AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 2 ಹಂತಗಳಲ್ಲಿ ಈ ಬಾರಿಯ ಐಪಿಎಲ್

IPL 2024 Schedule: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್ 17 ರ ವೇಳಾಪಟ್ಟಿಯನ್ನು ಇನ್ನೂ ಕೂಡ ಪ್ರಕಟಿಸಲಾಗಿಲ್ಲ. ಇದಾಗ್ಯೂ ಮಾರ್ಚ್ 22 ರಿಂದ ಟೂರ್ನಿಯನ್ನು ಆರಂಭಿಸಲು ಬಿಸಿಸಿಐ ಯೋಜನೆ ರೂಪಿಸಿದೆ. ಅದರಂತೆ ಮಾರ್ಚ್ ತಿಂಗಳಾಂತ್ಯದಲ್ಲಿ ಐಪಿಎಲ್ ಶುರುವಾಗುವ ಸಾಧ್ಯತೆಯಿದೆ.

TV9 Web
| Edited By: |

Updated on: Jan 27, 2024 | 2:03 PM

Share
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ಎರಡು ಹಂತಗಳಲ್ಲಿ ನಡೆಯುವ ಸಾಧ್ಯತೆಯಿದೆ. ಅಂದರೆ ಮೊದಲಾರ್ಧವು ಭಾರತದಲ್ಲಿ ನಡೆದರೆ, ದ್ವಿತಿಯಾರ್ಧವು ವಿದೇಶಕ್ಕೆ ಶಿಫ್ಟ್ ಆಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ಎರಡು ಹಂತಗಳಲ್ಲಿ ನಡೆಯುವ ಸಾಧ್ಯತೆಯಿದೆ. ಅಂದರೆ ಮೊದಲಾರ್ಧವು ಭಾರತದಲ್ಲಿ ನಡೆದರೆ, ದ್ವಿತಿಯಾರ್ಧವು ವಿದೇಶಕ್ಕೆ ಶಿಫ್ಟ್ ಆಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

1 / 7
ಇದಕ್ಕೆ ಮುಖ್ಯ ಕಾರಣ ಮುಂಬರುವ ಲೋಕಸಭಾ ಚುನಾವಣೆ. ಭಾರತದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಬೇಕಿರುವುದರಿಂದ ಒಂದೇ ಹಂತದಲ್ಲಿ ಐಪಿಎಲ್​​ ಅನ್ನು ಆಯೋಜಿಸಲಾಗುವುದಿಲ್ಲ. ಹೀಗಾಗಿ ಲೋಕಸಭಾ ಚುಣಾವಣೆಯ ದಿನಾಂಕವನ್ನು ಬಿಸಿಸಿಐ ಎದುರು ನೋಡುತ್ತಿದೆ.

ಇದಕ್ಕೆ ಮುಖ್ಯ ಕಾರಣ ಮುಂಬರುವ ಲೋಕಸಭಾ ಚುನಾವಣೆ. ಭಾರತದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಬೇಕಿರುವುದರಿಂದ ಒಂದೇ ಹಂತದಲ್ಲಿ ಐಪಿಎಲ್​​ ಅನ್ನು ಆಯೋಜಿಸಲಾಗುವುದಿಲ್ಲ. ಹೀಗಾಗಿ ಲೋಕಸಭಾ ಚುಣಾವಣೆಯ ದಿನಾಂಕವನ್ನು ಬಿಸಿಸಿಐ ಎದುರು ನೋಡುತ್ತಿದೆ.

2 / 7
ಒಂದು ವೇಳೆ ಐಪಿಎಲ್ ಅವಧಿಯಲ್ಲೇ ಚುನಾವಣೆ ನಡೆಯುತ್ತಿದ್ದರೆ ಎರಡು ಹಂತಗಳಲ್ಲಿ ಟೂರ್ನಿಯನ್ನು ಆಯೋಜಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ. ಇದೇ ಕಾರಣದಿಂದಾಗಿ ಐಪಿಎಲ್ ವೇಳಾಪಟ್ಟಿಯನ್ನು ಪ್ರಕಟಿಸಲು ಬಿಸಿಸಿಐ ವಿಳಂಬ ಮಾಡುತ್ತಿದೆ. ಅತ್ತ ಚುನಾವಣಾ ದಿನಾಂಕ ನಿಗದಿಯಾದರೆ, ಇತ್ತ ಐಪಿಎಲ್ ವೇಳಾಪಟ್ಟಿ ಘೋಷಣೆಯಾಗಲಿದೆ.

