AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್ ಆರಂಭಕ್ಕೂ ಮುನ್ನ ಸಂಚಲನ ಮೂಡಿಸಿದ ಧೋನಿ ಫೇಸ್ಬುಕ್ ಪೋಸ್ಟ್

MS Dhoni: ಧೋನಿ ಅಷ್ಟಾಗಿ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವುದಿಲ್ಲ. ಆದರೀಗ ಐಪಿಎಲ್ ಆರಂಭಕ್ಕೂ ಮುನ್ನ ಫೇಸ್ಬುಕ್​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿರುವ ಮಹೀ, ಹೊಸ ಸೀಸನ್‌ಗಾಗಿ ಕಾತುರದಿಂದ ಕಾಯುತ್ತಿದ್ದೇನೆ. ಈ ಆವೃತ್ತಿಯಲ್ಲಿ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಪೃಥ್ವಿಶಂಕರ
|

Updated on: Mar 04, 2024 | 7:52 PM

Share
ಮಾರ್ಚ್ 22 ರಿಂದ 17ನೇ ಆವೃತ್ತಿಯ ಐಪಿಎಲ್ ಪ್ರಾರಂಭವಾಗುತ್ತಿದೆ. ಈ ಸೀಸನ್​ನ ಮೊದಲ ಪಂದ್ಯ ಪ್ರಸಕ್ತ ವಿಜೇತ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ. ಈ ಸೀಸನ್ ಆರಂಭಕ್ಕೂ ಮುನ್ನ ಧೋನಿ ಬಹಳ ದಿನಗಳ ನಂತರ ತಮ್ಮ ಫೇಸ್ ಬುಕ್​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಳ್ಳುವ ಮೂಲಕ ಐಪಿಎಲ್ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ.

ಮಾರ್ಚ್ 22 ರಿಂದ 17ನೇ ಆವೃತ್ತಿಯ ಐಪಿಎಲ್ ಪ್ರಾರಂಭವಾಗುತ್ತಿದೆ. ಈ ಸೀಸನ್​ನ ಮೊದಲ ಪಂದ್ಯ ಪ್ರಸಕ್ತ ವಿಜೇತ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ. ಈ ಸೀಸನ್ ಆರಂಭಕ್ಕೂ ಮುನ್ನ ಧೋನಿ ಬಹಳ ದಿನಗಳ ನಂತರ ತಮ್ಮ ಫೇಸ್ ಬುಕ್​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಳ್ಳುವ ಮೂಲಕ ಐಪಿಎಲ್ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ.

1 / 7
ಧೋನಿ ಅಷ್ಟಾಗಿ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವುದಿಲ್ಲ. ಆದರೀಗ ಐಪಿಎಲ್ ಆರಂಭಕ್ಕೂ ಮುನ್ನ ಫೇಸ್ಬುಕ್​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿರುವ ಮಹೀ, ಹೊಸ ಸೀಸನ್‌ಗಾಗಿ ಕಾತುರದಿಂದ ಕಾಯುತ್ತಿದ್ದೇನೆ. ಈ ಆವೃತ್ತಿಯಲ್ಲಿ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಈಗ ಧೋನಿಯ ಈ ಹೊಸ ಪಾತ್ರ ಯಾವುದು ಎಂಬುದರ ಬಗ್ಗೆ ಊಹಾಪೋಹಗಳು ಶುರುವಾಗಿವೆ.

ಧೋನಿ ಅಷ್ಟಾಗಿ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವುದಿಲ್ಲ. ಆದರೀಗ ಐಪಿಎಲ್ ಆರಂಭಕ್ಕೂ ಮುನ್ನ ಫೇಸ್ಬುಕ್​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿರುವ ಮಹೀ, ಹೊಸ ಸೀಸನ್‌ಗಾಗಿ ಕಾತುರದಿಂದ ಕಾಯುತ್ತಿದ್ದೇನೆ. ಈ ಆವೃತ್ತಿಯಲ್ಲಿ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಈಗ ಧೋನಿಯ ಈ ಹೊಸ ಪಾತ್ರ ಯಾವುದು ಎಂಬುದರ ಬಗ್ಗೆ ಊಹಾಪೋಹಗಳು ಶುರುವಾಗಿವೆ.

2 / 7
ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್‌ನ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾಗಿದೆ. ಈ ತಂಡ ಐದು ಬಾರಿ ಐಪಿಎಲ್ ಪ್ರಶಸ್ತಿ ಗೆದ್ದಿದೆ. ಧೋನಿ ನಾಯಕತ್ವದಲ್ಲಿ ಚೆನ್ನೈ ಈ ಎಲ್ಲಾ ಪ್ರಶಸ್ತಿಗಳನ್ನು ಗೆದ್ದಿದೆ. ಕಳೆದ ವರ್ಷ ಧೋನಿ ನಾಯಕತ್ವದಲ್ಲೇ ಚೆನ್ನೈ ತಂಡ ಐದನೇ ಐಪಿಎಲ್ ಪ್ರಶಸ್ತಿ ಗೆದ್ದಿತ್ತು. ಹೀಗಾಗಿ ಮುಂಬರುವ ಸೀಸನ್​ನಲ್ಲೂ ಧೋನಿಯೇ ತಂಡವನ್ನು ಮುನ್ನಡೆಸುತ್ತಾರೆ ಎಂದು ಹೇಳಲಾಗುತ್ತಿತ್ತು.

ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್‌ನ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾಗಿದೆ. ಈ ತಂಡ ಐದು ಬಾರಿ ಐಪಿಎಲ್ ಪ್ರಶಸ್ತಿ ಗೆದ್ದಿದೆ. ಧೋನಿ ನಾಯಕತ್ವದಲ್ಲಿ ಚೆನ್ನೈ ಈ ಎಲ್ಲಾ ಪ್ರಶಸ್ತಿಗಳನ್ನು ಗೆದ್ದಿದೆ. ಕಳೆದ ವರ್ಷ ಧೋನಿ ನಾಯಕತ್ವದಲ್ಲೇ ಚೆನ್ನೈ ತಂಡ ಐದನೇ ಐಪಿಎಲ್ ಪ್ರಶಸ್ತಿ ಗೆದ್ದಿತ್ತು. ಹೀಗಾಗಿ ಮುಂಬರುವ ಸೀಸನ್​ನಲ್ಲೂ ಧೋನಿಯೇ ತಂಡವನ್ನು ಮುನ್ನಡೆಸುತ್ತಾರೆ ಎಂದು ಹೇಳಲಾಗುತ್ತಿತ್ತು.

3 / 7
ವಾಸ್ತವವಾಗಿ 2021 ರಐಪಿಎಲ್​ಗೂ ಮೊದಲು, ಧೋನಿ ಇದ್ದಕ್ಕಿದ್ದಂತೆ ನಾಯಕತ್ವದಿಂದ ಕೆಳಗಿಳಿಯುವ ನಿರ್ಧಾರ ತೆಗೆದುಕೊಂಡಿದ್ದರು. ಆ ನಂತರ ತಂಡದ ನಾಯಕತ್ವವನ್ನು ರವೀಂದ್ರ ಜಡೇಜಾಗೆ ಹಸ್ತಾಂತರಿಸಲಾಗಿತ್ತು. ಆದರೆ ಜಡೇಜಾ ನಾಯಕತ್ವದಲ್ಲಿ ತಂಡದ ಪ್ರದರ್ಶನ ಕುಸಿದ ಬಳಿಕ ಮತ್ತೆ ಧೋನಿಗೆ ನಾಯಕತ್ವ ನೀಡಲಾಗಿತ್ತು.

ವಾಸ್ತವವಾಗಿ 2021 ರಐಪಿಎಲ್​ಗೂ ಮೊದಲು, ಧೋನಿ ಇದ್ದಕ್ಕಿದ್ದಂತೆ ನಾಯಕತ್ವದಿಂದ ಕೆಳಗಿಳಿಯುವ ನಿರ್ಧಾರ ತೆಗೆದುಕೊಂಡಿದ್ದರು. ಆ ನಂತರ ತಂಡದ ನಾಯಕತ್ವವನ್ನು ರವೀಂದ್ರ ಜಡೇಜಾಗೆ ಹಸ್ತಾಂತರಿಸಲಾಗಿತ್ತು. ಆದರೆ ಜಡೇಜಾ ನಾಯಕತ್ವದಲ್ಲಿ ತಂಡದ ಪ್ರದರ್ಶನ ಕುಸಿದ ಬಳಿಕ ಮತ್ತೆ ಧೋನಿಗೆ ನಾಯಕತ್ವ ನೀಡಲಾಗಿತ್ತು.

4 / 7
ಆದರೀಗ ಟೂರ್ನಿ ಆರಂಭಕ್ಕೂ ಮುನ್ನ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದೇನೆ ಎಂದಿರುವ ಧೋನಿ, ನಾಯಕತ್ವವನ್ನು ತೊರೆಯುತ್ತಾರೆಯೇ ಅಥವಾ ನಿವೃತ್ತಿ ಘೋಷಿಸುತ್ತಾರೆಯೇ ಅಥವಾ ಮಾರ್ಗದರ್ಶಕನ ಪಾತ್ರದಲ್ಲಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆಯೇ ಎಂಬ ಪ್ರಶ್ನೆಗಳು ಮೂಡಿವೆ.

ಆದರೀಗ ಟೂರ್ನಿ ಆರಂಭಕ್ಕೂ ಮುನ್ನ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದೇನೆ ಎಂದಿರುವ ಧೋನಿ, ನಾಯಕತ್ವವನ್ನು ತೊರೆಯುತ್ತಾರೆಯೇ ಅಥವಾ ನಿವೃತ್ತಿ ಘೋಷಿಸುತ್ತಾರೆಯೇ ಅಥವಾ ಮಾರ್ಗದರ್ಶಕನ ಪಾತ್ರದಲ್ಲಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆಯೇ ಎಂಬ ಪ್ರಶ್ನೆಗಳು ಮೂಡಿವೆ.

5 / 7
ವಾಸ್ತವವಾಗಿ ಧೋನಿ ಯಾವುದೇ ನಿರ್ಧಾರಗಳನ್ನು ಪೂರ್ವನಿಯೋಜಿತಗೊಳಿಸುವುದಿಲ್ಲ. ಕೊನೆಯ ಕ್ಷಣದಲ್ಲಿ ತಮ್ಮ ನಿರ್ಧಾರ ಪ್ರಕಟಿಸಿ ಎಲ್ಲರನ್ನೂ ಅಚ್ಚರಿಗೊಳಿಸುವ ಧೋನಿ ಈ ಬಾರಿಯೂ ಅದೇ ರೀತಿ ಮಾಡಿದ್ದಾರೆ. ಫೇಸ್​ಬುಕ್​ನಲ್ಲಿ ಒಂದು ಸಾಲಿನ ಹೇಳಿಕೆ ನೀಡಿರುವ ಧೋನಿ ಮುಂದಿನ ದಿನಗಳಲ್ಲಿ ಏನು ಮಾಡುತ್ತಾರೆಂದು ಕಾದು ನೋಡಬೇಕಿದೆ.

ವಾಸ್ತವವಾಗಿ ಧೋನಿ ಯಾವುದೇ ನಿರ್ಧಾರಗಳನ್ನು ಪೂರ್ವನಿಯೋಜಿತಗೊಳಿಸುವುದಿಲ್ಲ. ಕೊನೆಯ ಕ್ಷಣದಲ್ಲಿ ತಮ್ಮ ನಿರ್ಧಾರ ಪ್ರಕಟಿಸಿ ಎಲ್ಲರನ್ನೂ ಅಚ್ಚರಿಗೊಳಿಸುವ ಧೋನಿ ಈ ಬಾರಿಯೂ ಅದೇ ರೀತಿ ಮಾಡಿದ್ದಾರೆ. ಫೇಸ್​ಬುಕ್​ನಲ್ಲಿ ಒಂದು ಸಾಲಿನ ಹೇಳಿಕೆ ನೀಡಿರುವ ಧೋನಿ ಮುಂದಿನ ದಿನಗಳಲ್ಲಿ ಏನು ಮಾಡುತ್ತಾರೆಂದು ಕಾದು ನೋಡಬೇಕಿದೆ.

6 / 7
ಸದ್ಯಕ್ಕೆ ಕೇಳಿಬಂದಿರುವ ಮಾಹಿತಿ ಪ್ರಕಾರ, ಇಷ್ಟು ದಿನ ಇನ್ನಿಂಗ್ಸ್​ನ ಕೊನೆಯಲ್ಲಿ ಬ್ಯಾಟಿಂಗ್​ಗೆ ಬರುತ್ತಿದ್ದ ಧೋನಿ ತಮ್ಮ ಬ್ಯಾಟಿಂಗ್ ಕ್ರಮಾಂಕವನ್ನು ಬದಲಾಯಿಸಬಹುದು ಎಂಬ ಊಹಾಪೋಹಗಳೂ ಇವೆ. ಅದರ ಪ್ರಕಾರ ಅವರು ಅಗ್ರ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬಹುದು ಎನ್ನಲಾಗುತ್ತಿದೆ. ಧೋನಿ ಯಾವ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವುದನ್ನು ಅವರೇ ಹೇಳಬೇಕು ಅಥವಾ ಅಭಿಮಾನಿಗಳು ಮಾರ್ಚ್ 22 ರವರೆಗೆ ಕಾಯಬೇಕು.

ಸದ್ಯಕ್ಕೆ ಕೇಳಿಬಂದಿರುವ ಮಾಹಿತಿ ಪ್ರಕಾರ, ಇಷ್ಟು ದಿನ ಇನ್ನಿಂಗ್ಸ್​ನ ಕೊನೆಯಲ್ಲಿ ಬ್ಯಾಟಿಂಗ್​ಗೆ ಬರುತ್ತಿದ್ದ ಧೋನಿ ತಮ್ಮ ಬ್ಯಾಟಿಂಗ್ ಕ್ರಮಾಂಕವನ್ನು ಬದಲಾಯಿಸಬಹುದು ಎಂಬ ಊಹಾಪೋಹಗಳೂ ಇವೆ. ಅದರ ಪ್ರಕಾರ ಅವರು ಅಗ್ರ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬಹುದು ಎನ್ನಲಾಗುತ್ತಿದೆ. ಧೋನಿ ಯಾವ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವುದನ್ನು ಅವರೇ ಹೇಳಬೇಕು ಅಥವಾ ಅಭಿಮಾನಿಗಳು ಮಾರ್ಚ್ 22 ರವರೆಗೆ ಕಾಯಬೇಕು.

7 / 7
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