IPL 2024: ಮುಂಬೈ ಔಟ್! ಆರ್​ಸಿಬಿ ಕಥೆ ಏನು? ಇಲ್ಲಿದೆ ಸಂಪೂರ್ಣ ಪ್ಲೇಆಫ್‌ ಲೆಕ್ಕಾಚಾರ

IPL 2024: ಈ ಗೆಲುವಿನೊಂದಿಗೆ ಸನ್ ರೈಸರ್ಸ್‌ ಹೈದರಾಬಾದ್‌ ತಂಡ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದರೆ, ಲಕ್ನೋ ಸೂಪರ್‌ಜೈಂಟ್ಸ್ ತಂಡ 6ನೇ ಸ್ಥಾನದಲ್ಲೇ ಉಳಿದುಕೊಂಡಿದೆ. ಆದರೆ ಈ ಪಂದ್ಯದ ಫಲಿತಾಂಶದ ಬಳಿಕ ಮುಂಬೈ ಇಂಡಿಯನ್ಸ್‌ ತಂಡದ ಪ್ಲೇ ಆಫ್‌ ತಲುಪುವ ಕನಸು ಅಧಿಕೃತವಾಗಿ ಭಗ್ನಗೊಂಡಿದೆ.

|

Updated on: May 08, 2024 | 11:27 PM

ಬುಧವಾರ ನಡೆದ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದಲ್ಲಿ ಪ್ಯಾಟ್ ಕಮ್ಮಿನ್ಸ್​ ಪಡೆ 10 ವಿಕೆಟ್​​ಗಳ ಐತಿಹಾಸಿಕ ಗೆಲುವು ಸಾಧಿಸಿದೆ. ಲಕ್ನೋ ನೀಡಿದ 166 ರನ್​ಗಳ ಗುರಿಯನ್ನು ಸನ್ ರೈಸರ್ಸ್ ಕೇವಲ 9.4 ಓವರ್​ಗಳಲ್ಲಿ ಸಾಧಿಸಿತು.

ಬುಧವಾರ ನಡೆದ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದಲ್ಲಿ ಪ್ಯಾಟ್ ಕಮ್ಮಿನ್ಸ್​ ಪಡೆ 10 ವಿಕೆಟ್​​ಗಳ ಐತಿಹಾಸಿಕ ಗೆಲುವು ಸಾಧಿಸಿದೆ. ಲಕ್ನೋ ನೀಡಿದ 166 ರನ್​ಗಳ ಗುರಿಯನ್ನು ಸನ್ ರೈಸರ್ಸ್ ಕೇವಲ 9.4 ಓವರ್​ಗಳಲ್ಲಿ ಸಾಧಿಸಿತು.

1 / 8
ಈ ಗೆಲುವಿನೊಂದಿಗೆ ಸನ್ ರೈಸರ್ಸ್‌ ಹೈದರಾಬಾದ್‌ ತಂಡ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದರೆ, ಲಕ್ನೋ ಸೂಪರ್‌ಜೈಂಟ್ಸ್ ತಂಡ 6ನೇ ಸ್ಥಾನದಲ್ಲೇ ಉಳಿದುಕೊಂಡಿದೆ. ಆದರೆ ಈ ಪಂದ್ಯದ ಫಲಿತಾಂಶದ ಬಳಿಕ ಮುಂಬೈ ಇಂಡಿಯನ್ಸ್‌ ತಂಡದ ಪ್ಲೇ ಆಫ್‌ ತಲುಪುವ ಕನಸು ಅಧಿಕೃತವಾಗಿ ಭಗ್ನಗೊಂಡಿದೆ.

ಈ ಗೆಲುವಿನೊಂದಿಗೆ ಸನ್ ರೈಸರ್ಸ್‌ ಹೈದರಾಬಾದ್‌ ತಂಡ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದರೆ, ಲಕ್ನೋ ಸೂಪರ್‌ಜೈಂಟ್ಸ್ ತಂಡ 6ನೇ ಸ್ಥಾನದಲ್ಲೇ ಉಳಿದುಕೊಂಡಿದೆ. ಆದರೆ ಈ ಪಂದ್ಯದ ಫಲಿತಾಂಶದ ಬಳಿಕ ಮುಂಬೈ ಇಂಡಿಯನ್ಸ್‌ ತಂಡದ ಪ್ಲೇ ಆಫ್‌ ತಲುಪುವ ಕನಸು ಅಧಿಕೃತವಾಗಿ ಭಗ್ನಗೊಂಡಿದೆ.

2 / 8
ಏಕೆಂದರೆ ಮುಂಬೈ ಇಂಡಿಯನ್ಸ್‌ ತಂಡ ಇದುವರೆಗೆ 12 ಪಂದ್ಯಗಳನ್ನಾಡಿದ್ದು 4 ಗೆಲುವು ಹಾಗೂ 8 ಸೋಲಿನೊಂದಿಗೆ ಕೇವಲ 8 ಅಂಕಗಳನ್ನು ತನ್ನ ಖಾತೆಯಲ್ಲಿ ಇಟ್ಟುಕೊಂಡಿದೆ. ಮುಂಬೈ ಉಳಿದಿರುವ ಇನ್ನೇರಡು ಪಂದ್ಯಗಳನ್ನು ಗೆದ್ದರೂ ಅದರ ಬಳಿ ಕೇವಲ 12 ಅಂಕಗಳು ಮಾತ್ರ ಇರಲಿವೆ.

ಏಕೆಂದರೆ ಮುಂಬೈ ಇಂಡಿಯನ್ಸ್‌ ತಂಡ ಇದುವರೆಗೆ 12 ಪಂದ್ಯಗಳನ್ನಾಡಿದ್ದು 4 ಗೆಲುವು ಹಾಗೂ 8 ಸೋಲಿನೊಂದಿಗೆ ಕೇವಲ 8 ಅಂಕಗಳನ್ನು ತನ್ನ ಖಾತೆಯಲ್ಲಿ ಇಟ್ಟುಕೊಂಡಿದೆ. ಮುಂಬೈ ಉಳಿದಿರುವ ಇನ್ನೇರಡು ಪಂದ್ಯಗಳನ್ನು ಗೆದ್ದರೂ ಅದರ ಬಳಿ ಕೇವಲ 12 ಅಂಕಗಳು ಮಾತ್ರ ಇರಲಿವೆ.

3 / 8
ಸಿಎಸ್​ಕೆ, ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ತಂಡಗಳು ಈಗಾಗಲೇ 12 ಅಂಕ ಕಲೆಹಾಕಿ ಪ್ಲೇಆಫ್‌ ರೇಸ್​ನಲ್ಲಿ ಪೈಪೋಟಿಯಲ್ಲಿವೆ. ಚೆನ್ನೈ ತಂಡಕ್ಕೆ ಇನ್ನು 3 ಪಂದ್ಯ ಬಾಕಿ ಇದ್ದು, ಡೆಲ್ಲಿ ಹಾಗೂ ಲಕ್ನೋಗೆ ಇನ್ನು 2 ಪಂದ್ಯಗಳು ಬಾಕಿ ಇವೆ. ಇದರಲ್ಲಿ ಈ ಮೂರು ತಂಡಗಳು ಒಂದೇ ಒಂದು ಗೆಲುವು ದಾಖಲಿಸಿದರೆ 14 ಅಂಕ ಸಂಪಾದಿಸಿದ್ದಂತ್ತಾಗುತ್ತದೆ.

ಸಿಎಸ್​ಕೆ, ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ತಂಡಗಳು ಈಗಾಗಲೇ 12 ಅಂಕ ಕಲೆಹಾಕಿ ಪ್ಲೇಆಫ್‌ ರೇಸ್​ನಲ್ಲಿ ಪೈಪೋಟಿಯಲ್ಲಿವೆ. ಚೆನ್ನೈ ತಂಡಕ್ಕೆ ಇನ್ನು 3 ಪಂದ್ಯ ಬಾಕಿ ಇದ್ದು, ಡೆಲ್ಲಿ ಹಾಗೂ ಲಕ್ನೋಗೆ ಇನ್ನು 2 ಪಂದ್ಯಗಳು ಬಾಕಿ ಇವೆ. ಇದರಲ್ಲಿ ಈ ಮೂರು ತಂಡಗಳು ಒಂದೇ ಒಂದು ಗೆಲುವು ದಾಖಲಿಸಿದರೆ 14 ಅಂಕ ಸಂಪಾದಿಸಿದ್ದಂತ್ತಾಗುತ್ತದೆ.

