AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್​ನಲ್ಲಿ ಮಿಂಚಿದ ಈ ಐವರಿಗೆ ಶೀಘ್ರದಲ್ಲೇ ಟೀಂ ಇಂಡಿಯಾದಲ್ಲಿ ಅವಕಾಶ

IPL 2024: ಈ ಬಾರಿಯ ಐಪಿಎಲ್‌ನಲ್ಲಿ ಭಾರತದ ಅನೇಕ ಯುವ ಆಟಗಾರರು ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಈ ಅನ್‌ಕ್ಯಾಪ್ಡ್ ಆಟಗಾರರು ಐಪಿಎಲ್‌ನ ಈ ಸೀಸನ್ ಮುಗಿದ ತಕ್ಷಣ ಟೀಂ ಇಂಡಿಯಾಗೆ ಆಯ್ಕೆಯಾಗುವುದು ಖಚಿತ ಎಂಬುದು ಪರಿಣಿತರ ಅಭಿಪ್ರಾಯ. ಅಂತಹ ಯುವ ಆಟಗಾರರ ಪಟ್ಟಿ ಇಲ್ಲಿದೆ.

ಪೃಥ್ವಿಶಂಕರ
|

Updated on: May 08, 2024 | 7:37 PM

Share
ಈ ಬಾರಿಯ ಐಪಿಎಲ್‌ನಲ್ಲಿ ಭಾರತದ ಅನೇಕ ಯುವ ಆಟಗಾರರು ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಈ ಅನ್‌ಕ್ಯಾಪ್ಡ್ ಆಟಗಾರರು ಐಪಿಎಲ್‌ನ ಈ ಸೀಸನ್ ಮುಗಿದ ತಕ್ಷಣ ಟೀಂ ಇಂಡಿಯಾಗೆ ಆಯ್ಕೆಯಾಗುವುದು ಖಚಿತ ಎಂಬುದು ಪರಿಣಿತರ ಅಭಿಪ್ರಾಯ. ಅಂತಹ ಯುವ ಆಟಗಾರರ ಪಟ್ಟಿ ಇಲ್ಲಿದೆ.

ಈ ಬಾರಿಯ ಐಪಿಎಲ್‌ನಲ್ಲಿ ಭಾರತದ ಅನೇಕ ಯುವ ಆಟಗಾರರು ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಈ ಅನ್‌ಕ್ಯಾಪ್ಡ್ ಆಟಗಾರರು ಐಪಿಎಲ್‌ನ ಈ ಸೀಸನ್ ಮುಗಿದ ತಕ್ಷಣ ಟೀಂ ಇಂಡಿಯಾಗೆ ಆಯ್ಕೆಯಾಗುವುದು ಖಚಿತ ಎಂಬುದು ಪರಿಣಿತರ ಅಭಿಪ್ರಾಯ. ಅಂತಹ ಯುವ ಆಟಗಾರರ ಪಟ್ಟಿ ಇಲ್ಲಿದೆ.

1 / 6
ಶಶಾಂಕ್ ಸಿಂಗ್: ಪಂಜಾಬ್ ಕಿಂಗ್ಸ್ ತಂಡ ಆಕಸ್ಮಿಕವಾಗಿ ಖರೀದಿಸಿದ ತಂಡಕ್ಕಾಗಿ ಶಶಾಂಕ್ ಸಿಂಗ್ ತಂಡದ ಪರ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಶಶಾಂಕ್ ಸಿಂಗ್ ಈ ಸೀಸನ್‌ನಲ್ಲಿ ಪಂಜಾಬ್ ಕಿಂಗ್ಸ್ ಪರ 11 ಪಂದ್ಯಗಳನ್ನಾಡಿದ್ದು ಒಟ್ಟು 365 ರನ್ ಗಳಿಸಿದ್ದಾರೆ. ಹೀಗಾಗಿ ಅವರು ಭಾರತ ತಂಡಕ್ಕೆ ಆಯ್ಕೆಯಾಗುವ ಸಾಧ್ಯತೆಗಳಿವೆ.

