AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 3 ತಂಡಗಳಿಗೆ ಹೊಸ ನಾಯಕರುಗಳು

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಸೀಸನ್ 17 ಮಾರ್ಚ್ 22 ರಿಂದ ಶುರುವಾಗಲಿದೆ. ಈ ಬಾರಿಯ ಐಪಿಎಲ್​ನಲ್ಲಿ ಮೂರು ತಂಡಗಳನ್ನು ಹೊಸ ನಾಯಕರುಗಳು ಮುನ್ನಡೆಸಲಿದ್ದಾರೆ. ಹಾಗೆಯೇ ಕಳೆದ ಬಾರಿ ನಾಯಕರುಗಳಾಗಿ ಕಾಣಿಸಿಕೊಂಡಿದ್ದ ರೋಹಿತ್ ಶರ್ಮಾ ಹಾಗೂ ಐಡೆನ್ ಮಾರ್ಕ್ರಾಮ್ ಈ ಬಾರಿ ಕೇವಲ ಬ್ಯಾಟರ್​ಗಳಾಗಿ ಕಣಕ್ಕಿಳಿಯಲಿದ್ದಾರೆ.

TV9 Web
| Edited By: |

Updated on: Mar 04, 2024 | 1:21 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಶುರುವಾಗಲು ಕೇವಲ ದಿನಗಳು ಮಾತ್ರ ಉಳಿದಿವೆ. ಇದರ ಬೆನ್ನಲ್ಲೇ ಎಲ್ಲಾ ತಂಡಗಳು ಸಿದ್ಧತೆಗಳು ಶುರು ಮಾಡಿಕೊಂಡಿದ್ದು, ಅದರ ಮೊದಲ ಭಾಗವಾಗಿ ಇದೀಗ ನಾಯಕರುಗಳನ್ನು ಫೈನಲ್ ಮಾಡಲಾಗಿದೆ. ಅದರಂತೆ ಈ ಬಾರಿಯ ಐಪಿಎಲ್​ನಲ್ಲಿ 3 ತಂಡಗಳನ್ನು ಹೊಸ ನಾಯಕರುಗಳು ಮುನ್ನಡೆಸಲಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಶುರುವಾಗಲು ಕೇವಲ ದಿನಗಳು ಮಾತ್ರ ಉಳಿದಿವೆ. ಇದರ ಬೆನ್ನಲ್ಲೇ ಎಲ್ಲಾ ತಂಡಗಳು ಸಿದ್ಧತೆಗಳು ಶುರು ಮಾಡಿಕೊಂಡಿದ್ದು, ಅದರ ಮೊದಲ ಭಾಗವಾಗಿ ಇದೀಗ ನಾಯಕರುಗಳನ್ನು ಫೈನಲ್ ಮಾಡಲಾಗಿದೆ. ಅದರಂತೆ ಈ ಬಾರಿಯ ಐಪಿಎಲ್​ನಲ್ಲಿ 3 ತಂಡಗಳನ್ನು ಹೊಸ ನಾಯಕರುಗಳು ಮುನ್ನಡೆಸಲಿದ್ದಾರೆ.

1 / 7
ಕಳೆದ ಬಾರಿ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸಿದ್ದ ಹಾರ್ದಿಕ್ ಪಾಂಡ್ಯ ಈ ಬಾರಿ ಮುಂಬೈ ಇಂಡಿಯನ್ಸ್ ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಈ ಬಾರಿಯ ಐಪಿಎಲ್ ಹರಾಜಿಗೂ ಮುನ್ನ ಪಾಂಡ್ಯರನ್ನು ಮುಂಬೈ ಇಂಡಿಯನ್ಸ್ ಟ್ರೇಡ್ ಮಾಡಿಕೊಂಡಿದೆ.

