AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Angkrish Raghuvanshi: ಮತ್ತೋರ್ವ ಯುವ ಪ್ರತಿಭೆಯನ್ನು ಪರಿಚಯಿಸಿದ KKR

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ಗೆ (ಐಪಿಎಲ್ 2024) ಮತ್ತೋರ್ವ ಯುವ ಪ್ರತಿಭೆ ಎಂಟ್ರಿ ಕೊಟ್ಟಿದೆ. ಹೆಸರು ಅಂಗ್‌ಕ್ರಿಶ್ ರಘುವಂಶಿ, ಕೊಲ್ಕತ್ತಾ ನೈಟ್ ರೈಡರ್ಸ್ ಪರ ಆಡುತ್ತಿರುವ 18ರ ಯುವ ದಾಂಡಿಗ ಚೊಚ್ಚಲ ಪಂದ್ಯದಲ್ಲೇ ಕಮಾಲ್ ಮಾಡಿದ್ದಾರೆ. ಆಕರ್ಷಕ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದ ರಘವಂಶಿ ದೇಶೀಯ ಅಂಗಳದಲ್ಲೇ ಆಕ್ರಮಣಕಾರಿ ಬ್ಯಾಟಿಂಗ್​ ಹೆಸರುವಾಸಿ. ಇದನ್ನು ಐಪಿಎಲ್​ನಲ್ಲೂ ತೋರಿಸಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on: Apr 04, 2024 | 6:59 AM

Share
ಕೊಲ್ಕತ್ತಾ ನೈಟ್​ ರೈಡರ್ಸ್ (KKR) ತಂಡ ಪರಿಚಯಿಸಿದ ರಿಂಕು ಸಿಂಗ್ ಕಮಾಲ್ ಮಾಡುತ್ತಿರುವುದು ಗೊತ್ತೇ ಇದೆ. ಇದೀಗ ಕೆಕೆಆರ್ ಮತ್ತೋರ್ವ ಯುವ ಆಟಗಾರನನ್ನು ಪರಿಚಯಿಸಿದೆ. ಈ ಯುವ ದಾಂಡಿಗನ ಹೆಸರು ಅಂಗ್‌ಕ್ರಿಶ್ ರಘುವಂಶಿ. ಆಡಿದ ಚೊಚ್ಚಲ ಪಂದ್ಯದಲ್ಲೇ ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದಾರೆ.

ಕೊಲ್ಕತ್ತಾ ನೈಟ್​ ರೈಡರ್ಸ್ (KKR) ತಂಡ ಪರಿಚಯಿಸಿದ ರಿಂಕು ಸಿಂಗ್ ಕಮಾಲ್ ಮಾಡುತ್ತಿರುವುದು ಗೊತ್ತೇ ಇದೆ. ಇದೀಗ ಕೆಕೆಆರ್ ಮತ್ತೋರ್ವ ಯುವ ಆಟಗಾರನನ್ನು ಪರಿಚಯಿಸಿದೆ. ಈ ಯುವ ದಾಂಡಿಗನ ಹೆಸರು ಅಂಗ್‌ಕ್ರಿಶ್ ರಘುವಂಶಿ. ಆಡಿದ ಚೊಚ್ಚಲ ಪಂದ್ಯದಲ್ಲೇ ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದಾರೆ.

1 / 6
ವಿಶಾಖಪಟ್ಟಣಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ಪರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಅಂಗ್‌ಕ್ರಿಶ್ ರಘುವಂಶಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಎದುರಿಸಿದ ಮೊದಲೆರಡು ಎಸೆತಗಳಲ್ಲಿ ಬೌಂಡರಿ ಬಾರಿಸಿದ ರಘುವಂಶಿ ಬಿರುಸಿನ ಆಟಕ್ಕೆ ಒತ್ತು ನೀಡಿದರು.

ವಿಶಾಖಪಟ್ಟಣಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ಪರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಅಂಗ್‌ಕ್ರಿಶ್ ರಘುವಂಶಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಎದುರಿಸಿದ ಮೊದಲೆರಡು ಎಸೆತಗಳಲ್ಲಿ ಬೌಂಡರಿ ಬಾರಿಸಿದ ರಘುವಂಶಿ ಬಿರುಸಿನ ಆಟಕ್ಕೆ ಒತ್ತು ನೀಡಿದರು.

