AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಲಕ್ನೋ ತೊರೆಯುತ್ತಾರಾ ಕೆಎಲ್ ರಾಹುಲ್? ವಿವಾದದ ಬಗ್ಗೆ ಮೌನ ಮುರಿದ ಕೋಚ್

IPL 2024: ಘಟನೆ ನಡೆದು ಒಂದು ವಾರದ ನಂತರ ಪ್ರಸ್ತುತ ಬೆಳವಣಿಗೆಗಳ ಬಗ್ಗೆ ಲಕ್ನೋ ಸೂಪರ್‌ಜೈಂಟ್ಸ್ ತಂಡದ ಸಹಾಯಕ ಕೋಚ್ ಲ್ಯಾನ್ಸ್ ಕ್ಲೂಸೆನರ್ ಮೌನ ಮುರಿದಿದ್ದಾರೆ. ಹಾಗೆಯೇ ರಾಹುಲ್ ಪ್ರದರ್ಶನ, ನಾಯಕತ್ವ ತೊರೆಯುವ ಬಗ್ಗೆಗಿನ ವದಂತಿ, ಇಬ್ಬರ ನಡುವಿನ ಬಹಿರಂಗ ಚರ್ಚೆಯ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದ್ದಾರೆ.

ಪೃಥ್ವಿಶಂಕರ
|

Updated on: May 13, 2024 | 9:15 PM

Share
ಕಳೆದ ವಾರ ನಡೆದ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್‌ಜೈಂಟ್ಸ್ 10 ವಿಕೆಟ್‌ಗಳ ಹೀನಾಯ ಸೋಲು ಕಂಡಿತ್ತು. ಆ ಬಳಿಕ ಲಕ್ನೋ ಮಾಲೀಕ ಸಂಜೀವ್ ಗೋಯೆಂಕಾ, ತಂಡದ ನಾಯಕ ಕೆಎಲ್ ರಾಹುಲ್ ವಿರುದ್ಧ ಕೋಪಗೊಂಡು ಬಹಿರಂಗವಾಗೆ ಅಸಮಾಧಾನ ಹೊರಹಾಕಿದ್ದರು.

ಕಳೆದ ವಾರ ನಡೆದ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್‌ಜೈಂಟ್ಸ್ 10 ವಿಕೆಟ್‌ಗಳ ಹೀನಾಯ ಸೋಲು ಕಂಡಿತ್ತು. ಆ ಬಳಿಕ ಲಕ್ನೋ ಮಾಲೀಕ ಸಂಜೀವ್ ಗೋಯೆಂಕಾ, ತಂಡದ ನಾಯಕ ಕೆಎಲ್ ರಾಹುಲ್ ವಿರುದ್ಧ ಕೋಪಗೊಂಡು ಬಹಿರಂಗವಾಗೆ ಅಸಮಾಧಾನ ಹೊರಹಾಕಿದ್ದರು.

1 / 6
ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು. ಈ ಬಗ್ಗೆ ವಿವಾದ ಕೂಡ ಹುಟ್ಟಿಕೊಂಡಿತ್ತು. ಅದಾದ ನಂತೆ ಕೆಲವು ಮಾಜಿ ಆಟಗಾರರು ರಾಹುಲ್ ಅವರನ್ನು ಬೆಂಬಲಿಸುವ ಸಂದರ್ಭದಲ್ಲಿ ಗೋಯೆಂಕಾ ಅವರ ವರ್ತನೆಯನ್ನು ಟೀಕಿಸಿದ್ದರು. ಅಲ್ಲದೆ ಅಭಿಮಾನಿಗಳು ಕೂಡ ರಾಹುಲ್​ರನ್ನು ಲಕ್ನೋ ತಂಡವನ್ನು ತೊರೆಯುವಂತೆ ಮನವಿ ಮಾಡಿದ್ದರು.

ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು. ಈ ಬಗ್ಗೆ ವಿವಾದ ಕೂಡ ಹುಟ್ಟಿಕೊಂಡಿತ್ತು. ಅದಾದ ನಂತೆ ಕೆಲವು ಮಾಜಿ ಆಟಗಾರರು ರಾಹುಲ್ ಅವರನ್ನು ಬೆಂಬಲಿಸುವ ಸಂದರ್ಭದಲ್ಲಿ ಗೋಯೆಂಕಾ ಅವರ ವರ್ತನೆಯನ್ನು ಟೀಕಿಸಿದ್ದರು. ಅಲ್ಲದೆ ಅಭಿಮಾನಿಗಳು ಕೂಡ ರಾಹುಲ್​ರನ್ನು ಲಕ್ನೋ ತಂಡವನ್ನು ತೊರೆಯುವಂತೆ ಮನವಿ ಮಾಡಿದ್ದರು.

2 / 6
ಇದೀಗ ಘಟನೆ ನಡೆದು ಒಂದು ವಾರದ ನಂತರ ಪ್ರಸ್ತುತ ಬೆಳವಣಿಗೆಗಳ ಬಗ್ಗೆ ಲಕ್ನೋ ಸೂಪರ್‌ಜೈಂಟ್ಸ್ ತಂಡದ ಸಹಾಯಕ ಕೋಚ್ ಲ್ಯಾನ್ಸ್ ಕ್ಲೂಸೆನರ್ ಮೌನ ಮುರಿದಿದ್ದಾರೆ.  ವಾಸ್ತವವಾಗಿ ಈ ಘಟನೆಯ ಬಳಿಕ ರಾಹುಲ್​ರನ್ನು ನಾಯಕತ್ವದಿಂದ ಕೆಳಗಿಳಿಸಬಹುದು ಎಂಬ ಮಾತು ಕೇಳಿಬಂದಿತ್ತು. ಈ ಬಗ್ಗೆ ಮಾತನಾಡಿದ ಅವರು ಈ ವಿಷಯದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದಿದ್ದಾರೆ.

ಇದೀಗ ಘಟನೆ ನಡೆದು ಒಂದು ವಾರದ ನಂತರ ಪ್ರಸ್ತುತ ಬೆಳವಣಿಗೆಗಳ ಬಗ್ಗೆ ಲಕ್ನೋ ಸೂಪರ್‌ಜೈಂಟ್ಸ್ ತಂಡದ ಸಹಾಯಕ ಕೋಚ್ ಲ್ಯಾನ್ಸ್ ಕ್ಲೂಸೆನರ್ ಮೌನ ಮುರಿದಿದ್ದಾರೆ. ವಾಸ್ತವವಾಗಿ ಈ ಘಟನೆಯ ಬಳಿಕ ರಾಹುಲ್​ರನ್ನು ನಾಯಕತ್ವದಿಂದ ಕೆಳಗಿಳಿಸಬಹುದು ಎಂಬ ಮಾತು ಕೇಳಿಬಂದಿತ್ತು. ಈ ಬಗ್ಗೆ ಮಾತನಾಡಿದ ಅವರು ಈ ವಿಷಯದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದಿದ್ದಾರೆ.

3 / 6
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಬ್ಬರು ಕ್ರಿಕೆಟ್ ಪ್ರೇಮಿಗಳ ನಡುವಿನ ಈ ಚರ್ಚೆಯಲ್ಲಿ ಯಾವುದೇ ಸಮಸ್ಯೆ ಇಲ್ಲ. ತಂಡದಲ್ಲಿ ಈ ರೀತಿಯ ಘನ ಸಂಭಾಷಣೆಗಳನ್ನು ನಾವು ಇಷ್ಟಪಡುತ್ತೇವೆ. ಇದು ತಂಡಗಳ ಕಾರ್ಯಕ್ಷಮತೆಯನ್ನು ಸುಧಾರಿಸುತ್ತದೆ. ಇದು ನಮಗೆ ದೊಡ್ಡ ವಿಷಯವಲ್ಲ ಎಂದಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಬ್ಬರು ಕ್ರಿಕೆಟ್ ಪ್ರೇಮಿಗಳ ನಡುವಿನ ಈ ಚರ್ಚೆಯಲ್ಲಿ ಯಾವುದೇ ಸಮಸ್ಯೆ ಇಲ್ಲ. ತಂಡದಲ್ಲಿ ಈ ರೀತಿಯ ಘನ ಸಂಭಾಷಣೆಗಳನ್ನು ನಾವು ಇಷ್ಟಪಡುತ್ತೇವೆ. ಇದು ತಂಡಗಳ ಕಾರ್ಯಕ್ಷಮತೆಯನ್ನು ಸುಧಾರಿಸುತ್ತದೆ. ಇದು ನಮಗೆ ದೊಡ್ಡ ವಿಷಯವಲ್ಲ ಎಂದಿದ್ದಾರೆ.

4 / 6
ಇನ್ನು ರಾಹುಲ್ ಅವರ ರನ್​ ಬರದ ಬಗ್ಗೆ ಮಾತನಾಡಿದ ಅವರು, ‘ರಾಹುಲ್ ತಮ್ಮದೇ ಆದ ವಿಶಿಷ್ಟ ಶೈಲಿಯನ್ನು ಹೊಂದಿದ್ದಾರೆ, ಅದು ಅವರನ್ನು ಶ್ರೇಷ್ಠ ಕ್ರಿಕೆಟಿಗನನ್ನಾಗಿ ಮಾಡಿದೆ. ಈ ಐಪಿಎಲ್ ಅವರಿಗೆ ಕಷ್ಟಕರವಾಗಿತ್ತು. ಏಕೆಂದರೆ ನಮ್ಮ ತಂಡ ಪ್ರತಿ ಪಂದ್ಯದಲ್ಲೂ ನಿರಂತರವಾಗಿ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಲೇ ಇತ್ತು ಇದರಿಂದಾಗಿ ಅವರಿಗೆ ಮುಕ್ತವಾಗಿ ಆಡಲು ಅವಕಾಶ ಸಿಗಲಿಲ್ಲ.

ಇನ್ನು ರಾಹುಲ್ ಅವರ ರನ್​ ಬರದ ಬಗ್ಗೆ ಮಾತನಾಡಿದ ಅವರು, ‘ರಾಹುಲ್ ತಮ್ಮದೇ ಆದ ವಿಶಿಷ್ಟ ಶೈಲಿಯನ್ನು ಹೊಂದಿದ್ದಾರೆ, ಅದು ಅವರನ್ನು ಶ್ರೇಷ್ಠ ಕ್ರಿಕೆಟಿಗನನ್ನಾಗಿ ಮಾಡಿದೆ. ಈ ಐಪಿಎಲ್ ಅವರಿಗೆ ಕಷ್ಟಕರವಾಗಿತ್ತು. ಏಕೆಂದರೆ ನಮ್ಮ ತಂಡ ಪ್ರತಿ ಪಂದ್ಯದಲ್ಲೂ ನಿರಂತರವಾಗಿ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಲೇ ಇತ್ತು ಇದರಿಂದಾಗಿ ಅವರಿಗೆ ಮುಕ್ತವಾಗಿ ಆಡಲು ಅವಕಾಶ ಸಿಗಲಿಲ್ಲ.

5 / 6
ರಾಹುಲ್ ಈ ಆವೃತ್ತಿಯಲ್ಲಿ ಒಂದು ಅಥವಾ ಎರಡು ಶತಕಗಳನ್ನು ಬಾರಿಸಲು ಬಯಸಿದ್ದರು. ಆದರೆ ತಂಡದ ಕಳಪೆ ಆಟದಿಂದಾಗಿ ಅದು ಸಂಭವಿಸಲಿಲ್ಲ. ಅವರು ಶೀಘ್ರದಲ್ಲೇ ದೊಡ್ಡ ಇನ್ನಿಂಗ್ಸ್ ಆಡುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳುವ ಮೂಲಕ ಇಷ್ಟು ದಿನ ಹುಟ್ಟಿಕೊಂಡಿದ್ದ ಹಲವು ವದಂತಿಗಳಿಗೆ ತೆರೆ ಎಳಿದಿದ್ದಾರೆ.

ರಾಹುಲ್ ಈ ಆವೃತ್ತಿಯಲ್ಲಿ ಒಂದು ಅಥವಾ ಎರಡು ಶತಕಗಳನ್ನು ಬಾರಿಸಲು ಬಯಸಿದ್ದರು. ಆದರೆ ತಂಡದ ಕಳಪೆ ಆಟದಿಂದಾಗಿ ಅದು ಸಂಭವಿಸಲಿಲ್ಲ. ಅವರು ಶೀಘ್ರದಲ್ಲೇ ದೊಡ್ಡ ಇನ್ನಿಂಗ್ಸ್ ಆಡುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳುವ ಮೂಲಕ ಇಷ್ಟು ದಿನ ಹುಟ್ಟಿಕೊಂಡಿದ್ದ ಹಲವು ವದಂತಿಗಳಿಗೆ ತೆರೆ ಎಳಿದಿದ್ದಾರೆ.

6 / 6
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