ಶಶಾಂಕ್ ಸಿಂಗ್: ಪಂಜಾಬ್ ಕಿಂಗ್ಸ್ ತಂಡ ಆಕಸ್ಮಿಕವಾಗಿ ಖರೀದಿಸಿದ ತಂಡಕ್ಕಾಗಿ ಶಶಾಂಕ್ ಸಿಂಗ್ ತಂಡದ ಪರ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಶಶಾಂಕ್ ಸಿಂಗ್ ಈ ಸೀಸನ್‌ನಲ್ಲಿ ಪಂಜಾಬ್ ಕಿಂಗ್ಸ್ ಪರ 11 ಪಂದ್ಯಗಳನ್ನಾಡಿದ್ದು ಒಟ್ಟು 365 ರನ್ ಗಳಿಸಿದ್ದಾರೆ. ಹೀಗಾಗಿ ಅವರು ಭಾರತ ತಂಡಕ್ಕೆ ಆಯ್ಕೆಯಾಗುವ ಸಾಧ್ಯತೆಗಳಿವೆ.

2 / 6
ಮಯಾಂಕ್ ಯಾದವ್; ವೇಗದ ಬೌಲಿಂಗ್ ಮೂಲಕ ಸಂಚಲನ ಮೂಡಿಸಿರುವ ಮಯಾಂಕ್ ಯಾದವ್​ಗೆ ಟೀಂ ಇಂಡಿಯಾದ ಬಾಗಿಲು ತೆರೆಯುವುದು ಖಚಿತ. ಲಕ್ನೋ ಪರ ಆಡುತ್ತಿರುವ ಮಯಾಂಕ್ ತಮ್ಮ ಮಾರಕ ಬೌಲಿಂಗ್‌ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಆದರೂ ಅವರ ಫಿಟ್ನೆಸ್ ಸಮಸ್ಯೆಯಾಗಿದೆ. ಅವರು ತಮ್ಮ ಫಿಟ್‌ನೆಸ್‌ನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದರೆ, ಅವರು ಭಾರತ ತಂಡದ ವೇಗದ ಬೌಲಿಂಗ್ ದಾಳಿಯ ಪ್ರಮುಖ ಅಸ್ತ್ರವಾಗಬಲ್ಲರು.

ಮಯಾಂಕ್ ಯಾದವ್; ವೇಗದ ಬೌಲಿಂಗ್ ಮೂಲಕ ಸಂಚಲನ ಮೂಡಿಸಿರುವ ಮಯಾಂಕ್ ಯಾದವ್​ಗೆ ಟೀಂ ಇಂಡಿಯಾದ ಬಾಗಿಲು ತೆರೆಯುವುದು ಖಚಿತ. ಲಕ್ನೋ ಪರ ಆಡುತ್ತಿರುವ ಮಯಾಂಕ್ ತಮ್ಮ ಮಾರಕ ಬೌಲಿಂಗ್‌ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಆದರೂ ಅವರ ಫಿಟ್ನೆಸ್ ಸಮಸ್ಯೆಯಾಗಿದೆ. ಅವರು ತಮ್ಮ ಫಿಟ್‌ನೆಸ್‌ನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದರೆ, ಅವರು ಭಾರತ ತಂಡದ ವೇಗದ ಬೌಲಿಂಗ್ ದಾಳಿಯ ಪ್ರಮುಖ ಅಸ್ತ್ರವಾಗಬಲ್ಲರು.

3 / 6
ಅಭಿಷೇಕ್ ಶರ್ಮಾ: ಎಡಗೈ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ತಮ್ಮ ಸ್ಫೋಟಕ ಬ್ಯಾಟಿಂಗ್‌ನಿಂದ ಸನ್‌ರೈಸರ್ಸ್ ಹೈದರಾಬಾದ್‌ ಪರ ಸಾಕಷ್ಟು ಸಂಚಲನ ಮೂಡಿಸಿದ್ದಾರೆ. ಈ ಸೀಸನ್​ನಲ್ಲಿ ಅಭಿಷೇಕ್ ತಮ್ಮ ಪ್ರಬಲ ಆಟದಿಂದ 195 ಸ್ಟ್ರೈಕ್ ರೇಟ್‌ನಲ್ಲಿ 326 ರನ್ ಚಚ್ಚಿದ್ದಾರೆ. ಹೀಗಾಗಿ ಅವರು ಆರಂಭಿಕ ಆಯ್ಕೆಯಾಗಿ ಭಾರತ ತಂಡದಲ್ಲಿ ಅವಕಾಶ ಪಡೆಯಬಹುದು.

ಅಭಿಷೇಕ್ ಶರ್ಮಾ: ಎಡಗೈ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ತಮ್ಮ ಸ್ಫೋಟಕ ಬ್ಯಾಟಿಂಗ್‌ನಿಂದ ಸನ್‌ರೈಸರ್ಸ್ ಹೈದರಾಬಾದ್‌ ಪರ ಸಾಕಷ್ಟು ಸಂಚಲನ ಮೂಡಿಸಿದ್ದಾರೆ. ಈ ಸೀಸನ್​ನಲ್ಲಿ ಅಭಿಷೇಕ್ ತಮ್ಮ ಪ್ರಬಲ ಆಟದಿಂದ 195 ಸ್ಟ್ರೈಕ್ ರೇಟ್‌ನಲ್ಲಿ 326 ರನ್ ಚಚ್ಚಿದ್ದಾರೆ. ಹೀಗಾಗಿ ಅವರು ಆರಂಭಿಕ ಆಯ್ಕೆಯಾಗಿ ಭಾರತ ತಂಡದಲ್ಲಿ ಅವಕಾಶ ಪಡೆಯಬಹುದು.

4 / 6
ಹರ್ಷಿತ್ ರಾಣಾ:  ದೆಹಲಿಯ ಯುವ ವೇಗದ ಬೌಲರ್ ಹರ್ಷಿತ್ ರಾಣಾ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡುತ್ತಿದ್ದಾರೆ. ಈ ಸೀಸನ್ ಹರ್ಷಿತ್ 9 ಪಂದ್ಯಗಳನ್ನಾಡಿದ್ದು ಒಟ್ಟು 14 ವಿಕೆಟ್ ಪಡೆದಿದ್ದಾರೆ. ಹೀಗಿರುವಾಗ ಐಪಿಎಲ್ ಬಳಿಕ ಹರ್ಷಿತ್​ಗೆ ಟೀಂ ಇಂಡಿಯಾದ ಬಾಗಿಲು ತೆರೆಯಬಹುದು.

ಹರ್ಷಿತ್ ರಾಣಾ: ದೆಹಲಿಯ ಯುವ ವೇಗದ ಬೌಲರ್ ಹರ್ಷಿತ್ ರಾಣಾ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡುತ್ತಿದ್ದಾರೆ. ಈ ಸೀಸನ್ ಹರ್ಷಿತ್ 9 ಪಂದ್ಯಗಳನ್ನಾಡಿದ್ದು ಒಟ್ಟು 14 ವಿಕೆಟ್ ಪಡೆದಿದ್ದಾರೆ. ಹೀಗಿರುವಾಗ ಐಪಿಎಲ್ ಬಳಿಕ ಹರ್ಷಿತ್​ಗೆ ಟೀಂ ಇಂಡಿಯಾದ ಬಾಗಿಲು ತೆರೆಯಬಹುದು.

5 / 6
ರಿಯಾನ್ ಪರಾಗ್: ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ಯುವ ಬ್ಯಾಟ್ಸ್‌ಮನ್ ರಿಯಾನ್ ಪರಾಗ್ ಈ ಸೀಸನ್​ನಲ್ಲಿ 11 ಪಂದ್ಯಗಳನ್ನಾಡಿದ್ದು 436 ರನ್ ಗಳಿಸಿದ್ದಾರೆ. ಇದರಲ್ಲಿ ನಾಲ್ಕು ಅರ್ಧಶತಕಗಳನ್ನು ಬಾರಿಸಿದ್ದಾರೆ. ಹೀಗಾಗಿ ಐಪಿಎಲ್ ನಂತರ ರಿಯಾನ್ ಪರಾಗ್​ಗೆ ಟೀಂ ಇಂಡಿಯಾದ ಬಾಗಿಲು ಖಂಡಿತ ತೆರೆಯಲಿದೆ ಎಂದು ನಂಬಲಾಗಿದೆ.

ರಿಯಾನ್ ಪರಾಗ್: ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ಯುವ ಬ್ಯಾಟ್ಸ್‌ಮನ್ ರಿಯಾನ್ ಪರಾಗ್ ಈ ಸೀಸನ್​ನಲ್ಲಿ 11 ಪಂದ್ಯಗಳನ್ನಾಡಿದ್ದು 436 ರನ್ ಗಳಿಸಿದ್ದಾರೆ. ಇದರಲ್ಲಿ ನಾಲ್ಕು ಅರ್ಧಶತಕಗಳನ್ನು ಬಾರಿಸಿದ್ದಾರೆ. ಹೀಗಾಗಿ ಐಪಿಎಲ್ ನಂತರ ರಿಯಾನ್ ಪರಾಗ್​ಗೆ ಟೀಂ ಇಂಡಿಯಾದ ಬಾಗಿಲು ಖಂಡಿತ ತೆರೆಯಲಿದೆ ಎಂದು ನಂಬಲಾಗಿದೆ.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