2 / 6
ಅಲ್ಲದೆ ಚೊಚ್ಚಲ ಪಂದ್ಯದಲ್ಲಿ ಅನುಭವಿ ವೇಗಿಗಳ ಮುಂದೆ ಸೆಟೆದು ನಿಂತ 18ರ ಯುವ ದಾಂಡಿಗ ಕೇವಲ 25 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ಐಪಿಎಲ್​ನ ಪಾದಾರ್ಪಣೆ ಪಂದ್ಯದಲ್ಲಿ ಹಾಫ್ ಸೆಂಚುರಿ ಸಿಡಿಸಿದ ವಿಶೇಷ ಸಾಧನೆ ಮಾಡಿದರು. ಅಲ್ಲದೆ ಈ ಅರ್ಧಶತಕದೊಂದಿಗೆ ಐಪಿಎಲ್​ಗೆ ತನ್ನ ಆಗಮನವನ್ನು ಸಾರಿದರು.

ಅಲ್ಲದೆ ಚೊಚ್ಚಲ ಪಂದ್ಯದಲ್ಲಿ ಅನುಭವಿ ವೇಗಿಗಳ ಮುಂದೆ ಸೆಟೆದು ನಿಂತ 18ರ ಯುವ ದಾಂಡಿಗ ಕೇವಲ 25 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ಐಪಿಎಲ್​ನ ಪಾದಾರ್ಪಣೆ ಪಂದ್ಯದಲ್ಲಿ ಹಾಫ್ ಸೆಂಚುರಿ ಸಿಡಿಸಿದ ವಿಶೇಷ ಸಾಧನೆ ಮಾಡಿದರು. ಅಲ್ಲದೆ ಈ ಅರ್ಧಶತಕದೊಂದಿಗೆ ಐಪಿಎಲ್​ಗೆ ತನ್ನ ಆಗಮನವನ್ನು ಸಾರಿದರು.

3 / 6
ಅಂದಹಾಗೆ ಅಂಗ್‌ಕ್ರಿಶ್ ರಘುವಂಶಿ ದೆಹಲಿ ಮೂಲದ ಕ್ರಿಕೆಟಿಗ. ಆದರೆ ದೇಶೀಯ ಅಂಗಳದಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಅಲ್ಲದೆ 2022 ರಲ್ಲಿ ಅಂಡರ್-19 ವಿಶ್ವಕಪ್​ನಲ್ಲಿ ಭಾರತ ಪರ ಆಡಿದ್ದರು. 2023 ರಲ್ಲಿ ಲಿಸ್ಟ್ A ಮತ್ತು T20 ಗೆ ಪಾದಾರ್ಪಣೆ ಮಾಡಿದ್ದ ರುಘುವಂಶಿ, CK ನಾಯುಡು ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನವನ್ನು ನೀಡಿದ್ದರು. ಕೇವಲ 9 ಪಂದ್ಯಗಳಲ್ಲಿ 765 ರನ್​ಗಳನ್ನು ಸಿಡಿಸುವ ಮೂಲಕ ರಘುವಂಶಿ ಐಪಿಎಲ್​ ಫ್ರಾಂಚೈಸಿಗಳ ಗಮನ ಸೆಳೆದಿದ್ದರು.

ಅಂದಹಾಗೆ ಅಂಗ್‌ಕ್ರಿಶ್ ರಘುವಂಶಿ ದೆಹಲಿ ಮೂಲದ ಕ್ರಿಕೆಟಿಗ. ಆದರೆ ದೇಶೀಯ ಅಂಗಳದಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಅಲ್ಲದೆ 2022 ರಲ್ಲಿ ಅಂಡರ್-19 ವಿಶ್ವಕಪ್​ನಲ್ಲಿ ಭಾರತ ಪರ ಆಡಿದ್ದರು. 2023 ರಲ್ಲಿ ಲಿಸ್ಟ್ A ಮತ್ತು T20 ಗೆ ಪಾದಾರ್ಪಣೆ ಮಾಡಿದ್ದ ರುಘುವಂಶಿ, CK ನಾಯುಡು ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನವನ್ನು ನೀಡಿದ್ದರು. ಕೇವಲ 9 ಪಂದ್ಯಗಳಲ್ಲಿ 765 ರನ್​ಗಳನ್ನು ಸಿಡಿಸುವ ಮೂಲಕ ರಘುವಂಶಿ ಐಪಿಎಲ್​ ಫ್ರಾಂಚೈಸಿಗಳ ಗಮನ ಸೆಳೆದಿದ್ದರು.