ಕಳೆದ ಬಾರಿ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸಿದ್ದ ಹಾರ್ದಿಕ್ ಪಾಂಡ್ಯ ಈ ಬಾರಿ ಮುಂಬೈ ಇಂಡಿಯನ್ಸ್ ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಈ ಬಾರಿಯ ಐಪಿಎಲ್ ಹರಾಜಿಗೂ ಮುನ್ನ ಪಾಂಡ್ಯರನ್ನು ಮುಂಬೈ ಇಂಡಿಯನ್ಸ್ ಟ್ರೇಡ್ ಮಾಡಿಕೊಂಡಿದೆ.

2 / 7
ಈ ಟ್ರೇಡ್ ಪ್ರಕ್ರಿಯೆಯ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯರನ್ನು ಮುಂಬೈ ಇಂಡಿಯನ್ಸ್ ಕ್ಯಾಪ್ಟನ್ ಆಗಿ ಘೋಷಿಸಿತು. ಅಂದರೆ ಕಳೆದ 10 ವರ್ಷಗಳಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದ್ದ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಪಾಂಡ್ಯಗೆ ಕ್ಯಾಪ್ಟನ್ ಪಟ್ಟ ನೀಡಲಾಗಿದೆ. ಅದರಂತೆ ಈ ಬಾರಿ ಮುಂಬೈ ಇಂಡಿಯನ್ಸ್ ಹಾರ್ದಿಕ್ ಪಾಂಡ್ಯ ಮುಂದಾಳತ್ವದಲ್ಲಿ ಕಣಕ್ಕಿಳಿಯಲಿದೆ.

ಈ ಟ್ರೇಡ್ ಪ್ರಕ್ರಿಯೆಯ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯರನ್ನು ಮುಂಬೈ ಇಂಡಿಯನ್ಸ್ ಕ್ಯಾಪ್ಟನ್ ಆಗಿ ಘೋಷಿಸಿತು. ಅಂದರೆ ಕಳೆದ 10 ವರ್ಷಗಳಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದ್ದ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಪಾಂಡ್ಯಗೆ ಕ್ಯಾಪ್ಟನ್ ಪಟ್ಟ ನೀಡಲಾಗಿದೆ. ಅದರಂತೆ ಈ ಬಾರಿ ಮುಂಬೈ ಇಂಡಿಯನ್ಸ್ ಹಾರ್ದಿಕ್ ಪಾಂಡ್ಯ ಮುಂದಾಳತ್ವದಲ್ಲಿ ಕಣಕ್ಕಿಳಿಯಲಿದೆ.

3 / 7
ಇತ್ತ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್​ಗೆ ಹೋದ ಬೆನ್ನಲ್ಲೇ, ಗುಜರಾತ್ ಟೈಟಾನ್ಸ್ ತಂಡವು ಶುಭ್​ಮನ್ ಗಿಲ್ ಅವರನ್ನು ಹೊಸ ನಾಯಕನನ್ನಾಗಿ ಘೋಷಿಸಿದೆ. ಅದರಂತೆ ಗಿಲ್ ಸಾರಥ್ಯದಲ್ಲಿ ಈ ಬಾರಿ ಗುಜರಾತ್ ಟೈಟಾನ್ಸ್ ತಂಡವು ಕಣಕ್ಕಿಳಿಯಲಿದೆ.

ಇತ್ತ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್​ಗೆ ಹೋದ ಬೆನ್ನಲ್ಲೇ, ಗುಜರಾತ್ ಟೈಟಾನ್ಸ್ ತಂಡವು ಶುಭ್​ಮನ್ ಗಿಲ್ ಅವರನ್ನು ಹೊಸ ನಾಯಕನನ್ನಾಗಿ ಘೋಷಿಸಿದೆ. ಅದರಂತೆ ಗಿಲ್ ಸಾರಥ್ಯದಲ್ಲಿ ಈ ಬಾರಿ ಗುಜರಾತ್ ಟೈಟಾನ್ಸ್ ತಂಡವು ಕಣಕ್ಕಿಳಿಯಲಿದೆ.

