AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಪ್ಲೇಆಫ್ ಪ್ರವೇಶಿಸಲು RCB ತಂಡಕ್ಕಿದೆ ಉತ್ತಮ ಅವಕಾಶ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ (ಐಪಿಎಲ್ 2024) ಸೀಸನ್ 17 ರಲ್ಲಿ ಇದುವರೆಗೆ 10 ಪಂದ್ಯಗಳನ್ನಾಡಿರುವ ಆರ್​ಸಿಬಿ 3 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಸಿಎಸ್​ಕೆ ವಿರುದ್ಧದ ಸೋಲಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದ ಆರ್​ಸಿಬಿ ಆ ಬಳಿಕ ಪಂಜಾಬ್ ಕಿಂಗ್ಸ್, ಎಸ್​ಆರ್​ಹೆಚ್​ ಹಾಗೂ ಗುಜರಾತ್ ಟೈಟಾನ್ಸ್ ವಿರುದ್ಧ ಗೆಲುವಿನ ನಗೆ ಬೀರಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Apr 29, 2024 | 9:29 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ (IPL 2024) ಸೀಸನ್​ 17 ರಲ್ಲಿ ಸೋಲುಗಳಿಂದ ಕಂಗೆಟ್ಟಿದ್ದ ಆರ್​ಸಿಬಿ ತಂಡವು ಇದೀಗ ಬ್ಯಾಕ್ ಟು ಬ್ಯಾಕ್ ಗೆಲುವು ದಾಖಲಿಸಿದೆ. ಮೊದಲಾರ್ಧದ 7 ಪಂದ್ಯಗಳಲ್ಲಿ ಕೇವಲ 1 ಜಯ ಸಾಧಿಸಿದ್ದ ಆರ್​ಸಿಬಿ, ದ್ವಿತೀಯಾರ್ಧದಲ್ಲಿ 2 ಗೆಲುವು ಸಾಧಿಸಿದೆ. ಈ ಮೂಲಕ ಒಟ್ಟು 6 ಅಂಕಗಳನ್ನು ಕಲೆಹಾಕಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ (IPL 2024) ಸೀಸನ್​ 17 ರಲ್ಲಿ ಸೋಲುಗಳಿಂದ ಕಂಗೆಟ್ಟಿದ್ದ ಆರ್​ಸಿಬಿ ತಂಡವು ಇದೀಗ ಬ್ಯಾಕ್ ಟು ಬ್ಯಾಕ್ ಗೆಲುವು ದಾಖಲಿಸಿದೆ. ಮೊದಲಾರ್ಧದ 7 ಪಂದ್ಯಗಳಲ್ಲಿ ಕೇವಲ 1 ಜಯ ಸಾಧಿಸಿದ್ದ ಆರ್​ಸಿಬಿ, ದ್ವಿತೀಯಾರ್ಧದಲ್ಲಿ 2 ಗೆಲುವು ಸಾಧಿಸಿದೆ. ಈ ಮೂಲಕ ಒಟ್ಟು 6 ಅಂಕಗಳನ್ನು ಕಲೆಹಾಕಿದೆ.

1 / 6
ಈ 6 ಅಂಕಗಳೊಂದಿಗೆ ಆರ್​ಸಿಬಿ ತಂಡದ ಪ್ಲೇಆಫ್ ಆಸೆ ಕೂಡ ಜೀವಂತವಾಗಿದೆ. ಅಂದರೆ ಮುಂದಿನ 4 ಪಂದ್ಯಗಳಲ್ಲೂ ಭರ್ಜರಿ ಜಯ ಸಾಧಿಸಿದರೆ ಆರ್​ಸಿಬಿ ತಂಡಕ್ಕೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಸಿಗಲಿದೆ. ಆದರೆ ಅದಕ್ಕೂ ಮುನ್ನ ಇತರೆ ತಂಡಗಳ ಫಲಿತಾಂಶಗಳನ್ನು ಎದುರು ನೋಡಬೇಕಾಗುತ್ತದೆ.

ಈ 6 ಅಂಕಗಳೊಂದಿಗೆ ಆರ್​ಸಿಬಿ ತಂಡದ ಪ್ಲೇಆಫ್ ಆಸೆ ಕೂಡ ಜೀವಂತವಾಗಿದೆ. ಅಂದರೆ ಮುಂದಿನ 4 ಪಂದ್ಯಗಳಲ್ಲೂ ಭರ್ಜರಿ ಜಯ ಸಾಧಿಸಿದರೆ ಆರ್​ಸಿಬಿ ತಂಡಕ್ಕೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಸಿಗಲಿದೆ. ಆದರೆ ಅದಕ್ಕೂ ಮುನ್ನ ಇತರೆ ತಂಡಗಳ ಫಲಿತಾಂಶಗಳನ್ನು ಎದುರು ನೋಡಬೇಕಾಗುತ್ತದೆ.

