AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ರೋಹಿತ್ ಶರ್ಮಾ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದಿದ್ದಕ್ಕೆ ಕಾರಣ ಬಹಿರಂಗ

IPL 2024 Rohit Sharma: ರೋಹಿತ್ ಶರ್ಮಾ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಯಲು ಕಾರಣ ಏನು ಎಂಬುದು ಬಹಿರಂಗಗೊಂಡಿದೆ. ಪಂದ್ಯ ಮುಗಿದ ಬಳಿಕ ಮಾತನಾಡಿದ ತಂಡದ ಅನುಭವಿ ಸ್ಪಿನ್ನರ್ ಪಿಯೂಷ್ ಚಾವ್ಲಾ ಈ ನಿರ್ಧಾರದ ಹಿಂದಿನ ಕಾರಣವನ್ನು ಬಹಿರಂಗಪಡಿಸಿದ್ದಾರೆ.

ಪೃಥ್ವಿಶಂಕರ
|

Updated on: May 04, 2024 | 4:47 PM

Share
ಶುಕ್ರವಾರ ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 51 ನೇ ಪಂದ್ಯದಲ್ಲಿ ಆತಿಥೇಯ ಮುಂಬೈ ಇಂಡಿಯನ್ಸ್ ತಂಡವನ್ನು ಕೋಲ್ಕತ್ತಾ ನೈಟ್ ರೈಡರ್ಸ್  24 ರನ್‌ಗಳಿಂದ ಮಣಿಸಿತು. ಈ ಗೆಲುವಿನೊಂದಿಗೆ ಕೆಕೆಆರ್ ಪ್ಲೇಆಫ್‌ಗೆ ಸನಿಹವಾದರೆ, ಮುಂಬೈ ಇಂಡಿಯನ್ಸ್ ತಂಡದ ಪ್ಲೇಆಫ್‌ ಹಾದಿ ಮತ್ತಷ್ಟು ಕಠಿಣವಾಗಿದೆ.

ಶುಕ್ರವಾರ ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 51 ನೇ ಪಂದ್ಯದಲ್ಲಿ ಆತಿಥೇಯ ಮುಂಬೈ ಇಂಡಿಯನ್ಸ್ ತಂಡವನ್ನು ಕೋಲ್ಕತ್ತಾ ನೈಟ್ ರೈಡರ್ಸ್ 24 ರನ್‌ಗಳಿಂದ ಮಣಿಸಿತು. ಈ ಗೆಲುವಿನೊಂದಿಗೆ ಕೆಕೆಆರ್ ಪ್ಲೇಆಫ್‌ಗೆ ಸನಿಹವಾದರೆ, ಮುಂಬೈ ಇಂಡಿಯನ್ಸ್ ತಂಡದ ಪ್ಲೇಆಫ್‌ ಹಾದಿ ಮತ್ತಷ್ಟು ಕಠಿಣವಾಗಿದೆ.

1 / 7
ಇನ್ನು ಈ ಪಂದ್ಯದಲ್ಲಿ ಮುಂಬೈ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅವರನ್ನು ಆಡುವ ಹನ್ನೊಂದರ ಬಳಗದಲ್ಲಿ ಆಯ್ಕೆ ಮಾಡಿರಲಿಲ್ಲ. ಬದಲಿಗೆ ರೋಹಿತ್​ರನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಸಲಾಗಿತ್ತು. ಮೊದಲಿಗೆ ರೋಹಿತ್​ರನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಿಸಿದ್ದಕ್ಕೆ ತಂಡದ ನಾಯಕ ಹಾಗೂ ಆಡಳಿತ ಮಂಡಳಿ ವಿರುದ್ಧ ಅಭಿಮಾನಿಗಳು ಗರಂ ಆಗಿದ್ದರು.

ಇನ್ನು ಈ ಪಂದ್ಯದಲ್ಲಿ ಮುಂಬೈ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅವರನ್ನು ಆಡುವ ಹನ್ನೊಂದರ ಬಳಗದಲ್ಲಿ ಆಯ್ಕೆ ಮಾಡಿರಲಿಲ್ಲ. ಬದಲಿಗೆ ರೋಹಿತ್​ರನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಸಲಾಗಿತ್ತು. ಮೊದಲಿಗೆ ರೋಹಿತ್​ರನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಿಸಿದ್ದಕ್ಕೆ ತಂಡದ ನಾಯಕ ಹಾಗೂ ಆಡಳಿತ ಮಂಡಳಿ ವಿರುದ್ಧ ಅಭಿಮಾನಿಗಳು ಗರಂ ಆಗಿದ್ದರು.

2 / 7
ತಂಡವನ್ನು ದಾಖಲೆಯ ಐದೈದು ಬಾರಿ ಚಾಂಪಿಯನ್ ಮಾಡಿದ್ದ ರೋಹಿತ್ ಶರ್ಮಾರನ್ನು ಮುಂಬೈ ಫ್ರಾಂಚೈಸಿ ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಅಭಿಮಾನಿಗಳು ದೂರಿದ್ದರು. ಅಲ್ಲದೆ ನಾಯಕ ಹಾರ್ದಿಕ್ ಪಾಂಡ್ಯರ ಈ ನಿರ್ಧಾರದ ವಿರುದ್ಧವೂ ಅಭಿಮಾನಿಗಳು ಅಸಮಾಧಾನ ಹೊರಹಾಕಿದ್ದರು.

ತಂಡವನ್ನು ದಾಖಲೆಯ ಐದೈದು ಬಾರಿ ಚಾಂಪಿಯನ್ ಮಾಡಿದ್ದ ರೋಹಿತ್ ಶರ್ಮಾರನ್ನು ಮುಂಬೈ ಫ್ರಾಂಚೈಸಿ ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಅಭಿಮಾನಿಗಳು ದೂರಿದ್ದರು. ಅಲ್ಲದೆ ನಾಯಕ ಹಾರ್ದಿಕ್ ಪಾಂಡ್ಯರ ಈ ನಿರ್ಧಾರದ ವಿರುದ್ಧವೂ ಅಭಿಮಾನಿಗಳು ಅಸಮಾಧಾನ ಹೊರಹಾಕಿದ್ದರು.

3 / 7
ಆದರೀಗ ರೋಹಿತ್ ಶರ್ಮಾ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಯಲು ಕಾರಣ ಏನು ಎಂಬುದು ಬಹಿರಂಗಗೊಂಡಿದೆ. ಪಂದ್ಯ ಮುಗಿದ ಬಳಿಕ ಮಾತನಾಡಿದ ತಂಡದ ಅನುಭವಿ ಸ್ಪಿನ್ನರ್ ಪಿಯೂಷ್ ಚಾವ್ಲಾ ಈ ನಿರ್ಧಾರದ ಹಿಂದಿನ ಕಾರಣವನ್ನು ಬಹಿರಂಗಪಡಿಸಿದ್ದಾರೆ.

ಆದರೀಗ ರೋಹಿತ್ ಶರ್ಮಾ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಯಲು ಕಾರಣ ಏನು ಎಂಬುದು ಬಹಿರಂಗಗೊಂಡಿದೆ. ಪಂದ್ಯ ಮುಗಿದ ಬಳಿಕ ಮಾತನಾಡಿದ ತಂಡದ ಅನುಭವಿ ಸ್ಪಿನ್ನರ್ ಪಿಯೂಷ್ ಚಾವ್ಲಾ ಈ ನಿರ್ಧಾರದ ಹಿಂದಿನ ಕಾರಣವನ್ನು ಬಹಿರಂಗಪಡಿಸಿದ್ದಾರೆ.

4 / 7
ಪಂದ್ಯ ಮುಗಿದ ಬಳಿಕ ಮಾತನಾಡಿದ ತಂಡದ ಪಿಯೂಷ್ ಚಾವ್ಲಾ, ರೋಹಿತ್ ಶರ್ಮಾ ಬೆನ್ನು ನೋವಿನ ಕಾರಣ ಮುಖ್ಯ ತಂಡದಲ್ಲಿ ಆಡಲು ಸಾಧ್ಯವಾಗಲಿಲ್ಲ. ಹೀಗಾಗಿ ಅವರನ್ನು ಕೇವಲ ಇಂಪ್ಯಾಕ್ಟ್ ಪ್ಲೇಯರ್ ಆಗಿ ಬ್ಯಾಟಿಂಗ್​ಗೆ ಇಳಿಸಲಾಯಿತು ಎಂದಿದ್ದಾರೆ.

