AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್ ಆರಂಭಕ್ಕೂ ಮುನ್ನ ಸಂಚಲನ ಮೂಡಿಸಿದ ಧೋನಿ ಫೇಸ್ಬುಕ್ ಪೋಸ್ಟ್

MS Dhoni: ಧೋನಿ ಅಷ್ಟಾಗಿ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವುದಿಲ್ಲ. ಆದರೀಗ ಐಪಿಎಲ್ ಆರಂಭಕ್ಕೂ ಮುನ್ನ ಫೇಸ್ಬುಕ್​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿರುವ ಮಹೀ, ಹೊಸ ಸೀಸನ್‌ಗಾಗಿ ಕಾತುರದಿಂದ ಕಾಯುತ್ತಿದ್ದೇನೆ. ಈ ಆವೃತ್ತಿಯಲ್ಲಿ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಪೃಥ್ವಿಶಂಕರ
|

Updated on: Mar 04, 2024 | 7:52 PM

Share
ಮಾರ್ಚ್ 22 ರಿಂದ 17ನೇ ಆವೃತ್ತಿಯ ಐಪಿಎಲ್ ಪ್ರಾರಂಭವಾಗುತ್ತಿದೆ. ಈ ಸೀಸನ್​ನ ಮೊದಲ ಪಂದ್ಯ ಪ್ರಸಕ್ತ ವಿಜೇತ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ. ಈ ಸೀಸನ್ ಆರಂಭಕ್ಕೂ ಮುನ್ನ ಧೋನಿ ಬಹಳ ದಿನಗಳ ನಂತರ ತಮ್ಮ ಫೇಸ್ ಬುಕ್​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಳ್ಳುವ ಮೂಲಕ ಐಪಿಎಲ್ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ.

ಮಾರ್ಚ್ 22 ರಿಂದ 17ನೇ ಆವೃತ್ತಿಯ ಐಪಿಎಲ್ ಪ್ರಾರಂಭವಾಗುತ್ತಿದೆ. ಈ ಸೀಸನ್​ನ ಮೊದಲ ಪಂದ್ಯ ಪ್ರಸಕ್ತ ವಿಜೇತ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ. ಈ ಸೀಸನ್ ಆರಂಭಕ್ಕೂ ಮುನ್ನ ಧೋನಿ ಬಹಳ ದಿನಗಳ ನಂತರ ತಮ್ಮ ಫೇಸ್ ಬುಕ್​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಳ್ಳುವ ಮೂಲಕ ಐಪಿಎಲ್ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ.

1 / 7
ಧೋನಿ ಅಷ್ಟಾಗಿ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವುದಿಲ್ಲ. ಆದರೀಗ ಐಪಿಎಲ್ ಆರಂಭಕ್ಕೂ ಮುನ್ನ ಫೇಸ್ಬುಕ್​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿರುವ ಮಹೀ, ಹೊಸ ಸೀಸನ್‌ಗಾಗಿ ಕಾತುರದಿಂದ ಕಾಯುತ್ತಿದ್ದೇನೆ. ಈ ಆವೃತ್ತಿಯಲ್ಲಿ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಈಗ ಧೋನಿಯ ಈ ಹೊಸ ಪಾತ್ರ ಯಾವುದು ಎಂಬುದರ ಬಗ್ಗೆ ಊಹಾಪೋಹಗಳು ಶುರುವಾಗಿವೆ.

ಧೋನಿ ಅಷ್ಟಾಗಿ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವುದಿಲ್ಲ. ಆದರೀಗ ಐಪಿಎಲ್ ಆರಂಭಕ್ಕೂ ಮುನ್ನ ಫೇಸ್ಬುಕ್​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿರುವ ಮಹೀ, ಹೊಸ ಸೀಸನ್‌ಗಾಗಿ ಕಾತುರದಿಂದ ಕಾಯುತ್ತಿದ್ದೇನೆ. ಈ ಆವೃತ್ತಿಯಲ್ಲಿ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಈಗ ಧೋನಿಯ ಈ ಹೊಸ ಪಾತ್ರ ಯಾವುದು ಎಂಬುದರ ಬಗ್ಗೆ ಊಹಾಪೋಹಗಳು ಶುರುವಾಗಿವೆ.

2 / 7
ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್‌ನ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾಗಿದೆ. ಈ ತಂಡ ಐದು ಬಾರಿ ಐಪಿಎಲ್ ಪ್ರಶಸ್ತಿ ಗೆದ್ದಿದೆ. ಧೋನಿ ನಾಯಕತ್ವದಲ್ಲಿ ಚೆನ್ನೈ ಈ ಎಲ್ಲಾ ಪ್ರಶಸ್ತಿಗಳನ್ನು ಗೆದ್ದಿದೆ. ಕಳೆದ ವರ್ಷ ಧೋನಿ ನಾಯಕತ್ವದಲ್ಲೇ ಚೆನ್ನೈ ತಂಡ ಐದನೇ ಐಪಿಎಲ್ ಪ್ರಶಸ್ತಿ ಗೆದ್ದಿತ್ತು. ಹೀಗಾಗಿ ಮುಂಬರುವ ಸೀಸನ್​ನಲ್ಲೂ ಧೋನಿಯೇ ತಂಡವನ್ನು ಮುನ್ನಡೆಸುತ್ತಾರೆ ಎಂದು ಹೇಳಲಾಗುತ್ತಿತ್ತು.

ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್‌ನ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾಗಿದೆ. ಈ ತಂಡ ಐದು ಬಾರಿ ಐಪಿಎಲ್ ಪ್ರಶಸ್ತಿ ಗೆದ್ದಿದೆ. ಧೋನಿ ನಾಯಕತ್ವದಲ್ಲಿ ಚೆನ್ನೈ ಈ ಎಲ್ಲಾ ಪ್ರಶಸ್ತಿಗಳನ್ನು ಗೆದ್ದಿದೆ. ಕಳೆದ ವರ್ಷ ಧೋನಿ ನಾಯಕತ್ವದಲ್ಲೇ ಚೆನ್ನೈ ತಂಡ ಐದನೇ ಐಪಿಎಲ್ ಪ್ರಶಸ್ತಿ ಗೆದ್ದಿತ್ತು. ಹೀಗಾಗಿ ಮುಂಬರುವ ಸೀಸನ್​ನಲ್ಲೂ ಧೋನಿಯೇ ತಂಡವನ್ನು ಮುನ್ನಡೆಸುತ್ತಾರೆ ಎಂದು ಹೇಳಲಾಗುತ್ತಿತ್ತು.

3 / 7
ವಾಸ್ತವವಾಗಿ 2021 ರಐಪಿಎಲ್​ಗೂ ಮೊದಲು, ಧೋನಿ ಇದ್ದಕ್ಕಿದ್ದಂತೆ ನಾಯಕತ್ವದಿಂದ ಕೆಳಗಿಳಿಯುವ ನಿರ್ಧಾರ ತೆಗೆದುಕೊಂಡಿದ್ದರು. ಆ ನಂತರ ತಂಡದ ನಾಯಕತ್ವವನ್ನು ರವೀಂದ್ರ ಜಡೇಜಾಗೆ ಹಸ್ತಾಂತರಿಸಲಾಗಿತ್ತು. ಆದರೆ ಜಡೇಜಾ ನಾಯಕತ್ವದಲ್ಲಿ ತಂಡದ ಪ್ರದರ್ಶನ ಕುಸಿದ ಬಳಿಕ ಮತ್ತೆ ಧೋನಿಗೆ ನಾಯಕತ್ವ ನೀಡಲಾಗಿತ್ತು.

ವಾಸ್ತವವಾಗಿ 2021 ರಐಪಿಎಲ್​ಗೂ ಮೊದಲು, ಧೋನಿ ಇದ್ದಕ್ಕಿದ್ದಂತೆ ನಾಯಕತ್ವದಿಂದ ಕೆಳಗಿಳಿಯುವ ನಿರ್ಧಾರ ತೆಗೆದುಕೊಂಡಿದ್ದರು. ಆ ನಂತರ ತಂಡದ ನಾಯಕತ್ವವನ್ನು ರವೀಂದ್ರ ಜಡೇಜಾಗೆ ಹಸ್ತಾಂತರಿಸಲಾಗಿತ್ತು. ಆದರೆ ಜಡೇಜಾ ನಾಯಕತ್ವದಲ್ಲಿ ತಂಡದ ಪ್ರದರ್ಶನ ಕುಸಿದ ಬಳಿಕ ಮತ್ತೆ ಧೋನಿಗೆ ನಾಯಕತ್ವ ನೀಡಲಾಗಿತ್ತು.

4 / 7
ಆದರೀಗ ಟೂರ್ನಿ ಆರಂಭಕ್ಕೂ ಮುನ್ನ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದೇನೆ ಎಂದಿರುವ ಧೋನಿ, ನಾಯಕತ್ವವನ್ನು ತೊರೆಯುತ್ತಾರೆಯೇ ಅಥವಾ ನಿವೃತ್ತಿ ಘೋಷಿಸುತ್ತಾರೆಯೇ ಅಥವಾ ಮಾರ್ಗದರ್ಶಕನ ಪಾತ್ರದಲ್ಲಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆಯೇ ಎಂಬ ಪ್ರಶ್ನೆಗಳು ಮೂಡಿವೆ.

ಆದರೀಗ ಟೂರ್ನಿ ಆರಂಭಕ್ಕೂ ಮುನ್ನ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದೇನೆ ಎಂದಿರುವ ಧೋನಿ, ನಾಯಕತ್ವವನ್ನು ತೊರೆಯುತ್ತಾರೆಯೇ ಅಥವಾ ನಿವೃತ್ತಿ ಘೋಷಿಸುತ್ತಾರೆಯೇ ಅಥವಾ ಮಾರ್ಗದರ್ಶಕನ ಪಾತ್ರದಲ್ಲಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆಯೇ ಎಂಬ ಪ್ರಶ್ನೆಗಳು ಮೂಡಿವೆ.

