AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಪ್ಲೇಆಫ್ ಪ್ರವೇಶಿಸಲು RCB ತಂಡಕ್ಕಿದೆ ಉತ್ತಮ ಅವಕಾಶ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ (ಐಪಿಎಲ್ 2024) ಸೀಸನ್ 17 ರಲ್ಲಿ ಇದುವರೆಗೆ 10 ಪಂದ್ಯಗಳನ್ನಾಡಿರುವ ಆರ್​ಸಿಬಿ 3 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಸಿಎಸ್​ಕೆ ವಿರುದ್ಧದ ಸೋಲಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದ ಆರ್​ಸಿಬಿ ಆ ಬಳಿಕ ಪಂಜಾಬ್ ಕಿಂಗ್ಸ್, ಎಸ್​ಆರ್​ಹೆಚ್​ ಹಾಗೂ ಗುಜರಾತ್ ಟೈಟಾನ್ಸ್ ವಿರುದ್ಧ ಗೆಲುವಿನ ನಗೆ ಬೀರಿದೆ.

TV9 Web
| Edited By: |

Updated on: Apr 29, 2024 | 9:29 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ (IPL 2024) ಸೀಸನ್​ 17 ರಲ್ಲಿ ಸೋಲುಗಳಿಂದ ಕಂಗೆಟ್ಟಿದ್ದ ಆರ್​ಸಿಬಿ ತಂಡವು ಇದೀಗ ಬ್ಯಾಕ್ ಟು ಬ್ಯಾಕ್ ಗೆಲುವು ದಾಖಲಿಸಿದೆ. ಮೊದಲಾರ್ಧದ 7 ಪಂದ್ಯಗಳಲ್ಲಿ ಕೇವಲ 1 ಜಯ ಸಾಧಿಸಿದ್ದ ಆರ್​ಸಿಬಿ, ದ್ವಿತೀಯಾರ್ಧದಲ್ಲಿ 2 ಗೆಲುವು ಸಾಧಿಸಿದೆ. ಈ ಮೂಲಕ ಒಟ್ಟು 6 ಅಂಕಗಳನ್ನು ಕಲೆಹಾಕಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ (IPL 2024) ಸೀಸನ್​ 17 ರಲ್ಲಿ ಸೋಲುಗಳಿಂದ ಕಂಗೆಟ್ಟಿದ್ದ ಆರ್​ಸಿಬಿ ತಂಡವು ಇದೀಗ ಬ್ಯಾಕ್ ಟು ಬ್ಯಾಕ್ ಗೆಲುವು ದಾಖಲಿಸಿದೆ. ಮೊದಲಾರ್ಧದ 7 ಪಂದ್ಯಗಳಲ್ಲಿ ಕೇವಲ 1 ಜಯ ಸಾಧಿಸಿದ್ದ ಆರ್​ಸಿಬಿ, ದ್ವಿತೀಯಾರ್ಧದಲ್ಲಿ 2 ಗೆಲುವು ಸಾಧಿಸಿದೆ. ಈ ಮೂಲಕ ಒಟ್ಟು 6 ಅಂಕಗಳನ್ನು ಕಲೆಹಾಕಿದೆ.

1 / 6
ಈ 6 ಅಂಕಗಳೊಂದಿಗೆ ಆರ್​ಸಿಬಿ ತಂಡದ ಪ್ಲೇಆಫ್ ಆಸೆ ಕೂಡ ಜೀವಂತವಾಗಿದೆ. ಅಂದರೆ ಮುಂದಿನ 4 ಪಂದ್ಯಗಳಲ್ಲೂ ಭರ್ಜರಿ ಜಯ ಸಾಧಿಸಿದರೆ ಆರ್​ಸಿಬಿ ತಂಡಕ್ಕೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಸಿಗಲಿದೆ. ಆದರೆ ಅದಕ್ಕೂ ಮುನ್ನ ಇತರೆ ತಂಡಗಳ ಫಲಿತಾಂಶಗಳನ್ನು ಎದುರು ನೋಡಬೇಕಾಗುತ್ತದೆ.

ಈ 6 ಅಂಕಗಳೊಂದಿಗೆ ಆರ್​ಸಿಬಿ ತಂಡದ ಪ್ಲೇಆಫ್ ಆಸೆ ಕೂಡ ಜೀವಂತವಾಗಿದೆ. ಅಂದರೆ ಮುಂದಿನ 4 ಪಂದ್ಯಗಳಲ್ಲೂ ಭರ್ಜರಿ ಜಯ ಸಾಧಿಸಿದರೆ ಆರ್​ಸಿಬಿ ತಂಡಕ್ಕೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಸಿಗಲಿದೆ. ಆದರೆ ಅದಕ್ಕೂ ಮುನ್ನ ಇತರೆ ತಂಡಗಳ ಫಲಿತಾಂಶಗಳನ್ನು ಎದುರು ನೋಡಬೇಕಾಗುತ್ತದೆ.

