AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ರೋಹಿತ್ ಶರ್ಮಾ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದಿದ್ದಕ್ಕೆ ಕಾರಣ ಬಹಿರಂಗ

IPL 2024 Rohit Sharma: ರೋಹಿತ್ ಶರ್ಮಾ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಯಲು ಕಾರಣ ಏನು ಎಂಬುದು ಬಹಿರಂಗಗೊಂಡಿದೆ. ಪಂದ್ಯ ಮುಗಿದ ಬಳಿಕ ಮಾತನಾಡಿದ ತಂಡದ ಅನುಭವಿ ಸ್ಪಿನ್ನರ್ ಪಿಯೂಷ್ ಚಾವ್ಲಾ ಈ ನಿರ್ಧಾರದ ಹಿಂದಿನ ಕಾರಣವನ್ನು ಬಹಿರಂಗಪಡಿಸಿದ್ದಾರೆ.

ಪೃಥ್ವಿಶಂಕರ
|

Updated on: May 04, 2024 | 4:47 PM

Share
ಶುಕ್ರವಾರ ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 51 ನೇ ಪಂದ್ಯದಲ್ಲಿ ಆತಿಥೇಯ ಮುಂಬೈ ಇಂಡಿಯನ್ಸ್ ತಂಡವನ್ನು ಕೋಲ್ಕತ್ತಾ ನೈಟ್ ರೈಡರ್ಸ್  24 ರನ್‌ಗಳಿಂದ ಮಣಿಸಿತು. ಈ ಗೆಲುವಿನೊಂದಿಗೆ ಕೆಕೆಆರ್ ಪ್ಲೇಆಫ್‌ಗೆ ಸನಿಹವಾದರೆ, ಮುಂಬೈ ಇಂಡಿಯನ್ಸ್ ತಂಡದ ಪ್ಲೇಆಫ್‌ ಹಾದಿ ಮತ್ತಷ್ಟು ಕಠಿಣವಾಗಿದೆ.

ಶುಕ್ರವಾರ ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 51 ನೇ ಪಂದ್ಯದಲ್ಲಿ ಆತಿಥೇಯ ಮುಂಬೈ ಇಂಡಿಯನ್ಸ್ ತಂಡವನ್ನು ಕೋಲ್ಕತ್ತಾ ನೈಟ್ ರೈಡರ್ಸ್ 24 ರನ್‌ಗಳಿಂದ ಮಣಿಸಿತು. ಈ ಗೆಲುವಿನೊಂದಿಗೆ ಕೆಕೆಆರ್ ಪ್ಲೇಆಫ್‌ಗೆ ಸನಿಹವಾದರೆ, ಮುಂಬೈ ಇಂಡಿಯನ್ಸ್ ತಂಡದ ಪ್ಲೇಆಫ್‌ ಹಾದಿ ಮತ್ತಷ್ಟು ಕಠಿಣವಾಗಿದೆ.

1 / 7
ಇನ್ನು ಈ ಪಂದ್ಯದಲ್ಲಿ ಮುಂಬೈ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅವರನ್ನು ಆಡುವ ಹನ್ನೊಂದರ ಬಳಗದಲ್ಲಿ ಆಯ್ಕೆ ಮಾಡಿರಲಿಲ್ಲ. ಬದಲಿಗೆ ರೋಹಿತ್​ರನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಸಲಾಗಿತ್ತು. ಮೊದಲಿಗೆ ರೋಹಿತ್​ರನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಿಸಿದ್ದಕ್ಕೆ ತಂಡದ ನಾಯಕ ಹಾಗೂ ಆಡಳಿತ ಮಂಡಳಿ ವಿರುದ್ಧ ಅಭಿಮಾನಿಗಳು ಗರಂ ಆಗಿದ್ದರು.

ಇನ್ನು ಈ ಪಂದ್ಯದಲ್ಲಿ ಮುಂಬೈ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅವರನ್ನು ಆಡುವ ಹನ್ನೊಂದರ ಬಳಗದಲ್ಲಿ ಆಯ್ಕೆ ಮಾಡಿರಲಿಲ್ಲ. ಬದಲಿಗೆ ರೋಹಿತ್​ರನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಸಲಾಗಿತ್ತು. ಮೊದಲಿಗೆ ರೋಹಿತ್​ರನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಿಸಿದ್ದಕ್ಕೆ ತಂಡದ ನಾಯಕ ಹಾಗೂ ಆಡಳಿತ ಮಂಡಳಿ ವಿರುದ್ಧ ಅಭಿಮಾನಿಗಳು ಗರಂ ಆಗಿದ್ದರು.

