AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಪಂಜಾಬ್ ವಿರುದ್ಧ ಮೋಸದಾಟ; ಮುಂಬೈ ತಂಡದ ಪೊಲಾರ್ಡ್​, ಡೇವಿಡ್​​ಗೆ ದಂಡ..!

IPL 2024: ಏಪ್ರಿಲ್ 18 ರಂದು ನಡೆದ ಮುಂಬೈ ಇಂಡಿಯನ್ಸ್‌ ಹಾಗೂ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ತಂಡದ ಬ್ಯಾಟಿಂಗ್ ಕೋಚ್ ಕೀರಾನ್ ಪೊಲಾರ್ಡ್‌ ಹಾಗೂ ತಂಡದ ಬ್ಯಾಟಿಂಗ್ ಆಲ್​ರೌಂಡರ್ ಟಿಮ್ ಡೇವಿಡ್ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಬಿಸಿಸಿಐ ದಂಡ ವಿಧಿಸಿದೆ.

ಪೃಥ್ವಿಶಂಕರ
|

Updated on: Apr 20, 2024 | 4:10 PM

Share
ಏಪ್ರಿಲ್ 18 ರಂದು ನಡೆದ ಮುಂಬೈ ಇಂಡಿಯನ್ಸ್‌ ಹಾಗೂ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ತಂಡದ ಬ್ಯಾಟಿಂಗ್ ಕೋಚ್ ಕೀರಾನ್ ಪೊಲಾರ್ಡ್‌ ಹಾಗೂ ತಂಡದ ಬ್ಯಾಟಿಂಗ್ ಆಲ್​ರೌಂಡರ್ ಟಿಮ್ ಡೇವಿಡ್ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಬಿಸಿಸಿಐ ದಂಡ ವಿಧಿಸಿದೆ.

ಏಪ್ರಿಲ್ 18 ರಂದು ನಡೆದ ಮುಂಬೈ ಇಂಡಿಯನ್ಸ್‌ ಹಾಗೂ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ತಂಡದ ಬ್ಯಾಟಿಂಗ್ ಕೋಚ್ ಕೀರಾನ್ ಪೊಲಾರ್ಡ್‌ ಹಾಗೂ ತಂಡದ ಬ್ಯಾಟಿಂಗ್ ಆಲ್​ರೌಂಡರ್ ಟಿಮ್ ಡೇವಿಡ್ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಬಿಸಿಸಿಐ ದಂಡ ವಿಧಿಸಿದೆ.

1 / 7
ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಈ ಇಬ್ಬರು ಐಪಿಎಲ್ ನಿಯಮವನ್ನು ಮುರಿದು ಸ್ಟ್ರೈಕ್​ನಲ್ಲಿದ್ದ ಸೂರ್ಯಕುಮಾರ್​ಗೆ ಡಿಆರ್​ಎಸ್ ತೆಗೆದುಕೊಳ್ಳುವಂತೆ ಸನ್ನೆ ಮಾಡಿದ್ದರು. ಈ ಇಬ್ಬರ ಮೋಸದಾಟದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿತ್ತು.

ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಈ ಇಬ್ಬರು ಐಪಿಎಲ್ ನಿಯಮವನ್ನು ಮುರಿದು ಸ್ಟ್ರೈಕ್​ನಲ್ಲಿದ್ದ ಸೂರ್ಯಕುಮಾರ್​ಗೆ ಡಿಆರ್​ಎಸ್ ತೆಗೆದುಕೊಳ್ಳುವಂತೆ ಸನ್ನೆ ಮಾಡಿದ್ದರು. ಈ ಇಬ್ಬರ ಮೋಸದಾಟದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿತ್ತು.

2 / 7
ಅಲ್ಲದೆ ಈ ಇಬ್ಬರು ಸನ್ನೆ ನೀಡುತ್ತಿರುವುದನ್ನು ಗಮನಿಸಿದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಸ್ಯಾಮ್ ಕರನ್ ಈ ಕೃತ್ಯವನ್ನು ಫೀಲ್ಡ್ ಅಂಪೈರ್​​ನ ಗಮನಕ್ಕೆ ತಂದಿದ್ದರು. ಆದರೆ ಆ ವೇಳೆ ಫೀಲ್ಡ್ ಅಂಪೈರ್ ಕರನ್ ಮಾತಿಗೆ ಸೊಪ್ಪು ಹಾಕಿರಲಿಲ್ಲ. ಇದೀಗ ಈ ಇಬ್ಬರ ನಿಯಮ ಉಲ್ಲಂಘನೆಗೆ ಬಿಸಿಸಿಐ ದಂಡ ವಿಧಿಸಿದೆ.

