AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಲಕ್ನೋ ತಂಡದ ನಾಯಕತ್ವಕ್ಕೆ ಕೆಎಲ್ ರಾಹುಲ್ ಗುಡ್​ಬೈ..?

IPL 2024: ಲಕ್ನೋ ಇದುವರೆಗೆ ಐಪಿಎಲ್​ನಲ್ಲಿ ಮೂರು ಆವೃತ್ತಿಗಳನ್ನು ಆಡಿದೆ. ಇದರಲ್ಲಿ ತಂಡ ಸತತವಾಗಿ 2 ಬಾರಿ ಪ್ಲೇಆಫ್‌ ಆಡಿದೆ. ಆದರೆ ಆರ್​ಸಿಬಿ, ಪಂಜಾಬ್, ಡೆಲ್ಲಿಯಂತಹ ತಂಡಗಳು 17 ವರ್ಷಗಳಿಂದ ಐಪಿಎಲ್ ಆಡುತ್ತಿವೆ. ಈ ತಂಡಗಳು ಒಮ್ಮೆಯೂ ಪ್ರಶಸ್ತಿ ಗೆದ್ದಿಲ್ಲ. ಆದರೆ ಈ ತಂಡದ ಮಾಲೀಕರು ಒಮ್ಮೆಯೂ ನಾಯಕನ ಬಳಿ ಬಹಿರಂಗವಾಗಿ ಹೀಗೆ ನಡೆದುಕೊಂಡಿಲ್ಲ.

ಪೃಥ್ವಿಶಂಕರ
|

Updated on: May 09, 2024 | 6:32 PM

Share
ಮೇ 8 ರಂದು ನಡೆದ ಐಪಿಎಲ್ 57ನೇ ಪಂದ್ಯದಲ್ಲಿ ಆತಿಥೇಯ ಸನ್‌ರೈಸರ್ಸ್ ಹೈದರಾಬಾದ್ ತಂಡ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಬರೋಬ್ಬರಿ 10 ವಿಕೆಟ್‌ಗಳಿಂದ ಏಕಪಕ್ಷೀಯವಾಗಿ ಸೋಲಿಸಿತು.  ಗೆಲುವಿಗೆ ಲಕ್ನೋ ನೀಡಿದ 163 ರನ್​ಗಳನ್ನು ಹೈದರಾಬಾದ್‌ ತಂಡ ಕೇವಲ 9.4 ಓವರ್​ಗಳಲ್ಲಿ ಬೆನ್ನಟ್ಟಿತು.

ಮೇ 8 ರಂದು ನಡೆದ ಐಪಿಎಲ್ 57ನೇ ಪಂದ್ಯದಲ್ಲಿ ಆತಿಥೇಯ ಸನ್‌ರೈಸರ್ಸ್ ಹೈದರಾಬಾದ್ ತಂಡ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಬರೋಬ್ಬರಿ 10 ವಿಕೆಟ್‌ಗಳಿಂದ ಏಕಪಕ್ಷೀಯವಾಗಿ ಸೋಲಿಸಿತು. ಗೆಲುವಿಗೆ ಲಕ್ನೋ ನೀಡಿದ 163 ರನ್​ಗಳನ್ನು ಹೈದರಾಬಾದ್‌ ತಂಡ ಕೇವಲ 9.4 ಓವರ್​ಗಳಲ್ಲಿ ಬೆನ್ನಟ್ಟಿತು.

1 / 8
ಹೈದರಾಬಾದ್‌ ಆರಂಭಿಕರ ಸಿಡಿಲಬ್ಬರದ ಬ್ಯಾಟಿಂಗ್​ಗೆ ಲಕ್ನೋ ಬೌಲರ್​ಗಳಿಗೆ ದಿಕ್ಕೇ ತೋಚದಂತ್ತಾಯಿತು. ಲಕ್ನೋ ನಾಯಕ ಕೆಎಲ್ ರಾಹುಲ್ ಪಂದ್ಯವನ್ನು ಹಿಡಿತಕ್ಕೆ ತೆಗೆದುಕೊಳ್ಳಲು ಯೋಚಿಸುವ ಹೊತ್ತಿಗಾಗಲೇ ಪಂದ್ಯ ಮುಗಿದು ಹೋಗಿತ್ತು. ಈ ಪಂದ್ಯದ ಸೋಲು ಲಕ್ನೋ ಮಾಲೀಕ ಸಂಜೀವ್ ಗೋಯೆಂಕಾ, ರಾಹುಲ್ ಬಳಿ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು.

ಹೈದರಾಬಾದ್‌ ಆರಂಭಿಕರ ಸಿಡಿಲಬ್ಬರದ ಬ್ಯಾಟಿಂಗ್​ಗೆ ಲಕ್ನೋ ಬೌಲರ್​ಗಳಿಗೆ ದಿಕ್ಕೇ ತೋಚದಂತ್ತಾಯಿತು. ಲಕ್ನೋ ನಾಯಕ ಕೆಎಲ್ ರಾಹುಲ್ ಪಂದ್ಯವನ್ನು ಹಿಡಿತಕ್ಕೆ ತೆಗೆದುಕೊಳ್ಳಲು ಯೋಚಿಸುವ ಹೊತ್ತಿಗಾಗಲೇ ಪಂದ್ಯ ಮುಗಿದು ಹೋಗಿತ್ತು. ಈ ಪಂದ್ಯದ ಸೋಲು ಲಕ್ನೋ ಮಾಲೀಕ ಸಂಜೀವ್ ಗೋಯೆಂಕಾ, ರಾಹುಲ್ ಬಳಿ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು.

2 / 8
ಅದರ ವಿಡಿಯೋಗಳು ಈಗ ಎಲ್ಲೆಡೆ ಸಾಕಷ್ಟು ವೈರಲ್ ಆಗುತ್ತಿವೆ. ಮಾಲೀಕರ ಈ ರೀತಿಯ ವರ್ತನೆಗೆ ಎಲ್ಲೆಡೆ ಖಂಡನೆ ವ್ಯಕ್ತವಾಗುತ್ತಿದೆ. ಅಲ್ಲದೆ ಕನ್ನಡಿಗ ಕೆಎಲ್ ರಾಹುಲ್ ಲಕ್ನೋ ತಂಡವನ್ನು ತೊರೆಯಬೇಕು ಎಂಬುದು ಅಭಿಮಾನಿಗಳ ಒತ್ತಾಯವಾಗಿದೆ.

ಅದರ ವಿಡಿಯೋಗಳು ಈಗ ಎಲ್ಲೆಡೆ ಸಾಕಷ್ಟು ವೈರಲ್ ಆಗುತ್ತಿವೆ. ಮಾಲೀಕರ ಈ ರೀತಿಯ ವರ್ತನೆಗೆ ಎಲ್ಲೆಡೆ ಖಂಡನೆ ವ್ಯಕ್ತವಾಗುತ್ತಿದೆ. ಅಲ್ಲದೆ ಕನ್ನಡಿಗ ಕೆಎಲ್ ರಾಹುಲ್ ಲಕ್ನೋ ತಂಡವನ್ನು ತೊರೆಯಬೇಕು ಎಂಬುದು ಅಭಿಮಾನಿಗಳ ಒತ್ತಾಯವಾಗಿದೆ.

3 / 8
ಅಭಿಮಾನಿಗಳ ಆಕ್ರೋಶಕ್ಕೆ ಕಾರಣವೂ ಇದ್ದು, ಲಕ್ನೋ ಇದುವರೆಗೆ ಐಪಿಎಲ್​ನಲ್ಲಿ ಮೂರು ಆವೃತ್ತಿಗಳನ್ನು ಆಡಿದೆ. ಇದರಲ್ಲಿ ತಂಡ ಸತತವಾಗಿ 2 ಬಾರಿ ಪ್ಲೇಆಫ್‌ ಆಡಿದೆ. ಆದರೆ ಆರ್​ಸಿಬಿ, ಪಂಜಾಬ್, ಡೆಲ್ಲಿಯಂತಹ ತಂಡಗಳು 17  ವರ್ಷಗಳಿಂದ ಐಪಿಎಲ್ ಆಡುತ್ತಿವೆ. ಈ ತಂಡಗಳು ಒಮ್ಮೆಯೂ ಪ್ರಶಸ್ತಿ ಗೆದ್ದಿಲ್ಲ. ಆದರೆ ಈ ತಂಡದ ಮಾಲೀಕರು ಒಮ್ಮೆಯೂ ನಾಯಕನ ಬಳಿ ಬಹಿರಂಗವಾಗಿ ಹೀಗೆ ನಡೆದುಕೊಂಡಿಲ್ಲ.

ಅಭಿಮಾನಿಗಳ ಆಕ್ರೋಶಕ್ಕೆ ಕಾರಣವೂ ಇದ್ದು, ಲಕ್ನೋ ಇದುವರೆಗೆ ಐಪಿಎಲ್​ನಲ್ಲಿ ಮೂರು ಆವೃತ್ತಿಗಳನ್ನು ಆಡಿದೆ. ಇದರಲ್ಲಿ ತಂಡ ಸತತವಾಗಿ 2 ಬಾರಿ ಪ್ಲೇಆಫ್‌ ಆಡಿದೆ. ಆದರೆ ಆರ್​ಸಿಬಿ, ಪಂಜಾಬ್, ಡೆಲ್ಲಿಯಂತಹ ತಂಡಗಳು 17 ವರ್ಷಗಳಿಂದ ಐಪಿಎಲ್ ಆಡುತ್ತಿವೆ. ಈ ತಂಡಗಳು ಒಮ್ಮೆಯೂ ಪ್ರಶಸ್ತಿ ಗೆದ್ದಿಲ್ಲ. ಆದರೆ ಈ ತಂಡದ ಮಾಲೀಕರು ಒಮ್ಮೆಯೂ ನಾಯಕನ ಬಳಿ ಬಹಿರಂಗವಾಗಿ ಹೀಗೆ ನಡೆದುಕೊಂಡಿಲ್ಲ.

4 / 8
ಆದರೆ ಸತತ ಮೂರನೇ ಬಾರಿಗೂ ಲಕ್ನೋ ಪ್ಲೇಆಫ್‌ ಆಡುವ ಹೊಸ್ತಿಲಿನಲ್ಲಿದೆ. ಹೀಗಿದ್ದರೂ ತಂಡದ ಮಾಲೀಕ ಸಂಜೀವ್ ಗೋಯೆಂಕಾ, ನಾಯಕನ ಬಳಿ ಹೀಗೆ ನಡೆದುಕೊಂಡಿದ್ದು, ಕ್ರಿಕೆಟ್ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಆದರೆ ಸತತ ಮೂರನೇ ಬಾರಿಗೂ ಲಕ್ನೋ ಪ್ಲೇಆಫ್‌ ಆಡುವ ಹೊಸ್ತಿಲಿನಲ್ಲಿದೆ. ಹೀಗಿದ್ದರೂ ತಂಡದ ಮಾಲೀಕ ಸಂಜೀವ್ ಗೋಯೆಂಕಾ, ನಾಯಕನ ಬಳಿ ಹೀಗೆ ನಡೆದುಕೊಂಡಿದ್ದು, ಕ್ರಿಕೆಟ್ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

5 / 8
ವಾಸ್ತವವಾಗಿ ಸಂಜೀವ್ ಗೋಯೆಂಕಾ ತಮ್ಮ ಆತುರದ ನಿರ್ಧಾರದಿಂದ ಐಪಿಎಲ್ ವಲಯದಲ್ಲಿ ಚರ್ಚೆಗೆ ಒಳಗಾಗಿರುವುದು ಇದೇ ಮೊದಲೆನಲ್ಲ. ಇದಕ್ಕೂ ಮೊದಲು ಸಂಜೀವ್ ಪುಣೆ ರೈಸಿಂಗ್ ಸೂಪರ್ ಜೈಂಟ್ಸ್‌ ತಂಡದ ಮಾಲೀಕರೂ ಆಗಿದ್ದರು. ಈ ತಂಡ ಎರಡು ಆವೃತ್ತಿಗಳನ್ನು ಆಡಿತ್ತು.

ವಾಸ್ತವವಾಗಿ ಸಂಜೀವ್ ಗೋಯೆಂಕಾ ತಮ್ಮ ಆತುರದ ನಿರ್ಧಾರದಿಂದ ಐಪಿಎಲ್ ವಲಯದಲ್ಲಿ ಚರ್ಚೆಗೆ ಒಳಗಾಗಿರುವುದು ಇದೇ ಮೊದಲೆನಲ್ಲ. ಇದಕ್ಕೂ ಮೊದಲು ಸಂಜೀವ್ ಪುಣೆ ರೈಸಿಂಗ್ ಸೂಪರ್ ಜೈಂಟ್ಸ್‌ ತಂಡದ ಮಾಲೀಕರೂ ಆಗಿದ್ದರು. ಈ ತಂಡ ಎರಡು ಆವೃತ್ತಿಗಳನ್ನು ಆಡಿತ್ತು.

6 / 8
ಮೊದಲ ಆವೃತ್ತಿಯಲ್ಲಿ ಐಪಿಎಲ್‌ನ ಅತ್ಯಂತ ಯಶಸ್ವಿ ನಾಯಕ ಎಂಎಸ್ ಧೋನಿಯನ್ನು ನಾಯಕರನ್ನಾಗಿ ಮಾಡಿತ್ತು. ಆದರೆ ಧೋನಿ ನಾಯಕತ್ವದಲ್ಲಿ ತಂಡ ಉತ್ತಮ ಪ್ರದರ್ಶನ ನೀಡಲಿಲ್ಲ. ಹೀಗಾಗಿ ಧೋನಿಯನ್ನು ಏಕಾಏಕಿ ನಾಯಕತ್ವದಿಂದ ಕೆಳಗಿಳಿಸಿ ಸ್ಟೀವ್ ಸ್ಮಿತ್​ರನ್ನು ನಾಯಕರನ್ನಾಗಿ ನೇಮಿಸಿದ್ದರು. ಆದರೆ ಇದಾದ ನಂತರವೂ ತಂಡ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಲಿಲ್ಲ.

ಮೊದಲ ಆವೃತ್ತಿಯಲ್ಲಿ ಐಪಿಎಲ್‌ನ ಅತ್ಯಂತ ಯಶಸ್ವಿ ನಾಯಕ ಎಂಎಸ್ ಧೋನಿಯನ್ನು ನಾಯಕರನ್ನಾಗಿ ಮಾಡಿತ್ತು. ಆದರೆ ಧೋನಿ ನಾಯಕತ್ವದಲ್ಲಿ ತಂಡ ಉತ್ತಮ ಪ್ರದರ್ಶನ ನೀಡಲಿಲ್ಲ. ಹೀಗಾಗಿ ಧೋನಿಯನ್ನು ಏಕಾಏಕಿ ನಾಯಕತ್ವದಿಂದ ಕೆಳಗಿಳಿಸಿ ಸ್ಟೀವ್ ಸ್ಮಿತ್​ರನ್ನು ನಾಯಕರನ್ನಾಗಿ ನೇಮಿಸಿದ್ದರು. ಆದರೆ ಇದಾದ ನಂತರವೂ ತಂಡ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಲಿಲ್ಲ.

7 / 8
ಇದೀಗ ಲಕ್ನೋ ಒಂದೇ ಒಂದು ಹೀನಾಯ ಸೋಲು ಕಂಡದನ್ನು ಅರಗಿಸಿಕೊಳ್ಳದ ಸಂಜೀವ್, ನಾಯಕನನ್ನು ಎಲ್ಲರೆದರು ಜರಿದಿದ್ದಾರೆ. ಹೀಗಾಗಿ ಲೀಗ್ ಹಂತದಲ್ಲಿ ಉಳಿದಿರುವ ಎರಡು ಪಂದ್ಯಗಳ ನಾಯಕತ್ವದಿಂದ ರಾಹುಲ್ ಕೆಳಗಿಳಿಯುವ ಸಾಧ್ಯತೆಗಳಿವೆ. ಆ ನಂತರ ತಂಡದಿಂದಲೂ ಹೊರನಡೆಯುವುದನ್ನು ತೆಗೆದುಹಾಕುವಂತಿಲ್ಲ. ಸದ್ಯಕ್ಕೆ ಈ ಘಟನೆ ಮುಂದಿನ ದಿನಗಳಲ್ಲಿ ಯಾವ ಸ್ವರೂಪ ಪಡೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇದೀಗ ಲಕ್ನೋ ಒಂದೇ ಒಂದು ಹೀನಾಯ ಸೋಲು ಕಂಡದನ್ನು ಅರಗಿಸಿಕೊಳ್ಳದ ಸಂಜೀವ್, ನಾಯಕನನ್ನು ಎಲ್ಲರೆದರು ಜರಿದಿದ್ದಾರೆ. ಹೀಗಾಗಿ ಲೀಗ್ ಹಂತದಲ್ಲಿ ಉಳಿದಿರುವ ಎರಡು ಪಂದ್ಯಗಳ ನಾಯಕತ್ವದಿಂದ ರಾಹುಲ್ ಕೆಳಗಿಳಿಯುವ ಸಾಧ್ಯತೆಗಳಿವೆ. ಆ ನಂತರ ತಂಡದಿಂದಲೂ ಹೊರನಡೆಯುವುದನ್ನು ತೆಗೆದುಹಾಕುವಂತಿಲ್ಲ. ಸದ್ಯಕ್ಕೆ ಈ ಘಟನೆ ಮುಂದಿನ ದಿನಗಳಲ್ಲಿ ಯಾವ ಸ್ವರೂಪ ಪಡೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

8 / 8
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