2 / 6
ಪ್ರಸ್ತುತ ಅಂಕ ಪಟ್ಟಿಯಲ್ಲಿ ಪಂಜಾಬ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ 6 ಅಂಕಗಳನ್ನು ಹೊಂದಿದೆ. ಇನ್ನು ಗುಜರಾತ್ ಟೈಟಾನ್ಸ್ ತಂಡ 8 ಪಾಯಿಂಟ್ಸ್​ ಪಡೆದುಕೊಂಡಿದೆ. ಇನ್ನುಳಿದಂತೆ ಕೆಕೆಆರ್, ಸಿಎಸ್​ಕೆ, ಎಲ್​ಎಸ್​ಜಿ, ಎಸ್​ಆರ್​ಹೆಚ್, ಡೆಲ್ಲಿ ಕ್ಯಾಪಿಟಲ್ಸ್ ತಂಡ 10 ಅಂಕಗಳನ್ನು ಹೊಂದಿದೆ. ಅತ್ತ ರಾಜಸ್ಥಾನ್ ರಾಯಲ್ಸ್ 16 ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸುವುದನ್ನು ಬಹುತೇಕ ಖಚಿತಪಡಿಸಿಕೊಂಡಿದೆ.

ಪ್ರಸ್ತುತ ಅಂಕ ಪಟ್ಟಿಯಲ್ಲಿ ಪಂಜಾಬ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ 6 ಅಂಕಗಳನ್ನು ಹೊಂದಿದೆ. ಇನ್ನು ಗುಜರಾತ್ ಟೈಟಾನ್ಸ್ ತಂಡ 8 ಪಾಯಿಂಟ್ಸ್​ ಪಡೆದುಕೊಂಡಿದೆ. ಇನ್ನುಳಿದಂತೆ ಕೆಕೆಆರ್, ಸಿಎಸ್​ಕೆ, ಎಲ್​ಎಸ್​ಜಿ, ಎಸ್​ಆರ್​ಹೆಚ್, ಡೆಲ್ಲಿ ಕ್ಯಾಪಿಟಲ್ಸ್ ತಂಡ 10 ಅಂಕಗಳನ್ನು ಹೊಂದಿದೆ. ಅತ್ತ ರಾಜಸ್ಥಾನ್ ರಾಯಲ್ಸ್ 16 ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸುವುದನ್ನು ಬಹುತೇಕ ಖಚಿತಪಡಿಸಿಕೊಂಡಿದೆ.

3 / 6
ಅಂದರೆ ಇಲ್ಲಿ ಆರ್​ಆರ್​ ತಂಡದ ಗೆಲುವು ಮತ್ತು ಸೋಲು ಆರ್​ಸಿಬಿ ತಂಡವನ್ನು ಬಾಧಿಸುವುದಿಲ್ಲ. ಇದಾಗ್ಯೂ ರಾಜಸ್ಥಾನ್ ರಾಯಲ್ಸ್ 20 ಅಂಕಗಳನ್ನು ಪಡೆದರೆ ಆರ್​ಸಿಬಿಗೆ ಅನುಕೂಲವಾಗಲಿದೆ. ಹಾಗೆಯೇ ಎಸ್​ಆರ್​ಹೆಚ್ ಮುಂದಿನ ಪಂದ್ಯಗಳನ್ನು ಗೆದ್ದು 20 ಅಂಕಗಳನ್ನು ಪಡೆಯಬೇಕು. ಇನ್ನುಳಿದಂತೆ ಕೆಕೆಆರ್ 16 ಅಂಕಗಳನ್ನು ಪಡೆದರೆ ಆರ್​ಸಿಬಿ ತಂಡದ ಪ್ಲೇಆಫ್ ಹಾದಿ ಸುಗಮವಾಗಲಿದೆ.

ಅಂದರೆ ಇಲ್ಲಿ ಆರ್​ಆರ್​ ತಂಡದ ಗೆಲುವು ಮತ್ತು ಸೋಲು ಆರ್​ಸಿಬಿ ತಂಡವನ್ನು ಬಾಧಿಸುವುದಿಲ್ಲ. ಇದಾಗ್ಯೂ ರಾಜಸ್ಥಾನ್ ರಾಯಲ್ಸ್ 20 ಅಂಕಗಳನ್ನು ಪಡೆದರೆ ಆರ್​ಸಿಬಿಗೆ ಅನುಕೂಲವಾಗಲಿದೆ. ಹಾಗೆಯೇ ಎಸ್​ಆರ್​ಹೆಚ್ ಮುಂದಿನ ಪಂದ್ಯಗಳನ್ನು ಗೆದ್ದು 20 ಅಂಕಗಳನ್ನು ಪಡೆಯಬೇಕು. ಇನ್ನುಳಿದಂತೆ ಕೆಕೆಆರ್ 16 ಅಂಕಗಳನ್ನು ಪಡೆದರೆ ಆರ್​ಸಿಬಿ ತಂಡದ ಪ್ಲೇಆಫ್ ಹಾದಿ ಸುಗಮವಾಗಲಿದೆ.

4 / 6
ಆರ್​ಆರ್​, ಎಸ್​ಆರ್​ಹೆಚ್, ಕೆಕೆಆರ್ ಕ್ರಮವಾಗಿ 20, 20 ಮತ್ತು 16 ಅಂಕಗಳನ್ನು ಪಡೆಯುವುದರಿಂದ ಸಿಎಸ್​ಕೆ, ಎಲ್​ಎಸ್​ಜಿ, ಜಿಟಿ, ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ಅಂಕಗಳು 12 ರಲ್ಲೇ ಉಳಿಯಲಿದೆ. ಅಂದರೆ ಈ ತಂಡಗಳು ಆರಕ್ಕಿಂತ ಹೆಚ್ಚಿನ ಪಂದ್ಯಗಳನ್ನು ಗೆಲ್ಲಬಾರದು. ಒಂದು ವೇಳೆ 7 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ ನೆಟ್ ರನ್ ರೇಟ್ ಪರಿಗಣನೆಗೆ ಬರಲಿದೆ.

ಆರ್​ಆರ್​, ಎಸ್​ಆರ್​ಹೆಚ್, ಕೆಕೆಆರ್ ಕ್ರಮವಾಗಿ 20, 20 ಮತ್ತು 16 ಅಂಕಗಳನ್ನು ಪಡೆಯುವುದರಿಂದ ಸಿಎಸ್​ಕೆ, ಎಲ್​ಎಸ್​ಜಿ, ಜಿಟಿ, ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ಅಂಕಗಳು 12 ರಲ್ಲೇ ಉಳಿಯಲಿದೆ. ಅಂದರೆ ಈ ತಂಡಗಳು ಆರಕ್ಕಿಂತ ಹೆಚ್ಚಿನ ಪಂದ್ಯಗಳನ್ನು ಗೆಲ್ಲಬಾರದು. ಒಂದು ವೇಳೆ 7 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ ನೆಟ್ ರನ್ ರೇಟ್ ಪರಿಗಣನೆಗೆ ಬರಲಿದೆ.

5 / 6
ಇದೇ ವೇಳೆ ಆರ್​ಸಿಬಿ ತಂಡವು ಮುಂದಿನ ಎಲ್ಲಾ ಪಂದ್ಯಗಳಲ್ಲೂ ಭರ್ಜರಿ ಜಯ ಸಾಧಿಸಿ ಉತ್ತಮ ನೆಟ್ ರನ್​ ರೇಟ್​ನೊಂದಿಗೆ ಒಟ್ಟು 14 ಅಂಕಗಳನ್ನು ಸಂಪಾದಿಸಬಹುದು. ಈ ಮೂಲಕ ಇತರೆ ತಂಡಗಳನ್ನು ಹಿಂದಿಕ್ಕಿ ಪ್ಲೇಆಫ್ ಪ್ರವೇಶಿಸುವ ಅವಕಾಶ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ದೊರೆಯಲಿದೆ. ಅದರಂತೆ ಆರ್​ಸಿಬಿ ತಂಡ ಈ ಬಾರಿ ಪ್ಲೇಆಫ್ ಹಂತಕ್ಕೇರಲಿದೆಯಾ ಕಾದು ನೋಡಬೇಕಿದೆ.

ಇದೇ ವೇಳೆ ಆರ್​ಸಿಬಿ ತಂಡವು ಮುಂದಿನ ಎಲ್ಲಾ ಪಂದ್ಯಗಳಲ್ಲೂ ಭರ್ಜರಿ ಜಯ ಸಾಧಿಸಿ ಉತ್ತಮ ನೆಟ್ ರನ್​ ರೇಟ್​ನೊಂದಿಗೆ ಒಟ್ಟು 14 ಅಂಕಗಳನ್ನು ಸಂಪಾದಿಸಬಹುದು. ಈ ಮೂಲಕ ಇತರೆ ತಂಡಗಳನ್ನು ಹಿಂದಿಕ್ಕಿ ಪ್ಲೇಆಫ್ ಪ್ರವೇಶಿಸುವ ಅವಕಾಶ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ದೊರೆಯಲಿದೆ. ಅದರಂತೆ ಆರ್​ಸಿಬಿ ತಂಡ ಈ ಬಾರಿ ಪ್ಲೇಆಫ್ ಹಂತಕ್ಕೇರಲಿದೆಯಾ ಕಾದು ನೋಡಬೇಕಿದೆ.

6 / 6
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?