ಒಂದು ವೇಳೆ ಐಪಿಎಲ್ ಅವಧಿಯಲ್ಲೇ ಚುನಾವಣೆ ನಡೆಯುತ್ತಿದ್ದರೆ ಎರಡು ಹಂತಗಳಲ್ಲಿ ಟೂರ್ನಿಯನ್ನು ಆಯೋಜಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ. ಇದೇ ಕಾರಣದಿಂದಾಗಿ ಐಪಿಎಲ್ ವೇಳಾಪಟ್ಟಿಯನ್ನು ಪ್ರಕಟಿಸಲು ಬಿಸಿಸಿಐ ವಿಳಂಬ ಮಾಡುತ್ತಿದೆ. ಅತ್ತ ಚುನಾವಣಾ ದಿನಾಂಕ ನಿಗದಿಯಾದರೆ, ಇತ್ತ ಐಪಿಎಲ್ ವೇಳಾಪಟ್ಟಿ ಘೋಷಣೆಯಾಗಲಿದೆ.

3 / 7
ಈ ಬಗ್ಗೆ ಈಗಾಗಲೇ ಭಾರತ ಸರ್ಕಾರದೊಂದಿಗೆ ಬಿಸಿಸಿಐ ಚರ್ಚೆ ನಡೆಸಿದೆ. ಅಲ್ಲದೆ ಶೀಘ್ರದಲ್ಲೇ ಐಪಿಎಲ್ ಆರಂಭದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ತಿಳಿಸಿದ್ದಾರೆ. ಹೀಗಾಗಿ ಫೆಬ್ರವರಿಯಲ್ಲಿ ಐಪಿಎಲ್ ದಿನಾಂಕ ಘೋಷಣೆಯಾಗುವ ಸಾಧ್ಯತೆಯಿದೆ.

ಈ ಬಗ್ಗೆ ಈಗಾಗಲೇ ಭಾರತ ಸರ್ಕಾರದೊಂದಿಗೆ ಬಿಸಿಸಿಐ ಚರ್ಚೆ ನಡೆಸಿದೆ. ಅಲ್ಲದೆ ಶೀಘ್ರದಲ್ಲೇ ಐಪಿಎಲ್ ಆರಂಭದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ತಿಳಿಸಿದ್ದಾರೆ. ಹೀಗಾಗಿ ಫೆಬ್ರವರಿಯಲ್ಲಿ ಐಪಿಎಲ್ ದಿನಾಂಕ ಘೋಷಣೆಯಾಗುವ ಸಾಧ್ಯತೆಯಿದೆ.

4 / 7
ಭಾರತೀಯ ಚುನಾವಣಾ ಆಯೋಗದ (ಇಸಿಐ) ಇತ್ತೀಚಿನ ಅಪ್‌ಡೇಟ್ ಪ್ರಕಾರ, ಸಾರ್ವತ್ರಿಕ ಚುನಾವಣೆಗಳು ಏಪ್ರಿಲ್ ಮಧ್ಯದಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ. ದೆಹಲಿಯ ಮುಖ್ಯ ಚುನಾವಣಾ ಅಧಿಕಾರಿ ಏಪ್ರಿಲ್ 16 ರ ತಾತ್ಕಾಲಿಕ ದಿನಾಂಕದೊಂದಿಗೆ ಅಧಿಸೂಚನೆಯನ್ನು ಕಳುಹಿಸಿದ್ದಾರೆ. ಅಂದರೆ ಏಪ್ರಿಲ್-ಮೇ ನಡುವೆ ಚುನಾವಣೆ ನಡೆಯುವುದು ಬಹುತೇಕ ಖಚಿತ ಎನ್ನಬಹುದು.

ಭಾರತೀಯ ಚುನಾವಣಾ ಆಯೋಗದ (ಇಸಿಐ) ಇತ್ತೀಚಿನ ಅಪ್‌ಡೇಟ್ ಪ್ರಕಾರ, ಸಾರ್ವತ್ರಿಕ ಚುನಾವಣೆಗಳು ಏಪ್ರಿಲ್ ಮಧ್ಯದಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ. ದೆಹಲಿಯ ಮುಖ್ಯ ಚುನಾವಣಾ ಅಧಿಕಾರಿ ಏಪ್ರಿಲ್ 16 ರ ತಾತ್ಕಾಲಿಕ ದಿನಾಂಕದೊಂದಿಗೆ ಅಧಿಸೂಚನೆಯನ್ನು ಕಳುಹಿಸಿದ್ದಾರೆ. ಅಂದರೆ ಏಪ್ರಿಲ್-ಮೇ ನಡುವೆ ಚುನಾವಣೆ ನಡೆಯುವುದು ಬಹುತೇಕ ಖಚಿತ ಎನ್ನಬಹುದು.

