AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಪಂಜಾಬ್ ವಿರುದ್ಧ ಮೋಸದಾಟ; ಮುಂಬೈ ತಂಡದ ಪೊಲಾರ್ಡ್​, ಡೇವಿಡ್​​ಗೆ ದಂಡ..!

IPL 2024: ಏಪ್ರಿಲ್ 18 ರಂದು ನಡೆದ ಮುಂಬೈ ಇಂಡಿಯನ್ಸ್‌ ಹಾಗೂ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ತಂಡದ ಬ್ಯಾಟಿಂಗ್ ಕೋಚ್ ಕೀರಾನ್ ಪೊಲಾರ್ಡ್‌ ಹಾಗೂ ತಂಡದ ಬ್ಯಾಟಿಂಗ್ ಆಲ್​ರೌಂಡರ್ ಟಿಮ್ ಡೇವಿಡ್ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಬಿಸಿಸಿಐ ದಂಡ ವಿಧಿಸಿದೆ.

ಪೃಥ್ವಿಶಂಕರ
|

Updated on: Apr 20, 2024 | 4:10 PM

Share
ಏಪ್ರಿಲ್ 18 ರಂದು ನಡೆದ ಮುಂಬೈ ಇಂಡಿಯನ್ಸ್‌ ಹಾಗೂ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ತಂಡದ ಬ್ಯಾಟಿಂಗ್ ಕೋಚ್ ಕೀರಾನ್ ಪೊಲಾರ್ಡ್‌ ಹಾಗೂ ತಂಡದ ಬ್ಯಾಟಿಂಗ್ ಆಲ್​ರೌಂಡರ್ ಟಿಮ್ ಡೇವಿಡ್ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಬಿಸಿಸಿಐ ದಂಡ ವಿಧಿಸಿದೆ.

ಏಪ್ರಿಲ್ 18 ರಂದು ನಡೆದ ಮುಂಬೈ ಇಂಡಿಯನ್ಸ್‌ ಹಾಗೂ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ತಂಡದ ಬ್ಯಾಟಿಂಗ್ ಕೋಚ್ ಕೀರಾನ್ ಪೊಲಾರ್ಡ್‌ ಹಾಗೂ ತಂಡದ ಬ್ಯಾಟಿಂಗ್ ಆಲ್​ರೌಂಡರ್ ಟಿಮ್ ಡೇವಿಡ್ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಬಿಸಿಸಿಐ ದಂಡ ವಿಧಿಸಿದೆ.

1 / 7
ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಈ ಇಬ್ಬರು ಐಪಿಎಲ್ ನಿಯಮವನ್ನು ಮುರಿದು ಸ್ಟ್ರೈಕ್​ನಲ್ಲಿದ್ದ ಸೂರ್ಯಕುಮಾರ್​ಗೆ ಡಿಆರ್​ಎಸ್ ತೆಗೆದುಕೊಳ್ಳುವಂತೆ ಸನ್ನೆ ಮಾಡಿದ್ದರು. ಈ ಇಬ್ಬರ ಮೋಸದಾಟದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿತ್ತು.

ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಈ ಇಬ್ಬರು ಐಪಿಎಲ್ ನಿಯಮವನ್ನು ಮುರಿದು ಸ್ಟ್ರೈಕ್​ನಲ್ಲಿದ್ದ ಸೂರ್ಯಕುಮಾರ್​ಗೆ ಡಿಆರ್​ಎಸ್ ತೆಗೆದುಕೊಳ್ಳುವಂತೆ ಸನ್ನೆ ಮಾಡಿದ್ದರು. ಈ ಇಬ್ಬರ ಮೋಸದಾಟದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿತ್ತು.

2 / 7
ಅಲ್ಲದೆ ಈ ಇಬ್ಬರು ಸನ್ನೆ ನೀಡುತ್ತಿರುವುದನ್ನು ಗಮನಿಸಿದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಸ್ಯಾಮ್ ಕರನ್ ಈ ಕೃತ್ಯವನ್ನು ಫೀಲ್ಡ್ ಅಂಪೈರ್​​ನ ಗಮನಕ್ಕೆ ತಂದಿದ್ದರು. ಆದರೆ ಆ ವೇಳೆ ಫೀಲ್ಡ್ ಅಂಪೈರ್ ಕರನ್ ಮಾತಿಗೆ ಸೊಪ್ಪು ಹಾಕಿರಲಿಲ್ಲ. ಇದೀಗ ಈ ಇಬ್ಬರ ನಿಯಮ ಉಲ್ಲಂಘನೆಗೆ ಬಿಸಿಸಿಐ ದಂಡ ವಿಧಿಸಿದೆ.

