AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024 RCB vs LSG: ಐಪಿಎಲ್ ಇತಿಹಾಸದಲ್ಲೇ ಈ ದಾಖಲೆ ಬರೆದ ಮೊದಲ ವೇಗಿ ಮಯಾಂಕ್..!

IPL 2024 Mayank Yadav: ಈ ಪಂದ್ಯದಲ್ಲಿ ತಮ್ಮ ಖೋಟಾದ 4 ಓವರ್​ ಬೌಲ್ ಮಾಡಿದ ಮಯಾಂಕ್ ಕೇವಲ 14 ರನ್ ಬಿಟ್ಟುಕೊಟ್ಟು 3 ವಿಕೆಟ್ ಪಡೆದರು. ಕೊನೆಗೆ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಮಯಾಂಕ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಯಾವ ವೇಗಿಯೂ ಮಾಡದ ದಾಖಲೆ ಮಾಡಿದರು.

ಪೃಥ್ವಿಶಂಕರ
|

Updated on: Apr 03, 2024 | 3:56 PM

Share
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲೂ ಆರ್​ಸಿಬಿ ಸೋಲಿಗೆ ಶರಣಾಗಿದೆ. ಈ ಮೂಲಕ ಫಾಫ್ ಪಡೆ ಲೀಗ್​ನಲ್ಲಿ ಸತತ ಮೂರನೇ ಸೋಲನ್ನು ಅನುಭವಿಸಿದೆ. ಪಂದ್ಯದಲ್ಲಿ ಲಕ್ನೋ ನೀಡಿದ 182 ರನ್​ಗಳ ಗುರಿ ಬೆನ್ನಟ್ಟಿದ ಆರ್​ಸಿಬಿ 153 ರನ್​ ಗಳಿಸಲಷ್ಟೇ ಶಕ್ತವಾಗಿ 28 ರನ್‌ಗಳಿಂದ ಸೋಲೊಪ್ಪಿಕೊಂಡಿತು.

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲೂ ಆರ್​ಸಿಬಿ ಸೋಲಿಗೆ ಶರಣಾಗಿದೆ. ಈ ಮೂಲಕ ಫಾಫ್ ಪಡೆ ಲೀಗ್​ನಲ್ಲಿ ಸತತ ಮೂರನೇ ಸೋಲನ್ನು ಅನುಭವಿಸಿದೆ. ಪಂದ್ಯದಲ್ಲಿ ಲಕ್ನೋ ನೀಡಿದ 182 ರನ್​ಗಳ ಗುರಿ ಬೆನ್ನಟ್ಟಿದ ಆರ್​ಸಿಬಿ 153 ರನ್​ ಗಳಿಸಲಷ್ಟೇ ಶಕ್ತವಾಗಿ 28 ರನ್‌ಗಳಿಂದ ಸೋಲೊಪ್ಪಿಕೊಂಡಿತು.

1 / 7
ಇನ್ನು ಈ ಪಂದ್ಯದಲ್ಲಿ ಆರ್‌ಸಿಬಿ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಲಕ್ನೋ ಬೌಲರ್​ಗಳ ಕರಾರುವಕ್ಕಾದ ದಾಳಿ ಪ್ರಮುಖ ಕಾರಣವಾಗಿತ್ತು. ಅದರಲ್ಲೂ ಐಪಿಎಲ್​ನಲ್ಲಿ ಆಡಿದ ಎರಡೇ ಎರಡು ಪಂದ್ಯಗಳಲ್ಲಿ ವಿಶ್ವ ಕ್ರಿಕೆಟ್​ನ ಮನಗೆದ್ದಿರುವ ಮಯಾಂಕ್ ಯಾದವ್ ಪ್ರಮುಖ 3 ವಿಕೆಟ್​ಗಳನ್ನು ಉರುಳಿಸಿ ಆರ್​ಸಿಬಿಯ ಬ್ಯಾಟಿಂಗ್ ಬೆನ್ನೇಲುಬ್ಬನೇ ಮುರಿದರು.

ಇನ್ನು ಈ ಪಂದ್ಯದಲ್ಲಿ ಆರ್‌ಸಿಬಿ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಲಕ್ನೋ ಬೌಲರ್​ಗಳ ಕರಾರುವಕ್ಕಾದ ದಾಳಿ ಪ್ರಮುಖ ಕಾರಣವಾಗಿತ್ತು. ಅದರಲ್ಲೂ ಐಪಿಎಲ್​ನಲ್ಲಿ ಆಡಿದ ಎರಡೇ ಎರಡು ಪಂದ್ಯಗಳಲ್ಲಿ ವಿಶ್ವ ಕ್ರಿಕೆಟ್​ನ ಮನಗೆದ್ದಿರುವ ಮಯಾಂಕ್ ಯಾದವ್ ಪ್ರಮುಖ 3 ವಿಕೆಟ್​ಗಳನ್ನು ಉರುಳಿಸಿ ಆರ್​ಸಿಬಿಯ ಬ್ಯಾಟಿಂಗ್ ಬೆನ್ನೇಲುಬ್ಬನೇ ಮುರಿದರು.

2 / 7
ಮಯಾಂಕ್ ದಾಳಿಗೆ ಮಂಡಿಯೂರಿದವರಲ್ಲಿ ರಜತ್ ಪಾಟಿದರ್ (29 ರನ್), ಗ್ಲೆನ್ ಮ್ಯಾಕ್ಸ್‌ವೆಲ್ (0 ರನ್), ಕ್ಯಾಮರೂನ್ ಗ್ರೀನ್ (9 ರನ್) ಸೇರಿದ್ದರು. ಈ ಮೂವರು ಆಟಗಾರರ ವಿಕೆಟ್ ಪತನ ಆರ್​ಸಿಬಿ ಸೋಲಿಗೆ ಪ್ರಮುಖ ಕಾರಣವಾಗಿತ್ತು.

ಮಯಾಂಕ್ ದಾಳಿಗೆ ಮಂಡಿಯೂರಿದವರಲ್ಲಿ ರಜತ್ ಪಾಟಿದರ್ (29 ರನ್), ಗ್ಲೆನ್ ಮ್ಯಾಕ್ಸ್‌ವೆಲ್ (0 ರನ್), ಕ್ಯಾಮರೂನ್ ಗ್ರೀನ್ (9 ರನ್) ಸೇರಿದ್ದರು. ಈ ಮೂವರು ಆಟಗಾರರ ವಿಕೆಟ್ ಪತನ ಆರ್​ಸಿಬಿ ಸೋಲಿಗೆ ಪ್ರಮುಖ ಕಾರಣವಾಗಿತ್ತು.

3 / 7
ಈ ಪಂದ್ಯದಲ್ಲಿ ತಮ್ಮ ಖೋಟಾದ 4 ಓವರ್​ ಬೌಲ್ ಮಾಡಿದ ಮಯಾಂಕ್ ಕೇವಲ 14 ರನ್ ಬಿಟ್ಟುಕೊಟ್ಟು 3 ವಿಕೆಟ್ ಪಡೆದರು. ಕೊನೆಗೆ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಮಯಾಂಕ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಯಾವ ವೇಗಿಯೂ ಮಾಡದ ದಾಖಲೆ ಮಾಡಿದರು.

ಈ ಪಂದ್ಯದಲ್ಲಿ ತಮ್ಮ ಖೋಟಾದ 4 ಓವರ್​ ಬೌಲ್ ಮಾಡಿದ ಮಯಾಂಕ್ ಕೇವಲ 14 ರನ್ ಬಿಟ್ಟುಕೊಟ್ಟು 3 ವಿಕೆಟ್ ಪಡೆದರು. ಕೊನೆಗೆ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಮಯಾಂಕ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಯಾವ ವೇಗಿಯೂ ಮಾಡದ ದಾಖಲೆ ಮಾಡಿದರು.

4 / 7
ವಾಸ್ತವವಾಗಿ ಮಯಾಂಕ್​ಗೆ ಇದು ಚೊಚ್ಚಲ ಐಪಿಎಲ್ ಆವೃತ್ತಿ. ಮಯಾಂಕ್ ಇದುವರೆಗೆ ಕೇವಲ 2 ಪಂದ್ಯಗಳನ್ನು ಮಾತ್ರ ಆಡಿದ್ದಾರೆ. ಆರ್​ಸಿಬಿಗೂ ಮುನ್ನ ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ಆಡಿದ್ದ ಮಯಾಂಕ್​ಗೆ ಅದು ಅವರ ಚೊಚ್ಚಲ ಐಪಿಎಲ್ ಪಂದ್ಯವಾಗಿತ್ತು.