4 / 7
ಇನ್ನು ಸನ್​ರೈಸರ್ಸ್ ಹೈದರಾಬಾದ್ ತಂಡ ಕೂಡ ಐಪಿಎಲ್ ಸೀಸನ್​-17 ಗಾಗಿ ಹೊಸ ನಾಯಕನನ್ನು ಘೋಷಿಸಿದೆ. ಅದರಂತೆ ಈ ಬಾರಿ ಪ್ಯಾಟ್ ಕಮಿನ್ಸ್ ಸಾರಥ್ಯದಲ್ಲಿ ಸನ್​ರೈಸರ್ಸ್ ಪಡೆ ಕಣಕ್ಕಿಳಿಯಲಿದೆ.

ಇನ್ನು ಸನ್​ರೈಸರ್ಸ್ ಹೈದರಾಬಾದ್ ತಂಡ ಕೂಡ ಐಪಿಎಲ್ ಸೀಸನ್​-17 ಗಾಗಿ ಹೊಸ ನಾಯಕನನ್ನು ಘೋಷಿಸಿದೆ. ಅದರಂತೆ ಈ ಬಾರಿ ಪ್ಯಾಟ್ ಕಮಿನ್ಸ್ ಸಾರಥ್ಯದಲ್ಲಿ ಸನ್​ರೈಸರ್ಸ್ ಪಡೆ ಕಣಕ್ಕಿಳಿಯಲಿದೆ.

5 / 7
ಐಪಿಎಲ್​ 2023 ರಲ್ಲಿ ಮುನ್ನಡೆಸಿದ್ದ ಐಡೆನ್ ಮಾರ್ಕ್ರಾಮ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಲಾಗಿದ್ದು, ಅವರ ಬದಲಿಗೆ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್​ಗೆ ಕಪ್ತಾನಗಿರಿ ನೀಡಲಾಗಿದೆ. ಅದರಂತೆ ಸನ್​ರೈಸರ್ಸ್ ಹೈದರಾಬಾದ್ ತಂಡವು ಈ ಬಾರಿ ಕಮಿನ್ಸ್ ಸಾರಥ್ಯದಲ್ಲಿ ಮೈದಾನಕ್ಕಿಳಿಯಲಿದೆ.

ಐಪಿಎಲ್​ 2023 ರಲ್ಲಿ ಮುನ್ನಡೆಸಿದ್ದ ಐಡೆನ್ ಮಾರ್ಕ್ರಾಮ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಲಾಗಿದ್ದು, ಅವರ ಬದಲಿಗೆ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್​ಗೆ ಕಪ್ತಾನಗಿರಿ ನೀಡಲಾಗಿದೆ. ಅದರಂತೆ ಸನ್​ರೈಸರ್ಸ್ ಹೈದರಾಬಾದ್ ತಂಡವು ಈ ಬಾರಿ ಕಮಿನ್ಸ್ ಸಾರಥ್ಯದಲ್ಲಿ ಮೈದಾನಕ್ಕಿಳಿಯಲಿದೆ.

6 / 7
ಇಂಡಿಯನ್​ ಪ್ರೀಮಿಯರ್ ಲೀಗ್​ನ 17ನೇ ಆವೃತ್ತಿ ಮಾರ್ಚ್ 22 ರಿಂದ ಶುರುವಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಇದರೊಂದಿಗೆ ಐಪಿಎಲ್ ಸೀಸನ್-17 ಗೆ ಚಾಲನೆ ಸಿಗಲಿದೆ.

ಇಂಡಿಯನ್​ ಪ್ರೀಮಿಯರ್ ಲೀಗ್​ನ 17ನೇ ಆವೃತ್ತಿ ಮಾರ್ಚ್ 22 ರಿಂದ ಶುರುವಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಇದರೊಂದಿಗೆ ಐಪಿಎಲ್ ಸೀಸನ್-17 ಗೆ ಚಾಲನೆ ಸಿಗಲಿದೆ.

7 / 7
Follow Us
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?