ಅಲ್ಲದೆ ಈ ಇಬ್ಬರು ಸನ್ನೆ ನೀಡುತ್ತಿರುವುದನ್ನು ಗಮನಿಸಿದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಸ್ಯಾಮ್ ಕರನ್ ಈ ಕೃತ್ಯವನ್ನು ಫೀಲ್ಡ್ ಅಂಪೈರ್​​ನ ಗಮನಕ್ಕೆ ತಂದಿದ್ದರು. ಆದರೆ ಆ ವೇಳೆ ಫೀಲ್ಡ್ ಅಂಪೈರ್ ಕರನ್ ಮಾತಿಗೆ ಸೊಪ್ಪು ಹಾಕಿರಲಿಲ್ಲ. ಇದೀಗ ಈ ಇಬ್ಬರ ನಿಯಮ ಉಲ್ಲಂಘನೆಗೆ ಬಿಸಿಸಿಐ ದಂಡ ವಿಧಿಸಿದೆ.

3 / 7
ಅದರಂತೆ ಈ ಇಬ್ಬರು ಪಂದ್ಯ ಶುಲ್ಕದ ಶೇಕಡಾ 20 ರಷ್ಟು ಸಂಭಾವನೆಯನ್ನು ದಂಡವಾಗಿ ಪಾವತಿಸಬೇಕಿದೆ. ಟಿಮ್ ಡೇವಿಡ್ ಮತ್ತು ಪೊಲಾರ್ಡ್ ಈ ವಿಷಯದಲ್ಲಿ ಮ್ಯಾಚ್ ರೆಫರಿ ಮುಂದೆ ವಿಚಾರಣೆಯ ವೇಳೆ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು, ಆ ನಂತರ ಈ ಇಬ್ಬರಿಗೆ ಈ ದಂಡವನ್ನು ವಿಧಿಸಲಾಗಿದೆ.

ಅದರಂತೆ ಈ ಇಬ್ಬರು ಪಂದ್ಯ ಶುಲ್ಕದ ಶೇಕಡಾ 20 ರಷ್ಟು ಸಂಭಾವನೆಯನ್ನು ದಂಡವಾಗಿ ಪಾವತಿಸಬೇಕಿದೆ. ಟಿಮ್ ಡೇವಿಡ್ ಮತ್ತು ಪೊಲಾರ್ಡ್ ಈ ವಿಷಯದಲ್ಲಿ ಮ್ಯಾಚ್ ರೆಫರಿ ಮುಂದೆ ವಿಚಾರಣೆಯ ವೇಳೆ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು, ಆ ನಂತರ ಈ ಇಬ್ಬರಿಗೆ ಈ ದಂಡವನ್ನು ವಿಧಿಸಲಾಗಿದೆ.

4 / 7
ಇನ್ನು ಈ ಇಬ್ಬರಿಗೆ ದಂಡ ವಿಧಿಸಿರುವ ಬಗ್ಗೆ ಮಾಹಿತಿ ನೀಡಿರುವ ಐಪಿಎಲ್, ಟಿಮ್ ಡೇವಿಡ್ ಮತ್ತು ಪೊಲಾರ್ಡ್ ನೀತಿ ಸಂಹಿತೆಯ ಆರ್ಟಿಕಲ್ 2.20 ರ ಅಡಿಯಲ್ಲಿ ಹಂತ 1 ಅಪರಾಧವನ್ನು ಮಾಡಿದ್ದಾರೆ. ಈ ಕಾರಣದಿಂದಾಗಿ, ಡೇವಿಡ್ ಮತ್ತು ಪೊಲಾರ್ಡ್ ಅವರ ಪಂದ್ಯದ ಶುಲ್ಕದ ಶೇಕಡಾ 20 ರಷ್ಟು ದಂಡ ವಿಧಿಸಲಾಗಿದೆ. ಈ ನೀತಿ ಸಂಹಿತೆಯ ಉಲ್ಲಂಘನೆಯ ಸಂದರ್ಭದಲ್ಲಿ, ಮ್ಯಾಚ್ ರೆಫರಿಯ ನಿರ್ಧಾರವನ್ನು ಅಂತಿಮವೆಂದು ಪರಿಗಣಿಸಲಾಗಿದ್ದು, ಈ ವಿಚಾರದಲ್ಲಿ ಇಬ್ಬರೂ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ.

ಇನ್ನು ಈ ಇಬ್ಬರಿಗೆ ದಂಡ ವಿಧಿಸಿರುವ ಬಗ್ಗೆ ಮಾಹಿತಿ ನೀಡಿರುವ ಐಪಿಎಲ್, ಟಿಮ್ ಡೇವಿಡ್ ಮತ್ತು ಪೊಲಾರ್ಡ್ ನೀತಿ ಸಂಹಿತೆಯ ಆರ್ಟಿಕಲ್ 2.20 ರ ಅಡಿಯಲ್ಲಿ ಹಂತ 1 ಅಪರಾಧವನ್ನು ಮಾಡಿದ್ದಾರೆ. ಈ ಕಾರಣದಿಂದಾಗಿ, ಡೇವಿಡ್ ಮತ್ತು ಪೊಲಾರ್ಡ್ ಅವರ ಪಂದ್ಯದ ಶುಲ್ಕದ ಶೇಕಡಾ 20 ರಷ್ಟು ದಂಡ ವಿಧಿಸಲಾಗಿದೆ. ಈ ನೀತಿ ಸಂಹಿತೆಯ ಉಲ್ಲಂಘನೆಯ ಸಂದರ್ಭದಲ್ಲಿ, ಮ್ಯಾಚ್ ರೆಫರಿಯ ನಿರ್ಧಾರವನ್ನು ಅಂತಿಮವೆಂದು ಪರಿಗಣಿಸಲಾಗಿದ್ದು, ಈ ವಿಚಾರದಲ್ಲಿ ಇಬ್ಬರೂ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ.

5 / 7
ಅಷ್ಟಕ್ಕೂ ನಡೆದಿದ್ದೇನೆಂದರೆ, ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಅರ್ಷದೀಪ್ ಸಿಂಗ್ 15ನೇ ಓವರ್​ ಬೌಲ್ ಮಾಡುತ್ತಿದ್ದರು. ಈ ವೇಳೆ ಸ್ಟ್ರೈಕ್​ನಲ್ಲಿದ್ದ ಸೂರ್ಯಕುಮಾರ್​ಗೆ ಈ ಇಬ್ಬರೂ ಡಗೌಟ್‌ನಿಂದ ವೈಡ್ ಬಾಲ್​ಗೆ ಡಿಆರ್‌ಎಸ್ ತೆಗೆದುಕೊಳ್ಳುವಂತೆ ಸೂಚಿಸಿದ್ದರು.

ಅಷ್ಟಕ್ಕೂ ನಡೆದಿದ್ದೇನೆಂದರೆ, ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಅರ್ಷದೀಪ್ ಸಿಂಗ್ 15ನೇ ಓವರ್​ ಬೌಲ್ ಮಾಡುತ್ತಿದ್ದರು. ಈ ವೇಳೆ ಸ್ಟ್ರೈಕ್​ನಲ್ಲಿದ್ದ ಸೂರ್ಯಕುಮಾರ್​ಗೆ ಈ ಇಬ್ಬರೂ ಡಗೌಟ್‌ನಿಂದ ವೈಡ್ ಬಾಲ್​ಗೆ ಡಿಆರ್‌ಎಸ್ ತೆಗೆದುಕೊಳ್ಳುವಂತೆ ಸೂಚಿಸಿದ್ದರು.

6 / 7
ಈ ಇಬ್ಬರ ಸನ್ನೆಯ ಬಳಿಕ ಸೂರ್ಯಕುಮಾರ್ ಡಿಆರ್‌ಎಸ್ ತೆಗೆದುಕೊಂಡಿದ್ದರು. ಆ ನಂತರ ಅಂಪೈರ್ ಅದನ್ನು ವೈಡ್ ಎಂದು ಘೋಷಿಸಬೇಕಾಯಿತು. ಈ ಬಗ್ಗೆ ಪಂಜಾಬ್ ಕಿಂಗ್ಸ್ ನಾಯಕ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ ಈ ಇಬ್ಬರ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವಿರೋಧ ಕೂಡ ವ್ಯಕ್ತವಾಗಿತ್ತು.

ಈ ಇಬ್ಬರ ಸನ್ನೆಯ ಬಳಿಕ ಸೂರ್ಯಕುಮಾರ್ ಡಿಆರ್‌ಎಸ್ ತೆಗೆದುಕೊಂಡಿದ್ದರು. ಆ ನಂತರ ಅಂಪೈರ್ ಅದನ್ನು ವೈಡ್ ಎಂದು ಘೋಷಿಸಬೇಕಾಯಿತು. ಈ ಬಗ್ಗೆ ಪಂಜಾಬ್ ಕಿಂಗ್ಸ್ ನಾಯಕ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ ಈ ಇಬ್ಬರ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವಿರೋಧ ಕೂಡ ವ್ಯಕ್ತವಾಗಿತ್ತು.

7 / 7
Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!