AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 3 ತಂಡಗಳಿಗೆ ಹೊಸ ನಾಯಕ..!

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ರ ಮಿನಿ ಹರಾಜು ಪ್ರಕ್ರಿಯೆ ಡಿಸೆಂಬರ್ 19 ರಂದು ದುಬೈನಲ್ಲಿ ನಡೆಯಲಿದೆ. ಈ ಹರಾಜಿಗಾಗಿ ಒಟ್ಟು 1166 ಆಟಗಾರರು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಈ ಆಟಗಾರರ ಪಟ್ಟಿಯನ್ನು ಶಾರ್ಟ್ ಲೀಸ್ಟ್ ಮಾಡಲಿದ್ದು, ಇದಾದ ಬಳಿಕ ಆಟಗಾರರ ಹರಾಜು ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

TV9 Web
| Edited By: |

Updated on: Dec 06, 2023 | 9:27 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಹರಾಜಿಗೂ ಮುನ್ನವೇ ಮೂರು ತಂಡಗಳ ನಾಯಕರುಗಳು ಬದಲಾವಣೆಯಾಗುವುದು ಬಹುತೇಕ ಖಚಿತವಾಗಿದೆ. ಇಲ್ಲಿ ಇಬ್ಬರು ನಾಯಕರುಗಳು ತಂಡಕ್ಕೆ ಕಂಬ್ಯಾಕ್ ಮಾಡುತ್ತಿದ್ದರೆ, ಮತ್ತೊಬ್ಬರು ಚೊಚ್ಚಲ ಬಾರಿಗೆ ಕಪ್ತಾನನ ಪಟ್ಟ ಅಲಂಕರಿಸಿದ್ದಾರೆ. ಅದರಂತೆ ಈ ಬಾರಿ ನಾಯಕರುಗಳನ್ನು ಬದಲಿಸಲಿರುವ ಮೂರು ತಂಡಗಳು ಈ ಕೆಳಗಿನಂತಿದೆ...

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಹರಾಜಿಗೂ ಮುನ್ನವೇ ಮೂರು ತಂಡಗಳ ನಾಯಕರುಗಳು ಬದಲಾವಣೆಯಾಗುವುದು ಬಹುತೇಕ ಖಚಿತವಾಗಿದೆ. ಇಲ್ಲಿ ಇಬ್ಬರು ನಾಯಕರುಗಳು ತಂಡಕ್ಕೆ ಕಂಬ್ಯಾಕ್ ಮಾಡುತ್ತಿದ್ದರೆ, ಮತ್ತೊಬ್ಬರು ಚೊಚ್ಚಲ ಬಾರಿಗೆ ಕಪ್ತಾನನ ಪಟ್ಟ ಅಲಂಕರಿಸಿದ್ದಾರೆ. ಅದರಂತೆ ಈ ಬಾರಿ ನಾಯಕರುಗಳನ್ನು ಬದಲಿಸಲಿರುವ ಮೂರು ತಂಡಗಳು ಈ ಕೆಳಗಿನಂತಿದೆ...

1 / 5
1- ಗುಜರಾತ್ ಟೈಟಾನ್ಸ್​: ಐಪಿಎಲ್​ ಸೀಸನ್ 16 ರಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸಿದ್ದ ಹಾರ್ದಿಕ್ ಪಾಂಡ್ಯ ಅವರನ್ನು ಈ ಬಾರಿ ಮುಂಬೈ ಇಂಡಿಯನ್ಸ್ ಟ್ರೇಡ್ ಮಾಡಿಕೊಂಡಿದೆ. ಹೀಗಾಗಿ ಗುಜರಾತ್ ಟೈಟಾನ್ಸ್ ತಂಡವು ಹೊಸ ನಾಯಕನಾಗಿ ಶುಭ್​ಮನ್ ಗಿಲ್ ಅವರನ್ನು ಆಯ್ಕೆ ಮಾಡಿಕೊಂಡಿದೆ.

1- ಗುಜರಾತ್ ಟೈಟಾನ್ಸ್​: ಐಪಿಎಲ್​ ಸೀಸನ್ 16 ರಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸಿದ್ದ ಹಾರ್ದಿಕ್ ಪಾಂಡ್ಯ ಅವರನ್ನು ಈ ಬಾರಿ ಮುಂಬೈ ಇಂಡಿಯನ್ಸ್ ಟ್ರೇಡ್ ಮಾಡಿಕೊಂಡಿದೆ. ಹೀಗಾಗಿ ಗುಜರಾತ್ ಟೈಟಾನ್ಸ್ ತಂಡವು ಹೊಸ ನಾಯಕನಾಗಿ ಶುಭ್​ಮನ್ ಗಿಲ್ ಅವರನ್ನು ಆಯ್ಕೆ ಮಾಡಿಕೊಂಡಿದೆ.

2 / 5
2- ಡೆಲ್ಲಿ ಕ್ಯಾಪಿಟಲ್ಸ್​: ಐಪಿಎಲ್ 2023 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಡೇವಿಡ್ ವಾರ್ನರ್ ಮುನ್ನಡೆಸಿದ್ದರು. ಆದರೀಗ ಡೆಲ್ಲಿ ತಂಡದ ಖಾಯಂ ಸದಸ್ಯ ಹಾಗೂ ಕಪ್ತಾನ ರಿಷಭ್ ಪಂತ್ ಕಂಬ್ಯಾಕ್ ಮಾಡುತ್ತಿದ್ದಾರೆ. ಕಾರು ಅಪಘಾತದಿಂದ ಗಾಯಗೊಂಡಿದ್ದ ಪಂತ್ ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಈ ಬಾರಿಯ ಐಪಿಎಲ್​ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳುತ್ತಿದ್ದಾರೆ. ಹೀಗಾಗಿ ಐಪಿಎಲ್ ಸೀಸನ್ 17 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಿಷಭ್ ಪಂತ್ ಮುನ್ನಡೆಸುವುದು ಖಚಿತ.

2- ಡೆಲ್ಲಿ ಕ್ಯಾಪಿಟಲ್ಸ್​: ಐಪಿಎಲ್ 2023 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಡೇವಿಡ್ ವಾರ್ನರ್ ಮುನ್ನಡೆಸಿದ್ದರು. ಆದರೀಗ ಡೆಲ್ಲಿ ತಂಡದ ಖಾಯಂ ಸದಸ್ಯ ಹಾಗೂ ಕಪ್ತಾನ ರಿಷಭ್ ಪಂತ್ ಕಂಬ್ಯಾಕ್ ಮಾಡುತ್ತಿದ್ದಾರೆ. ಕಾರು ಅಪಘಾತದಿಂದ ಗಾಯಗೊಂಡಿದ್ದ ಪಂತ್ ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಈ ಬಾರಿಯ ಐಪಿಎಲ್​ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳುತ್ತಿದ್ದಾರೆ. ಹೀಗಾಗಿ ಐಪಿಎಲ್ ಸೀಸನ್ 17 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಿಷಭ್ ಪಂತ್ ಮುನ್ನಡೆಸುವುದು ಖಚಿತ.

3 / 5
3- ಕೊಲ್ಕತ್ತಾ ನೈಟ್ ರೈಡರ್ಸ್​: ಕಳೆದ ಸೀಸನ್​ನಲ್ಲಿ ಗಾಯದ ಕಾರಣ ಶ್ರೇಯಸ್ ಅಯ್ಯರ್ ಕೆಕೆಆರ್​ ಪರ ಕಣಕ್ಕಿಳಿದಿರಲಿಲ್ಲ. ಹೀಗಾಗಿ ತಂಡವನ್ನು ನಿತೀಶ್ ರಾಣಾ ಮುನ್ನಡೆಸಿದ್ದರು. ಇದೀಗ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಶ್ರೇಯಸ್ ಅಯ್ಯರ್ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳಿದ್ದಾರೆ. ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸುವುದು ಖಚಿತ.

3- ಕೊಲ್ಕತ್ತಾ ನೈಟ್ ರೈಡರ್ಸ್​: ಕಳೆದ ಸೀಸನ್​ನಲ್ಲಿ ಗಾಯದ ಕಾರಣ ಶ್ರೇಯಸ್ ಅಯ್ಯರ್ ಕೆಕೆಆರ್​ ಪರ ಕಣಕ್ಕಿಳಿದಿರಲಿಲ್ಲ. ಹೀಗಾಗಿ ತಂಡವನ್ನು ನಿತೀಶ್ ರಾಣಾ ಮುನ್ನಡೆಸಿದ್ದರು. ಇದೀಗ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಶ್ರೇಯಸ್ ಅಯ್ಯರ್ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳಿದ್ದಾರೆ. ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸುವುದು ಖಚಿತ.

4 / 5
ಐಪಿಎಲ್ ಹರಾಜು ಯಾವಾಗ?: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ರ ಮಿನಿ ಹರಾಜು ಪ್ರಕ್ರಿಯೆ ಡಿಸೆಂಬರ್ 19 ರಂದು ದುಬೈನಲ್ಲಿ ನಡೆಯಲಿದೆ. ಈ ಹರಾಜಿಗಾಗಿ ಒಟ್ಟು 1166 ಆಟಗಾರರು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಈ ಆಟಗಾರರ ಪಟ್ಟಿಯನ್ನು ಶಾರ್ಟ್ ಲೀಸ್ಟ್ ಮಾಡಲಿದ್ದು, ಇದಾದ ಬಳಿಕ ಆಟಗಾರರ ಹರಾಜು ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

ಐಪಿಎಲ್ ಹರಾಜು ಯಾವಾಗ?: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ರ ಮಿನಿ ಹರಾಜು ಪ್ರಕ್ರಿಯೆ ಡಿಸೆಂಬರ್ 19 ರಂದು ದುಬೈನಲ್ಲಿ ನಡೆಯಲಿದೆ. ಈ ಹರಾಜಿಗಾಗಿ ಒಟ್ಟು 1166 ಆಟಗಾರರು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಈ ಆಟಗಾರರ ಪಟ್ಟಿಯನ್ನು ಶಾರ್ಟ್ ಲೀಸ್ಟ್ ಮಾಡಲಿದ್ದು, ಇದಾದ ಬಳಿಕ ಆಟಗಾರರ ಹರಾಜು ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

5 / 5
Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