4 / 8
ಇನ್ನು ಪಾಯಿಂಟ್​ ಪಟ್ಟಿಯಲ್ಲಿ ಟಾಪ್ ಮೂರರಲ್ಲಿರುವ ತಂಡಗಳ ಬಗ್ಗೆ ಹೇಳುವುದಾದರೆ.. ಕೆಕೆಆರ್ ಹಾಗೂ ರಾಜಸ್ಥಾನ್ ತಲಾ 11 ಪಂದ್ಯಗಳಿಂದ 16 ಅಂಕ ಸಂಪಾದಿಸಿ ಪ್ಲೇಆಫ್‌ಗೆ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿವೆ. ಇದೀಗ ಮೂರನೇ ಸ್ಥಾನದಲ್ಲಿರುವ ಹೈದರಾಬಾದ್‌ ಕೂಡ ಇನ್ನೊಂದು ಪಂದ್ಯ ಗೆದ್ದರೆ ಪ್ಲೇಆಫ್‌ಗೇರುವುದು ಖಚಿತವಾಗಲಿದೆ.

ಇನ್ನು ಪಾಯಿಂಟ್​ ಪಟ್ಟಿಯಲ್ಲಿ ಟಾಪ್ ಮೂರರಲ್ಲಿರುವ ತಂಡಗಳ ಬಗ್ಗೆ ಹೇಳುವುದಾದರೆ.. ಕೆಕೆಆರ್ ಹಾಗೂ ರಾಜಸ್ಥಾನ್ ತಲಾ 11 ಪಂದ್ಯಗಳಿಂದ 16 ಅಂಕ ಸಂಪಾದಿಸಿ ಪ್ಲೇಆಫ್‌ಗೆ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿವೆ. ಇದೀಗ ಮೂರನೇ ಸ್ಥಾನದಲ್ಲಿರುವ ಹೈದರಾಬಾದ್‌ ಕೂಡ ಇನ್ನೊಂದು ಪಂದ್ಯ ಗೆದ್ದರೆ ಪ್ಲೇಆಫ್‌ಗೇರುವುದು ಖಚಿತವಾಗಲಿದೆ.

5 / 8
ಹೀಗಾಗಿ ನಾಲ್ಕನೇ ಸ್ಥಾನಕ್ಕಾಗಿ ಮುಂಬೈ ಹೊರತುಪಡಿಸಿ ಉಳಿದ 6 ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಇದರಲ್ಲಿ ಆರ್​ಸಿಬಿ, ಪಂಜಾಬ್, ಗುಜರಾತ್ ಪ್ಲೇಆಫ್‌ ಹಾದಿ ಸುಗಮವಲ್ಲದಿದ್ದರೂ ಈ ಮೂರು ತಂಡಗಳು ಪ್ಲೇಆಫ್‌ ರೇಸ್​ನಿಂದ ಇನ್ನು ಅಧಿಕೃತವಾಗಿ ಹೊರಬಿದ್ದಿಲ್ಲ.

ಹೀಗಾಗಿ ನಾಲ್ಕನೇ ಸ್ಥಾನಕ್ಕಾಗಿ ಮುಂಬೈ ಹೊರತುಪಡಿಸಿ ಉಳಿದ 6 ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಇದರಲ್ಲಿ ಆರ್​ಸಿಬಿ, ಪಂಜಾಬ್, ಗುಜರಾತ್ ಪ್ಲೇಆಫ್‌ ಹಾದಿ ಸುಗಮವಲ್ಲದಿದ್ದರೂ ಈ ಮೂರು ತಂಡಗಳು ಪ್ಲೇಆಫ್‌ ರೇಸ್​ನಿಂದ ಇನ್ನು ಅಧಿಕೃತವಾಗಿ ಹೊರಬಿದ್ದಿಲ್ಲ.

