AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಅಪರೂಪ; ಒಂದೇ ಪಂದ್ಯದಲ್ಲಿ 6 ವಿಕೆಟ್ ಕೀಪರ್ಸ್​..!

IPL 2024: ರಾಜಸ್ಥಾನದ ತವರು ಮೈದಾನ ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಜಸ್ಥಾನ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವಿನ 4ನೇ ಐಪಿಎಲ್ ಪಂದ್ಯ ತೀರ ಅಪರೂಪದ ಘಟನೆಗೆ ಸಾಕ್ಷಿಯಾಗಿದೆ. ಉಭಯ ತಂಡಗಳಿಂದ ಬರೋಬ್ಬರಿ 6 ವಿಕೆಟ್‌ಕೀಪರ್​ಗಳು ಕಣಕ್ಕಿಳಿದಿದ್ದಾರೆ.

ಪೃಥ್ವಿಶಂಕರ
|

Updated on:Mar 24, 2024 | 6:35 PM

Share
ರಾಜಸ್ಥಾನದ ತವರು ಮೈದಾನ ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಜಸ್ಥಾನ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವಿನ 4ನೇ ಐಪಿಎಲ್ ಪಂದ್ಯ ತೀರ ಅಪರೂಪದ ಘಟನೆಗೆ ಸಾಕ್ಷಿಯಾಗಿದೆ. ಉಭಯ ತಂಡಗಳಿಂದ ಬರೋಬ್ಬರಿ 6 ವಿಕೆಟ್‌ಕೀಪರ್​ಗಳು ಕಣಕ್ಕಿಳಿದಿದ್ದಾರೆ.

ರಾಜಸ್ಥಾನದ ತವರು ಮೈದಾನ ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಜಸ್ಥಾನ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವಿನ 4ನೇ ಐಪಿಎಲ್ ಪಂದ್ಯ ತೀರ ಅಪರೂಪದ ಘಟನೆಗೆ ಸಾಕ್ಷಿಯಾಗಿದೆ. ಉಭಯ ತಂಡಗಳಿಂದ ಬರೋಬ್ಬರಿ 6 ವಿಕೆಟ್‌ಕೀಪರ್​ಗಳು ಕಣಕ್ಕಿಳಿದಿದ್ದಾರೆ.

1 / 8
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡದ ಬಗ್ಗೆ ಹೇಳುವುದಾದರೆ.. ಈ ಪಂದ್ಯದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಮೂವರು ವಿಕೆಟ್‌ಕೀಪರ್​ಗಳು ಸ್ಥಾನ ಪಡೆದಿದ್ದಾರೆ. ಅವರಲ್ಲಿ ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್, ಧೃವ್ ಜುರೇಲ್ ಸೇರಿದ್ದಾರೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡದ ಬಗ್ಗೆ ಹೇಳುವುದಾದರೆ.. ಈ ಪಂದ್ಯದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಮೂವರು ವಿಕೆಟ್‌ಕೀಪರ್​ಗಳು ಸ್ಥಾನ ಪಡೆದಿದ್ದಾರೆ. ಅವರಲ್ಲಿ ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್, ಧೃವ್ ಜುರೇಲ್ ಸೇರಿದ್ದಾರೆ.

2 / 8
ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಜೋಸ್ ಬಟ್ಲರ್ 9 ಎಸೆತಗಳಲ್ಲಿ 2 ಬೌಂಡರಿ ಸಹಿತ 11 ರನ್ ಕಲೆಹಾಕಲಷ್ಟೇ ಶಕ್ತರಾದರು.

ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಜೋಸ್ ಬಟ್ಲರ್ 9 ಎಸೆತಗಳಲ್ಲಿ 2 ಬೌಂಡರಿ ಸಹಿತ 11 ರನ್ ಕಲೆಹಾಕಲಷ್ಟೇ ಶಕ್ತರಾದರು.

3 / 8
ರಾಜಸ್ಥಾನ ಪರ ನಾಯಕನ ಇನ್ನಿಂಗ್ಸ್ ಆಡಿದ ಸಂಜು ಸ್ಯಾಮ್ಸನ್ 52 ಎಸೆತಗಳಲ್ಲಿ 6 ಸಿಕ್ಸರ್ ಹಾಗೂ 3 ಬೌಂಡರಿ ಸಹಿತ ಅಜೇಯ 82 ರನ್ ಕಲೆಹಾಕಿದರು. ಅಷ್ಟೆ ಅಲ್ಲದೆ ಸ್ಯಾಮ್ಸನ್ ಪ್ರಸ್ತುತ ವಿಕೆಟ್ ಕೀಪಿಂಗ್ ಕೂಡ ಮಾಡುತ್ತಿದ್ದಾರೆ.

ರಾಜಸ್ಥಾನ ಪರ ನಾಯಕನ ಇನ್ನಿಂಗ್ಸ್ ಆಡಿದ ಸಂಜು ಸ್ಯಾಮ್ಸನ್ 52 ಎಸೆತಗಳಲ್ಲಿ 6 ಸಿಕ್ಸರ್ ಹಾಗೂ 3 ಬೌಂಡರಿ ಸಹಿತ ಅಜೇಯ 82 ರನ್ ಕಲೆಹಾಕಿದರು. ಅಷ್ಟೆ ಅಲ್ಲದೆ ಸ್ಯಾಮ್ಸನ್ ಪ್ರಸ್ತುತ ವಿಕೆಟ್ ಕೀಪಿಂಗ್ ಕೂಡ ಮಾಡುತ್ತಿದ್ದಾರೆ.

4 / 8
ಈ ಇಬ್ಬರ ನಂತರ ಬ್ಯಾಟಿಂಗ್​ಗೆ ಇಳಿದಿದ್ದ ಯುವ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಧೃವ್ ಜುರೇಲ್ ಕೂಡ ರಾಜಸ್ಥಾನ ಪರ ಕೆಳಕ್ರಮಾಂಕದಲ್ಲಿ ಸ್ಫೋಟಕ ಇನ್ನಿಂಗ್ಸ್ ನಡೆಸಿದರು. ತಮ್ಮ ಇನ್ನಿಂಗ್ಸ್​ನಲ್ಲಿ 12 ಎಸೆತಗಳನ್ನು ಎದುರಿಸಿದ ಧೃವ 1 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ ಅಜೇಯ 20 ರನ್ ಕಲೆಹಾಕಿದರು.

ಈ ಇಬ್ಬರ ನಂತರ ಬ್ಯಾಟಿಂಗ್​ಗೆ ಇಳಿದಿದ್ದ ಯುವ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಧೃವ್ ಜುರೇಲ್ ಕೂಡ ರಾಜಸ್ಥಾನ ಪರ ಕೆಳಕ್ರಮಾಂಕದಲ್ಲಿ ಸ್ಫೋಟಕ ಇನ್ನಿಂಗ್ಸ್ ನಡೆಸಿದರು. ತಮ್ಮ ಇನ್ನಿಂಗ್ಸ್​ನಲ್ಲಿ 12 ಎಸೆತಗಳನ್ನು ಎದುರಿಸಿದ ಧೃವ 1 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ ಅಜೇಯ 20 ರನ್ ಕಲೆಹಾಕಿದರು.

5 / 8
ಇನ್ನು ಲಕ್ನೋ ವಿಚಾರಕ್ಕೆ ಬರುವುದಾದರೆ.. ಈ ತಂಡದಿಂದಲೂ ಮೂವರು ವಿಕೆಟ್‌ಕೀಪರ್​ಗಳು ಕಣಕ್ಕಿಳಿದಿದ್ದಾರೆ. ಇವರಲ್ಲಿ ನಾಯಕ ಕೆಎಲ್ ರಾಹುಲ್, ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿ ಕಾಕ್, ವೆಸ್ಟ್ ಇಂಡೀಸ್​ನ ನಿಕೋಲಸ್ ಪೂರನ್ ಸೇರಿದ್ದಾರೆ.

ಇನ್ನು ಲಕ್ನೋ ವಿಚಾರಕ್ಕೆ ಬರುವುದಾದರೆ.. ಈ ತಂಡದಿಂದಲೂ ಮೂವರು ವಿಕೆಟ್‌ಕೀಪರ್​ಗಳು ಕಣಕ್ಕಿಳಿದಿದ್ದಾರೆ. ಇವರಲ್ಲಿ ನಾಯಕ ಕೆಎಲ್ ರಾಹುಲ್, ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿ ಕಾಕ್, ವೆಸ್ಟ್ ಇಂಡೀಸ್​ನ ನಿಕೋಲಸ್ ಪೂರನ್ ಸೇರಿದ್ದಾರೆ.

6 / 8
ರಾಜಸ್ಥಾನ ನೀಡಿರುವ 194 ರನ್​ಗಳ ಗುರಿ ಬೆನ್ನಟ್ಟಿರುವ ಲಕ್ನೋ ಪರ ನಾಯಕ ಕೆಎಲ್ ರಾಹುಲ್ ಮತ್ತು ಕ್ವಿಂಟನ್ ಡಿ ಕಾಕ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆದರೆ ಡಿ ಕಾಕ್ ಮೊದಲ ಓವರ್​ನಲ್ಲೇ ಕೇವಲ 4 ರನ್​ಗಳಿಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡಿದ್ದಾರೆ.

ರಾಜಸ್ಥಾನ ನೀಡಿರುವ 194 ರನ್​ಗಳ ಗುರಿ ಬೆನ್ನಟ್ಟಿರುವ ಲಕ್ನೋ ಪರ ನಾಯಕ ಕೆಎಲ್ ರಾಹುಲ್ ಮತ್ತು ಕ್ವಿಂಟನ್ ಡಿ ಕಾಕ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆದರೆ ಡಿ ಕಾಕ್ ಮೊದಲ ಓವರ್​ನಲ್ಲೇ ಕೇವಲ 4 ರನ್​ಗಳಿಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡಿದ್ದಾರೆ.

7 / 8
ತಂಡದ ಪರ ನಾಯಕನ ಇನ್ನಿಂಗ್ಸ್ ಆಡುತ್ತಿರುವ ಕೆಎಲ್ ರಾಹುಲ್ ನಿಧಾನವಾಗಿ ತಂಡದ ಸ್ಕೋರ್ ಬೋರ್ಡ್​ ಮೇಲೆತ್ತುತ್ತಿದ್ದಾರೆ. ನಿಕೋಲಸ್ ಪೂರನ್ ಯಾವ ರೀತಿಯ ಪ್ರದರ್ಶನ ನೀಡಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

ತಂಡದ ಪರ ನಾಯಕನ ಇನ್ನಿಂಗ್ಸ್ ಆಡುತ್ತಿರುವ ಕೆಎಲ್ ರಾಹುಲ್ ನಿಧಾನವಾಗಿ ತಂಡದ ಸ್ಕೋರ್ ಬೋರ್ಡ್​ ಮೇಲೆತ್ತುತ್ತಿದ್ದಾರೆ. ನಿಕೋಲಸ್ ಪೂರನ್ ಯಾವ ರೀತಿಯ ಪ್ರದರ್ಶನ ನೀಡಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

8 / 8

Published On - 6:35 pm, Sun, 24 March 24

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