2 / 6
ಪ್ರಸ್ತುತ ಅಂಕ ಪಟ್ಟಿಯಲ್ಲಿ ಪಂಜಾಬ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ 6 ಅಂಕಗಳನ್ನು ಹೊಂದಿದೆ. ಇನ್ನು ಗುಜರಾತ್ ಟೈಟಾನ್ಸ್ ತಂಡ 8 ಪಾಯಿಂಟ್ಸ್​ ಪಡೆದುಕೊಂಡಿದೆ. ಇನ್ನುಳಿದಂತೆ ಕೆಕೆಆರ್, ಸಿಎಸ್​ಕೆ, ಎಲ್​ಎಸ್​ಜಿ, ಎಸ್​ಆರ್​ಹೆಚ್, ಡೆಲ್ಲಿ ಕ್ಯಾಪಿಟಲ್ಸ್ ತಂಡ 10 ಅಂಕಗಳನ್ನು ಹೊಂದಿದೆ. ಅತ್ತ ರಾಜಸ್ಥಾನ್ ರಾಯಲ್ಸ್ 16 ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸುವುದನ್ನು ಬಹುತೇಕ ಖಚಿತಪಡಿಸಿಕೊಂಡಿದೆ.

ಪ್ರಸ್ತುತ ಅಂಕ ಪಟ್ಟಿಯಲ್ಲಿ ಪಂಜಾಬ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ 6 ಅಂಕಗಳನ್ನು ಹೊಂದಿದೆ. ಇನ್ನು ಗುಜರಾತ್ ಟೈಟಾನ್ಸ್ ತಂಡ 8 ಪಾಯಿಂಟ್ಸ್​ ಪಡೆದುಕೊಂಡಿದೆ. ಇನ್ನುಳಿದಂತೆ ಕೆಕೆಆರ್, ಸಿಎಸ್​ಕೆ, ಎಲ್​ಎಸ್​ಜಿ, ಎಸ್​ಆರ್​ಹೆಚ್, ಡೆಲ್ಲಿ ಕ್ಯಾಪಿಟಲ್ಸ್ ತಂಡ 10 ಅಂಕಗಳನ್ನು ಹೊಂದಿದೆ. ಅತ್ತ ರಾಜಸ್ಥಾನ್ ರಾಯಲ್ಸ್ 16 ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸುವುದನ್ನು ಬಹುತೇಕ ಖಚಿತಪಡಿಸಿಕೊಂಡಿದೆ.

3 / 6
ಅಂದರೆ ಇಲ್ಲಿ ಆರ್​ಆರ್​ ತಂಡದ ಗೆಲುವು ಮತ್ತು ಸೋಲು ಆರ್​ಸಿಬಿ ತಂಡವನ್ನು ಬಾಧಿಸುವುದಿಲ್ಲ. ಇದಾಗ್ಯೂ ರಾಜಸ್ಥಾನ್ ರಾಯಲ್ಸ್ 20 ಅಂಕಗಳನ್ನು ಪಡೆದರೆ ಆರ್​ಸಿಬಿಗೆ ಅನುಕೂಲವಾಗಲಿದೆ. ಹಾಗೆಯೇ ಎಸ್​ಆರ್​ಹೆಚ್ ಮುಂದಿನ ಪಂದ್ಯಗಳನ್ನು ಗೆದ್ದು 20 ಅಂಕಗಳನ್ನು ಪಡೆಯಬೇಕು. ಇನ್ನುಳಿದಂತೆ ಕೆಕೆಆರ್ 16 ಅಂಕಗಳನ್ನು ಪಡೆದರೆ ಆರ್​ಸಿಬಿ ತಂಡದ ಪ್ಲೇಆಫ್ ಹಾದಿ ಸುಗಮವಾಗಲಿದೆ.

ಅಂದರೆ ಇಲ್ಲಿ ಆರ್​ಆರ್​ ತಂಡದ ಗೆಲುವು ಮತ್ತು ಸೋಲು ಆರ್​ಸಿಬಿ ತಂಡವನ್ನು ಬಾಧಿಸುವುದಿಲ್ಲ. ಇದಾಗ್ಯೂ ರಾಜಸ್ಥಾನ್ ರಾಯಲ್ಸ್ 20 ಅಂಕಗಳನ್ನು ಪಡೆದರೆ ಆರ್​ಸಿಬಿಗೆ ಅನುಕೂಲವಾಗಲಿದೆ. ಹಾಗೆಯೇ ಎಸ್​ಆರ್​ಹೆಚ್ ಮುಂದಿನ ಪಂದ್ಯಗಳನ್ನು ಗೆದ್ದು 20 ಅಂಕಗಳನ್ನು ಪಡೆಯಬೇಕು. ಇನ್ನುಳಿದಂತೆ ಕೆಕೆಆರ್ 16 ಅಂಕಗಳನ್ನು ಪಡೆದರೆ ಆರ್​ಸಿಬಿ ತಂಡದ ಪ್ಲೇಆಫ್ ಹಾದಿ ಸುಗಮವಾಗಲಿದೆ.