4 / 6
ಅತ್ತ ಮುಂಬೈನ ಮಾಜಿ ಆಟಗಾರ, ಪ್ರಸ್ತುತ ಕೆಕೆಆರ್ ತಂಡದ ಸಹಾಯಕ ಕೋಚ್ ಅಭಿಷೇಕ್ ನಾಯರ್ ಅದಾಗಲೇ ರಘುವಂಶಿ ಮೇಲೆ ಕಣ್ಣಿಟ್ಟಿದ್ದರು. ಏಕೆಂದರೆ ಅಂಗ್​ಕ್ರಿಶ್ ನಾಯರ್ ಗರಡಿಯಲ್ಲಿ ಪಳಗಿದ ಹುಡುಗ. ಹೀಗಾಗಿಯೇ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಯುವ ಆಟಗಾರಿಗೆ ಅದೃಷ್ಟದ ಬಾಗಿಲು ತೆರೆಯಿತು.

ಅತ್ತ ಮುಂಬೈನ ಮಾಜಿ ಆಟಗಾರ, ಪ್ರಸ್ತುತ ಕೆಕೆಆರ್ ತಂಡದ ಸಹಾಯಕ ಕೋಚ್ ಅಭಿಷೇಕ್ ನಾಯರ್ ಅದಾಗಲೇ ರಘುವಂಶಿ ಮೇಲೆ ಕಣ್ಣಿಟ್ಟಿದ್ದರು. ಏಕೆಂದರೆ ಅಂಗ್​ಕ್ರಿಶ್ ನಾಯರ್ ಗರಡಿಯಲ್ಲಿ ಪಳಗಿದ ಹುಡುಗ. ಹೀಗಾಗಿಯೇ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಯುವ ಆಟಗಾರಿಗೆ ಅದೃಷ್ಟದ ಬಾಗಿಲು ತೆರೆಯಿತು.

5 / 6
ಅದರಂತೆ ಇದೀಗ ತಮ್ಮ 18ನೇ ವಯಸ್ಸಿನಲ್ಲಿ ಐಪಿಎಲ್​ಗೆ ಪಾದಾರ್ಪಣೆ ಮಾಡಿದ್ದಾರೆ. ಅಲ್ಲದೆ ಮೊದಲ ಪಂದ್ಯದಲ್ಲೇ 27 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 54 ರನ್ ಸಿಡಿಸಿ ಅಂಗ್‌ಕ್ರಿಶ್ ರಘುವಂಶಿ ತಮ್ಮ ಎಂಟ್ರಿಯನ್ನು ಸಾರಿದ್ದಾರೆ. ಹೀಗಾಗಿ ಮುಂಬರುವ ಪಂದ್ಯಗಳಲ್ಲಿ ಯುವ ದಾಂಡಿಗನ ಕಡೆಯಿಂದ ಮತ್ತಷ್ಟು ಸ್ಪೋಟಕ ಇನಿಂಗ್ಸ್ ಅನ್ನು ನಿರೀಕ್ಷಿಸಬಹುದು.

ಅದರಂತೆ ಇದೀಗ ತಮ್ಮ 18ನೇ ವಯಸ್ಸಿನಲ್ಲಿ ಐಪಿಎಲ್​ಗೆ ಪಾದಾರ್ಪಣೆ ಮಾಡಿದ್ದಾರೆ. ಅಲ್ಲದೆ ಮೊದಲ ಪಂದ್ಯದಲ್ಲೇ 27 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 54 ರನ್ ಸಿಡಿಸಿ ಅಂಗ್‌ಕ್ರಿಶ್ ರಘುವಂಶಿ ತಮ್ಮ ಎಂಟ್ರಿಯನ್ನು ಸಾರಿದ್ದಾರೆ. ಹೀಗಾಗಿ ಮುಂಬರುವ ಪಂದ್ಯಗಳಲ್ಲಿ ಯುವ ದಾಂಡಿಗನ ಕಡೆಯಿಂದ ಮತ್ತಷ್ಟು ಸ್ಪೋಟಕ ಇನಿಂಗ್ಸ್ ಅನ್ನು ನಿರೀಕ್ಷಿಸಬಹುದು.

6 / 6
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು