AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಖದರ್ ಕಳೆದುಕೊಂಡ ಯಶಸ್ವಿ ಜೈಸ್ವಾಲ್​..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಯಶಸ್ವಿ ಜೈಸ್ವಾಲ್ ಕಳಪೆ ಬ್ಯಾಟಿಂಗ್ ಮುಂದುವರೆಸಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 10 ರನ್ ಬಾರಿಸಿ ಔಟಾಗಿದ್ದ ಜೈಸ್ವಾಲ್, ಆ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 5 ರನ್, ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ವಿರುದ್ಧ ತಲಾ 24 ರನ್​ ಕಲೆಹಾಕಲಷ್ಟೇ ಶಕ್ತರಾಗಿದ್ದರು. ಇನ್ನು ಆರ್​ಸಿಬಿ ವಿರುದ್ಧ ಶೂನ್ಯಕ್ಕೆ ಔಟಾಗಿದ್ದರು.

TV9 Web
| Edited By: |

Updated on: Apr 13, 2024 | 2:24 PM

Share
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಅತೀ ವೇಗದ ಅರ್ಧಶತಕ ಬಾರಿಸಿದ ಬ್ಯಾಟರ್... ಬಲಿಷ್ಠ ಇಂಗ್ಲೆಂಡ್​ ಪಡೆಗೆ ಜೈಸ್​ಬಾಲ್ ತೋರಿಸಿದ ಯುವ ದಾಂಡಿಗ... ಪ್ರಸ್ತುತ ಕ್ರಿಕೆಟ್​ ಅಂಗಳದ ಆಕ್ರಮಣಕಾರಿ ಎಡಗೈ ಬ್ಯಾಟ್ಸ್​ಮನ್... ಹೀಗೆ ಕಳೆದೊಂದು ವರ್ಷದಿಂದ ಸಂಚಲನ ಸೃಷ್ಟಿಸಿದ್ದ ಯಶಸ್ವಿ ಜೈಸ್ವಾಲ್ (Yashasvi Jaiswal) ಈ ಬಾರಿಯ ಐಪಿಎಲ್​ನಲ್ಲಿ ಮಂಕಾಗಿದ್ದಾರೆ.

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಅತೀ ವೇಗದ ಅರ್ಧಶತಕ ಬಾರಿಸಿದ ಬ್ಯಾಟರ್... ಬಲಿಷ್ಠ ಇಂಗ್ಲೆಂಡ್​ ಪಡೆಗೆ ಜೈಸ್​ಬಾಲ್ ತೋರಿಸಿದ ಯುವ ದಾಂಡಿಗ... ಪ್ರಸ್ತುತ ಕ್ರಿಕೆಟ್​ ಅಂಗಳದ ಆಕ್ರಮಣಕಾರಿ ಎಡಗೈ ಬ್ಯಾಟ್ಸ್​ಮನ್... ಹೀಗೆ ಕಳೆದೊಂದು ವರ್ಷದಿಂದ ಸಂಚಲನ ಸೃಷ್ಟಿಸಿದ್ದ ಯಶಸ್ವಿ ಜೈಸ್ವಾಲ್ (Yashasvi Jaiswal) ಈ ಬಾರಿಯ ಐಪಿಎಲ್​ನಲ್ಲಿ ಮಂಕಾಗಿದ್ದಾರೆ.

1 / 6
ಕಳೆದ ಸೀಸನ್ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ 14 ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್​ 5 ಅರ್ಧಶತಕ ಹಾಗೂ 1 ಶತಕದೊಂದಿಗೆ ಕಲೆಹಾಕಿದ್ದು ಬರೋಬ್ಬರಿ 625 ರನ್​ಗಳು. ಆದರೆ ಈ ಬಾರಿ ಜೈಸ್ವಾಲ್​ಗೆ 50 ಎಸೆತಗಳನ್ನು ಎದುರಿಸಲು ಸಾಧ್ಯವಾಗಿಲ್ಲ ಎಂಬುದೇ ಅಚ್ಚರಿ.