ಅಲ್ಲದೆ ಈ ಇಬ್ಬರು ಸನ್ನೆ ನೀಡುತ್ತಿರುವುದನ್ನು ಗಮನಿಸಿದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಸ್ಯಾಮ್ ಕರನ್ ಈ ಕೃತ್ಯವನ್ನು ಫೀಲ್ಡ್ ಅಂಪೈರ್​​ನ ಗಮನಕ್ಕೆ ತಂದಿದ್ದರು. ಆದರೆ ಆ ವೇಳೆ ಫೀಲ್ಡ್ ಅಂಪೈರ್ ಕರನ್ ಮಾತಿಗೆ ಸೊಪ್ಪು ಹಾಕಿರಲಿಲ್ಲ. ಇದೀಗ ಈ ಇಬ್ಬರ ನಿಯಮ ಉಲ್ಲಂಘನೆಗೆ ಬಿಸಿಸಿಐ ದಂಡ ವಿಧಿಸಿದೆ.

3 / 7
ಅದರಂತೆ ಈ ಇಬ್ಬರು ಪಂದ್ಯ ಶುಲ್ಕದ ಶೇಕಡಾ 20 ರಷ್ಟು ಸಂಭಾವನೆಯನ್ನು ದಂಡವಾಗಿ ಪಾವತಿಸಬೇಕಿದೆ. ಟಿಮ್ ಡೇವಿಡ್ ಮತ್ತು ಪೊಲಾರ್ಡ್ ಈ ವಿಷಯದಲ್ಲಿ ಮ್ಯಾಚ್ ರೆಫರಿ ಮುಂದೆ ವಿಚಾರಣೆಯ ವೇಳೆ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು, ಆ ನಂತರ ಈ ಇಬ್ಬರಿಗೆ ಈ ದಂಡವನ್ನು ವಿಧಿಸಲಾಗಿದೆ.

ಅದರಂತೆ ಈ ಇಬ್ಬರು ಪಂದ್ಯ ಶುಲ್ಕದ ಶೇಕಡಾ 20 ರಷ್ಟು ಸಂಭಾವನೆಯನ್ನು ದಂಡವಾಗಿ ಪಾವತಿಸಬೇಕಿದೆ. ಟಿಮ್ ಡೇವಿಡ್ ಮತ್ತು ಪೊಲಾರ್ಡ್ ಈ ವಿಷಯದಲ್ಲಿ ಮ್ಯಾಚ್ ರೆಫರಿ ಮುಂದೆ ವಿಚಾರಣೆಯ ವೇಳೆ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು, ಆ ನಂತರ ಈ ಇಬ್ಬರಿಗೆ ಈ ದಂಡವನ್ನು ವಿಧಿಸಲಾಗಿದೆ.

4 / 7
ಇನ್ನು ಈ ಇಬ್ಬರಿಗೆ ದಂಡ ವಿಧಿಸಿರುವ ಬಗ್ಗೆ ಮಾಹಿತಿ ನೀಡಿರುವ ಐಪಿಎಲ್, ಟಿಮ್ ಡೇವಿಡ್ ಮತ್ತು ಪೊಲಾರ್ಡ್ ನೀತಿ ಸಂಹಿತೆಯ ಆರ್ಟಿಕಲ್ 2.20 ರ ಅಡಿಯಲ್ಲಿ ಹಂತ 1 ಅಪರಾಧವನ್ನು ಮಾಡಿದ್ದಾರೆ. ಈ ಕಾರಣದಿಂದಾಗಿ, ಡೇವಿಡ್ ಮತ್ತು ಪೊಲಾರ್ಡ್ ಅವರ ಪಂದ್ಯದ ಶುಲ್ಕದ ಶೇಕಡಾ 20 ರಷ್ಟು ದಂಡ ವಿಧಿಸಲಾಗಿದೆ. ಈ ನೀತಿ ಸಂಹಿತೆಯ ಉಲ್ಲಂಘನೆಯ ಸಂದರ್ಭದಲ್ಲಿ, ಮ್ಯಾಚ್ ರೆಫರಿಯ ನಿರ್ಧಾರವನ್ನು ಅಂತಿಮವೆಂದು ಪರಿಗಣಿಸಲಾಗಿದ್ದು, ಈ ವಿಚಾರದಲ್ಲಿ ಇಬ್ಬರೂ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ.

