Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಗುಜರಾತ್​ಗೆ ಕನ್ನಡಿಗ, ರಾಜಸ್ಥಾನಕ್ಕೆ ರಣಜಿ ಹೀರೋ ಬದಲಿಯಾಗಿ ಎಂಟ್ರಿ

IPL 2024: 17ನೇ ಆವೃತ್ತಿಯ ಐಪಿಎಲ್ ಇಂದಿನಿಂದ ಆರಂಭವಾಗುತ್ತಿದ್ದು, ಅದಕ್ಕೂ ಮುನ್ನ ರಾಜಸ್ಥಾನ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ತಲಾ ಒಬ್ಬೊಬ್ಬರು ಬದಲಿ ಆಟಗಾರರನ್ನು ತಮ್ಮ ತಂಡಕ್ಕೆ ಸೇರಿಸಿಕೊಂಡಿವೆ. ಅದರಂತೆ ಕನ್ನಡಿಗ ಬಿಆರ್ ಶರತ್ ಗುಜರಾತ್ ತಂಡಕ್ಕೆ ಹಾಗೂ ರಣಜಿ ಹೀರೋ ತನುಷ್ ಕೋಟ್ಯಾನ್ ರಾಜಸ್ಥಾನ ತಂಡಕ್ಕೆ ಸೇರಿಕೊಂಡಿದ್ದಾರೆ.

ಪೃಥ್ವಿಶಂಕರ
|

Updated on: Mar 22, 2024 | 4:28 PM

ಕೆಲವು ದಿನಗಳ ಹಿಂದೆ ಬೈಕ್ ಅಪಘಾತಕ್ಕೀಡಾಗಿದ್ದ ಗುಜರಾತ್ ಟೈಟಾನ್ಸ್ ತಂಡದ ಯುವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಾಬಿನ್ ಮಿಂಜ್ ಲೀಗ್​ನಿಂದಲೇ ಹೊರಬಿದ್ದಿದ್ದರು. ಇದೀಗ ಅವರ ಬದಲಿ ಆಟಗಾರನನ್ನು ಫ್ರಾಂಚೈಸಿ  ಹೆಸರಿಸಿದೆ.

ಕೆಲವು ದಿನಗಳ ಹಿಂದೆ ಬೈಕ್ ಅಪಘಾತಕ್ಕೀಡಾಗಿದ್ದ ಗುಜರಾತ್ ಟೈಟಾನ್ಸ್ ತಂಡದ ಯುವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಾಬಿನ್ ಮಿಂಜ್ ಲೀಗ್​ನಿಂದಲೇ ಹೊರಬಿದ್ದಿದ್ದರು. ಇದೀಗ ಅವರ ಬದಲಿ ಆಟಗಾರನನ್ನು ಫ್ರಾಂಚೈಸಿ ಹೆಸರಿಸಿದೆ.

1 / 7
ಐಪಿಎಲ್ 2024 ರ ಹರಾಜಿನಲ್ಲಿ ಗುಜರಾತ್ ಟೈಟಾನ್ಸ್ ರಾಬಿನ್ ಮಿಂಜ್ ಅವರನ್ನು 3.60 ಕೋಟಿ ರೂಪಾಯಿಗೆ ಖರೀದಿಸಿತ್ತು. ಆದರೀಗ ಅವರ ಸ್ಥಾನವನ್ನು ತುಂಬಲು ಫ್ರಾಂಚೈಸಿ ಕನ್ನಡಿಗ ಬಿಆರ್ ಶರತ್ ಅವರನ್ನು ಮೂಲ ಬೆಲೆ 20 ಲಕ್ಷಕ್ಕೆ ತಂಡಕ್ಕೆ ಸೇರಿಸಿಕೊಂಡಿದೆ.

ಐಪಿಎಲ್ 2024 ರ ಹರಾಜಿನಲ್ಲಿ ಗುಜರಾತ್ ಟೈಟಾನ್ಸ್ ರಾಬಿನ್ ಮಿಂಜ್ ಅವರನ್ನು 3.60 ಕೋಟಿ ರೂಪಾಯಿಗೆ ಖರೀದಿಸಿತ್ತು. ಆದರೀಗ ಅವರ ಸ್ಥಾನವನ್ನು ತುಂಬಲು ಫ್ರಾಂಚೈಸಿ ಕನ್ನಡಿಗ ಬಿಆರ್ ಶರತ್ ಅವರನ್ನು ಮೂಲ ಬೆಲೆ 20 ಲಕ್ಷಕ್ಕೆ ತಂಡಕ್ಕೆ ಸೇರಿಸಿಕೊಂಡಿದೆ.

