AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಟಿ20 ವಿಶ್ವಕಪ್​ಗೆ ಆಯ್ಕೆ; ಮುಂದಿನ ಐಪಿಎಲ್ ಪಂದ್ಯದಲ್ಲಿ ಈ 6 ಆಟಗಾರರು ಫ್ಲಾಪ್..!

T20 World Cup 2024: ಈ 6 ಆಟಗಾರರ ಪ್ರದರ್ಶನವನ್ನು ಅಷ್ಟು ಬೇಗ ನಿರ್ಣಯಿಸಲಾಗದಿದ್ದರೂ, ಈ ಫಾರ್ಮ್ ಖಂಡಿತವಾಗಿಯೂ ಟೀಂ ಇಂಡಿಯಾದ ಟೆನ್ಶನ್ ಹೆಚ್ಚಿಸಿದೆ. ವಿಶ್ವಕಪ್​ನಲ್ಲಿ ಈ ಆಟಗಾರರ ಪ್ರದರ್ಶನ ಹೇಗಿರಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಪೃಥ್ವಿಶಂಕರ
|

Updated on:May 02, 2024 | 5:17 PM

Share
ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡ ಪ್ರಕಟವಾದ ಕೂಡಲೇ ಒಂದಷ್ಟು ಪ್ರಶ್ನೆಗಳು ಹುಟ್ಟಿಕೊಳ್ಳುತ್ತಿವೆ. ಕೆಲವು ಸ್ಟಾರ್ ಆಟಗಾರರಿಗೆ ಅವಕಾಶ ಸಿಗದಿರುವ ಬಗ್ಗೆ ಅಭಿಮಾನಿಗಳು ಮತ್ತು ತಜ್ಞರು ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ. ಈ ನಡುವೆ ಅವಕಾಶ ಪಡೆದವರ ಪ್ರದರ್ಶನವೂ ಹಳ್ಳ ಹಿಡಿದಿದೆ. ಅಂತಹ 6 ಆಟಗಾರರ ವಿವರ ಇಲ್ಲಿದೆ.

ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡ ಪ್ರಕಟವಾದ ಕೂಡಲೇ ಒಂದಷ್ಟು ಪ್ರಶ್ನೆಗಳು ಹುಟ್ಟಿಕೊಳ್ಳುತ್ತಿವೆ. ಕೆಲವು ಸ್ಟಾರ್ ಆಟಗಾರರಿಗೆ ಅವಕಾಶ ಸಿಗದಿರುವ ಬಗ್ಗೆ ಅಭಿಮಾನಿಗಳು ಮತ್ತು ತಜ್ಞರು ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ. ಈ ನಡುವೆ ಅವಕಾಶ ಪಡೆದವರ ಪ್ರದರ್ಶನವೂ ಹಳ್ಳ ಹಿಡಿದಿದೆ. ಅಂತಹ 6 ಆಟಗಾರರ ವಿವರ ಇಲ್ಲಿದೆ.

1 / 8
ಹಾರ್ದಿಕ್ ಪಾಂಡ್ಯ: ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ವಿಶ್ವಕಪ್ ತಂಡದ ಉಪನಾಯಕರನ್ನಾಗಿ ಮಾಡಲಾಗಿದೆ. ತಂಡವನ್ನು ಪ್ರಕಟಿಸಿದ ನಂತರ, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಪಂದ್ಯವನ್ನು ಆಡಿದ ಪಾಂಡ್ಯಗೆ ಖಾತೆ ತೆರೆಯಲೂ ಸಾಧ್ಯವಾಗಲಿಲ್ಲ. ಆದರೆ, ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಅವರು 26 ರನ್ ನೀಡಿ 2 ವಿಕೆಟ್ ಪಡೆದರು.