6 / 8
ಇನ್ನು ನಾವು ಆರ್​ಸಿಬಿ ಪ್ಲೇಆಫ್‌ ಹಾದಿಯ ಬಗ್ಗೆ ಹೇಳುವುದಾದರೆ.. ಫಾಫ್ ಪಡೆ ಉಳಿದ ಮೂರು ಪಂದ್ಯಗಳನ್ನು ಗೆದ್ದರೆ 14 ಅಂಕ ಸಂಪಾದಿಸಲಿದೆ. ಆದರೆ ಈಗಾಗಲೇ 12 ಅಂಕ ಸಂಪಾದಿಸಿರುವ ಚೆನ್ನೈ, ಡೆಲ್ಲಿ, ಲಕ್ನೋ ಉಳಿದ ಪಂದ್ಯಗಳಲ್ಲಿ ಸೋಲಬೇಕು.

ಇನ್ನು ನಾವು ಆರ್​ಸಿಬಿ ಪ್ಲೇಆಫ್‌ ಹಾದಿಯ ಬಗ್ಗೆ ಹೇಳುವುದಾದರೆ.. ಫಾಫ್ ಪಡೆ ಉಳಿದ ಮೂರು ಪಂದ್ಯಗಳನ್ನು ಗೆದ್ದರೆ 14 ಅಂಕ ಸಂಪಾದಿಸಲಿದೆ. ಆದರೆ ಈಗಾಗಲೇ 12 ಅಂಕ ಸಂಪಾದಿಸಿರುವ ಚೆನ್ನೈ, ಡೆಲ್ಲಿ, ಲಕ್ನೋ ಉಳಿದ ಪಂದ್ಯಗಳಲ್ಲಿ ಸೋಲಬೇಕು.

7 / 8
ಈ ಮೂರು ತಂಡಗಳು ತಮ್ಮ ಉಳಿದ ಪಂದ್ಯಗಳಲ್ಲಿ ಒಂದನ್ನು ಗೆದ್ದರೂ ಆಗ 14 ಅಂಕ ಈ ಮೂರು ತಂಡಗಳ ಬಳಿ ಇರುತ್ತದೆ. ಆರ್​ಸಿಬಿ ಕೂಡ ಉಳಿದ ಪಂದ್ಯಗಳನ್ನು ಗೆದ್ದರೆ ಅದರ ಬಳಿಯೂ 14 ಅಂಕ ಇರುತ್ತದೆ. ಈ ವೇಳೆ ನೆಟ್​ ರನ್​ರೇಟ್​ ಪ್ರಮುಖ ಪಾತ್ರವಹಿಸುತ್ತದೆ. ಹೀಗಾಗಿ ಆರ್​ಸಿಬಿ ಗೆಲ್ಲುವುದಲ್ಲದೆ ಭಾರಿ ಅಂತರದಿಂದ ಗೆಲ್ಲಬೇಕಾದ ಅಗತ್ಯತೆ ಇದೆ.

ಈ ಮೂರು ತಂಡಗಳು ತಮ್ಮ ಉಳಿದ ಪಂದ್ಯಗಳಲ್ಲಿ ಒಂದನ್ನು ಗೆದ್ದರೂ ಆಗ 14 ಅಂಕ ಈ ಮೂರು ತಂಡಗಳ ಬಳಿ ಇರುತ್ತದೆ. ಆರ್​ಸಿಬಿ ಕೂಡ ಉಳಿದ ಪಂದ್ಯಗಳನ್ನು ಗೆದ್ದರೆ ಅದರ ಬಳಿಯೂ 14 ಅಂಕ ಇರುತ್ತದೆ. ಈ ವೇಳೆ ನೆಟ್​ ರನ್​ರೇಟ್​ ಪ್ರಮುಖ ಪಾತ್ರವಹಿಸುತ್ತದೆ. ಹೀಗಾಗಿ ಆರ್​ಸಿಬಿ ಗೆಲ್ಲುವುದಲ್ಲದೆ ಭಾರಿ ಅಂತರದಿಂದ ಗೆಲ್ಲಬೇಕಾದ ಅಗತ್ಯತೆ ಇದೆ.

8 / 8
Follow us
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