ವಾಸ್ತವವಾಗಿ ಮಯಾಂಕ್​ಗೆ ಇದು ಚೊಚ್ಚಲ ಐಪಿಎಲ್ ಆವೃತ್ತಿ. ಮಯಾಂಕ್ ಇದುವರೆಗೆ ಕೇವಲ 2 ಪಂದ್ಯಗಳನ್ನು ಮಾತ್ರ ಆಡಿದ್ದಾರೆ. ಆರ್​ಸಿಬಿಗೂ ಮುನ್ನ ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ಆಡಿದ್ದ ಮಯಾಂಕ್​ಗೆ ಅದು ಅವರ ಚೊಚ್ಚಲ ಐಪಿಎಲ್ ಪಂದ್ಯವಾಗಿತ್ತು.

5 / 7
ಆ ಪಂದ್ಯದಲ್ಲೂ ತಮ್ಮ ಖೋಟಾದ ನಾಲ್ಕು ಓವರ್ ಬೌಲ್ ಮಾಡಿದ್ದ ಮಯಾಂಕ್ ಕೇವಲ 27 ರನ್ ಬಿಟ್ಟುಕೊಟ್ಟು ಪ್ರಮುಖ 3 ವಿಕೆಟ್ ಕಬಳಿಸಿದ್ದರು. ಇದು ಲಕ್ನೋ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿತ್ತು. ಹೀಗಾಗಿ ಆಡಿದ ಮೊದಲ ಪಂದ್ಯದಲ್ಲೇ ಮಯಾಂಕ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.

ಆ ಪಂದ್ಯದಲ್ಲೂ ತಮ್ಮ ಖೋಟಾದ ನಾಲ್ಕು ಓವರ್ ಬೌಲ್ ಮಾಡಿದ್ದ ಮಯಾಂಕ್ ಕೇವಲ 27 ರನ್ ಬಿಟ್ಟುಕೊಟ್ಟು ಪ್ರಮುಖ 3 ವಿಕೆಟ್ ಕಬಳಿಸಿದ್ದರು. ಇದು ಲಕ್ನೋ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿತ್ತು. ಹೀಗಾಗಿ ಆಡಿದ ಮೊದಲ ಪಂದ್ಯದಲ್ಲೇ ಮಯಾಂಕ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.

6 / 7
ಇದೀಗ ಆರ್​ಸಿಬಿ ವಿರುದ್ಧದ ಎರಡನೇ ಪಂದ್ಯದಲ್ಲೂ ಪಂದ್ಯ ಶ್ರೇಷ್ಠ ಪ್ರಶಸ್ತಿ ಗೆದ್ದಿರುವ ಮಯಾಂಕ್, ಐಪಿಎಲ್ ಇತಿಹಾಸದಲ್ಲೇ ತಮ್ಮ ಚೊಚ್ಚಲ ಆವೃತ್ತಿಯಲ್ಲೇ ಆಡಿದ ಮೊದಲೆರಡು ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ಮೊದಲ ಬೌಲರ್​ ಎನಿಸಿಕೊಂಡಿದ್ದಾರೆ. ಮಯಾಂಕ್​​ಗೂ ಮೊದಲು ಬೇರೆ ಯಾವ ವೇಗಿಯೂ ಈ ಸಾಧನೆ ಮಾಡಿರಲಿಲ್ಲ.

ಇದೀಗ ಆರ್​ಸಿಬಿ ವಿರುದ್ಧದ ಎರಡನೇ ಪಂದ್ಯದಲ್ಲೂ ಪಂದ್ಯ ಶ್ರೇಷ್ಠ ಪ್ರಶಸ್ತಿ ಗೆದ್ದಿರುವ ಮಯಾಂಕ್, ಐಪಿಎಲ್ ಇತಿಹಾಸದಲ್ಲೇ ತಮ್ಮ ಚೊಚ್ಚಲ ಆವೃತ್ತಿಯಲ್ಲೇ ಆಡಿದ ಮೊದಲೆರಡು ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ಮೊದಲ ಬೌಲರ್​ ಎನಿಸಿಕೊಂಡಿದ್ದಾರೆ. ಮಯಾಂಕ್​​ಗೂ ಮೊದಲು ಬೇರೆ ಯಾವ ವೇಗಿಯೂ ಈ ಸಾಧನೆ ಮಾಡಿರಲಿಲ್ಲ.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!