2 / 7
ಬಿಆರ್ ಶರತ್ ದೇಶೀಯ ಕ್ರಿಕೆಟ್‌ನಲ್ಲಿ ಕರ್ನಾಟಕದ ಪರ ಆಡುತ್ತಿದ್ದಾರೆ. ಅವರು ಇಲ್ಲಿಯವರೆಗೆ 20 ಪ್ರಥಮ ದರ್ಜೆ ಪಂದ್ಯಗಳಲ್ಲಿ 1 ಶತಕ ಮತ್ತು ಮೂರು ಅರ್ಧ ಶತಕಗಳನ್ನು ಒಳಗೊಂಡಂತೆ 616 ರನ್ ಗಳಿಸಿದ್ದಾರೆ. ಹಾಗೆಯೇ 43 ಲಿಸ್ಟ್-ಎ ಪಂದ್ಯಗಳಲ್ಲಿ 732 ರನ್ 28 ಟಿ20 ಪಂದ್ಯಗಳಲ್ಲಿ 328 ರನ್ ಗಳಿಸಿದ್ದಾರೆ.

ಬಿಆರ್ ಶರತ್ ದೇಶೀಯ ಕ್ರಿಕೆಟ್‌ನಲ್ಲಿ ಕರ್ನಾಟಕದ ಪರ ಆಡುತ್ತಿದ್ದಾರೆ. ಅವರು ಇಲ್ಲಿಯವರೆಗೆ 20 ಪ್ರಥಮ ದರ್ಜೆ ಪಂದ್ಯಗಳಲ್ಲಿ 1 ಶತಕ ಮತ್ತು ಮೂರು ಅರ್ಧ ಶತಕಗಳನ್ನು ಒಳಗೊಂಡಂತೆ 616 ರನ್ ಗಳಿಸಿದ್ದಾರೆ. ಹಾಗೆಯೇ 43 ಲಿಸ್ಟ್-ಎ ಪಂದ್ಯಗಳಲ್ಲಿ 732 ರನ್ 28 ಟಿ20 ಪಂದ್ಯಗಳಲ್ಲಿ 328 ರನ್ ಗಳಿಸಿದ್ದಾರೆ.

3 / 7
ಗುಜರಾತ್ ಜೊತೆಗೆ ರಾಜಸ್ಥಾನ್ ತಂಡಕ್ಕೂ ಬದಲಿ ಆಟಗಾರನ ಆಗಮನವಾಗಿದೆ. ನಿನ್ನೆಯಷ್ಟೇ ಆಸ್ಟ್ರೇಲಿಯಾದ ಲೆಗ್ ಸ್ಪಿನ್ನರ್ ಆಡಮ್ ಝಂಪಾ ವೈಯಕ್ತಿಕ ಕಾರಣಗ ನೀಡಿ ಲೀಗ್​ನಿಂದ ಹಿಂದೆ ಸರಿದಿದ್ದರು. ಇದೀಗ ಅವರ ಸ್ಥಾನಕ್ಕೆ ಬದಲಿ ಆಟಗಾರನಾಗಿ ತನುಷ್ ಕೋಟ್ಯಾನ್ ರಾಜಸ್ಥಾನ್ ತಂಡವನ್ನು ಸೇರಿಕೊಂಡಿದ್ದಾರೆ.

ಗುಜರಾತ್ ಜೊತೆಗೆ ರಾಜಸ್ಥಾನ್ ತಂಡಕ್ಕೂ ಬದಲಿ ಆಟಗಾರನ ಆಗಮನವಾಗಿದೆ. ನಿನ್ನೆಯಷ್ಟೇ ಆಸ್ಟ್ರೇಲಿಯಾದ ಲೆಗ್ ಸ್ಪಿನ್ನರ್ ಆಡಮ್ ಝಂಪಾ ವೈಯಕ್ತಿಕ ಕಾರಣಗ ನೀಡಿ ಲೀಗ್​ನಿಂದ ಹಿಂದೆ ಸರಿದಿದ್ದರು. ಇದೀಗ ಅವರ ಸ್ಥಾನಕ್ಕೆ ಬದಲಿ ಆಟಗಾರನಾಗಿ ತನುಷ್ ಕೋಟ್ಯಾನ್ ರಾಜಸ್ಥಾನ್ ತಂಡವನ್ನು ಸೇರಿಕೊಂಡಿದ್ದಾರೆ.

4 / 7
ರಾಜಸ್ಥಾನ್ ತಂಡ ಸೇರಿಕೊಂಡಿರವ ತನುಷ್ ಕೋಟ್ಯಾನ್ ಪ್ರಸಕ್ತ ರಣಜಿಯಲ್ಲಿ ಮುಂಬೈ ಪರ ಅದ್ಭುತ ಪ್ರದರ್ಶನ ನೀಡಿದ್ದರು. ರಣಜಿಯಲ್ಲಿ ಆಡಿದ 14 ಇನ್ನಿಂಗ್ಸ್‌ಗಳಲ್ಲಿ 41.83 ಸರಾಸರಿಯಲ್ಲಿ ಒಂದು ಶತಕ ಮತ್ತು 5 ಅರ್ಧ ಶತಕ ಒಳಗೊಂಡಂತೆ 502 ರನ್ ಬಾರಿಸಿದ್ದರು. ಹಾಗೆಯೇ ಬೌಲಿಂಗ್​ನಲ್ಲೂ ಮಿಂಚಿದ್ದ ಕೋಟ್ಯಾನ್ 18 ಇನ್ನಿಂಗ್ಸ್‌ಗಳಲ್ಲಿ 29 ವಿಕೆಟ್‌ಗಳನ್ನು ಪಡೆದಿದ್ದರು.

ರಾಜಸ್ಥಾನ್ ತಂಡ ಸೇರಿಕೊಂಡಿರವ ತನುಷ್ ಕೋಟ್ಯಾನ್ ಪ್ರಸಕ್ತ ರಣಜಿಯಲ್ಲಿ ಮುಂಬೈ ಪರ ಅದ್ಭುತ ಪ್ರದರ್ಶನ ನೀಡಿದ್ದರು. ರಣಜಿಯಲ್ಲಿ ಆಡಿದ 14 ಇನ್ನಿಂಗ್ಸ್‌ಗಳಲ್ಲಿ 41.83 ಸರಾಸರಿಯಲ್ಲಿ ಒಂದು ಶತಕ ಮತ್ತು 5 ಅರ್ಧ ಶತಕ ಒಳಗೊಂಡಂತೆ 502 ರನ್ ಬಾರಿಸಿದ್ದರು. ಹಾಗೆಯೇ ಬೌಲಿಂಗ್​ನಲ್ಲೂ ಮಿಂಚಿದ್ದ ಕೋಟ್ಯಾನ್ 18 ಇನ್ನಿಂಗ್ಸ್‌ಗಳಲ್ಲಿ 29 ವಿಕೆಟ್‌ಗಳನ್ನು ಪಡೆದಿದ್ದರು.

5 / 7
ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್, ಧ್ರುವ್ ಜುರೆಲ್, ಕುನಾಲ್ ರಾಥೋರ್, ಡೊನೊವನ್ ಫೆರೇರಾ, ಟಾಮ್ ಕೊಹ್ಲರ್-ಕ್ಯಾಡ್ಮೋರ್, ಶಿಮ್ರಾನ್ ಹೆಟ್ಮೆಯರ್, ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್, ರೋವ್ಮನ್ ಪೊವೆಲ್, ಶುಭಂ ದುಬೆ, ರವಿಚಂದ್ರನ್ ಅಶ್ವಿನ್, ಅಬಿದ್ ಮುಷ್ತಾಕ್, ಟ್ರೆಂಟ್ ಬೌಲ್ಟ್, ಸಂಜ್ವೇಂದ್ರ ಚಾಹಲ್, ನವದೀಪ್ ಸೈನಿ, ಕುಲದೀಪ್ ಸೇನ್, ತನುಷ್ ಕೋಟ್ಯಾನ್, ನಾಂದ್ರೆ ಬರ್ಗರ್, ಅವೇಶ್ ಖಾನ್.

ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್, ಧ್ರುವ್ ಜುರೆಲ್, ಕುನಾಲ್ ರಾಥೋರ್, ಡೊನೊವನ್ ಫೆರೇರಾ, ಟಾಮ್ ಕೊಹ್ಲರ್-ಕ್ಯಾಡ್ಮೋರ್, ಶಿಮ್ರಾನ್ ಹೆಟ್ಮೆಯರ್, ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್, ರೋವ್ಮನ್ ಪೊವೆಲ್, ಶುಭಂ ದುಬೆ, ರವಿಚಂದ್ರನ್ ಅಶ್ವಿನ್, ಅಬಿದ್ ಮುಷ್ತಾಕ್, ಟ್ರೆಂಟ್ ಬೌಲ್ಟ್, ಸಂಜ್ವೇಂದ್ರ ಚಾಹಲ್, ನವದೀಪ್ ಸೈನಿ, ಕುಲದೀಪ್ ಸೇನ್, ತನುಷ್ ಕೋಟ್ಯಾನ್, ನಾಂದ್ರೆ ಬರ್ಗರ್, ಅವೇಶ್ ಖಾನ್.

6 / 7
ಗುಜರಾತ್ ಟೈಟಾನ್ಸ್: ಶುಭ್​ಮನ್ ಗಿಲ್ (ನಾಯಕ), ಡೇವಿಡ್ ಮಿಲ್ಲರ್, ಮ್ಯಾಥ್ಯೂ ವೇಡ್, ವೃದ್ಧಿಮಾನ್ ಸಹಾ, ಕೇನ್ ವಿಲಿಯಮ್ಸನ್, ಅಭಿನವ್ ಮನೋಹರ್, ಬಿ ಸಾಯಿ ಸುದರ್ಶನ್, ದರ್ಶನ್ ನಲ್ಕಂಡೆ, ವಿಜಯ್ ಶಂಕರ್, ಜಯಂತ್ ಯಾದವ್, ರಾಹುಲ್ ತೆವಾಟಿಯಾ, ನೂರ್ ಅಹಮದ್, ಸಾಯಿ ಕಿಶೋರ್, ರಶೀದ್ ಖಾನ್, ಜೋಸ್ಹು ಲಿಟಲ್, ಮೋಹಿತ್ ಶರ್ಮಾ, ಅಜ್ಮತುಲ್ಲಾ ಒಮರ್ಜಾಯ್, ಉಮೇಶ್ ಯಾದವ್, ಶಾರುಖ್ ಖಾನ್, ಸುಶಾಂತ್ ಮಿಶ್ರಾ, ಕಾರ್ತಿಕ್ ತ್ಯಾಗಿ, ಮಾನವ್ ಸುತಾರ್, ಸ್ಪೆನ್ಸರ್ ಜಾನ್ಸನ್, ಸಂದೀಪ್ ವಾರಿಯರ್, ಬಿಆರ್ ಶರತ್.

ಗುಜರಾತ್ ಟೈಟಾನ್ಸ್: ಶುಭ್​ಮನ್ ಗಿಲ್ (ನಾಯಕ), ಡೇವಿಡ್ ಮಿಲ್ಲರ್, ಮ್ಯಾಥ್ಯೂ ವೇಡ್, ವೃದ್ಧಿಮಾನ್ ಸಹಾ, ಕೇನ್ ವಿಲಿಯಮ್ಸನ್, ಅಭಿನವ್ ಮನೋಹರ್, ಬಿ ಸಾಯಿ ಸುದರ್ಶನ್, ದರ್ಶನ್ ನಲ್ಕಂಡೆ, ವಿಜಯ್ ಶಂಕರ್, ಜಯಂತ್ ಯಾದವ್, ರಾಹುಲ್ ತೆವಾಟಿಯಾ, ನೂರ್ ಅಹಮದ್, ಸಾಯಿ ಕಿಶೋರ್, ರಶೀದ್ ಖಾನ್, ಜೋಸ್ಹು ಲಿಟಲ್, ಮೋಹಿತ್ ಶರ್ಮಾ, ಅಜ್ಮತುಲ್ಲಾ ಒಮರ್ಜಾಯ್, ಉಮೇಶ್ ಯಾದವ್, ಶಾರುಖ್ ಖಾನ್, ಸುಶಾಂತ್ ಮಿಶ್ರಾ, ಕಾರ್ತಿಕ್ ತ್ಯಾಗಿ, ಮಾನವ್ ಸುತಾರ್, ಸ್ಪೆನ್ಸರ್ ಜಾನ್ಸನ್, ಸಂದೀಪ್ ವಾರಿಯರ್, ಬಿಆರ್ ಶರತ್.

7 / 7
Follow us
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್