ಹಾರ್ದಿಕ್ ಪಾಂಡ್ಯ: ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ವಿಶ್ವಕಪ್ ತಂಡದ ಉಪನಾಯಕರನ್ನಾಗಿ ಮಾಡಲಾಗಿದೆ. ತಂಡವನ್ನು ಪ್ರಕಟಿಸಿದ ನಂತರ, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಪಂದ್ಯವನ್ನು ಆಡಿದ ಪಾಂಡ್ಯಗೆ ಖಾತೆ ತೆರೆಯಲೂ ಸಾಧ್ಯವಾಗಲಿಲ್ಲ. ಆದರೆ, ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಅವರು 26 ರನ್ ನೀಡಿ 2 ವಿಕೆಟ್ ಪಡೆದರು.

2 / 8
ಶಿವಂ ದುಬೆ: ಸ್ಫೋಟಕ ಬ್ಯಾಟಿಂಗ್​ಗೆ ಹೆಸರುವಾಸಿಯಾಗಿರುವ ಶಿವಂ ದುಬೆ ಟೀಂ ಇಂಡಿಯಾಗೆ ಆಯ್ಕೆಯಾದ ನಂತರ ಪಂಜಾಬ್ ಕಿಂಗ್ಸ್ ವಿರುದ್ಧ ಪಂದ್ಯ ಆಡಿದ್ದರು. ಆದರೆ ಆ ಪಂದ್ಯದಲ್ಲಿ ದುಬೆ ಶೂನ್ಯಕ್ಕೆ ಔಟಾದರು.

ಶಿವಂ ದುಬೆ: ಸ್ಫೋಟಕ ಬ್ಯಾಟಿಂಗ್​ಗೆ ಹೆಸರುವಾಸಿಯಾಗಿರುವ ಶಿವಂ ದುಬೆ ಟೀಂ ಇಂಡಿಯಾಗೆ ಆಯ್ಕೆಯಾದ ನಂತರ ಪಂಜಾಬ್ ಕಿಂಗ್ಸ್ ವಿರುದ್ಧ ಪಂದ್ಯ ಆಡಿದ್ದರು. ಆದರೆ ಆ ಪಂದ್ಯದಲ್ಲಿ ದುಬೆ ಶೂನ್ಯಕ್ಕೆ ಔಟಾದರು.

3 / 8
ರೋಹಿತ್ ಶರ್ಮಾ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಈ ಬಾರಿಯ ಐಪಿಎಲ್​ನಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಕೇವಲ 4 ರನ್ ಗಳಿಸಿ ಔಟಾದರು. ಪ್ರಸ್ತುತ ರೋಹಿತ್ ಫಾರ್ಮ್ ಟೀಂ ಇಂಡಿಯಾದ ಟೆನ್ಷನ್ ಕೂಡ ಹೆಚ್ಚಿಸಿದೆ.

ರೋಹಿತ್ ಶರ್ಮಾ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಈ ಬಾರಿಯ ಐಪಿಎಲ್​ನಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಕೇವಲ 4 ರನ್ ಗಳಿಸಿ ಔಟಾದರು. ಪ್ರಸ್ತುತ ರೋಹಿತ್ ಫಾರ್ಮ್ ಟೀಂ ಇಂಡಿಯಾದ ಟೆನ್ಷನ್ ಕೂಡ ಹೆಚ್ಚಿಸಿದೆ.

4 / 8
ರವೀಂದ್ರ ಜಡೇಜಾ: ಆಲ್‌ರೌಂಡರ್ ರವೀಂದ್ರ ಜಡೇಜಾ ಕೂಡ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಜಡೇಜಾ ಕೇವಲ 2 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು

ರವೀಂದ್ರ ಜಡೇಜಾ: ಆಲ್‌ರೌಂಡರ್ ರವೀಂದ್ರ ಜಡೇಜಾ ಕೂಡ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಜಡೇಜಾ ಕೇವಲ 2 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು

5 / 8
ಸೂರ್ಯಕುಮಾರ್ ಯಾದವ್: ಸ್ಫೋಟಕ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್‌ ಕೂಡ ಈ ಐಪಿಎಲ್ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದಾರೆ. ಸೂರ್ಯ ಇದುವರೆಗೆ 7 ಪಂದ್ಯಗಳಿಂದ 176 ರನ್ ಗಳಿಸಿದ್ದಾರೆ. ಇದೀಗ ಟಿ20 ವಿಶ್ವಕಪ್​ಗೆ ಆಯ್ಕೆಯಾದ ಬಳಿಕವೂ ಸೂರ್ಯ, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕೇವಲ 10 ರನ್ ಗಳಿಸಿ ಔಟಾದರು.

