AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ರೋಹಿತ್ ಶರ್ಮಾ ಬಗ್ಗೆ ಮೊದಲ ಬಾರಿಗೆ ಮೌನ ಮುರಿದ ಹಾರ್ದಿಕ್ ಪಾಂಡ್ಯ..!

IPL 2024: 2024 ರ ಐಪಿಎಲ್​ಗಾಗಿ ಮುಂಬೈ ತಂಡವನ್ನು ಸೇರಿಕೊಂಡಿರುವ ಮುಂಬೈ ತಂಡದ ನೂತನ ನಾಯಕ ಹಾರ್ದಿಕ್ ಪಾಂಡ್ಯ ಇದೇ ಮೊದಲ ಬಾರಿಗೆ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಈ ಮೂಲಕ ಹಲವು ಊಹಪೋಹಗಳಿಗೆ ತೆರೆ ಎಳೆದಿದ್ದಾರೆ.

ಪೃಥ್ವಿಶಂಕರ
|

Updated on: Mar 18, 2024 | 7:22 PM

Share
2024 ರ ಐಪಿಎಲ್​ಗಾಗಿ ಮುಂಬೈ ತಂಡವನ್ನು ಸೇರಿಕೊಂಡಿರುವ ಮುಂಬೈ ತಂಡದ ನೂತನ ನಾಯಕ ಹಾರ್ದಿಕ್ ಪಾಂಡ್ಯ ಇದೇ ಮೊದಲ ಬಾರಿಗೆ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಈ ಮೂಲಕ ಹಲವು ಊಹಪೋಹಗಳಿಗೆ ತೆರೆ ಎಳೆದಿದ್ದಾರೆ.

2024 ರ ಐಪಿಎಲ್​ಗಾಗಿ ಮುಂಬೈ ತಂಡವನ್ನು ಸೇರಿಕೊಂಡಿರುವ ಮುಂಬೈ ತಂಡದ ನೂತನ ನಾಯಕ ಹಾರ್ದಿಕ್ ಪಾಂಡ್ಯ ಇದೇ ಮೊದಲ ಬಾರಿಗೆ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಈ ಮೂಲಕ ಹಲವು ಊಹಪೋಹಗಳಿಗೆ ತೆರೆ ಎಳೆದಿದ್ದಾರೆ.

1 / 7
ಐಪಿಎಲ್ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿರುವ ಬೆನ್ನಲ್ಲೇ ಮಾಜಿ ನಾಯಕ ರೋಹಿತ್ ಬಗ್ಗೆ ಅಭಿಪ್ರಾಯ ಹಂಚಿಕೊಂಡಿರುವ ಹಾರ್ದಿಕ್, ರೋಹಿತ್ ಶರ್ಮಾ ನನಗೆ ಸಹಾಯ ಮಾಡಲು ಯಾವಾಗಲೂ ಇರುತ್ತಾರೆ. ಈ ತಂಡ ಇದುವರೆಗೆ ಏನೇ ಸಾಧನೆ ಮಾಡಿದ್ದರೂ ಅದು ರೋಹಿತ್ ಅವರ ನಾಯಕತ್ವದಲ್ಲೆ.

ಐಪಿಎಲ್ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿರುವ ಬೆನ್ನಲ್ಲೇ ಮಾಜಿ ನಾಯಕ ರೋಹಿತ್ ಬಗ್ಗೆ ಅಭಿಪ್ರಾಯ ಹಂಚಿಕೊಂಡಿರುವ ಹಾರ್ದಿಕ್, ರೋಹಿತ್ ಶರ್ಮಾ ನನಗೆ ಸಹಾಯ ಮಾಡಲು ಯಾವಾಗಲೂ ಇರುತ್ತಾರೆ. ಈ ತಂಡ ಇದುವರೆಗೆ ಏನೇ ಸಾಧನೆ ಮಾಡಿದ್ದರೂ ಅದು ರೋಹಿತ್ ಅವರ ನಾಯಕತ್ವದಲ್ಲೆ.

2 / 7
ಹೀಗಾಗಿ ಇನ್ನು ಮುಂದೆಯೂ ಅವರು ನನಗೆ ಹೆಗಲಾಗಿ ನಿಲ್ಲುತ್ತಾರೆ ಎಂಬ ಭರವಸೆ ಇದೆ. ಅಷ್ಟೇ ಅಲ್ಲ, ರೋಹಿತ್ ಶರ್ಮಾ ಭಾರತ ತಂಡದ ನಾಯಕ, ಇದು ಕೂಡ ನನಗೆ ಸಹಾಯ ಮಾಡುತ್ತದೆ. ರೋಹಿತ್ ನಾಯಕತ್ವದಲ್ಲೇ ನಾನು ನನ್ನ ಇಡೀ ವೃತ್ತಿಜೀವನ ನಡೆದಿದೆ. ಹೀಗಾಗಿ ಅವರ ಬೆಂಬಲ ನನಗೆ ಎಂದಿಗೂ ಇರುತ್ತದೆ ಎಂದು ಹಾರ್ದಿಕ್ ಹೇಳಿದ್ದಾರೆ.

ಹೀಗಾಗಿ ಇನ್ನು ಮುಂದೆಯೂ ಅವರು ನನಗೆ ಹೆಗಲಾಗಿ ನಿಲ್ಲುತ್ತಾರೆ ಎಂಬ ಭರವಸೆ ಇದೆ. ಅಷ್ಟೇ ಅಲ್ಲ, ರೋಹಿತ್ ಶರ್ಮಾ ಭಾರತ ತಂಡದ ನಾಯಕ, ಇದು ಕೂಡ ನನಗೆ ಸಹಾಯ ಮಾಡುತ್ತದೆ. ರೋಹಿತ್ ನಾಯಕತ್ವದಲ್ಲೇ ನಾನು ನನ್ನ ಇಡೀ ವೃತ್ತಿಜೀವನ ನಡೆದಿದೆ. ಹೀಗಾಗಿ ಅವರ ಬೆಂಬಲ ನನಗೆ ಎಂದಿಗೂ ಇರುತ್ತದೆ ಎಂದು ಹಾರ್ದಿಕ್ ಹೇಳಿದ್ದಾರೆ.

3 / 7
ವಾಸ್ತವವಾಗಿ ಹಾರ್ದಿಕ್ ಪಾಂಡ್ಯ ತಮ್ಮ ಐಪಿಎಲ್ ವೃತ್ತಿಜೀವನ ಆರಂಭಿಸಿದ್ದೇ ಮುಂಬೈ ಇಂಡಿಯನ್ಸ್‌ ಪರವಾಗಿ. ತಂಡದಲ್ಲಿ ಉತ್ತಮ ಪ್ರದರ್ಶನ ನೀಡಿದ ಹಾರ್ದಿಕ್​ರನ್ನು ನಂತರ ಟೀಂ ಇಂಡಿಯಾಗೆ ಆಯ್ಕೆ ಮಾಡಲಾಯಿತು. ಅಲ್ಲದೆ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಹಾರ್ದಿಕ್ ಭಾರತ ತಂಡದ ನಾಯಕತ್ವವನ್ನೂ ವಹಿಸಿಕೊಂಡರು.

ವಾಸ್ತವವಾಗಿ ಹಾರ್ದಿಕ್ ಪಾಂಡ್ಯ ತಮ್ಮ ಐಪಿಎಲ್ ವೃತ್ತಿಜೀವನ ಆರಂಭಿಸಿದ್ದೇ ಮುಂಬೈ ಇಂಡಿಯನ್ಸ್‌ ಪರವಾಗಿ. ತಂಡದಲ್ಲಿ ಉತ್ತಮ ಪ್ರದರ್ಶನ ನೀಡಿದ ಹಾರ್ದಿಕ್​ರನ್ನು ನಂತರ ಟೀಂ ಇಂಡಿಯಾಗೆ ಆಯ್ಕೆ ಮಾಡಲಾಯಿತು. ಅಲ್ಲದೆ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಹಾರ್ದಿಕ್ ಭಾರತ ತಂಡದ ನಾಯಕತ್ವವನ್ನೂ ವಹಿಸಿಕೊಂಡರು.

4 / 7
ಆದರೆ 2022 ರ ಐಪಿಎಲ್​​ಗೂ ಮುನ್ನ ಮುಂಬೈ ತಂಡದಿಂದ ಹೊರಬಿದ್ದಿದ್ದ ಪಾಂಡ್ಯರನ್ನು ಗುಜರಾತ್ ಟೈಟಾನ್ಸ್ ಖರೀದಿಸಿತ್ತು. ಗುಜರಾತ್ ಪರ ಎರಡು ಆವೃತ್ತಿಗಳನ್ನು ಆಡಿದ ಪಾಂಡ್ಯ ತಮ್ಮ ನಾಯಕತ್ವದಲ್ಲಿ ಗುಜರಾತ್ ತಂಡವನ್ನು ಸತತ ಎರಡು ಬಾರಿ ಫೈನಲ್​ಗೆ ಕೊಂಡೊಯ್ದಿದ್ದರು. ಇದರಲ್ಲಿ ಒಂದು ಬಾರಿ ಪ್ರಶಸ್ತಿಯನ್ನು ಜಯಿಸಿದ್ದರು.

ಆದರೆ 2022 ರ ಐಪಿಎಲ್​​ಗೂ ಮುನ್ನ ಮುಂಬೈ ತಂಡದಿಂದ ಹೊರಬಿದ್ದಿದ್ದ ಪಾಂಡ್ಯರನ್ನು ಗುಜರಾತ್ ಟೈಟಾನ್ಸ್ ಖರೀದಿಸಿತ್ತು. ಗುಜರಾತ್ ಪರ ಎರಡು ಆವೃತ್ತಿಗಳನ್ನು ಆಡಿದ ಪಾಂಡ್ಯ ತಮ್ಮ ನಾಯಕತ್ವದಲ್ಲಿ ಗುಜರಾತ್ ತಂಡವನ್ನು ಸತತ ಎರಡು ಬಾರಿ ಫೈನಲ್​ಗೆ ಕೊಂಡೊಯ್ದಿದ್ದರು. ಇದರಲ್ಲಿ ಒಂದು ಬಾರಿ ಪ್ರಶಸ್ತಿಯನ್ನು ಜಯಿಸಿದ್ದರು.

5 / 7
ಇದೀಗ 17ನೇ ಆವೃತ್ತಿಯ ಐಪಿಎಲ್ ಆರಂಭಕ್ಕೂ ಮುನ್ನ ಮತ್ತೆ ಮುಂಬೈ ಇಂಡಿಯನ್ಸ್‌ ತಂಡವನ್ನು ಸೇರಿಕೊಂಡಿರುವ ಪಾಂಡ್ಯಗೆ ತಂಡದ ನಾಯಕತ್ವವನ್ನು ನೀಡಲಾಗಿದೆ. ಏಕಾಏಕಿ ರೋಹಿತ್ ಶರ್ಮಾರನ್ನು ಕೆಳಗಿಳಿಸಿ ಪಾಂಡ್ಯಗೆ ನಾಯಕತ್ವ ನೀಡಿದ್ದರ ಬಗ್ಗೆ ರೋಹಿತ್ ಶರ್ಮಾ ಅಭಿಮಾನಿಗಳು ಮುಂಬೈ ಫ್ರಾಂಚೈಸಿ ವಿರುದ್ಧ ಕಿಡಿಕಾರಿದ್ದರು.

ಇದೀಗ 17ನೇ ಆವೃತ್ತಿಯ ಐಪಿಎಲ್ ಆರಂಭಕ್ಕೂ ಮುನ್ನ ಮತ್ತೆ ಮುಂಬೈ ಇಂಡಿಯನ್ಸ್‌ ತಂಡವನ್ನು ಸೇರಿಕೊಂಡಿರುವ ಪಾಂಡ್ಯಗೆ ತಂಡದ ನಾಯಕತ್ವವನ್ನು ನೀಡಲಾಗಿದೆ. ಏಕಾಏಕಿ ರೋಹಿತ್ ಶರ್ಮಾರನ್ನು ಕೆಳಗಿಳಿಸಿ ಪಾಂಡ್ಯಗೆ ನಾಯಕತ್ವ ನೀಡಿದ್ದರ ಬಗ್ಗೆ ರೋಹಿತ್ ಶರ್ಮಾ ಅಭಿಮಾನಿಗಳು ಮುಂಬೈ ಫ್ರಾಂಚೈಸಿ ವಿರುದ್ಧ ಕಿಡಿಕಾರಿದ್ದರು.

6 / 7
ಇದಕ್ಕೆ ಪೂರಕವಾಗಿ ಕೆಲವು ಕಾಕತಾಳೀಯ ಘಟನೆಗಳು ಸಂಭವಿಸಿದ್ದವು. ಪಾಂಡ್ಯ ತಂಡದ ನಾಯಕನಾದ ಬಳಿಕ ರೋಹಿತ್ ಹಾಗೂ ಪಾಂಡ್ಯ ನಡುವೆ ಸಂಬಂಧ ಅಳಸಿದೆ. ಹಾಗೆಯೇ ನಾಯಕತ್ವದ ಆಕಾಂಕ್ಷಿಯಾಗಿದ್ದ ಬುಮ್ರಾ ಕೂಡ ಪಾಂಡ್ಯ ವಿರುದ್ಧ ಮುನಿಸಿಕೊಂಡಿದ್ದಾರೆ ಎನ್ನಲಾಗಿತ್ತು. ಆದರೀಗ ಆ ಎಲ್ಲಾ ಊಹಪೋಹಗಳಿಗೆ ತೆರೆ ಎಳೆಯುವ ಕೆಲಸವನ್ನು ಪಾಂಡ್ಯ ಮಾಡಿದ್ದಾರೆ.

ಇದಕ್ಕೆ ಪೂರಕವಾಗಿ ಕೆಲವು ಕಾಕತಾಳೀಯ ಘಟನೆಗಳು ಸಂಭವಿಸಿದ್ದವು. ಪಾಂಡ್ಯ ತಂಡದ ನಾಯಕನಾದ ಬಳಿಕ ರೋಹಿತ್ ಹಾಗೂ ಪಾಂಡ್ಯ ನಡುವೆ ಸಂಬಂಧ ಅಳಸಿದೆ. ಹಾಗೆಯೇ ನಾಯಕತ್ವದ ಆಕಾಂಕ್ಷಿಯಾಗಿದ್ದ ಬುಮ್ರಾ ಕೂಡ ಪಾಂಡ್ಯ ವಿರುದ್ಧ ಮುನಿಸಿಕೊಂಡಿದ್ದಾರೆ ಎನ್ನಲಾಗಿತ್ತು. ಆದರೀಗ ಆ ಎಲ್ಲಾ ಊಹಪೋಹಗಳಿಗೆ ತೆರೆ ಎಳೆಯುವ ಕೆಲಸವನ್ನು ಪಾಂಡ್ಯ ಮಾಡಿದ್ದಾರೆ.

7 / 7
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!