿ ಕೊಹ್ಲಿ ಹಾಗೂ ಸಂದೀಪ್ ಶರ್ಮಾ ಮುಖಾಮುಖಿಯಾಗಿದ್ದಾರೆ. ಈ ವೇಳೆ 7 ಬಾರಿ ಔಟ್ ಮಾಡುವಲ್ಲಿ ಸಂದೀಪ್ ಶರ್ಮಾ ಯಶಸ್ವಿಯಾಗಿದ್ದಾರೆ. ಇದೇ ವೇಳೆ ಎದುರಿಸಿದ 67 ಎಸೆತಗಳಲ್ಲಿ ಕೊಹ್ಲಿ ಕಲೆಹಾಕಿದ್ದು ಕೇವಲ 87 ರನ್​ಗಳು ಮಾತ್ರ. ಅಂದರೆ ಕೊಹ್ಲಿ ವಿರುದ್ಧ ಸಂದೀಪ್ ಶರ್ಮಾ ಎಲ್ಲಾ ರೀತಿಯಲ್ಲೂ ಮೇಲುಗೈ ಸಾಧಿಸುತ್ತಾ ಬಂದಿದ್ದಾರೆ.

ಅಂದರೆ ಐಪಿಎಲ್​ ಇತಿಹಾಸದಲ್ಲಿ ವಿರಾಟ್ ಕೊಹ್ಲಿಯನ್ನು ಅತೀ ಹೆಚ್ಚು ಬಾರಿ ಔಟ್ ಮಾಡಿದ ಬೌಲರ್​ಗಳ ಪಟ್ಟಿಯನ್ನು ತೆಗೆದುಕೊಂಡರೆ, ಸಂದೀಪ್ ಶರ್ಮಾ ಹೆಸರು ಮುಂಚೂಣಿಯಲ್ಲಿ ಕಾಣಸಿಗುತ್ತದೆ. 15 ಇನಿಂಗ್ಸ್​ಗಳಲ್ಲಿ ಕೊಹ್ಲಿ ಹಾಗೂ ಸಂದೀಪ್ ಶರ್ಮಾ ಮುಖಾಮುಖಿಯಾಗಿದ್ದಾರೆ. ಈ ವೇಳೆ 7 ಬಾರಿ ಔಟ್ ಮಾಡುವಲ್ಲಿ ಸಂದೀಪ್ ಶರ್ಮಾ ಯಶಸ್ವಿಯಾಗಿದ್ದಾರೆ. ಇದೇ ವೇಳೆ ಎದುರಿಸಿದ 67 ಎಸೆತಗಳಲ್ಲಿ ಕೊಹ್ಲಿ ಕಲೆಹಾಕಿದ್ದು ಕೇವಲ 87 ರನ್​ಗಳು ಮಾತ್ರ. ಅಂದರೆ ಕೊಹ್ಲಿ ವಿರುದ್ಧ ಸಂದೀಪ್ ಶರ್ಮಾ ಎಲ್ಲಾ ರೀತಿಯಲ್ಲೂ ಮೇಲುಗೈ ಸಾಧಿಸುತ್ತಾ ಬಂದಿದ್ದಾರೆ.

2 / 5
ಇನ್ನು ವಿರಾಟ್ ಕೊಹ್ಲಿಯನ್ನು ಕಾಡಿದ 2ನೇ ಬೌಲರ್ ಆಶಿಶ್ ನೆಹ್ರಾ. ಕಿಂಗ್ ಕೊಹ್ಲಿ ಹಾಗೂ ನೆಹ್ರಾ ಐಪಿಎಲ್​ನಲ್ಲಿ 10 ಬಾರಿ ಮುಖಾಮುಖಿಯಾಗಿದ್ದಾರೆ. ಈ ವೇಳೆ 6 ಸಲ ಕೊಹ್ಲಿಯನ್ನು ಔಟ್ ಮಾಡುವಲ್ಲಿ ನೆಹ್ರಾ ಯಶಸ್ವಿಯಾಗಿದ್ದಾರೆ. ಇನ್ನು ನೆಹ್ರಾ ಅವರ 54 ಎಸೆತಗಳನ್ನು ಎದುರಿಸಿ ಕೊಹ್ಲಿ ಕಲೆಹಾಕಿದ್ದು ಕೇವಲ 60 ರನ್​ಗಳು ಮಾತ್ರ.