ಸೂರ್ಯಕುಮಾರ್ ಯಾದವ್: ಸ್ಫೋಟಕ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್‌ ಕೂಡ ಈ ಐಪಿಎಲ್ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದಾರೆ. ಸೂರ್ಯ ಇದುವರೆಗೆ 7 ಪಂದ್ಯಗಳಿಂದ 176 ರನ್ ಗಳಿಸಿದ್ದಾರೆ. ಇದೀಗ ಟಿ20 ವಿಶ್ವಕಪ್​ಗೆ ಆಯ್ಕೆಯಾದ ಬಳಿಕವೂ ಸೂರ್ಯ, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕೇವಲ 10 ರನ್ ಗಳಿಸಿ ಔಟಾದರು.

6 / 8
ಅರ್ಷದೀಪ್ ಸಿಂಗ್: ಅದೇ ರೀತಿ ಅರ್ಷದೀಪ್ ಸಿಂಗ್ ಕೂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ತನ್ನ ಖೋಟಾದ 4 ಓವರ್‌ಗಳಲ್ಲಿ 13 ರ ಎಕಾನಮಿಯೊಂದಿಗೆ 52 ರನ್‌ಗಳನ್ನು ನೀಡಿದರು. ಅಲ್ಲದೆ ಕೇವಲ ಒಂದು ವಿಕೆಟ್ ಮಾತ್ರ ಪಡೆದರು.

ಅರ್ಷದೀಪ್ ಸಿಂಗ್: ಅದೇ ರೀತಿ ಅರ್ಷದೀಪ್ ಸಿಂಗ್ ಕೂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ತನ್ನ ಖೋಟಾದ 4 ಓವರ್‌ಗಳಲ್ಲಿ 13 ರ ಎಕಾನಮಿಯೊಂದಿಗೆ 52 ರನ್‌ಗಳನ್ನು ನೀಡಿದರು. ಅಲ್ಲದೆ ಕೇವಲ ಒಂದು ವಿಕೆಟ್ ಮಾತ್ರ ಪಡೆದರು.

7 / 8
ಆಟಗಾರರ ಪ್ರದರ್ಶನವನ್ನು ಅಷ್ಟು ಬೇಗ ನಿರ್ಣಯಿಸಲಾಗದಿದ್ದರೂ, ಈ ಫಾರ್ಮ್ ಖಂಡಿತವಾಗಿಯೂ ಟೀಂ ಇಂಡಿಯಾದ ಟೆನ್ಶನ್ ಅನ್ನು ಹೆಚ್ಚಿಸಿದೆ. ವಿಶ್ವಕಪ್​ನಲ್ಲಿ ಈ ಆಟಗಾರರ ಪ್ರದರ್ಶನ ಹೇಗಿರಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಆಟಗಾರರ ಪ್ರದರ್ಶನವನ್ನು ಅಷ್ಟು ಬೇಗ ನಿರ್ಣಯಿಸಲಾಗದಿದ್ದರೂ, ಈ ಫಾರ್ಮ್ ಖಂಡಿತವಾಗಿಯೂ ಟೀಂ ಇಂಡಿಯಾದ ಟೆನ್ಶನ್ ಅನ್ನು ಹೆಚ್ಚಿಸಿದೆ. ವಿಶ್ವಕಪ್​ನಲ್ಲಿ ಈ ಆಟಗಾರರ ಪ್ರದರ್ಶನ ಹೇಗಿರಲಿದೆ ಎಂಬುದನ್ನು ಕಾದು ನೋಡಬೇಕಿದೆ.

8 / 8

Published On - 5:14 pm, Thu, 2 May 24

ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು