AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 2 ಹಂತಗಳಲ್ಲಿ ಈ ಬಾರಿಯ ಐಪಿಎಲ್

IPL 2024 Schedule: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್ 17 ರ ವೇಳಾಪಟ್ಟಿಯನ್ನು ಇನ್ನೂ ಕೂಡ ಪ್ರಕಟಿಸಲಾಗಿಲ್ಲ. ಇದಾಗ್ಯೂ ಮಾರ್ಚ್ 22 ರಿಂದ ಟೂರ್ನಿಯನ್ನು ಆರಂಭಿಸಲು ಬಿಸಿಸಿಐ ಯೋಜನೆ ರೂಪಿಸಿದೆ. ಅದರಂತೆ ಮಾರ್ಚ್ ತಿಂಗಳಾಂತ್ಯದಲ್ಲಿ ಐಪಿಎಲ್ ಶುರುವಾಗುವ ಸಾಧ್ಯತೆಯಿದೆ.

TV9 Web
| Edited By: |

Updated on: Jan 27, 2024 | 2:03 PM

Share
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ಎರಡು ಹಂತಗಳಲ್ಲಿ ನಡೆಯುವ ಸಾಧ್ಯತೆಯಿದೆ. ಅಂದರೆ ಮೊದಲಾರ್ಧವು ಭಾರತದಲ್ಲಿ ನಡೆದರೆ, ದ್ವಿತಿಯಾರ್ಧವು ವಿದೇಶಕ್ಕೆ ಶಿಫ್ಟ್ ಆಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ಎರಡು ಹಂತಗಳಲ್ಲಿ ನಡೆಯುವ ಸಾಧ್ಯತೆಯಿದೆ. ಅಂದರೆ ಮೊದಲಾರ್ಧವು ಭಾರತದಲ್ಲಿ ನಡೆದರೆ, ದ್ವಿತಿಯಾರ್ಧವು ವಿದೇಶಕ್ಕೆ ಶಿಫ್ಟ್ ಆಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

1 / 7
ಇದಕ್ಕೆ ಮುಖ್ಯ ಕಾರಣ ಮುಂಬರುವ ಲೋಕಸಭಾ ಚುನಾವಣೆ. ಭಾರತದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಬೇಕಿರುವುದರಿಂದ ಒಂದೇ ಹಂತದಲ್ಲಿ ಐಪಿಎಲ್​​ ಅನ್ನು ಆಯೋಜಿಸಲಾಗುವುದಿಲ್ಲ. ಹೀಗಾಗಿ ಲೋಕಸಭಾ ಚುಣಾವಣೆಯ ದಿನಾಂಕವನ್ನು ಬಿಸಿಸಿಐ ಎದುರು ನೋಡುತ್ತಿದೆ.

ಇದಕ್ಕೆ ಮುಖ್ಯ ಕಾರಣ ಮುಂಬರುವ ಲೋಕಸಭಾ ಚುನಾವಣೆ. ಭಾರತದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಬೇಕಿರುವುದರಿಂದ ಒಂದೇ ಹಂತದಲ್ಲಿ ಐಪಿಎಲ್​​ ಅನ್ನು ಆಯೋಜಿಸಲಾಗುವುದಿಲ್ಲ. ಹೀಗಾಗಿ ಲೋಕಸಭಾ ಚುಣಾವಣೆಯ ದಿನಾಂಕವನ್ನು ಬಿಸಿಸಿಐ ಎದುರು ನೋಡುತ್ತಿದೆ.

2 / 7
ಒಂದು ವೇಳೆ ಐಪಿಎಲ್ ಅವಧಿಯಲ್ಲೇ ಚುನಾವಣೆ ನಡೆಯುತ್ತಿದ್ದರೆ ಎರಡು ಹಂತಗಳಲ್ಲಿ ಟೂರ್ನಿಯನ್ನು ಆಯೋಜಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ. ಇದೇ ಕಾರಣದಿಂದಾಗಿ ಐಪಿಎಲ್ ವೇಳಾಪಟ್ಟಿಯನ್ನು ಪ್ರಕಟಿಸಲು ಬಿಸಿಸಿಐ ವಿಳಂಬ ಮಾಡುತ್ತಿದೆ. ಅತ್ತ ಚುನಾವಣಾ ದಿನಾಂಕ ನಿಗದಿಯಾದರೆ, ಇತ್ತ ಐಪಿಎಲ್ ವೇಳಾಪಟ್ಟಿ ಘೋಷಣೆಯಾಗಲಿದೆ.

ಒಂದು ವೇಳೆ ಐಪಿಎಲ್ ಅವಧಿಯಲ್ಲೇ ಚುನಾವಣೆ ನಡೆಯುತ್ತಿದ್ದರೆ ಎರಡು ಹಂತಗಳಲ್ಲಿ ಟೂರ್ನಿಯನ್ನು ಆಯೋಜಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ. ಇದೇ ಕಾರಣದಿಂದಾಗಿ ಐಪಿಎಲ್ ವೇಳಾಪಟ್ಟಿಯನ್ನು ಪ್ರಕಟಿಸಲು ಬಿಸಿಸಿಐ ವಿಳಂಬ ಮಾಡುತ್ತಿದೆ. ಅತ್ತ ಚುನಾವಣಾ ದಿನಾಂಕ ನಿಗದಿಯಾದರೆ, ಇತ್ತ ಐಪಿಎಲ್ ವೇಳಾಪಟ್ಟಿ ಘೋಷಣೆಯಾಗಲಿದೆ.

3 / 7
ಈ ಬಗ್ಗೆ ಈಗಾಗಲೇ ಭಾರತ ಸರ್ಕಾರದೊಂದಿಗೆ ಬಿಸಿಸಿಐ ಚರ್ಚೆ ನಡೆಸಿದೆ. ಅಲ್ಲದೆ ಶೀಘ್ರದಲ್ಲೇ ಐಪಿಎಲ್ ಆರಂಭದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ತಿಳಿಸಿದ್ದಾರೆ. ಹೀಗಾಗಿ ಫೆಬ್ರವರಿಯಲ್ಲಿ ಐಪಿಎಲ್ ದಿನಾಂಕ ಘೋಷಣೆಯಾಗುವ ಸಾಧ್ಯತೆಯಿದೆ.

ಈ ಬಗ್ಗೆ ಈಗಾಗಲೇ ಭಾರತ ಸರ್ಕಾರದೊಂದಿಗೆ ಬಿಸಿಸಿಐ ಚರ್ಚೆ ನಡೆಸಿದೆ. ಅಲ್ಲದೆ ಶೀಘ್ರದಲ್ಲೇ ಐಪಿಎಲ್ ಆರಂಭದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ತಿಳಿಸಿದ್ದಾರೆ. ಹೀಗಾಗಿ ಫೆಬ್ರವರಿಯಲ್ಲಿ ಐಪಿಎಲ್ ದಿನಾಂಕ ಘೋಷಣೆಯಾಗುವ ಸಾಧ್ಯತೆಯಿದೆ.

4 / 7
ಭಾರತೀಯ ಚುನಾವಣಾ ಆಯೋಗದ (ಇಸಿಐ) ಇತ್ತೀಚಿನ ಅಪ್‌ಡೇಟ್ ಪ್ರಕಾರ, ಸಾರ್ವತ್ರಿಕ ಚುನಾವಣೆಗಳು ಏಪ್ರಿಲ್ ಮಧ್ಯದಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ. ದೆಹಲಿಯ ಮುಖ್ಯ ಚುನಾವಣಾ ಅಧಿಕಾರಿ ಏಪ್ರಿಲ್ 16 ರ ತಾತ್ಕಾಲಿಕ ದಿನಾಂಕದೊಂದಿಗೆ ಅಧಿಸೂಚನೆಯನ್ನು ಕಳುಹಿಸಿದ್ದಾರೆ. ಅಂದರೆ ಏಪ್ರಿಲ್-ಮೇ ನಡುವೆ ಚುನಾವಣೆ ನಡೆಯುವುದು ಬಹುತೇಕ ಖಚಿತ ಎನ್ನಬಹುದು.

ಭಾರತೀಯ ಚುನಾವಣಾ ಆಯೋಗದ (ಇಸಿಐ) ಇತ್ತೀಚಿನ ಅಪ್‌ಡೇಟ್ ಪ್ರಕಾರ, ಸಾರ್ವತ್ರಿಕ ಚುನಾವಣೆಗಳು ಏಪ್ರಿಲ್ ಮಧ್ಯದಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ. ದೆಹಲಿಯ ಮುಖ್ಯ ಚುನಾವಣಾ ಅಧಿಕಾರಿ ಏಪ್ರಿಲ್ 16 ರ ತಾತ್ಕಾಲಿಕ ದಿನಾಂಕದೊಂದಿಗೆ ಅಧಿಸೂಚನೆಯನ್ನು ಕಳುಹಿಸಿದ್ದಾರೆ. ಅಂದರೆ ಏಪ್ರಿಲ್-ಮೇ ನಡುವೆ ಚುನಾವಣೆ ನಡೆಯುವುದು ಬಹುತೇಕ ಖಚಿತ ಎನ್ನಬಹುದು.