ಕಳೆದ ಸೀಸನ್ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ 14 ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್​ 5 ಅರ್ಧಶತಕ ಹಾಗೂ 1 ಶತಕದೊಂದಿಗೆ ಕಲೆಹಾಕಿದ್ದು ಬರೋಬ್ಬರಿ 625 ರನ್​ಗಳು. ಆದರೆ ಈ ಬಾರಿ ಜೈಸ್ವಾಲ್​ಗೆ 50 ಎಸೆತಗಳನ್ನು ಎದುರಿಸಲು ಸಾಧ್ಯವಾಗಿಲ್ಲ ಎಂಬುದೇ ಅಚ್ಚರಿ.

2 / 6
ಐಪಿಎಲ್​ 2024 ರ ಮೊದಲಾರ್ಧದ 5 ಪಂದ್ಯಗಳಲ್ಲಿ ಯಶಸ್ವಿ ಜೈಸ್ವಾಲ್ ಎದುರಿಸಿರುವುದು ಕೇವಲ 46 ಎಸೆತಗಳನ್ನು ಮಾತ್ರ. ಈ ವೇಳೆ ಕೇವಲ 63 ರನ್​ ಕಲೆಹಾಕಿದ್ದಾರೆ. ಅಲ್ಲದೆ ಪ್ರತಿ ಬಾರಿಯೂ ಪವರ್​ಪ್ಲೇನಲ್ಲೇ ವಿಕೆಟ್ ಒಪ್ಪಿಸಿದ್ದಾರೆ.

ಐಪಿಎಲ್​ 2024 ರ ಮೊದಲಾರ್ಧದ 5 ಪಂದ್ಯಗಳಲ್ಲಿ ಯಶಸ್ವಿ ಜೈಸ್ವಾಲ್ ಎದುರಿಸಿರುವುದು ಕೇವಲ 46 ಎಸೆತಗಳನ್ನು ಮಾತ್ರ. ಈ ವೇಳೆ ಕೇವಲ 63 ರನ್​ ಕಲೆಹಾಕಿದ್ದಾರೆ. ಅಲ್ಲದೆ ಪ್ರತಿ ಬಾರಿಯೂ ಪವರ್​ಪ್ಲೇನಲ್ಲೇ ವಿಕೆಟ್ ಒಪ್ಪಿಸಿದ್ದಾರೆ.

3 / 6
ಅಂದರೆ ಈ ಬಾರಿಯ ಐಪಿಎಲ್​ನಲ್ಲಿ ಜೈಸ್ವಾಲ್ ಇದುವರೆಗೆ 12.60 ಸರಾಸರಿಯಲ್ಲಿ ಮಾತ್ರ ರನ್​ ಕಲೆಹಾಕಿದ್ದಾರೆ. ಹಾಗೆಯೇ ಅವರ ಸ್ಟ್ರೈಕ್ ರೇಟ್ 136.96 ಕ್ಕೆ ಕುಸಿದಿದೆ. ಕಳೆದ ಸೀಸನ್​ನಲ್ಲಿ ಜೈಸ್ವಾಲ್ 163.61 ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ್ದರು ಎಂಬುದು ಇಲ್ಲಿ ಉಲ್ಲೇಖಾರ್ಹ.

ಅಂದರೆ ಈ ಬಾರಿಯ ಐಪಿಎಲ್​ನಲ್ಲಿ ಜೈಸ್ವಾಲ್ ಇದುವರೆಗೆ 12.60 ಸರಾಸರಿಯಲ್ಲಿ ಮಾತ್ರ ರನ್​ ಕಲೆಹಾಕಿದ್ದಾರೆ. ಹಾಗೆಯೇ ಅವರ ಸ್ಟ್ರೈಕ್ ರೇಟ್ 136.96 ಕ್ಕೆ ಕುಸಿದಿದೆ. ಕಳೆದ ಸೀಸನ್​ನಲ್ಲಿ ಜೈಸ್ವಾಲ್ 163.61 ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ್ದರು ಎಂಬುದು ಇಲ್ಲಿ ಉಲ್ಲೇಖಾರ್ಹ.

4 / 6
ಇದೀಗ ಫಾರ್ಮ್​ ಕಳೆದುಕೊಂಡಿರುವ ಯಶಸ್ವಿ ಜೈಸ್ವಾಲ್ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಉತ್ತಮ ಆರಂಭ ಒದಗಿಸಲು ವಿಫಲರಾಗುತ್ತಿದ್ದಾರೆ. ಟಿ20 ವಿಶ್ವಕಪ್​ಗೂ ಮುನ್ನ ಕಳಪೆ ಪ್ರದರ್ಶನ ನೀಡುತ್ತಿರುವ ಜೈಸ್ವಾಲ್​ಗೆ ಭಾರತ ಟಿ20 ತಂಡದಲ್ಲಿ ಸ್ಥಾನ ಸಿಗಲಿದೆಯಾ ಎಂಬುದೇ ಈಗ ದೊಡ್ಡ ಪ್ರಶ್ನೆ.

ಇದೀಗ ಫಾರ್ಮ್​ ಕಳೆದುಕೊಂಡಿರುವ ಯಶಸ್ವಿ ಜೈಸ್ವಾಲ್ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಉತ್ತಮ ಆರಂಭ ಒದಗಿಸಲು ವಿಫಲರಾಗುತ್ತಿದ್ದಾರೆ. ಟಿ20 ವಿಶ್ವಕಪ್​ಗೂ ಮುನ್ನ ಕಳಪೆ ಪ್ರದರ್ಶನ ನೀಡುತ್ತಿರುವ ಜೈಸ್ವಾಲ್​ಗೆ ಭಾರತ ಟಿ20 ತಂಡದಲ್ಲಿ ಸ್ಥಾನ ಸಿಗಲಿದೆಯಾ ಎಂಬುದೇ ಈಗ ದೊಡ್ಡ ಪ್ರಶ್ನೆ.

5 / 6
ಈ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ಯಶಸ್ವಿ ಜೈಸ್ವಾಲ್​ ಮುಂದೆ 9 ಪಂದ್ಯಗಳಿವೆ. ಈ ಪಂದ್ಯಗಳಲ್ಲಿ ಭರ್ಜರಿ ಬ್ಯಾಟಿಂಗ್​ನೊಂದಿಗೆ ತಮ್ಮ ಫಾರ್ಮ್ ಅನ್ನು ಮರಳಿ ಪಡೆಯುವಲ್ಲಿ ಯಶಸ್ವಿಯಾದರೆ ಟಿ20 ವಿಶ್ವಕಪ್​ ತಂಡದಲ್ಲಿ ಕಾಣಿಸಿಕೊಳ್ಳಬಹುದು. ಇಲ್ಲದಿದ್ದರೆ ರೋಹಿತ್ ಶರ್ಮಾ ಜೊತೆ ಇಶಾನ್ ಕಿಶನ್ ಅಥವಾ ಶುಭ್​ಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿದರೂ ಅಚ್ಚರಿಪಡಬೇಕಿಲ್ಲ.

ಈ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ಯಶಸ್ವಿ ಜೈಸ್ವಾಲ್​ ಮುಂದೆ 9 ಪಂದ್ಯಗಳಿವೆ. ಈ ಪಂದ್ಯಗಳಲ್ಲಿ ಭರ್ಜರಿ ಬ್ಯಾಟಿಂಗ್​ನೊಂದಿಗೆ ತಮ್ಮ ಫಾರ್ಮ್ ಅನ್ನು ಮರಳಿ ಪಡೆಯುವಲ್ಲಿ ಯಶಸ್ವಿಯಾದರೆ ಟಿ20 ವಿಶ್ವಕಪ್​ ತಂಡದಲ್ಲಿ ಕಾಣಿಸಿಕೊಳ್ಳಬಹುದು. ಇಲ್ಲದಿದ್ದರೆ ರೋಹಿತ್ ಶರ್ಮಾ ಜೊತೆ ಇಶಾನ್ ಕಿಶನ್ ಅಥವಾ ಶುಭ್​ಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿದರೂ ಅಚ್ಚರಿಪಡಬೇಕಿಲ್ಲ.

6 / 6
Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