ಇನ್ನು ಈ ಇಬ್ಬರಿಗೆ ದಂಡ ವಿಧಿಸಿರುವ ಬಗ್ಗೆ ಮಾಹಿತಿ ನೀಡಿರುವ ಐಪಿಎಲ್, ಟಿಮ್ ಡೇವಿಡ್ ಮತ್ತು ಪೊಲಾರ್ಡ್ ನೀತಿ ಸಂಹಿತೆಯ ಆರ್ಟಿಕಲ್ 2.20 ರ ಅಡಿಯಲ್ಲಿ ಹಂತ 1 ಅಪರಾಧವನ್ನು ಮಾಡಿದ್ದಾರೆ. ಈ ಕಾರಣದಿಂದಾಗಿ, ಡೇವಿಡ್ ಮತ್ತು ಪೊಲಾರ್ಡ್ ಅವರ ಪಂದ್ಯದ ಶುಲ್ಕದ ಶೇಕಡಾ 20 ರಷ್ಟು ದಂಡ ವಿಧಿಸಲಾಗಿದೆ. ಈ ನೀತಿ ಸಂಹಿತೆಯ ಉಲ್ಲಂಘನೆಯ ಸಂದರ್ಭದಲ್ಲಿ, ಮ್ಯಾಚ್ ರೆಫರಿಯ ನಿರ್ಧಾರವನ್ನು ಅಂತಿಮವೆಂದು ಪರಿಗಣಿಸಲಾಗಿದ್ದು, ಈ ವಿಚಾರದಲ್ಲಿ ಇಬ್ಬರೂ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ.

5 / 7
ಅಷ್ಟಕ್ಕೂ ನಡೆದಿದ್ದೇನೆಂದರೆ, ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಅರ್ಷದೀಪ್ ಸಿಂಗ್ 15ನೇ ಓವರ್​ ಬೌಲ್ ಮಾಡುತ್ತಿದ್ದರು. ಈ ವೇಳೆ ಸ್ಟ್ರೈಕ್​ನಲ್ಲಿದ್ದ ಸೂರ್ಯಕುಮಾರ್​ಗೆ ಈ ಇಬ್ಬರೂ ಡಗೌಟ್‌ನಿಂದ ವೈಡ್ ಬಾಲ್​ಗೆ ಡಿಆರ್‌ಎಸ್ ತೆಗೆದುಕೊಳ್ಳುವಂತೆ ಸೂಚಿಸಿದ್ದರು.

ಅಷ್ಟಕ್ಕೂ ನಡೆದಿದ್ದೇನೆಂದರೆ, ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಅರ್ಷದೀಪ್ ಸಿಂಗ್ 15ನೇ ಓವರ್​ ಬೌಲ್ ಮಾಡುತ್ತಿದ್ದರು. ಈ ವೇಳೆ ಸ್ಟ್ರೈಕ್​ನಲ್ಲಿದ್ದ ಸೂರ್ಯಕುಮಾರ್​ಗೆ ಈ ಇಬ್ಬರೂ ಡಗೌಟ್‌ನಿಂದ ವೈಡ್ ಬಾಲ್​ಗೆ ಡಿಆರ್‌ಎಸ್ ತೆಗೆದುಕೊಳ್ಳುವಂತೆ ಸೂಚಿಸಿದ್ದರು.

6 / 7
ಈ ಇಬ್ಬರ ಸನ್ನೆಯ ಬಳಿಕ ಸೂರ್ಯಕುಮಾರ್ ಡಿಆರ್‌ಎಸ್ ತೆಗೆದುಕೊಂಡಿದ್ದರು. ಆ ನಂತರ ಅಂಪೈರ್ ಅದನ್ನು ವೈಡ್ ಎಂದು ಘೋಷಿಸಬೇಕಾಯಿತು. ಈ ಬಗ್ಗೆ ಪಂಜಾಬ್ ಕಿಂಗ್ಸ್ ನಾಯಕ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ ಈ ಇಬ್ಬರ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವಿರೋಧ ಕೂಡ ವ್ಯಕ್ತವಾಗಿತ್ತು.

ಈ ಇಬ್ಬರ ಸನ್ನೆಯ ಬಳಿಕ ಸೂರ್ಯಕುಮಾರ್ ಡಿಆರ್‌ಎಸ್ ತೆಗೆದುಕೊಂಡಿದ್ದರು. ಆ ನಂತರ ಅಂಪೈರ್ ಅದನ್ನು ವೈಡ್ ಎಂದು ಘೋಷಿಸಬೇಕಾಯಿತು. ಈ ಬಗ್ಗೆ ಪಂಜಾಬ್ ಕಿಂಗ್ಸ್ ನಾಯಕ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ ಈ ಇಬ್ಬರ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವಿರೋಧ ಕೂಡ ವ್ಯಕ್ತವಾಗಿತ್ತು.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