5 / 7
ಇತ್ತ ಐಪಿಎಲ್ ಅನ್ನು ಮಾರ್ಚ್​ 22 ರಿಂದ ಶುರು ಮಾಡಲು ಬಿಸಿಸಿಐ ಯೋಜನೆ ರೂಪಿಸಿದೆ. ಅಲ್ಲದೆ ಚುನಾವಣೆ ಸಮಯದ ಪಂದ್ಯಗಳನ್ನು ವಿದೇಶದಲ್ಲಿ ಆಯೋಜಿಸುವ ಬಗ್ಗೆ ಚರ್ಚಿಸಲಾಗಿದೆ. ಅದರಂತೆ ಐಪಿಎಲ್​ ಅನ್ನು ಭಾರತ ಮತ್ತು ವಿದೇಶಗಳಲ್ಲಿ ಆಯೋಜಿಸುವ ಸಾಧ್ಯತೆ ಹೆಚ್ಚಿದೆ.

ಇತ್ತ ಐಪಿಎಲ್ ಅನ್ನು ಮಾರ್ಚ್​ 22 ರಿಂದ ಶುರು ಮಾಡಲು ಬಿಸಿಸಿಐ ಯೋಜನೆ ರೂಪಿಸಿದೆ. ಅಲ್ಲದೆ ಚುನಾವಣೆ ಸಮಯದ ಪಂದ್ಯಗಳನ್ನು ವಿದೇಶದಲ್ಲಿ ಆಯೋಜಿಸುವ ಬಗ್ಗೆ ಚರ್ಚಿಸಲಾಗಿದೆ. ಅದರಂತೆ ಐಪಿಎಲ್​ ಅನ್ನು ಭಾರತ ಮತ್ತು ವಿದೇಶಗಳಲ್ಲಿ ಆಯೋಜಿಸುವ ಸಾಧ್ಯತೆ ಹೆಚ್ಚಿದೆ.

6 / 7
2014ರಲ್ಲಿ ಲೋಕಸಭಾ ಚುನಾವಣಾ ನಿಮಿತ್ತ ಐಪಿಎಲ್​ನ 20 ಪಂದ್ಯಗಳನ್ನು ದುಬೈನಲ್ಲಿ ಆಯೋಜಿಸಲಾಗಿತ್ತು. ಇದಕ್ಕೂ ಮುನ್ನ 2009 ರ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಸಂಪೂರ್ಣ ಟೂರ್ನಿಯನ್ನು ಸೌತ್ ಆಫ್ರಿಕಾದಲ್ಲಿ ನಡೆಸಲಾಗಿತ್ತು. ಇದೀಗ ಮೂರನೇ ಬಾರಿ ಚುನಾವಣಾ ನಿಮಿತ್ತ ಐಪಿಎಲ್​ನ ಕೆಲ ಪಂದ್ಯಗಳು ವಿದೇಶಕ್ಕೆ ಶಿಫ್ಟ್ ಆಗುವ ಸಾಧ್ಯತೆ ಹೆಚ್ಚಿದೆ.

2014ರಲ್ಲಿ ಲೋಕಸಭಾ ಚುನಾವಣಾ ನಿಮಿತ್ತ ಐಪಿಎಲ್​ನ 20 ಪಂದ್ಯಗಳನ್ನು ದುಬೈನಲ್ಲಿ ಆಯೋಜಿಸಲಾಗಿತ್ತು. ಇದಕ್ಕೂ ಮುನ್ನ 2009 ರ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಸಂಪೂರ್ಣ ಟೂರ್ನಿಯನ್ನು ಸೌತ್ ಆಫ್ರಿಕಾದಲ್ಲಿ ನಡೆಸಲಾಗಿತ್ತು. ಇದೀಗ ಮೂರನೇ ಬಾರಿ ಚುನಾವಣಾ ನಿಮಿತ್ತ ಐಪಿಎಲ್​ನ ಕೆಲ ಪಂದ್ಯಗಳು ವಿದೇಶಕ್ಕೆ ಶಿಫ್ಟ್ ಆಗುವ ಸಾಧ್ಯತೆ ಹೆಚ್ಚಿದೆ.

7 / 7
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್