AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಗೆದ್ದರೂ, DC ಜಯಿಸಿದರೂ ಹೊಸ ಇತಿಹಾಸ ನಿರ್ಮಾಣ

IPL 2024 - WPL 2024: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್) 16 ಸೀಸನ್​ಗಳನ್ನು ಆಡಿದೆ. ಇದೇ ಫ್ರಾಂಚೈಸಿಯ ಮಹಿಳಾ ತಂಡಗಳು ವುಮೆನ್ಸ್ ಪ್ರೀಮಿಯರ್ ಲೀಗ್​ನ 2 ಆವೃತ್ತಿಗಳಲ್ಲಿ ಕಣಕ್ಕಿಳಿದಿದೆ. ಇದೀಗ ಈ ಎರಡೂ ತಂಡಗಳು ಮೊದಲ ಬಾರಿ ಫೈನಲ್​ನಲ್ಲಿ ಮುಖಾಮುಖಿಯಾಗುತ್ತಿರುವುದು ವಿಶೇಷ.

TV9 Web
| Edited By: |

Updated on:Mar 16, 2024 | 2:54 PM

Share
ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2024) ಫೈನಲ್ ಫೈಟ್​ಗೆ ವೇದಿಕೆ ಸಿದ್ಧವಾಗಿದೆ. ಭಾನುವಾರ (ಮಾ.17) ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಮುಖಾಮುಖಿಯಾಗಲಿದೆ. ವಿಶೇಷ ಎಂದರೆ ಈ ಪಂದ್ಯದ ಫಲಿತಾಂಶದೊಂದಿಗೆ ಒಂದು ತಂಡ ಪ್ರಶಸ್ತಿ ಖಾತೆ ತೆರೆಯಲಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2024) ಫೈನಲ್ ಫೈಟ್​ಗೆ ವೇದಿಕೆ ಸಿದ್ಧವಾಗಿದೆ. ಭಾನುವಾರ (ಮಾ.17) ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಮುಖಾಮುಖಿಯಾಗಲಿದೆ. ವಿಶೇಷ ಎಂದರೆ ಈ ಪಂದ್ಯದ ಫಲಿತಾಂಶದೊಂದಿಗೆ ಒಂದು ತಂಡ ಪ್ರಶಸ್ತಿ ಖಾತೆ ತೆರೆಯಲಿದೆ.

1 / 5
ಅಂದರೆ ಉಭಯ ಫ್ರಾಂಚೈಸಿಗಳು ಕಳೆದ 16 ವರ್ಷಗಳಿಂದ ಭಾರತೀಯ ಅಂಗಳದಲ್ಲಿ ಟೂರ್ನಿ ಆಡುತ್ತಿದ್ದರೂ ಒಮ್ಮೆಯೂ ಟ್ರೋಫಿಯನ್ನು ಎತ್ತಿ ಹಿಡಿದಿಲ್ಲ. ಆರ್​ಸಿಬಿ ತಂಡವು ಒಟ್ಟು ನಾಲ್ಕು ಬಾರಿ ಫೈನಲ್​ಗೆ ಪ್ರವೇಶಿಸಿ ಅಂತಿಮ ಪಂದ್ಯದಲ್ಲಿ ಎಡವಿದರೆ, ಡೆಲ್ಲಿ ಕ್ಯಾಪಿಟಲ್ಸ್ 2 ಬಾರಿ ಪ್ರಶಸ್ತಿ ಹಣಾಹಣಿಯಲ್ಲಿ ಮುಗ್ಗರಿಸಿದೆ.

ಅಂದರೆ ಉಭಯ ಫ್ರಾಂಚೈಸಿಗಳು ಕಳೆದ 16 ವರ್ಷಗಳಿಂದ ಭಾರತೀಯ ಅಂಗಳದಲ್ಲಿ ಟೂರ್ನಿ ಆಡುತ್ತಿದ್ದರೂ ಒಮ್ಮೆಯೂ ಟ್ರೋಫಿಯನ್ನು ಎತ್ತಿ ಹಿಡಿದಿಲ್ಲ. ಆರ್​ಸಿಬಿ ತಂಡವು ಒಟ್ಟು ನಾಲ್ಕು ಬಾರಿ ಫೈನಲ್​ಗೆ ಪ್ರವೇಶಿಸಿ ಅಂತಿಮ ಪಂದ್ಯದಲ್ಲಿ ಎಡವಿದರೆ, ಡೆಲ್ಲಿ ಕ್ಯಾಪಿಟಲ್ಸ್ 2 ಬಾರಿ ಪ್ರಶಸ್ತಿ ಹಣಾಹಣಿಯಲ್ಲಿ ಮುಗ್ಗರಿಸಿದೆ.

2 / 5
 ಆರ್​ಸಿಬಿ ತಂಡವು 2009 ರ ಐಪಿಎಲ್​ನಲ್ಲಿ ಮೊದಲ ಬಾರಿ ಫೈನಲ್​ಗೆ ಪ್ರವೇಶಿಸಿ ಸೋಲನುಭವಿಸಿತ್ತು. ಇದಾದ ಬಳಿಕ 2011 ಮತ್ತು 2016 ರಲ್ಲಿ ಐಪಿಎಲ್​ ಫೈನಲ್ ಆಡಿದ್ದರೂ ಪ್ರಶಸ್ತಿ ಮುಡಿಗೇರಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಇದರ ನಡುವೆ 2011 ರ ಚಾಂಪಿಯನ್ಸ್​ ಟ್ರೋಫಿ ಫೈನಲ್​ನಲ್ಲೂ ಮುಗ್ಗರಿಸಿತ್ತು. ಇದೀಗ ಚೊಚ್ಚಲ ಟ್ರೋಫಿಯ ಕನಸಿನೊಂದಿಗೆ ಆರ್​ಸಿಬಿ ಮಹಿಳಾ ತಂಡ ಫೈನಲ್​ಗೆ ಪ್ರವೇಶಿಸಿದೆ.

ಆರ್​ಸಿಬಿ ತಂಡವು 2009 ರ ಐಪಿಎಲ್​ನಲ್ಲಿ ಮೊದಲ ಬಾರಿ ಫೈನಲ್​ಗೆ ಪ್ರವೇಶಿಸಿ ಸೋಲನುಭವಿಸಿತ್ತು. ಇದಾದ ಬಳಿಕ 2011 ಮತ್ತು 2016 ರಲ್ಲಿ ಐಪಿಎಲ್​ ಫೈನಲ್ ಆಡಿದ್ದರೂ ಪ್ರಶಸ್ತಿ ಮುಡಿಗೇರಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಇದರ ನಡುವೆ 2011 ರ ಚಾಂಪಿಯನ್ಸ್​ ಟ್ರೋಫಿ ಫೈನಲ್​ನಲ್ಲೂ ಮುಗ್ಗರಿಸಿತ್ತು. ಇದೀಗ ಚೊಚ್ಚಲ ಟ್ರೋಫಿಯ ಕನಸಿನೊಂದಿಗೆ ಆರ್​ಸಿಬಿ ಮಹಿಳಾ ತಂಡ ಫೈನಲ್​ಗೆ ಪ್ರವೇಶಿಸಿದೆ.

3 / 5
ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು 2020 ರಲ್ಲಿ ಮೊದಲ ಬಾರಿ ಐಪಿಎಲ್​ ಫೈನಲ್ ಆಡಿತ್ತು. ಆದರೆ ನಿರ್ಣಾಯಕ ಪಂದ್ಯದಲ್ಲಿ ಸೋಲುವ ಮೂಲಕ ಪ್ರಶಸ್ತಿ ಕೈಚೆಲ್ಲಿಕೊಂಡಿತು. ಇನ್ನು 2023ರ ವುಮೆನ್ಸ್ ಪ್ರೀಮಿಯರ್ ಲೀಗ್​ ಫೈನಲ್ ಆಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲನುಭವಿಸಿತ್ತು.

ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು 2020 ರಲ್ಲಿ ಮೊದಲ ಬಾರಿ ಐಪಿಎಲ್​ ಫೈನಲ್ ಆಡಿತ್ತು. ಆದರೆ ನಿರ್ಣಾಯಕ ಪಂದ್ಯದಲ್ಲಿ ಸೋಲುವ ಮೂಲಕ ಪ್ರಶಸ್ತಿ ಕೈಚೆಲ್ಲಿಕೊಂಡಿತು. ಇನ್ನು 2023ರ ವುಮೆನ್ಸ್ ಪ್ರೀಮಿಯರ್ ಲೀಗ್​ ಫೈನಲ್ ಆಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲನುಭವಿಸಿತ್ತು.

4 / 5
ಇದೀಗ ಪ್ರಶಸ್ತಿ ಮರೀಚಿಕೆಯಾಗಿರುವ ಎರಡು ತಂಡಗಳು ಫೈನಲ್ ಆಡುತ್ತಿದೆ. ಇಲ್ಲಿ ಗೆಲ್ಲುವ ಒಂದು ಫ್ರಾಂಚೈಸಿಯು ಪ್ರಶಸ್ತಿ ಖಾತೆಯನ್ನು ತೆರೆಯಲಿದೆ. ಅದರಂತೆ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಪ್ ಗೆಲ್ಲಲಿದೆಯಾ ಅಥವಾ ಡೆಲ್ಲಿ ಕ್ಯಾಪಿಟಲ್ಸ್ ಪ್ರಶಸ್ತಿ ಮುಡಿಗೇರಿಸಿಕೊಳ್ಳಲಿದೆಯಾ? ಎಂಬ ಪ್ರಶ್ನೆಗೆ ಭಾನುವಾರ (ಮಾ.17) ರಾತ್ರಿ ಉತ್ತರ ಸಿಗಲಿದೆ.

ಇದೀಗ ಪ್ರಶಸ್ತಿ ಮರೀಚಿಕೆಯಾಗಿರುವ ಎರಡು ತಂಡಗಳು ಫೈನಲ್ ಆಡುತ್ತಿದೆ. ಇಲ್ಲಿ ಗೆಲ್ಲುವ ಒಂದು ಫ್ರಾಂಚೈಸಿಯು ಪ್ರಶಸ್ತಿ ಖಾತೆಯನ್ನು ತೆರೆಯಲಿದೆ. ಅದರಂತೆ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಪ್ ಗೆಲ್ಲಲಿದೆಯಾ ಅಥವಾ ಡೆಲ್ಲಿ ಕ್ಯಾಪಿಟಲ್ಸ್ ಪ್ರಶಸ್ತಿ ಮುಡಿಗೇರಿಸಿಕೊಳ್ಳಲಿದೆಯಾ? ಎಂಬ ಪ್ರಶ್ನೆಗೆ ಭಾನುವಾರ (ಮಾ.17) ರಾತ್ರಿ ಉತ್ತರ ಸಿಗಲಿದೆ.

5 / 5

Published On - 2:52 pm, Sat, 16 March 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