4 / 6
ಆರ್​ಆರ್​, ಎಸ್​ಆರ್​ಹೆಚ್, ಕೆಕೆಆರ್ ಕ್ರಮವಾಗಿ 20, 20 ಮತ್ತು 16 ಅಂಕಗಳನ್ನು ಪಡೆಯುವುದರಿಂದ ಸಿಎಸ್​ಕೆ, ಎಲ್​ಎಸ್​ಜಿ, ಜಿಟಿ, ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ಅಂಕಗಳು 12 ರಲ್ಲೇ ಉಳಿಯಲಿದೆ. ಅಂದರೆ ಈ ತಂಡಗಳು ಆರಕ್ಕಿಂತ ಹೆಚ್ಚಿನ ಪಂದ್ಯಗಳನ್ನು ಗೆಲ್ಲಬಾರದು. ಒಂದು ವೇಳೆ 7 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ ನೆಟ್ ರನ್ ರೇಟ್ ಪರಿಗಣನೆಗೆ ಬರಲಿದೆ.

ಆರ್​ಆರ್​, ಎಸ್​ಆರ್​ಹೆಚ್, ಕೆಕೆಆರ್ ಕ್ರಮವಾಗಿ 20, 20 ಮತ್ತು 16 ಅಂಕಗಳನ್ನು ಪಡೆಯುವುದರಿಂದ ಸಿಎಸ್​ಕೆ, ಎಲ್​ಎಸ್​ಜಿ, ಜಿಟಿ, ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ಅಂಕಗಳು 12 ರಲ್ಲೇ ಉಳಿಯಲಿದೆ. ಅಂದರೆ ಈ ತಂಡಗಳು ಆರಕ್ಕಿಂತ ಹೆಚ್ಚಿನ ಪಂದ್ಯಗಳನ್ನು ಗೆಲ್ಲಬಾರದು. ಒಂದು ವೇಳೆ 7 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ ನೆಟ್ ರನ್ ರೇಟ್ ಪರಿಗಣನೆಗೆ ಬರಲಿದೆ.

5 / 6
ಇದೇ ವೇಳೆ ಆರ್​ಸಿಬಿ ತಂಡವು ಮುಂದಿನ ಎಲ್ಲಾ ಪಂದ್ಯಗಳಲ್ಲೂ ಭರ್ಜರಿ ಜಯ ಸಾಧಿಸಿ ಉತ್ತಮ ನೆಟ್ ರನ್​ ರೇಟ್​ನೊಂದಿಗೆ ಒಟ್ಟು 14 ಅಂಕಗಳನ್ನು ಸಂಪಾದಿಸಬಹುದು. ಈ ಮೂಲಕ ಇತರೆ ತಂಡಗಳನ್ನು ಹಿಂದಿಕ್ಕಿ ಪ್ಲೇಆಫ್ ಪ್ರವೇಶಿಸುವ ಅವಕಾಶ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ದೊರೆಯಲಿದೆ. ಅದರಂತೆ ಆರ್​ಸಿಬಿ ತಂಡ ಈ ಬಾರಿ ಪ್ಲೇಆಫ್ ಹಂತಕ್ಕೇರಲಿದೆಯಾ ಕಾದು ನೋಡಬೇಕಿದೆ.

ಇದೇ ವೇಳೆ ಆರ್​ಸಿಬಿ ತಂಡವು ಮುಂದಿನ ಎಲ್ಲಾ ಪಂದ್ಯಗಳಲ್ಲೂ ಭರ್ಜರಿ ಜಯ ಸಾಧಿಸಿ ಉತ್ತಮ ನೆಟ್ ರನ್​ ರೇಟ್​ನೊಂದಿಗೆ ಒಟ್ಟು 14 ಅಂಕಗಳನ್ನು ಸಂಪಾದಿಸಬಹುದು. ಈ ಮೂಲಕ ಇತರೆ ತಂಡಗಳನ್ನು ಹಿಂದಿಕ್ಕಿ ಪ್ಲೇಆಫ್ ಪ್ರವೇಶಿಸುವ ಅವಕಾಶ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ದೊರೆಯಲಿದೆ. ಅದರಂತೆ ಆರ್​ಸಿಬಿ ತಂಡ ಈ ಬಾರಿ ಪ್ಲೇಆಫ್ ಹಂತಕ್ಕೇರಲಿದೆಯಾ ಕಾದು ನೋಡಬೇಕಿದೆ.

6 / 6
Follow Us
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ
ನೂತನ ಸಚಿವರ ಪ್ರಮಾಣ ವಚನಕ್ಕೆ ಸಜ್ಜಾದ ಲೋಕಭವನ: ವಿಡಿಯೋ ನೋಡಿ
ನೂತನ ಸಚಿವರ ಪ್ರಮಾಣ ವಚನಕ್ಕೆ ಸಜ್ಜಾದ ಲೋಕಭವನ: ವಿಡಿಯೋ ನೋಡಿ