5 / 7
ಇತ್ತ ಐಪಿಎಲ್ ಅನ್ನು ಮಾರ್ಚ್​ 22 ರಿಂದ ಶುರು ಮಾಡಲು ಬಿಸಿಸಿಐ ಯೋಜನೆ ರೂಪಿಸಿದೆ. ಅಲ್ಲದೆ ಚುನಾವಣೆ ಸಮಯದ ಪಂದ್ಯಗಳನ್ನು ವಿದೇಶದಲ್ಲಿ ಆಯೋಜಿಸುವ ಬಗ್ಗೆ ಚರ್ಚಿಸಲಾಗಿದೆ. ಅದರಂತೆ ಐಪಿಎಲ್​ ಅನ್ನು ಭಾರತ ಮತ್ತು ವಿದೇಶಗಳಲ್ಲಿ ಆಯೋಜಿಸುವ ಸಾಧ್ಯತೆ ಹೆಚ್ಚಿದೆ.

ಇತ್ತ ಐಪಿಎಲ್ ಅನ್ನು ಮಾರ್ಚ್​ 22 ರಿಂದ ಶುರು ಮಾಡಲು ಬಿಸಿಸಿಐ ಯೋಜನೆ ರೂಪಿಸಿದೆ. ಅಲ್ಲದೆ ಚುನಾವಣೆ ಸಮಯದ ಪಂದ್ಯಗಳನ್ನು ವಿದೇಶದಲ್ಲಿ ಆಯೋಜಿಸುವ ಬಗ್ಗೆ ಚರ್ಚಿಸಲಾಗಿದೆ. ಅದರಂತೆ ಐಪಿಎಲ್​ ಅನ್ನು ಭಾರತ ಮತ್ತು ವಿದೇಶಗಳಲ್ಲಿ ಆಯೋಜಿಸುವ ಸಾಧ್ಯತೆ ಹೆಚ್ಚಿದೆ.

6 / 7
2014ರಲ್ಲಿ ಲೋಕಸಭಾ ಚುನಾವಣಾ ನಿಮಿತ್ತ ಐಪಿಎಲ್​ನ 20 ಪಂದ್ಯಗಳನ್ನು ದುಬೈನಲ್ಲಿ ಆಯೋಜಿಸಲಾಗಿತ್ತು. ಇದಕ್ಕೂ ಮುನ್ನ 2009 ರ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಸಂಪೂರ್ಣ ಟೂರ್ನಿಯನ್ನು ಸೌತ್ ಆಫ್ರಿಕಾದಲ್ಲಿ ನಡೆಸಲಾಗಿತ್ತು. ಇದೀಗ ಮೂರನೇ ಬಾರಿ ಚುನಾವಣಾ ನಿಮಿತ್ತ ಐಪಿಎಲ್​ನ ಕೆಲ ಪಂದ್ಯಗಳು ವಿದೇಶಕ್ಕೆ ಶಿಫ್ಟ್ ಆಗುವ ಸಾಧ್ಯತೆ ಹೆಚ್ಚಿದೆ.

2014ರಲ್ಲಿ ಲೋಕಸಭಾ ಚುನಾವಣಾ ನಿಮಿತ್ತ ಐಪಿಎಲ್​ನ 20 ಪಂದ್ಯಗಳನ್ನು ದುಬೈನಲ್ಲಿ ಆಯೋಜಿಸಲಾಗಿತ್ತು. ಇದಕ್ಕೂ ಮುನ್ನ 2009 ರ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಸಂಪೂರ್ಣ ಟೂರ್ನಿಯನ್ನು ಸೌತ್ ಆಫ್ರಿಕಾದಲ್ಲಿ ನಡೆಸಲಾಗಿತ್ತು. ಇದೀಗ ಮೂರನೇ ಬಾರಿ ಚುನಾವಣಾ ನಿಮಿತ್ತ ಐಪಿಎಲ್​ನ ಕೆಲ ಪಂದ್ಯಗಳು ವಿದೇಶಕ್ಕೆ ಶಿಫ್ಟ್ ಆಗುವ ಸಾಧ್ಯತೆ ಹೆಚ್ಚಿದೆ.

7 / 7
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