AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್ ಆಡಲು ಕೆಎಲ್ ರಾಹುಲ್​ಗೆ ಗ್ರೀನ್ ಸಿಗ್ನಲ್ ನೀಡಿದ ಎನ್​ಸಿಎ; ಆದರೆ..?

IPL 2024: ಐಪಿಎಲ್ ಆಡುವ ಅನುಮತಿ ಪಡೆದುಕೊಂಡಿರುವ ರಾಹುಲ್ ಮಾರ್ಚ್ 20, ಗುರುವಾರ ಲಕ್ನೋದಲ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿವೆ. ಲಕ್ನೋ ತಂಡ ತನ್ನ ಮೊದಲ ಪಂದ್ಯವನ್ನು ಮಾರ್ಚ್ 24 ರಂದು ಜೈಪುರದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡಲಿದೆ.

ಪೃಥ್ವಿಶಂಕರ
|

Updated on: Mar 18, 2024 | 10:37 PM

Share
ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದ ವೇಳೆ ಇಂಜುರಿಗೆ ತುತ್ತಾಗಿದ್ದ ಕನ್ನಡಿಗ ಕೆಎಲ್ ರಾಹುಲ್ ಆ ಬಳಿಕ ಟೀಂ ಇಂಡಿಯಾದಿಂದ ಹೊರಬಿದ್ದಿದ್ದರು. ಗಾಯಗೊಂಡಿದ್ದ ರಾಹುಲ್​ರನ್ನು ಬಿಸಿಸಿಐ ರಿಹ್ಯಾಬ್​ಗಾಗಿ ಬೆಂಗಳೂರಿಗೆ ಕಳುಹಿಸಿತ್ತು.

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದ ವೇಳೆ ಇಂಜುರಿಗೆ ತುತ್ತಾಗಿದ್ದ ಕನ್ನಡಿಗ ಕೆಎಲ್ ರಾಹುಲ್ ಆ ಬಳಿಕ ಟೀಂ ಇಂಡಿಯಾದಿಂದ ಹೊರಬಿದ್ದಿದ್ದರು. ಗಾಯಗೊಂಡಿದ್ದ ರಾಹುಲ್​ರನ್ನು ಬಿಸಿಸಿಐ ರಿಹ್ಯಾಬ್​ಗಾಗಿ ಬೆಂಗಳೂರಿಗೆ ಕಳುಹಿಸಿತ್ತು.

1 / 6
ಆ ನಂತರ ರಾಹುಲ್ ಇಡೀ ಟೆಸ್ಟ್ ಸರಣಿಯಿಂದಲೇ ಹೊರಬಿದ್ದಿದ್ದರು. ಆಗಿನಿಂದ ಎನ್​ಸಿಎನಲ್ಲಿ ರಿಹ್ಯಾಬ್​ಗೆ ಒಳಗಾಗಿದ್ದ ರಾಹುಲ್, ಇದೀಗ ಸಂಪೂರ್ಣ ಫಿಟ್ ಆಗಿದ್ದು, ಐಪಿಎಲ್ ಅಖಾಡಕ್ಕೆ ದುಮುಕಲು ಸಿದ್ಧರಾಗಿದ್ದಾರೆ. ಅದಕ್ಕೆ ಪೂರಕವಾಗಿ ಎನ್​ಸಿಎ ಕೂಡ ರಾಹುಲ್ ಫಿಟ್ ಎಂದು ಸರ್ಟಿಫಿಕೆಟ್ ನೀಡಿದೆ.

ಆ ನಂತರ ರಾಹುಲ್ ಇಡೀ ಟೆಸ್ಟ್ ಸರಣಿಯಿಂದಲೇ ಹೊರಬಿದ್ದಿದ್ದರು. ಆಗಿನಿಂದ ಎನ್​ಸಿಎನಲ್ಲಿ ರಿಹ್ಯಾಬ್​ಗೆ ಒಳಗಾಗಿದ್ದ ರಾಹುಲ್, ಇದೀಗ ಸಂಪೂರ್ಣ ಫಿಟ್ ಆಗಿದ್ದು, ಐಪಿಎಲ್ ಅಖಾಡಕ್ಕೆ ದುಮುಕಲು ಸಿದ್ಧರಾಗಿದ್ದಾರೆ. ಅದಕ್ಕೆ ಪೂರಕವಾಗಿ ಎನ್​ಸಿಎ ಕೂಡ ರಾಹುಲ್ ಫಿಟ್ ಎಂದು ಸರ್ಟಿಫಿಕೆಟ್ ನೀಡಿದೆ.

2 / 6
ಇದು ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಆನೆಬಲ ತಂದುಕೊಟ್ಟಿದೆ. ಆದರೆ ಲೀಗ್​ನ ಆರಂಭದಲ್ಲೇ ಹೆಚ್ಚಿನ ಕೆಲಸದ ಹೊರೆ ತೆಗೆದುಕೊಳ್ಳದಂತೆ ಸೂಚಿಸಲಾಗಿದೆ. ಇದರರ್ಥ ಲೀಗ್‌ನ ಆರಂಭಿಕ ಪಂದ್ಯಗಳಲ್ಲಿ ರಾಹುಲ್ ವಿಕೆಟ್ ಕೀಪಿಂಗ್ ಮಾಡದಂತೆ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಸಲಹೆ ನೀಡಿದೆ. ಹೀಗಾಗಿ ರಾಹುಲ್ ಈ ಸೀಸನ್​ನ ಆರಂಭಿಕ ಪಂದ್ಯಗಳಲ್ಲಿ ಕೇವಲ ಬ್ಯಾಟ್ಸ್‌ಮನ್ ಆಗಿ ಆಡುವುದನ್ನು ಕಾಣಬಹುದು.

ಇದು ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಆನೆಬಲ ತಂದುಕೊಟ್ಟಿದೆ. ಆದರೆ ಲೀಗ್​ನ ಆರಂಭದಲ್ಲೇ ಹೆಚ್ಚಿನ ಕೆಲಸದ ಹೊರೆ ತೆಗೆದುಕೊಳ್ಳದಂತೆ ಸೂಚಿಸಲಾಗಿದೆ. ಇದರರ್ಥ ಲೀಗ್‌ನ ಆರಂಭಿಕ ಪಂದ್ಯಗಳಲ್ಲಿ ರಾಹುಲ್ ವಿಕೆಟ್ ಕೀಪಿಂಗ್ ಮಾಡದಂತೆ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಸಲಹೆ ನೀಡಿದೆ. ಹೀಗಾಗಿ ರಾಹುಲ್ ಈ ಸೀಸನ್​ನ ಆರಂಭಿಕ ಪಂದ್ಯಗಳಲ್ಲಿ ಕೇವಲ ಬ್ಯಾಟ್ಸ್‌ಮನ್ ಆಗಿ ಆಡುವುದನ್ನು ಕಾಣಬಹುದು.

3 / 6
ಸದ್ಯ ಐಪಿಎಲ್ ಆಡುವ ಅನುಮತಿ ಪಡೆದುಕೊಂಡಿರುವ ರಾಹುಲ್ ಮಾರ್ಚ್ 20, ಗುರುವಾರ ಲಕ್ನೋದಲ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿವೆ. ಲಕ್ನೋ ತಂಡ ತನ್ನ ಮೊದಲ ಪಂದ್ಯವನ್ನು ಮಾರ್ಚ್ 24 ರಂದು ಜೈಪುರದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡಲಿದೆ.

ಸದ್ಯ ಐಪಿಎಲ್ ಆಡುವ ಅನುಮತಿ ಪಡೆದುಕೊಂಡಿರುವ ರಾಹುಲ್ ಮಾರ್ಚ್ 20, ಗುರುವಾರ ಲಕ್ನೋದಲ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿವೆ. ಲಕ್ನೋ ತಂಡ ತನ್ನ ಮೊದಲ ಪಂದ್ಯವನ್ನು ಮಾರ್ಚ್ 24 ರಂದು ಜೈಪುರದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡಲಿದೆ.

4 / 6
ಆರಂಭದಲ್ಲಿ ರಾಹುಲ್ ವಿಕೆಟ್ ಕೀಪಿಂಗ್ ಮಾಡದಂತೆ ಸಲಹೆ ನೀಡಲಾಗಿದ್ದು, ಆರಂಭಿಕ ಪಂದ್ಯಗಳಲ್ಲಿ ಬ್ಯಾಟ್ಸ್ ಮನ್ ಆಗಿ ಆಡಲಿದ್ದಾರೆ. ಆದಾಗ್ಯೂ, ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿ ಕಾಕ್ ಮತ್ತು ವೆಸ್ಟ್ ಇಂಡೀಸ್‌ನ ನಿಕೋಲಸ್ ಪೂರನ್ ಅವರ ರೂಪದಲ್ಲಿ ಇಬ್ಬರು ಉತ್ತಮ ವಿಕೆಟ್‌ಕೀಪರ್‌ಗಳನ್ನು ಹೊಂದಿರುವುದರಿಂದ ಲಕ್ನೋ, ರಾಹುಲ್ ವಿಕೆಟ್ ಕೀಪಿಂಗ್ ಮಾಡದಿರುವ ಬಗ್ಗೆ ಹೆಚ್ಚು ಚಿಂತಿಸುವ ಅಗತ್ಯವಿಲ್ಲ.

ಆರಂಭದಲ್ಲಿ ರಾಹುಲ್ ವಿಕೆಟ್ ಕೀಪಿಂಗ್ ಮಾಡದಂತೆ ಸಲಹೆ ನೀಡಲಾಗಿದ್ದು, ಆರಂಭಿಕ ಪಂದ್ಯಗಳಲ್ಲಿ ಬ್ಯಾಟ್ಸ್ ಮನ್ ಆಗಿ ಆಡಲಿದ್ದಾರೆ. ಆದಾಗ್ಯೂ, ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿ ಕಾಕ್ ಮತ್ತು ವೆಸ್ಟ್ ಇಂಡೀಸ್‌ನ ನಿಕೋಲಸ್ ಪೂರನ್ ಅವರ ರೂಪದಲ್ಲಿ ಇಬ್ಬರು ಉತ್ತಮ ವಿಕೆಟ್‌ಕೀಪರ್‌ಗಳನ್ನು ಹೊಂದಿರುವುದರಿಂದ ಲಕ್ನೋ, ರಾಹುಲ್ ವಿಕೆಟ್ ಕೀಪಿಂಗ್ ಮಾಡದಿರುವ ಬಗ್ಗೆ ಹೆಚ್ಚು ಚಿಂತಿಸುವ ಅಗತ್ಯವಿಲ್ಲ.

5 / 6
ಲಕ್ನೋ ತಂಡ: ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೈಲ್ ಮೇಯರ್ಸ್, ಮಾರ್ಕಸ್ ಸ್ಟೊಯಿನಿಸ್, ದೀಪಕ್ ಹೂಡಾ, ದೇವದತ್ ಪಡಿಕ್ಕಲ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್, ಕೃನಾಲ್ ಪಾಂಡ್ಯ, ಯುದ್ಧವೀರ್ ಸಿಂಗ್, ಪ್ರೇರಕ್ ಮಂಕಡ್, ಯಶ್ ಠಾಕೂರ್, ಅಮಿತ್ ಮಿಶ್ರಾ, ಮಾರ್ಕ್ ವುಡ್, ಮಯಾಂಕ್ ಯಾದವ್, ಮೊಹ್ಸಿನ್ ಖಾನ್, ಕೆ.ಗೌತಮ್, ಶಿವಂ ಮಾವಿ, ಅರ್ಶಿನ್ ಕುಲಕರ್ಣಿ, ಎಂ. ಸಿದ್ಧಾರ್ಥ್, ಆಶ್ಟನ್ ಟರ್ನರ್, ಡೇವಿಡ್ ವಿಲ್ಲಿ, ಮೊಹಮ್ಮದ್. ಅರ್ಷದ್ ಖಾನ್.

ಲಕ್ನೋ ತಂಡ: ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೈಲ್ ಮೇಯರ್ಸ್, ಮಾರ್ಕಸ್ ಸ್ಟೊಯಿನಿಸ್, ದೀಪಕ್ ಹೂಡಾ, ದೇವದತ್ ಪಡಿಕ್ಕಲ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್, ಕೃನಾಲ್ ಪಾಂಡ್ಯ, ಯುದ್ಧವೀರ್ ಸಿಂಗ್, ಪ್ರೇರಕ್ ಮಂಕಡ್, ಯಶ್ ಠಾಕೂರ್, ಅಮಿತ್ ಮಿಶ್ರಾ, ಮಾರ್ಕ್ ವುಡ್, ಮಯಾಂಕ್ ಯಾದವ್, ಮೊಹ್ಸಿನ್ ಖಾನ್, ಕೆ.ಗೌತಮ್, ಶಿವಂ ಮಾವಿ, ಅರ್ಶಿನ್ ಕುಲಕರ್ಣಿ, ಎಂ. ಸಿದ್ಧಾರ್ಥ್, ಆಶ್ಟನ್ ಟರ್ನರ್, ಡೇವಿಡ್ ವಿಲ್ಲಿ, ಮೊಹಮ್ಮದ್. ಅರ್ಷದ್ ಖಾನ್.

6 / 6
Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