ಪಂದ್ಯ ಮುಗಿದ ಬಳಿಕ ಮಾತನಾಡಿದ ತಂಡದ ಪಿಯೂಷ್ ಚಾವ್ಲಾ, ರೋಹಿತ್ ಶರ್ಮಾ ಬೆನ್ನು ನೋವಿನ ಕಾರಣ ಮುಖ್ಯ ತಂಡದಲ್ಲಿ ಆಡಲು ಸಾಧ್ಯವಾಗಲಿಲ್ಲ. ಹೀಗಾಗಿ ಅವರನ್ನು ಕೇವಲ ಇಂಪ್ಯಾಕ್ಟ್ ಪ್ಲೇಯರ್ ಆಗಿ ಬ್ಯಾಟಿಂಗ್​ಗೆ ಇಳಿಸಲಾಯಿತು ಎಂದಿದ್ದಾರೆ.

5 / 7
ಇನ್ನು ಈ ಪಂದ್ಯದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಿದ್ದ ರೋಹಿತ್ ಶರ್ಮಾ ಬ್ಯಾಟಿಂಗ್​ನಲ್ಲಿ ಕಮಾಲ್ ಮಾಡಲಿಲ್ಲ. ಆಡಿದ 12 ಎಸೆತಗಳಲ್ಲಿ 1 ಸಿಕ್ಸರ್ ನೆರವಿನಿಂದ ಕೇವಲ 11 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

ಇನ್ನು ಈ ಪಂದ್ಯದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಿದ್ದ ರೋಹಿತ್ ಶರ್ಮಾ ಬ್ಯಾಟಿಂಗ್​ನಲ್ಲಿ ಕಮಾಲ್ ಮಾಡಲಿಲ್ಲ. ಆಡಿದ 12 ಎಸೆತಗಳಲ್ಲಿ 1 ಸಿಕ್ಸರ್ ನೆರವಿನಿಂದ ಕೇವಲ 11 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

6 / 7
ವಾಸ್ತವವಾಗಿ ಈ ಸೀಸನ್​ನಲ್ಲಿ ರೋಹಿತ್ ಶರ್ಮಾ ಅವರ ಫಾರ್ಮ್​ ಉತ್ತಮವಾಗಿಲ್ಲ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 4, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 8, ರಾಜಸ್ಥಾನ ರಾಯಲ್ಸ್ ವಿರುದ್ಧ 6 ಮತ್ತು ಪಂಜಾಬ್ ಕಿಂಗ್ಸ್ ವಿರುದ್ಧ 36 ರನ್ ಗಳಿಸಿದರು. ರೋಹಿತ್ ಶರ್ಮಾ ಇದುವರೆಗೆ ಆಡಿರುವ 11 ಪಂದ್ಯಗಳಲ್ಲಿ 32.60 ಸರಾಸರಿ 326 ರನ್ ಕಲೆ ಹಾಕಿದ್ದಾರೆ. ಇದರಲ್ಲಿ 1 ಶತಕವೂ ಸೇರಿದೆ.

ವಾಸ್ತವವಾಗಿ ಈ ಸೀಸನ್​ನಲ್ಲಿ ರೋಹಿತ್ ಶರ್ಮಾ ಅವರ ಫಾರ್ಮ್​ ಉತ್ತಮವಾಗಿಲ್ಲ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 4, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 8, ರಾಜಸ್ಥಾನ ರಾಯಲ್ಸ್ ವಿರುದ್ಧ 6 ಮತ್ತು ಪಂಜಾಬ್ ಕಿಂಗ್ಸ್ ವಿರುದ್ಧ 36 ರನ್ ಗಳಿಸಿದರು. ರೋಹಿತ್ ಶರ್ಮಾ ಇದುವರೆಗೆ ಆಡಿರುವ 11 ಪಂದ್ಯಗಳಲ್ಲಿ 32.60 ಸರಾಸರಿ 326 ರನ್ ಕಲೆ ಹಾಕಿದ್ದಾರೆ. ಇದರಲ್ಲಿ 1 ಶತಕವೂ ಸೇರಿದೆ.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು