AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಗುಜರಾತ್ ವಿರುದ್ಧ ಮಾಡಿದ ತಪ್ಪಿಗೆ ಭಾರಿ ದಂಡ ತೆತ್ತ ಸಂಜು ಸ್ಯಾಮ್ಸನ್..!

IPL 2024: ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ನಾಯಕ ಸಂಜು ಸ್ಯಾಮ್ಸನ್‌ ಮಾಡಿದ ತಪ್ಪಿಗೆ ಬಿಸಿಸಿಐ ಕಠಿಣ ಕ್ರಮ ಕೈಗೊಂಡಿದೆ. ಅದರಂತೆ ಸಂಜು ಪಂದ್ಯ ಶುಲ್ಕದಲ್ಲಿ 12 ಲಕ್ಷ ರೂಗಳನ್ನು ದಂಡವಾಗಿ ಪಾವತಿಸಬೇಕಿದೆ.

ಪೃಥ್ವಿಶಂಕರ
|

Updated on: Apr 11, 2024 | 4:06 PM

Share
ಐಪಿಎಲ್ 2024ರಲ್ಲಿ ನಡೆದ 22ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್‌ ತಂಡವನ್ನು ಮೂರು ವಿಕೆಟ್‌ಗಳಿಂದ ಮಣಿಸಿದ ಗುಜರಾತ್ ಟೈಟಾನ್ಸ್ ಲೀಗ್​ನಲ್ಲಿ ಮೂರನೇ ಜಯ ಸಾಧಿಸಿದೆ. ಇತ್ತ ಲೀಗ್​ನಲ್ಲಿ ಅಜೇಯರಾಗಿ ಉಳಿದಿದ್ದ ರಾಜಸ್ಥಾನ್ ರಾಯಲ್ಸ್ ಕೂಡ ತನ್ನ ಮೊದಲ ಸೋಲು ಎದುರಿಸಿದೆ.

ಐಪಿಎಲ್ 2024ರಲ್ಲಿ ನಡೆದ 22ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್‌ ತಂಡವನ್ನು ಮೂರು ವಿಕೆಟ್‌ಗಳಿಂದ ಮಣಿಸಿದ ಗುಜರಾತ್ ಟೈಟಾನ್ಸ್ ಲೀಗ್​ನಲ್ಲಿ ಮೂರನೇ ಜಯ ಸಾಧಿಸಿದೆ. ಇತ್ತ ಲೀಗ್​ನಲ್ಲಿ ಅಜೇಯರಾಗಿ ಉಳಿದಿದ್ದ ರಾಜಸ್ಥಾನ್ ರಾಯಲ್ಸ್ ಕೂಡ ತನ್ನ ಮೊದಲ ಸೋಲು ಎದುರಿಸಿದೆ.

1 / 6
ರಾಜಸ್ಥಾನ್ ನೀಡಿದ196 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಟೈಟಾನ್ಸ್ ಕೊನೆಯ ಐದು ಓವರ್‌ಗಳಲ್ಲಿ ಅದ್ಭುತ ಆಟ ಪ್ರದರ್ಶಿಸಿ 30 ಎಸೆತಗಳಲ್ಲಿ 73 ರನ್ ಕಲೆ ಹಾಕಿ ಗೆಲುವಿನ ದಡ ಸೇರಿತು. 20ನೇ ಓವರ್​ನ ಕೊನೆಯ ಎಸೆತದಲ್ಲಿ ರಶೀದ್ ಖಾನ್ ಬೌಂಡರಿ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ರಾಜಸ್ಥಾನ್ ನೀಡಿದ196 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಟೈಟಾನ್ಸ್ ಕೊನೆಯ ಐದು ಓವರ್‌ಗಳಲ್ಲಿ ಅದ್ಭುತ ಆಟ ಪ್ರದರ್ಶಿಸಿ 30 ಎಸೆತಗಳಲ್ಲಿ 73 ರನ್ ಕಲೆ ಹಾಕಿ ಗೆಲುವಿನ ದಡ ಸೇರಿತು. 20ನೇ ಓವರ್​ನ ಕೊನೆಯ ಎಸೆತದಲ್ಲಿ ರಶೀದ್ ಖಾನ್ ಬೌಂಡರಿ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

2 / 6
ಸೋಲಿನ ಹೊರತಾಗಿಯೂ ರಾಯಲ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದರೆ, ಪಂದ್ಯದಲ್ಲಿ ನಾಯಕ ಸಂಜು ಸ್ಯಾಮ್ಸನ್‌ ಮಾಡಿದ ತಪ್ಪಿಗೆ ಬಿಸಿಸಿಐ ಕಠಿಣ ಕ್ರಮ ಕೈಗೊಂಡಿದೆ. ಅದರಂತೆ ಸಂಜು ಪಂದ್ಯ ಶುಲ್ಕದಲ್ಲಿ 12 ಲಕ್ಷ ರೂಗಳನ್ನು ದಂಡವಾಗಿ ಪಾವತಿಸಬೇಕಿದೆ.

ಸೋಲಿನ ಹೊರತಾಗಿಯೂ ರಾಯಲ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದರೆ, ಪಂದ್ಯದಲ್ಲಿ ನಾಯಕ ಸಂಜು ಸ್ಯಾಮ್ಸನ್‌ ಮಾಡಿದ ತಪ್ಪಿಗೆ ಬಿಸಿಸಿಐ ಕಠಿಣ ಕ್ರಮ ಕೈಗೊಂಡಿದೆ. ಅದರಂತೆ ಸಂಜು ಪಂದ್ಯ ಶುಲ್ಕದಲ್ಲಿ 12 ಲಕ್ಷ ರೂಗಳನ್ನು ದಂಡವಾಗಿ ಪಾವತಿಸಬೇಕಿದೆ.

3 / 6
ವಾಸ್ತವವಾಗಿ ಗುಜರಾತ್ ಟೈಟಾನ್ಸ್ ವಿರುದ್ಧ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡ ಪರಿಣಾಮವಾಗಿ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್​ಗೆ ದಂಡ ವಿಧಿಸಲಾಗಿದೆ. ಈ ಸೀಸನ್​ನಲ್ಲಿ ಸಂಜು ಮಾಡಿದ ಮೊದಲ ಅಪರಾಧವಾಗಿದೆ. ಆದ್ದರಿಂದ ಸ್ಯಾಮ್ಸನ್‌ಗೆ ರೂ 12 ಲಕ್ಷ ದಂಡ ವಿಧಿಸಲಾಗಿದೆ.

ವಾಸ್ತವವಾಗಿ ಗುಜರಾತ್ ಟೈಟಾನ್ಸ್ ವಿರುದ್ಧ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡ ಪರಿಣಾಮವಾಗಿ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್​ಗೆ ದಂಡ ವಿಧಿಸಲಾಗಿದೆ. ಈ ಸೀಸನ್​ನಲ್ಲಿ ಸಂಜು ಮಾಡಿದ ಮೊದಲ ಅಪರಾಧವಾಗಿದೆ. ಆದ್ದರಿಂದ ಸ್ಯಾಮ್ಸನ್‌ಗೆ ರೂ 12 ಲಕ್ಷ ದಂಡ ವಿಧಿಸಲಾಗಿದೆ.

4 / 6
ಇನ್ನು ಪಂದ್ಯದ ಬಗ್ಗೆ ಹೇಳುವುದಾದರೆ.. ಮಂದಗತಿಯ ಆರಂಭದ ಹೊರತಾಗಿಯೂ ಆರ್‌ಆರ್ ಅದ್ಭುತ ಪ್ರದರ್ಶನ ನೀಡಿದ್ದು ಗಮನಾರ್ಹ. ತಂಡದ ಪರ ನಾಯಕ ಸ್ಯಾಮ್ಸನ್ ಕೇವಲ 38 ಎಸೆತಗಳಲ್ಲಿ ಅಜೇಯ 68 ರನ್ ಗಳಿಸಿದರೆ ರಿಯಾನ್ ಪರಾಗ್ ಕೂಡ 48 ಎಸೆತಗಳಲ್ಲಿ 76 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡುವ ಮೂಲಕ ರಾಜಸ್ಥಾನ ರಾಯಲ್ಸ್ 3 ವಿಕೆಟ್‌ಗೆ 196 ರನ್ ಗಳಿಸಲು ನೆರವಾದರು.

ಇನ್ನು ಪಂದ್ಯದ ಬಗ್ಗೆ ಹೇಳುವುದಾದರೆ.. ಮಂದಗತಿಯ ಆರಂಭದ ಹೊರತಾಗಿಯೂ ಆರ್‌ಆರ್ ಅದ್ಭುತ ಪ್ರದರ್ಶನ ನೀಡಿದ್ದು ಗಮನಾರ್ಹ. ತಂಡದ ಪರ ನಾಯಕ ಸ್ಯಾಮ್ಸನ್ ಕೇವಲ 38 ಎಸೆತಗಳಲ್ಲಿ ಅಜೇಯ 68 ರನ್ ಗಳಿಸಿದರೆ ರಿಯಾನ್ ಪರಾಗ್ ಕೂಡ 48 ಎಸೆತಗಳಲ್ಲಿ 76 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡುವ ಮೂಲಕ ರಾಜಸ್ಥಾನ ರಾಯಲ್ಸ್ 3 ವಿಕೆಟ್‌ಗೆ 196 ರನ್ ಗಳಿಸಲು ನೆರವಾದರು.

5 / 6
ಗುರಿ ಬೆನ್ನಟ್ಟಿದ ಟೈಟಾನ್ಸ್ ಪರ ಶುಭ್‌ಮನ್ ಗಿಲ್ 44 ಎಸೆತಗಳಲ್ಲಿ 72 ರನ್ ಗಳಿಸಿದರೆ ರಾಹುಲ್ ತೆವಾಟಿಯಾ (11 ಎಸೆತಗಳಲ್ಲಿ 22) ಮತ್ತು ರಶೀದ್ ಖಾನ್ (11 ಎಸೆತಗಳಲ್ಲಿ 24*) ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಗುರಿ ಬೆನ್ನಟ್ಟಿದ ಟೈಟಾನ್ಸ್ ಪರ ಶುಭ್‌ಮನ್ ಗಿಲ್ 44 ಎಸೆತಗಳಲ್ಲಿ 72 ರನ್ ಗಳಿಸಿದರೆ ರಾಹುಲ್ ತೆವಾಟಿಯಾ (11 ಎಸೆತಗಳಲ್ಲಿ 22) ಮತ್ತು ರಶೀದ್ ಖಾನ್ (11 ಎಸೆತಗಳಲ್ಲಿ 24*) ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

6 / 6
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?