AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಶತಕದ ಇನ್ನಿಂಗ್ಸ್​ನಲ್ಲಿ ಬೇಡದ ದಾಖಲೆ ಬರೆದ ಕೊಹ್ಲಿ..!

IPL 2024: ತಮ್ಮ ಇನ್ನಿಂಗ್ಸ್​ನಲ್ಲಿ 72 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 12 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 113 ರನ್ ಕಲೆಹಾಕಿದರು. ಆದರೆ ಈ ಶತಕದ ಹೊರತಾಗಿಯೂ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ ಬೇಡದ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.

ಪೃಥ್ವಿಶಂಕರ
|

Updated on:Apr 06, 2024 | 11:30 PM

Share
ಜೈಪುರದ ಸವಾಯ್ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆತಿಥೇಯ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿಯ ಆರಂಭಿಕ ವಿರಾಟ್ ಕೊಹ್ಲಿ ಈ ಸೀಸನ್​ನ ಚೊಚ್ಚಲ ಹಾಗೂ ಐಪಿಎಲ್​ನ 8ನೇ ಶತಕ ಸಿಡಿಸಿ ಮಿಂಚಿದ್ದಾರೆ.

ಜೈಪುರದ ಸವಾಯ್ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆತಿಥೇಯ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿಯ ಆರಂಭಿಕ ವಿರಾಟ್ ಕೊಹ್ಲಿ ಈ ಸೀಸನ್​ನ ಚೊಚ್ಚಲ ಹಾಗೂ ಐಪಿಎಲ್​ನ 8ನೇ ಶತಕ ಸಿಡಿಸಿ ಮಿಂಚಿದ್ದಾರೆ.

1 / 6
ತಮ್ಮ ಇನ್ನಿಂಗ್ಸ್​ನಲ್ಲಿ 72 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 12 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 113 ರನ್ ಕಲೆಹಾಕಿದರು. ಆದರೆ ಈ ಶತಕದ ಹೊರತಾಗಿಯೂ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ ಬೇಡದ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.

ತಮ್ಮ ಇನ್ನಿಂಗ್ಸ್​ನಲ್ಲಿ 72 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 12 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 113 ರನ್ ಕಲೆಹಾಕಿದರು. ಆದರೆ ಈ ಶತಕದ ಹೊರತಾಗಿಯೂ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ ಬೇಡದ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.

2 / 6
ವಾಸ್ತವವಾಗಿ ಈ ಪಂದ್ಯದಲ್ಲಿ ತಮ್ಮ ಶತಕ ಪೂರೈಸಲು ವಿರಾಟ್ ಕೊಹ್ಲಿ ಬರೋಬ್ಬರಿ 67 ಎಸೆತಗಳನ್ನು ತೆಗೆದುಕೊಂಡರು. ಈ ಮೂಲಕ ಕೊಹ್ಲಿ ಐಪಿಎಲ್​ ಇತಿಹಾಸದಲ್ಲಿ ಶತಕ ಪೂರೈಸಲು ಅತಿ ಹೆಚ್ಚು ಎಸೆತಗಳನ್ನು ತೆಗೆದುಕೊಂಡ ಆಟಗಾರರ ಪೈಕಿಯಲ್ಲಿ ಜಂಟಿ ಮೊದಲ ಸ್ಥಾನಕ್ಕೇರಿದ್ದಾರೆ.

ವಾಸ್ತವವಾಗಿ ಈ ಪಂದ್ಯದಲ್ಲಿ ತಮ್ಮ ಶತಕ ಪೂರೈಸಲು ವಿರಾಟ್ ಕೊಹ್ಲಿ ಬರೋಬ್ಬರಿ 67 ಎಸೆತಗಳನ್ನು ತೆಗೆದುಕೊಂಡರು. ಈ ಮೂಲಕ ಕೊಹ್ಲಿ ಐಪಿಎಲ್​ ಇತಿಹಾಸದಲ್ಲಿ ಶತಕ ಪೂರೈಸಲು ಅತಿ ಹೆಚ್ಚು ಎಸೆತಗಳನ್ನು ತೆಗೆದುಕೊಂಡ ಆಟಗಾರರ ಪೈಕಿಯಲ್ಲಿ ಜಂಟಿ ಮೊದಲ ಸ್ಥಾನಕ್ಕೇರಿದ್ದಾರೆ.

3 / 6
ವಿರಾಟ್ ಕೊಹ್ಲಿಗೂ ಮುನ್ನ 2009 ರ ಐಪಿಎಲ್​ನಲ್ಲಿ ಡೆಕ್ಕನ್ ಚಾರ್ಜಸ್ ವಿರುದ್ಧದ ಪಂದ್ಯದಲ್ಲಿ ಕನ್ನಡಿಗ ಮನೀಶ್ ಪಾಂಡೆ ಕೂಡ ತಮ್ಮ ಶತಕ ಪೂರೈಸಲು 67 ಎಸೆತಗಳನ್ನು ತೆಗೆದುಕೊಂಡಿದ್ದರು. ಅಂದಿನಿಂದ ಈ ಬೇಡದ ದಾಖಲೆ ಮನೀಶ್ ಹೆಸರಿನಲ್ಲಿತ್ತು.

ವಿರಾಟ್ ಕೊಹ್ಲಿಗೂ ಮುನ್ನ 2009 ರ ಐಪಿಎಲ್​ನಲ್ಲಿ ಡೆಕ್ಕನ್ ಚಾರ್ಜಸ್ ವಿರುದ್ಧದ ಪಂದ್ಯದಲ್ಲಿ ಕನ್ನಡಿಗ ಮನೀಶ್ ಪಾಂಡೆ ಕೂಡ ತಮ್ಮ ಶತಕ ಪೂರೈಸಲು 67 ಎಸೆತಗಳನ್ನು ತೆಗೆದುಕೊಂಡಿದ್ದರು. ಅಂದಿನಿಂದ ಈ ಬೇಡದ ದಾಖಲೆ ಮನೀಶ್ ಹೆಸರಿನಲ್ಲಿತ್ತು.

4 / 6
ವಿರಾಟ್ ಕೊಹ್ಲಿಯ ಶತಕ ಎಷ್ಟು ನಿಧಾನವಾಗಿತ್ತು ಎಂಬುದಕ್ಕೆ ಆರ್​​ಸಿಬಿ ಇನ್ನಿಂಗ್ಸ್​ನ 19ನೇ ಓವರ್​ ಸಾಕ್ಷಿಯಾಗಿತ್ತು. ಈ ಓವರ್​ನಲ್ಲಿ ಆರ್​ಸಿಬಿ ಕೇವಲ ಮೂರೇ ಮೂರು ಕಲೆಹಾಕಿತು. ಇದೇ ಓವರ್​ನಲ್ಲಿ ಕೊಹ್ಲಿ ಶತಕದ ಸನಿಹದಲ್ಲಿದ್ದರು.

ವಿರಾಟ್ ಕೊಹ್ಲಿಯ ಶತಕ ಎಷ್ಟು ನಿಧಾನವಾಗಿತ್ತು ಎಂಬುದಕ್ಕೆ ಆರ್​​ಸಿಬಿ ಇನ್ನಿಂಗ್ಸ್​ನ 19ನೇ ಓವರ್​ ಸಾಕ್ಷಿಯಾಗಿತ್ತು. ಈ ಓವರ್​ನಲ್ಲಿ ಆರ್​ಸಿಬಿ ಕೇವಲ ಮೂರೇ ಮೂರು ಕಲೆಹಾಕಿತು. ಇದೇ ಓವರ್​ನಲ್ಲಿ ಕೊಹ್ಲಿ ಶತಕದ ಸನಿಹದಲ್ಲಿದ್ದರು.

5 / 6
ಹೀಗಾಗಿ ಓವರ್​ ಆರಂಭದಲ್ಲಿ ಸ್ಟ್ರೈಕ್​ನಲ್ಲಿದ್ದ ಕೊಹ್ಲಿ ಬಿಗ್ ಶಾಟ್ ಆಡುವ ಮೊದಲು ಸಿಂಗಲ್ ಮೊರೆ ಹೋದರು. ಇದರಿಂದಾಗಿ ಮೊದಲ ಎರಡು ಎಸೆತಗಳಲ್ಲಿ ಕೇವಲ 1 ರನ್ ಮಾತ್ರ ಬಂತು. ಕೊಹ್ಲಿಯ ಈ ಆಟ ನೋಡಿದವರು ಕೊಹ್ಲಿ ಶತಕಕ್ಕಾಗಿ ನಿಧಾನವಾಗಿ ಬ್ಯಾಟಿಂಗ್ ಮಾಡಿದರು ಎಂದು ಆರೋಪಿಸುತ್ತಿದ್ದಾರೆ.

ಹೀಗಾಗಿ ಓವರ್​ ಆರಂಭದಲ್ಲಿ ಸ್ಟ್ರೈಕ್​ನಲ್ಲಿದ್ದ ಕೊಹ್ಲಿ ಬಿಗ್ ಶಾಟ್ ಆಡುವ ಮೊದಲು ಸಿಂಗಲ್ ಮೊರೆ ಹೋದರು. ಇದರಿಂದಾಗಿ ಮೊದಲ ಎರಡು ಎಸೆತಗಳಲ್ಲಿ ಕೇವಲ 1 ರನ್ ಮಾತ್ರ ಬಂತು. ಕೊಹ್ಲಿಯ ಈ ಆಟ ನೋಡಿದವರು ಕೊಹ್ಲಿ ಶತಕಕ್ಕಾಗಿ ನಿಧಾನವಾಗಿ ಬ್ಯಾಟಿಂಗ್ ಮಾಡಿದರು ಎಂದು ಆರೋಪಿಸುತ್ತಿದ್ದಾರೆ.

6 / 6

Published On - 10:32 pm, Sat, 6 April 24

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