2 / 7
ತಂಡವನ್ನು ದಾಖಲೆಯ ಐದೈದು ಬಾರಿ ಚಾಂಪಿಯನ್ ಮಾಡಿದ್ದ ರೋಹಿತ್ ಶರ್ಮಾರನ್ನು ಮುಂಬೈ ಫ್ರಾಂಚೈಸಿ ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಅಭಿಮಾನಿಗಳು ದೂರಿದ್ದರು. ಅಲ್ಲದೆ ನಾಯಕ ಹಾರ್ದಿಕ್ ಪಾಂಡ್ಯರ ಈ ನಿರ್ಧಾರದ ವಿರುದ್ಧವೂ ಅಭಿಮಾನಿಗಳು ಅಸಮಾಧಾನ ಹೊರಹಾಕಿದ್ದರು.

ತಂಡವನ್ನು ದಾಖಲೆಯ ಐದೈದು ಬಾರಿ ಚಾಂಪಿಯನ್ ಮಾಡಿದ್ದ ರೋಹಿತ್ ಶರ್ಮಾರನ್ನು ಮುಂಬೈ ಫ್ರಾಂಚೈಸಿ ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಅಭಿಮಾನಿಗಳು ದೂರಿದ್ದರು. ಅಲ್ಲದೆ ನಾಯಕ ಹಾರ್ದಿಕ್ ಪಾಂಡ್ಯರ ಈ ನಿರ್ಧಾರದ ವಿರುದ್ಧವೂ ಅಭಿಮಾನಿಗಳು ಅಸಮಾಧಾನ ಹೊರಹಾಕಿದ್ದರು.

3 / 7
ಆದರೀಗ ರೋಹಿತ್ ಶರ್ಮಾ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಯಲು ಕಾರಣ ಏನು ಎಂಬುದು ಬಹಿರಂಗಗೊಂಡಿದೆ. ಪಂದ್ಯ ಮುಗಿದ ಬಳಿಕ ಮಾತನಾಡಿದ ತಂಡದ ಅನುಭವಿ ಸ್ಪಿನ್ನರ್ ಪಿಯೂಷ್ ಚಾವ್ಲಾ ಈ ನಿರ್ಧಾರದ ಹಿಂದಿನ ಕಾರಣವನ್ನು ಬಹಿರಂಗಪಡಿಸಿದ್ದಾರೆ.

ಆದರೀಗ ರೋಹಿತ್ ಶರ್ಮಾ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಯಲು ಕಾರಣ ಏನು ಎಂಬುದು ಬಹಿರಂಗಗೊಂಡಿದೆ. ಪಂದ್ಯ ಮುಗಿದ ಬಳಿಕ ಮಾತನಾಡಿದ ತಂಡದ ಅನುಭವಿ ಸ್ಪಿನ್ನರ್ ಪಿಯೂಷ್ ಚಾವ್ಲಾ ಈ ನಿರ್ಧಾರದ ಹಿಂದಿನ ಕಾರಣವನ್ನು ಬಹಿರಂಗಪಡಿಸಿದ್ದಾರೆ.

4 / 7
ಪಂದ್ಯ ಮುಗಿದ ಬಳಿಕ ಮಾತನಾಡಿದ ತಂಡದ ಪಿಯೂಷ್ ಚಾವ್ಲಾ, ರೋಹಿತ್ ಶರ್ಮಾ ಬೆನ್ನು ನೋವಿನ ಕಾರಣ ಮುಖ್ಯ ತಂಡದಲ್ಲಿ ಆಡಲು ಸಾಧ್ಯವಾಗಲಿಲ್ಲ. ಹೀಗಾಗಿ ಅವರನ್ನು ಕೇವಲ ಇಂಪ್ಯಾಕ್ಟ್ ಪ್ಲೇಯರ್ ಆಗಿ ಬ್ಯಾಟಿಂಗ್​ಗೆ ಇಳಿಸಲಾಯಿತು ಎಂದಿದ್ದಾರೆ.

ಪಂದ್ಯ ಮುಗಿದ ಬಳಿಕ ಮಾತನಾಡಿದ ತಂಡದ ಪಿಯೂಷ್ ಚಾವ್ಲಾ, ರೋಹಿತ್ ಶರ್ಮಾ ಬೆನ್ನು ನೋವಿನ ಕಾರಣ ಮುಖ್ಯ ತಂಡದಲ್ಲಿ ಆಡಲು ಸಾಧ್ಯವಾಗಲಿಲ್ಲ. ಹೀಗಾಗಿ ಅವರನ್ನು ಕೇವಲ ಇಂಪ್ಯಾಕ್ಟ್ ಪ್ಲೇಯರ್ ಆಗಿ ಬ್ಯಾಟಿಂಗ್​ಗೆ ಇಳಿಸಲಾಯಿತು ಎಂದಿದ್ದಾರೆ.

5 / 7
ಇನ್ನು ಈ ಪಂದ್ಯದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಿದ್ದ ರೋಹಿತ್ ಶರ್ಮಾ ಬ್ಯಾಟಿಂಗ್​ನಲ್ಲಿ ಕಮಾಲ್ ಮಾಡಲಿಲ್ಲ. ಆಡಿದ 12 ಎಸೆತಗಳಲ್ಲಿ 1 ಸಿಕ್ಸರ್ ನೆರವಿನಿಂದ ಕೇವಲ 11 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

ಇನ್ನು ಈ ಪಂದ್ಯದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಿದ್ದ ರೋಹಿತ್ ಶರ್ಮಾ ಬ್ಯಾಟಿಂಗ್​ನಲ್ಲಿ ಕಮಾಲ್ ಮಾಡಲಿಲ್ಲ. ಆಡಿದ 12 ಎಸೆತಗಳಲ್ಲಿ 1 ಸಿಕ್ಸರ್ ನೆರವಿನಿಂದ ಕೇವಲ 11 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

6 / 7
ವಾಸ್ತವವಾಗಿ ಈ ಸೀಸನ್​ನಲ್ಲಿ ರೋಹಿತ್ ಶರ್ಮಾ ಅವರ ಫಾರ್ಮ್​ ಉತ್ತಮವಾಗಿಲ್ಲ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 4, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 8, ರಾಜಸ್ಥಾನ ರಾಯಲ್ಸ್ ವಿರುದ್ಧ 6 ಮತ್ತು ಪಂಜಾಬ್ ಕಿಂಗ್ಸ್ ವಿರುದ್ಧ 36 ರನ್ ಗಳಿಸಿದರು. ರೋಹಿತ್ ಶರ್ಮಾ ಇದುವರೆಗೆ ಆಡಿರುವ 11 ಪಂದ್ಯಗಳಲ್ಲಿ 32.60 ಸರಾಸರಿ 326 ರನ್ ಕಲೆ ಹಾಕಿದ್ದಾರೆ. ಇದರಲ್ಲಿ 1 ಶತಕವೂ ಸೇರಿದೆ.

ವಾಸ್ತವವಾಗಿ ಈ ಸೀಸನ್​ನಲ್ಲಿ ರೋಹಿತ್ ಶರ್ಮಾ ಅವರ ಫಾರ್ಮ್​ ಉತ್ತಮವಾಗಿಲ್ಲ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 4, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 8, ರಾಜಸ್ಥಾನ ರಾಯಲ್ಸ್ ವಿರುದ್ಧ 6 ಮತ್ತು ಪಂಜಾಬ್ ಕಿಂಗ್ಸ್ ವಿರುದ್ಧ 36 ರನ್ ಗಳಿಸಿದರು. ರೋಹಿತ್ ಶರ್ಮಾ ಇದುವರೆಗೆ ಆಡಿರುವ 11 ಪಂದ್ಯಗಳಲ್ಲಿ 32.60 ಸರಾಸರಿ 326 ರನ್ ಕಲೆ ಹಾಕಿದ್ದಾರೆ. ಇದರಲ್ಲಿ 1 ಶತಕವೂ ಸೇರಿದೆ.

7 / 7
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!