5 / 7
ವಾಸ್ತವವಾಗಿ ಧೋನಿ ಯಾವುದೇ ನಿರ್ಧಾರಗಳನ್ನು ಪೂರ್ವನಿಯೋಜಿತಗೊಳಿಸುವುದಿಲ್ಲ. ಕೊನೆಯ ಕ್ಷಣದಲ್ಲಿ ತಮ್ಮ ನಿರ್ಧಾರ ಪ್ರಕಟಿಸಿ ಎಲ್ಲರನ್ನೂ ಅಚ್ಚರಿಗೊಳಿಸುವ ಧೋನಿ ಈ ಬಾರಿಯೂ ಅದೇ ರೀತಿ ಮಾಡಿದ್ದಾರೆ. ಫೇಸ್​ಬುಕ್​ನಲ್ಲಿ ಒಂದು ಸಾಲಿನ ಹೇಳಿಕೆ ನೀಡಿರುವ ಧೋನಿ ಮುಂದಿನ ದಿನಗಳಲ್ಲಿ ಏನು ಮಾಡುತ್ತಾರೆಂದು ಕಾದು ನೋಡಬೇಕಿದೆ.

ವಾಸ್ತವವಾಗಿ ಧೋನಿ ಯಾವುದೇ ನಿರ್ಧಾರಗಳನ್ನು ಪೂರ್ವನಿಯೋಜಿತಗೊಳಿಸುವುದಿಲ್ಲ. ಕೊನೆಯ ಕ್ಷಣದಲ್ಲಿ ತಮ್ಮ ನಿರ್ಧಾರ ಪ್ರಕಟಿಸಿ ಎಲ್ಲರನ್ನೂ ಅಚ್ಚರಿಗೊಳಿಸುವ ಧೋನಿ ಈ ಬಾರಿಯೂ ಅದೇ ರೀತಿ ಮಾಡಿದ್ದಾರೆ. ಫೇಸ್​ಬುಕ್​ನಲ್ಲಿ ಒಂದು ಸಾಲಿನ ಹೇಳಿಕೆ ನೀಡಿರುವ ಧೋನಿ ಮುಂದಿನ ದಿನಗಳಲ್ಲಿ ಏನು ಮಾಡುತ್ತಾರೆಂದು ಕಾದು ನೋಡಬೇಕಿದೆ.

6 / 7
ಸದ್ಯಕ್ಕೆ ಕೇಳಿಬಂದಿರುವ ಮಾಹಿತಿ ಪ್ರಕಾರ, ಇಷ್ಟು ದಿನ ಇನ್ನಿಂಗ್ಸ್​ನ ಕೊನೆಯಲ್ಲಿ ಬ್ಯಾಟಿಂಗ್​ಗೆ ಬರುತ್ತಿದ್ದ ಧೋನಿ ತಮ್ಮ ಬ್ಯಾಟಿಂಗ್ ಕ್ರಮಾಂಕವನ್ನು ಬದಲಾಯಿಸಬಹುದು ಎಂಬ ಊಹಾಪೋಹಗಳೂ ಇವೆ. ಅದರ ಪ್ರಕಾರ ಅವರು ಅಗ್ರ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬಹುದು ಎನ್ನಲಾಗುತ್ತಿದೆ. ಧೋನಿ ಯಾವ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವುದನ್ನು ಅವರೇ ಹೇಳಬೇಕು ಅಥವಾ ಅಭಿಮಾನಿಗಳು ಮಾರ್ಚ್ 22 ರವರೆಗೆ ಕಾಯಬೇಕು.

ಸದ್ಯಕ್ಕೆ ಕೇಳಿಬಂದಿರುವ ಮಾಹಿತಿ ಪ್ರಕಾರ, ಇಷ್ಟು ದಿನ ಇನ್ನಿಂಗ್ಸ್​ನ ಕೊನೆಯಲ್ಲಿ ಬ್ಯಾಟಿಂಗ್​ಗೆ ಬರುತ್ತಿದ್ದ ಧೋನಿ ತಮ್ಮ ಬ್ಯಾಟಿಂಗ್ ಕ್ರಮಾಂಕವನ್ನು ಬದಲಾಯಿಸಬಹುದು ಎಂಬ ಊಹಾಪೋಹಗಳೂ ಇವೆ. ಅದರ ಪ್ರಕಾರ ಅವರು ಅಗ್ರ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬಹುದು ಎನ್ನಲಾಗುತ್ತಿದೆ. ಧೋನಿ ಯಾವ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವುದನ್ನು ಅವರೇ ಹೇಳಬೇಕು ಅಥವಾ ಅಭಿಮಾನಿಗಳು ಮಾರ್ಚ್ 22 ರವರೆಗೆ ಕಾಯಬೇಕು.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?