AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಪಂಜಾಬ್ ವಿರುದ್ಧ ಮೋಸದಾಟ; ಮುಂಬೈ ತಂಡದ ಪೊಲಾರ್ಡ್​, ಡೇವಿಡ್​​ಗೆ ದಂಡ..!

IPL 2024: ಏಪ್ರಿಲ್ 18 ರಂದು ನಡೆದ ಮುಂಬೈ ಇಂಡಿಯನ್ಸ್‌ ಹಾಗೂ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ತಂಡದ ಬ್ಯಾಟಿಂಗ್ ಕೋಚ್ ಕೀರಾನ್ ಪೊಲಾರ್ಡ್‌ ಹಾಗೂ ತಂಡದ ಬ್ಯಾಟಿಂಗ್ ಆಲ್​ರೌಂಡರ್ ಟಿಮ್ ಡೇವಿಡ್ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಬಿಸಿಸಿಐ ದಂಡ ವಿಧಿಸಿದೆ.

ಪೃಥ್ವಿಶಂಕರ
|

Updated on: Apr 20, 2024 | 4:10 PM

ಏಪ್ರಿಲ್ 18 ರಂದು ನಡೆದ ಮುಂಬೈ ಇಂಡಿಯನ್ಸ್‌ ಹಾಗೂ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ತಂಡದ ಬ್ಯಾಟಿಂಗ್ ಕೋಚ್ ಕೀರಾನ್ ಪೊಲಾರ್ಡ್‌ ಹಾಗೂ ತಂಡದ ಬ್ಯಾಟಿಂಗ್ ಆಲ್​ರೌಂಡರ್ ಟಿಮ್ ಡೇವಿಡ್ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಬಿಸಿಸಿಐ ದಂಡ ವಿಧಿಸಿದೆ.

ಏಪ್ರಿಲ್ 18 ರಂದು ನಡೆದ ಮುಂಬೈ ಇಂಡಿಯನ್ಸ್‌ ಹಾಗೂ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ತಂಡದ ಬ್ಯಾಟಿಂಗ್ ಕೋಚ್ ಕೀರಾನ್ ಪೊಲಾರ್ಡ್‌ ಹಾಗೂ ತಂಡದ ಬ್ಯಾಟಿಂಗ್ ಆಲ್​ರೌಂಡರ್ ಟಿಮ್ ಡೇವಿಡ್ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಬಿಸಿಸಿಐ ದಂಡ ವಿಧಿಸಿದೆ.

1 / 7
ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಈ ಇಬ್ಬರು ಐಪಿಎಲ್ ನಿಯಮವನ್ನು ಮುರಿದು ಸ್ಟ್ರೈಕ್​ನಲ್ಲಿದ್ದ ಸೂರ್ಯಕುಮಾರ್​ಗೆ ಡಿಆರ್​ಎಸ್ ತೆಗೆದುಕೊಳ್ಳುವಂತೆ ಸನ್ನೆ ಮಾಡಿದ್ದರು. ಈ ಇಬ್ಬರ ಮೋಸದಾಟದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿತ್ತು.

ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಈ ಇಬ್ಬರು ಐಪಿಎಲ್ ನಿಯಮವನ್ನು ಮುರಿದು ಸ್ಟ್ರೈಕ್​ನಲ್ಲಿದ್ದ ಸೂರ್ಯಕುಮಾರ್​ಗೆ ಡಿಆರ್​ಎಸ್ ತೆಗೆದುಕೊಳ್ಳುವಂತೆ ಸನ್ನೆ ಮಾಡಿದ್ದರು. ಈ ಇಬ್ಬರ ಮೋಸದಾಟದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿತ್ತು.

2 / 7
ಅಲ್ಲದೆ ಈ ಇಬ್ಬರು ಸನ್ನೆ ನೀಡುತ್ತಿರುವುದನ್ನು ಗಮನಿಸಿದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಸ್ಯಾಮ್ ಕರನ್ ಈ ಕೃತ್ಯವನ್ನು ಫೀಲ್ಡ್ ಅಂಪೈರ್​​ನ ಗಮನಕ್ಕೆ ತಂದಿದ್ದರು. ಆದರೆ ಆ ವೇಳೆ ಫೀಲ್ಡ್ ಅಂಪೈರ್ ಕರನ್ ಮಾತಿಗೆ ಸೊಪ್ಪು ಹಾಕಿರಲಿಲ್ಲ. ಇದೀಗ ಈ ಇಬ್ಬರ ನಿಯಮ ಉಲ್ಲಂಘನೆಗೆ ಬಿಸಿಸಿಐ ದಂಡ ವಿಧಿಸಿದೆ.

ಅಲ್ಲದೆ ಈ ಇಬ್ಬರು ಸನ್ನೆ ನೀಡುತ್ತಿರುವುದನ್ನು ಗಮನಿಸಿದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಸ್ಯಾಮ್ ಕರನ್ ಈ ಕೃತ್ಯವನ್ನು ಫೀಲ್ಡ್ ಅಂಪೈರ್​​ನ ಗಮನಕ್ಕೆ ತಂದಿದ್ದರು. ಆದರೆ ಆ ವೇಳೆ ಫೀಲ್ಡ್ ಅಂಪೈರ್ ಕರನ್ ಮಾತಿಗೆ ಸೊಪ್ಪು ಹಾಕಿರಲಿಲ್ಲ. ಇದೀಗ ಈ ಇಬ್ಬರ ನಿಯಮ ಉಲ್ಲಂಘನೆಗೆ ಬಿಸಿಸಿಐ ದಂಡ ವಿಧಿಸಿದೆ.

3 / 7
ಅದರಂತೆ ಈ ಇಬ್ಬರು ಪಂದ್ಯ ಶುಲ್ಕದ ಶೇಕಡಾ 20 ರಷ್ಟು ಸಂಭಾವನೆಯನ್ನು ದಂಡವಾಗಿ ಪಾವತಿಸಬೇಕಿದೆ. ಟಿಮ್ ಡೇವಿಡ್ ಮತ್ತು ಪೊಲಾರ್ಡ್ ಈ ವಿಷಯದಲ್ಲಿ ಮ್ಯಾಚ್ ರೆಫರಿ ಮುಂದೆ ವಿಚಾರಣೆಯ ವೇಳೆ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು, ಆ ನಂತರ ಈ ಇಬ್ಬರಿಗೆ ಈ ದಂಡವನ್ನು ವಿಧಿಸಲಾಗಿದೆ.

ಅದರಂತೆ ಈ ಇಬ್ಬರು ಪಂದ್ಯ ಶುಲ್ಕದ ಶೇಕಡಾ 20 ರಷ್ಟು ಸಂಭಾವನೆಯನ್ನು ದಂಡವಾಗಿ ಪಾವತಿಸಬೇಕಿದೆ. ಟಿಮ್ ಡೇವಿಡ್ ಮತ್ತು ಪೊಲಾರ್ಡ್ ಈ ವಿಷಯದಲ್ಲಿ ಮ್ಯಾಚ್ ರೆಫರಿ ಮುಂದೆ ವಿಚಾರಣೆಯ ವೇಳೆ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು, ಆ ನಂತರ ಈ ಇಬ್ಬರಿಗೆ ಈ ದಂಡವನ್ನು ವಿಧಿಸಲಾಗಿದೆ.

4 / 7
ಇನ್ನು ಈ ಇಬ್ಬರಿಗೆ ದಂಡ ವಿಧಿಸಿರುವ ಬಗ್ಗೆ ಮಾಹಿತಿ ನೀಡಿರುವ ಐಪಿಎಲ್, ಟಿಮ್ ಡೇವಿಡ್ ಮತ್ತು ಪೊಲಾರ್ಡ್ ನೀತಿ ಸಂಹಿತೆಯ ಆರ್ಟಿಕಲ್ 2.20 ರ ಅಡಿಯಲ್ಲಿ ಹಂತ 1 ಅಪರಾಧವನ್ನು ಮಾಡಿದ್ದಾರೆ. ಈ ಕಾರಣದಿಂದಾಗಿ, ಡೇವಿಡ್ ಮತ್ತು ಪೊಲಾರ್ಡ್ ಅವರ ಪಂದ್ಯದ ಶುಲ್ಕದ ಶೇಕಡಾ 20 ರಷ್ಟು ದಂಡ ವಿಧಿಸಲಾಗಿದೆ. ಈ ನೀತಿ ಸಂಹಿತೆಯ ಉಲ್ಲಂಘನೆಯ ಸಂದರ್ಭದಲ್ಲಿ, ಮ್ಯಾಚ್ ರೆಫರಿಯ ನಿರ್ಧಾರವನ್ನು ಅಂತಿಮವೆಂದು ಪರಿಗಣಿಸಲಾಗಿದ್ದು, ಈ ವಿಚಾರದಲ್ಲಿ ಇಬ್ಬರೂ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ.

ಇನ್ನು ಈ ಇಬ್ಬರಿಗೆ ದಂಡ ವಿಧಿಸಿರುವ ಬಗ್ಗೆ ಮಾಹಿತಿ ನೀಡಿರುವ ಐಪಿಎಲ್, ಟಿಮ್ ಡೇವಿಡ್ ಮತ್ತು ಪೊಲಾರ್ಡ್ ನೀತಿ ಸಂಹಿತೆಯ ಆರ್ಟಿಕಲ್ 2.20 ರ ಅಡಿಯಲ್ಲಿ ಹಂತ 1 ಅಪರಾಧವನ್ನು ಮಾಡಿದ್ದಾರೆ. ಈ ಕಾರಣದಿಂದಾಗಿ, ಡೇವಿಡ್ ಮತ್ತು ಪೊಲಾರ್ಡ್ ಅವರ ಪಂದ್ಯದ ಶುಲ್ಕದ ಶೇಕಡಾ 20 ರಷ್ಟು ದಂಡ ವಿಧಿಸಲಾಗಿದೆ. ಈ ನೀತಿ ಸಂಹಿತೆಯ ಉಲ್ಲಂಘನೆಯ ಸಂದರ್ಭದಲ್ಲಿ, ಮ್ಯಾಚ್ ರೆಫರಿಯ ನಿರ್ಧಾರವನ್ನು ಅಂತಿಮವೆಂದು ಪರಿಗಣಿಸಲಾಗಿದ್ದು, ಈ ವಿಚಾರದಲ್ಲಿ ಇಬ್ಬರೂ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ.

5 / 7
ಅಷ್ಟಕ್ಕೂ ನಡೆದಿದ್ದೇನೆಂದರೆ, ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಅರ್ಷದೀಪ್ ಸಿಂಗ್ 15ನೇ ಓವರ್​ ಬೌಲ್ ಮಾಡುತ್ತಿದ್ದರು. ಈ ವೇಳೆ ಸ್ಟ್ರೈಕ್​ನಲ್ಲಿದ್ದ ಸೂರ್ಯಕುಮಾರ್​ಗೆ ಈ ಇಬ್ಬರೂ ಡಗೌಟ್‌ನಿಂದ ವೈಡ್ ಬಾಲ್​ಗೆ ಡಿಆರ್‌ಎಸ್ ತೆಗೆದುಕೊಳ್ಳುವಂತೆ ಸೂಚಿಸಿದ್ದರು.

ಅಷ್ಟಕ್ಕೂ ನಡೆದಿದ್ದೇನೆಂದರೆ, ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಅರ್ಷದೀಪ್ ಸಿಂಗ್ 15ನೇ ಓವರ್​ ಬೌಲ್ ಮಾಡುತ್ತಿದ್ದರು. ಈ ವೇಳೆ ಸ್ಟ್ರೈಕ್​ನಲ್ಲಿದ್ದ ಸೂರ್ಯಕುಮಾರ್​ಗೆ ಈ ಇಬ್ಬರೂ ಡಗೌಟ್‌ನಿಂದ ವೈಡ್ ಬಾಲ್​ಗೆ ಡಿಆರ್‌ಎಸ್ ತೆಗೆದುಕೊಳ್ಳುವಂತೆ ಸೂಚಿಸಿದ್ದರು.

6 / 7
ಈ ಇಬ್ಬರ ಸನ್ನೆಯ ಬಳಿಕ ಸೂರ್ಯಕುಮಾರ್ ಡಿಆರ್‌ಎಸ್ ತೆಗೆದುಕೊಂಡಿದ್ದರು. ಆ ನಂತರ ಅಂಪೈರ್ ಅದನ್ನು ವೈಡ್ ಎಂದು ಘೋಷಿಸಬೇಕಾಯಿತು. ಈ ಬಗ್ಗೆ ಪಂಜಾಬ್ ಕಿಂಗ್ಸ್ ನಾಯಕ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ ಈ ಇಬ್ಬರ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವಿರೋಧ ಕೂಡ ವ್ಯಕ್ತವಾಗಿತ್ತು.

ಈ ಇಬ್ಬರ ಸನ್ನೆಯ ಬಳಿಕ ಸೂರ್ಯಕುಮಾರ್ ಡಿಆರ್‌ಎಸ್ ತೆಗೆದುಕೊಂಡಿದ್ದರು. ಆ ನಂತರ ಅಂಪೈರ್ ಅದನ್ನು ವೈಡ್ ಎಂದು ಘೋಷಿಸಬೇಕಾಯಿತು. ಈ ಬಗ್ಗೆ ಪಂಜಾಬ್ ಕಿಂಗ್ಸ್ ನಾಯಕ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ ಈ ಇಬ್ಬರ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವಿರೋಧ ಕೂಡ ವ್ಯಕ್ತವಾಗಿತ್ತು.

7 / 7
Follow us
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಮಸೀದಿ ನೆಲಸಮ ಮಾಡುವ ವೇಳೆ ಸ್ಫೋಟ, ಮೂವರಿಗೆ ಗಾಯ
ಮಸೀದಿ ನೆಲಸಮ ಮಾಡುವ ವೇಳೆ ಸ್ಫೋಟ, ಮೂವರಿಗೆ ಗಾಯ
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