ಇನ್ನು ವಿರಾಟ್ ಕೊಹ್ಲಿಯನ್ನು ಕಾಡಿದ 2ನೇ ಬೌಲರ್ ಆಶಿಶ್ ನೆಹ್ರಾ. ಕಿಂಗ್ ಕೊಹ್ಲಿ ಹಾಗೂ ನೆಹ್ರಾ ಐಪಿಎಲ್​ನಲ್ಲಿ 10 ಬಾರಿ ಮುಖಾಮುಖಿಯಾಗಿದ್ದಾರೆ. ಈ ವೇಳೆ 6 ಸಲ ಕೊಹ್ಲಿಯನ್ನು ಔಟ್ ಮಾಡುವಲ್ಲಿ ನೆಹ್ರಾ ಯಶಸ್ವಿಯಾಗಿದ್ದಾರೆ. ಇನ್ನು ನೆಹ್ರಾ ಅವರ 54 ಎಸೆತಗಳನ್ನು ಎದುರಿಸಿ ಕೊಹ್ಲಿ ಕಲೆಹಾಕಿದ್ದು ಕೇವಲ 60 ರನ್​ಗಳು ಮಾತ್ರ.

3 / 5
ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಜಸ್​ಪ್ರೀತ್ ಬುಮ್ರಾ ಇದ್ದಾರೆ. ವಿರಾಟ್ ಕೊಹ್ಲಿ ಹಾಗೂ ಬುಮ್ರಾ ಒಟ್ಟು 16 ಇನಿಂಗ್ಸ್​ಗಳಲ್ಲಿ ಮುಖಾಮುಖಿಯಾಗಿದ್ದಾರೆ. ಈ ವೇಳೆ 95 ಎಸೆತಗಳನ್ನು ಎದುರಿಸಿರುವ ಕೊಹ್ಲಿ 140 ರನ್​ ಕಲೆಹಾಕಿದ್ದಾರೆ. ಇದೇ ವೇಳೆ ಕೊಹ್ಲಿಯನ್ನು 5 ಬಾರಿ ಔಟ್ ಮಾಡುವಲ್ಲಿ ಜಸ್​ಪ್ರೀತ್ ಬುಮ್ರಾ ಯಶಸ್ವಿಯಾಗಿದ್ದಾರೆ.

ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಜಸ್​ಪ್ರೀತ್ ಬುಮ್ರಾ ಇದ್ದಾರೆ. ವಿರಾಟ್ ಕೊಹ್ಲಿ ಹಾಗೂ ಬುಮ್ರಾ ಒಟ್ಟು 16 ಇನಿಂಗ್ಸ್​ಗಳಲ್ಲಿ ಮುಖಾಮುಖಿಯಾಗಿದ್ದಾರೆ. ಈ ವೇಳೆ 95 ಎಸೆತಗಳನ್ನು ಎದುರಿಸಿರುವ ಕೊಹ್ಲಿ 140 ರನ್​ ಕಲೆಹಾಕಿದ್ದಾರೆ. ಇದೇ ವೇಳೆ ಕೊಹ್ಲಿಯನ್ನು 5 ಬಾರಿ ಔಟ್ ಮಾಡುವಲ್ಲಿ ಜಸ್​ಪ್ರೀತ್ ಬುಮ್ರಾ ಯಶಸ್ವಿಯಾಗಿದ್ದಾರೆ.

4 / 5
ಹಾಗೆಯೇ ಮೊಹಮ್ಮದ್ ಶಮಿ ಕೂಡ ವಿರಾಟ್ ಕೊಹ್ಲಿಯನ್ನು 5 ಬಾರಿ ಔಟ್ ಮಾಡಿದ್ದಾರೆ. 12 ಪಂದ್ಯಗಳಲ್ಲಿ ಕೊಹ್ಲಿ-ಶಮಿ ಮುಖಾಮುಖಿಯಾಗಿದ್ದು, ಈ ವೇಳೆ 77 ಎಸೆತಗಳನ್ನು ಎದುರಿಸಿರುವ ವಿರಾಟ್ 107 ರನ್​ ಗಳಿಸಿದ್ದಾರೆ.

ಹಾಗೆಯೇ ಮೊಹಮ್ಮದ್ ಶಮಿ ಕೂಡ ವಿರಾಟ್ ಕೊಹ್ಲಿಯನ್ನು 5 ಬಾರಿ ಔಟ್ ಮಾಡಿದ್ದಾರೆ. 12 ಪಂದ್ಯಗಳಲ್ಲಿ ಕೊಹ್ಲಿ-ಶಮಿ ಮುಖಾಮುಖಿಯಾಗಿದ್ದು, ಈ ವೇಳೆ 77 ಎಸೆತಗಳನ್ನು ಎದುರಿಸಿರುವ ವಿರಾಟ್ 107 ರನ್​ ಗಳಿಸಿದ್ದಾರೆ.

5 / 5

Published On - 10:09 am, Sun, 14 April 24

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!