
ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಾಳೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೈವೋಲ್ಟೇಜ್ ಕದನ ನಡೆಯಲ್ಲಿದೆ. ಆದರೆ ಅದಕ್ಕೂ ಮುನ್ನ ಕೆಕೆಆರ್ ತಂಡದಲ್ಲಿ ಬದಲಾವಣೆಯಾಗಿದೆ. ಅದರಂತೆ ಒಬ್ಬ ಆಟಗಾರ ಟೂರ್ನಿಯಿಂದ ಹೊರಬಿದ್ದಿದ್ದರೆ, ಅವನ ಬದಲಿಯಾಗಿ 16 ವರ್ಷದ ಆಟಗಾರ ತಂಡಕ್ಕೆ ಎಂಟ್ರಿಕೊಟ್ಟಿದ್ದಾನೆ.

ವಾಸ್ತವವಾಗಿ ಅಫ್ಘಾನಿಸ್ತಾನದ ಸ್ಟಾರ್ ಆಟಗಾರ ಮುಜೀಬ್ ಉರ್ ರೆಹಮಾನ್ ಈ ಬಾರಿಯ ಐಪಿಎಲ್ನಿಂದ ಹೊರಗುಳಿದಿದ್ದಾರೆ. ಮುಜೀಬ್ ಉರ್ ರೆಹಮಾನ್ ಗಾಯದ ಕಾರಣದಿಂದಾಗಿ ಈ ಐಪಿಎಲ್ ಆಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಮುಜೀಬ್ ಉರ್ ರೆಹಮಾನ್ ಬದಲಿಯಾಗಿ 16 ವರ್ಷದ ಆಟಗಾರನನ್ನು ಕೆಕೆಆರ್ ತನ್ನ ತಂಡಕ್ಕೆ ಸೇರಿಸಿಕೊಂಡಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಮುಜೀಬ್ ಉರ್ ರೆಹಮಾನ್ ಬದಲಿಗೆ 16 ವರ್ಷದ ಅಲ್ಲಾ ಮೊಹಮ್ಮದ್ ಘಜನ್ಫರ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಅಲ್ಲಾ ಮೊಹಮ್ಮದ್ ಘಜನ್ಫರ್ ಕೂಡ ಅಫ್ಘಾನಿಸ್ತಾನ ಕ್ರಿಕೆಟಿಗನಾಗಿದ್ದು, ಇದುವರೆಗೆ ಅವರು 2 ಏಕದಿನ ಪಂದ್ಯಗಳಲ್ಲಿ ಅಫ್ಘಾನಿಸ್ತಾನ ತಂಡವನ್ನು ಪ್ರತಿನಿಧಿಸಿದ್ದಾ

ಏಕದಿನ ಮಾತ್ರವಲ್ಲದೆ ಈ ಯುವ ಆಟಗಾರ 3 ಟಿ20 ಮತ್ತು 6 ಲಿಸ್ಟ್ ಎ ಪಂದ್ಯಗಳನ್ನು ಸಹ ಆಡಿದ್ದಾರೆ. ಅದರಲ್ಲಿ ಕ್ರಮವಾಗಿ 5 ಮತ್ತು 4 ವಿಕೆಟ್ಗಳನ್ನು ಪಡೆದಿದ್ದಾರೆ. ಇದೀಗ ಕೆಕೆಆರ್ ತಂಡಕ್ಕೆ ನೂತನವಾಗಿ ಸೇರಿಕೊಳ್ಳುತ್ತಿರುವ ಮೊಹಮ್ಮದ್ ಘಜನ್ಫರ್ ಅವರನ್ನು ಮೂಲ ಬೆಲೆ 20 ಲಕ್ಷಕ್ಕೆ ಕೆಕೆಆರ್ ಖರೀದಿಸಿದೆ.

ಟೆನಿಸ್ ಬಾಲ್ ಕ್ರಿಕೆಟ್ನಿಂದ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಅಲ್ಲಾ ಮೊಹಮ್ಮದ್ ಘಜನ್ಫರ್ ಈ ಸೀಸನ್ನಲ್ಲಿ ಆಡುವ ಅವಕಾಶ ಸಿಕ್ಕರೆ ಐಪಿಎಲ್ನಲ್ಲಿ ಆಡಿದ ಎರಡನೇ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗlಇದ್ದಾರೆ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ನೂತನ ತಂಡ: ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ಮನೀಶ್ ಪಾಂಡೆ, ರಮಣ್ದೀಪ್ ಸಿಂಗ್, ರಿಂಕು ಸಿಂಗ್, ಶಕೀಬ್ ಅಲ್ ಹಸನ್, ಅನುಕೂಲ್ ರಾಯ್, ವೆಂಕಟೇಶ್ ಅಯ್ಯರ್, ಶೆರ್ಫಾನ್ ರುದರ್ಫೋರ್ಡ್, ಆಂಗ್ಕ್ರಿಶ್ ರಘುವಂಶಿ, ಆಂಡ್ರೆ ರಸೆಲ್, ಸುನಿಲ್ ನರೈನ್, ಕೆಎಸ್ ಭರತ್, ಫಿಲ್ ಸಾಲ್ಟ್, ವೈಭವ್ ಅರೋರಾ, ಚೇತನ್ ಸಕರಿಯಾ, ದುಷ್ಮಂತ ಚಮೀರಾ, ವರುಣ್ ಚಕ್ರವರ್ತಿ, ಮಿಚೆಲ್ ಸ್ಟಾರ್ಕ್, ಅಲ್ಲಾ ಮೊಹಮ್ಮದ್ ಘಜನ್ಫರ್, ಹರ್ಷಿತ್ ರಾಣಾ, ಸುಯ್ಯಶ್ ಶರ್ಮಾ.