AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಶತಕದ ಇನ್ನಿಂಗ್ಸ್​ನಲ್ಲಿ ಬೇಡದ ದಾಖಲೆ ಬರೆದ ಕೊಹ್ಲಿ..!

IPL 2024: ತಮ್ಮ ಇನ್ನಿಂಗ್ಸ್​ನಲ್ಲಿ 72 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 12 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 113 ರನ್ ಕಲೆಹಾಕಿದರು. ಆದರೆ ಈ ಶತಕದ ಹೊರತಾಗಿಯೂ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ ಬೇಡದ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.

ಪೃಥ್ವಿಶಂಕರ
|

Updated on:Apr 06, 2024 | 11:30 PM

Share
ಜೈಪುರದ ಸವಾಯ್ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆತಿಥೇಯ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿಯ ಆರಂಭಿಕ ವಿರಾಟ್ ಕೊಹ್ಲಿ ಈ ಸೀಸನ್​ನ ಚೊಚ್ಚಲ ಹಾಗೂ ಐಪಿಎಲ್​ನ 8ನೇ ಶತಕ ಸಿಡಿಸಿ ಮಿಂಚಿದ್ದಾರೆ.

ಜೈಪುರದ ಸವಾಯ್ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆತಿಥೇಯ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿಯ ಆರಂಭಿಕ ವಿರಾಟ್ ಕೊಹ್ಲಿ ಈ ಸೀಸನ್​ನ ಚೊಚ್ಚಲ ಹಾಗೂ ಐಪಿಎಲ್​ನ 8ನೇ ಶತಕ ಸಿಡಿಸಿ ಮಿಂಚಿದ್ದಾರೆ.

1 / 6
ತಮ್ಮ ಇನ್ನಿಂಗ್ಸ್​ನಲ್ಲಿ 72 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 12 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 113 ರನ್ ಕಲೆಹಾಕಿದರು. ಆದರೆ ಈ ಶತಕದ ಹೊರತಾಗಿಯೂ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ ಬೇಡದ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.

ತಮ್ಮ ಇನ್ನಿಂಗ್ಸ್​ನಲ್ಲಿ 72 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 12 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 113 ರನ್ ಕಲೆಹಾಕಿದರು. ಆದರೆ ಈ ಶತಕದ ಹೊರತಾಗಿಯೂ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ ಬೇಡದ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.

2 / 6
ವಾಸ್ತವವಾಗಿ ಈ ಪಂದ್ಯದಲ್ಲಿ ತಮ್ಮ ಶತಕ ಪೂರೈಸಲು ವಿರಾಟ್ ಕೊಹ್ಲಿ ಬರೋಬ್ಬರಿ 67 ಎಸೆತಗಳನ್ನು ತೆಗೆದುಕೊಂಡರು. ಈ ಮೂಲಕ ಕೊಹ್ಲಿ ಐಪಿಎಲ್​ ಇತಿಹಾಸದಲ್ಲಿ ಶತಕ ಪೂರೈಸಲು ಅತಿ ಹೆಚ್ಚು ಎಸೆತಗಳನ್ನು ತೆಗೆದುಕೊಂಡ ಆಟಗಾರರ ಪೈಕಿಯಲ್ಲಿ ಜಂಟಿ ಮೊದಲ ಸ್ಥಾನಕ್ಕೇರಿದ್ದಾರೆ.

ವಾಸ್ತವವಾಗಿ ಈ ಪಂದ್ಯದಲ್ಲಿ ತಮ್ಮ ಶತಕ ಪೂರೈಸಲು ವಿರಾಟ್ ಕೊಹ್ಲಿ ಬರೋಬ್ಬರಿ 67 ಎಸೆತಗಳನ್ನು ತೆಗೆದುಕೊಂಡರು. ಈ ಮೂಲಕ ಕೊಹ್ಲಿ ಐಪಿಎಲ್​ ಇತಿಹಾಸದಲ್ಲಿ ಶತಕ ಪೂರೈಸಲು ಅತಿ ಹೆಚ್ಚು ಎಸೆತಗಳನ್ನು ತೆಗೆದುಕೊಂಡ ಆಟಗಾರರ ಪೈಕಿಯಲ್ಲಿ ಜಂಟಿ ಮೊದಲ ಸ್ಥಾನಕ್ಕೇರಿದ್ದಾರೆ.

3 / 6
ವಿರಾಟ್ ಕೊಹ್ಲಿಗೂ ಮುನ್ನ 2009 ರ ಐಪಿಎಲ್​ನಲ್ಲಿ ಡೆಕ್ಕನ್ ಚಾರ್ಜಸ್ ವಿರುದ್ಧದ ಪಂದ್ಯದಲ್ಲಿ ಕನ್ನಡಿಗ ಮನೀಶ್ ಪಾಂಡೆ ಕೂಡ ತಮ್ಮ ಶತಕ ಪೂರೈಸಲು 67 ಎಸೆತಗಳನ್ನು ತೆಗೆದುಕೊಂಡಿದ್ದರು. ಅಂದಿನಿಂದ ಈ ಬೇಡದ ದಾಖಲೆ ಮನೀಶ್ ಹೆಸರಿನಲ್ಲಿತ್ತು.

ವಿರಾಟ್ ಕೊಹ್ಲಿಗೂ ಮುನ್ನ 2009 ರ ಐಪಿಎಲ್​ನಲ್ಲಿ ಡೆಕ್ಕನ್ ಚಾರ್ಜಸ್ ವಿರುದ್ಧದ ಪಂದ್ಯದಲ್ಲಿ ಕನ್ನಡಿಗ ಮನೀಶ್ ಪಾಂಡೆ ಕೂಡ ತಮ್ಮ ಶತಕ ಪೂರೈಸಲು 67 ಎಸೆತಗಳನ್ನು ತೆಗೆದುಕೊಂಡಿದ್ದರು. ಅಂದಿನಿಂದ ಈ ಬೇಡದ ದಾಖಲೆ ಮನೀಶ್ ಹೆಸರಿನಲ್ಲಿತ್ತು.

4 / 6
ವಿರಾಟ್ ಕೊಹ್ಲಿಯ ಶತಕ ಎಷ್ಟು ನಿಧಾನವಾಗಿತ್ತು ಎಂಬುದಕ್ಕೆ ಆರ್​​ಸಿಬಿ ಇನ್ನಿಂಗ್ಸ್​ನ 19ನೇ ಓವರ್​ ಸಾಕ್ಷಿಯಾಗಿತ್ತು. ಈ ಓವರ್​ನಲ್ಲಿ ಆರ್​ಸಿಬಿ ಕೇವಲ ಮೂರೇ ಮೂರು ಕಲೆಹಾಕಿತು. ಇದೇ ಓವರ್​ನಲ್ಲಿ ಕೊಹ್ಲಿ ಶತಕದ ಸನಿಹದಲ್ಲಿದ್ದರು.

ವಿರಾಟ್ ಕೊಹ್ಲಿಯ ಶತಕ ಎಷ್ಟು ನಿಧಾನವಾಗಿತ್ತು ಎಂಬುದಕ್ಕೆ ಆರ್​​ಸಿಬಿ ಇನ್ನಿಂಗ್ಸ್​ನ 19ನೇ ಓವರ್​ ಸಾಕ್ಷಿಯಾಗಿತ್ತು. ಈ ಓವರ್​ನಲ್ಲಿ ಆರ್​ಸಿಬಿ ಕೇವಲ ಮೂರೇ ಮೂರು ಕಲೆಹಾಕಿತು. ಇದೇ ಓವರ್​ನಲ್ಲಿ ಕೊಹ್ಲಿ ಶತಕದ ಸನಿಹದಲ್ಲಿದ್ದರು.

5 / 6
ಹೀಗಾಗಿ ಓವರ್​ ಆರಂಭದಲ್ಲಿ ಸ್ಟ್ರೈಕ್​ನಲ್ಲಿದ್ದ ಕೊಹ್ಲಿ ಬಿಗ್ ಶಾಟ್ ಆಡುವ ಮೊದಲು ಸಿಂಗಲ್ ಮೊರೆ ಹೋದರು. ಇದರಿಂದಾಗಿ ಮೊದಲ ಎರಡು ಎಸೆತಗಳಲ್ಲಿ ಕೇವಲ 1 ರನ್ ಮಾತ್ರ ಬಂತು. ಕೊಹ್ಲಿಯ ಈ ಆಟ ನೋಡಿದವರು ಕೊಹ್ಲಿ ಶತಕಕ್ಕಾಗಿ ನಿಧಾನವಾಗಿ ಬ್ಯಾಟಿಂಗ್ ಮಾಡಿದರು ಎಂದು ಆರೋಪಿಸುತ್ತಿದ್ದಾರೆ.

ಹೀಗಾಗಿ ಓವರ್​ ಆರಂಭದಲ್ಲಿ ಸ್ಟ್ರೈಕ್​ನಲ್ಲಿದ್ದ ಕೊಹ್ಲಿ ಬಿಗ್ ಶಾಟ್ ಆಡುವ ಮೊದಲು ಸಿಂಗಲ್ ಮೊರೆ ಹೋದರು. ಇದರಿಂದಾಗಿ ಮೊದಲ ಎರಡು ಎಸೆತಗಳಲ್ಲಿ ಕೇವಲ 1 ರನ್ ಮಾತ್ರ ಬಂತು. ಕೊಹ್ಲಿಯ ಈ ಆಟ ನೋಡಿದವರು ಕೊಹ್ಲಿ ಶತಕಕ್ಕಾಗಿ ನಿಧಾನವಾಗಿ ಬ್ಯಾಟಿಂಗ್ ಮಾಡಿದರು ಎಂದು ಆರೋಪಿಸುತ್ತಿದ್ದಾರೆ.

6 / 6

Published On - 10:32 pm, Sat, 6 April 24

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!