AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಆರ್​ಸಿಬಿ- ಗುಜರಾತ್ ಮುಖಾಮುಖಿಯಲ್ಲಿ ಯಾರದ್ದು ಮೇಲುಗೈ?

RCB vs GT IPL 2025 Match 14 Head-to-Head: ಐಪಿಎಲ್ 2025 ರ 14ನೇ ಪಂದ್ಯದಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಸೀಸನ್​ನಲ್ಲಿ ಆರ್‌ಸಿಬಿ ಉತ್ತಮ ಪ್ರದರ್ಶನ ನೀಡುತ್ತಿದ್ದರೆ, ಗುಜರಾತ್​ಗೆ ನಿರೀಕ್ಷಿತ ಯಶಸ್ಸು ಸಿಕ್ಕಿಲ್ಲ. ಹೆಡ್-ಟು-ಹೆಡ್ ದಾಖಲೆಯಲ್ಲಿ ಆರ್‌ಸಿಬಿ ಮೇಲುಗೈ ಸಾಧಿಸಿದೆ. ಹೀಗಾಗಿ ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲುತ್ತದೆ ಎಂಬುದು ಕುತೂಹಲಕಾರಿಯಾಗಿದೆ.

ಪೃಥ್ವಿಶಂಕರ
|

Updated on: Apr 01, 2025 | 8:59 PM

Share
ಐಪಿಎಲ್ 2025 ರ 14 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಆರ್‌ಸಿಬಿಯ ತವರು ಮೈದಾನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ರಜತ್ ಪಾಟಿದಾರ್ ನಾಯಕತ್ವದಲ್ಲಿ, ಆರ್‌ಸಿಬಿ ಈ ಸೀಸನ್​ನಲ್ಲಿ ಉತ್ತಮ ಆರಂಭವನ್ನು ಮಾಡಿದೆ.

ಐಪಿಎಲ್ 2025 ರ 14 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಆರ್‌ಸಿಬಿಯ ತವರು ಮೈದಾನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ರಜತ್ ಪಾಟಿದಾರ್ ನಾಯಕತ್ವದಲ್ಲಿ, ಆರ್‌ಸಿಬಿ ಈ ಸೀಸನ್​ನಲ್ಲಿ ಉತ್ತಮ ಆರಂಭವನ್ನು ಮಾಡಿದೆ.

1 / 7
ಆರ್​ಸಿಬಿ ತಂಡವು ಇಲ್ಲಿಯವರೆಗೆ ಎರಡು ಪಂದ್ಯಗಳನ್ನು ಆಡಿದ್ದು, ಎರಡರಲ್ಲೂ ಗೆದ್ದಿದೆ. ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಲೀಗ್​ನ ಮೊದಲ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮಣಿಸಿದ್ದ ಆರ್​​ಸಿಬಿ, ಆ ಬಳಿಕ ಚೆಪಾಕ್‌ನಲ್ಲಿ ನಡೆದ 2ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿತ್ತು

ಆರ್​ಸಿಬಿ ತಂಡವು ಇಲ್ಲಿಯವರೆಗೆ ಎರಡು ಪಂದ್ಯಗಳನ್ನು ಆಡಿದ್ದು, ಎರಡರಲ್ಲೂ ಗೆದ್ದಿದೆ. ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಲೀಗ್​ನ ಮೊದಲ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮಣಿಸಿದ್ದ ಆರ್​​ಸಿಬಿ, ಆ ಬಳಿಕ ಚೆಪಾಕ್‌ನಲ್ಲಿ ನಡೆದ 2ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿತ್ತು

2 / 7
ಇತ್ತ ಗುಜರಾತ್ ಟೈಟಾನ್ಸ್‌ಗೆ ಇದುವರೆಗೆ ನಿರೀಕ್ಷೆಯಂತೆ ಆರಂಭ ಸಿಕ್ಕಿಲ್ಲ. ತನ್ನ ಮೊದಲ ಪಂದ್ಯವನ್ನು ಪಂಜಾಬ್ ಕಿಂಗ್ಸ್ ವಿರುದ್ಧ ಆಡಿದ್ದ ಗುಜರಾತ್ 11 ರನ್‌ಗಳಿಂದ ಸೋಲನ್ನು ಅನುಭವಿಸಿತ್ತು. ಆದಾಗ್ಯೂ, ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು 36 ರನ್‌ಗಳಿಂದ ಸೋಲಿಸುವ ಮೂಲಕ ಪುನರಾಗಮನ ಮಾಡಿತು. ಈಗ ಎರಡೂ ತಂಡಗಳು ಈ ಪಂದ್ಯವನ್ನು ಗೆಲ್ಲುವ ಮೂಲಕ ತಮ್ಮ ಗೆಲುವಿನ ಓಟವನ್ನು ಮುಂದುವರಿಸಲು ಬಯಸುತ್ತವೆ.

ಇತ್ತ ಗುಜರಾತ್ ಟೈಟಾನ್ಸ್‌ಗೆ ಇದುವರೆಗೆ ನಿರೀಕ್ಷೆಯಂತೆ ಆರಂಭ ಸಿಕ್ಕಿಲ್ಲ. ತನ್ನ ಮೊದಲ ಪಂದ್ಯವನ್ನು ಪಂಜಾಬ್ ಕಿಂಗ್ಸ್ ವಿರುದ್ಧ ಆಡಿದ್ದ ಗುಜರಾತ್ 11 ರನ್‌ಗಳಿಂದ ಸೋಲನ್ನು ಅನುಭವಿಸಿತ್ತು. ಆದಾಗ್ಯೂ, ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು 36 ರನ್‌ಗಳಿಂದ ಸೋಲಿಸುವ ಮೂಲಕ ಪುನರಾಗಮನ ಮಾಡಿತು. ಈಗ ಎರಡೂ ತಂಡಗಳು ಈ ಪಂದ್ಯವನ್ನು ಗೆಲ್ಲುವ ಮೂಲಕ ತಮ್ಮ ಗೆಲುವಿನ ಓಟವನ್ನು ಮುಂದುವರಿಸಲು ಬಯಸುತ್ತವೆ.

3 / 7
ಹೆಡ್ ಟು ಹೆಡ್ ದಾಖಲೆಯ ಬಗ್ಗೆ ಮಾತನಾಡಿದರೆ, ಉಭಯ ತಂಡಗಳ ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೇಲುಗೈ ಸಾಧಿಸಿದೆ. ಐಪಿಎಲ್ ಇತಿಹಾಸದಲ್ಲಿ ಇಲ್ಲಿಯವರೆಗೆ, ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು 5 ಬಾರಿ ಪರಸ್ಪರ ಮುಖಾಮುಖಿಯಾಗಿವೆ. ಇವುಗಳಲ್ಲಿ ಆರ್‌ಸಿಬಿ 3 ಪಂದ್ಯಗಳನ್ನು ಗೆದ್ದಿದ್ದರೆ, ಜಿಟಿ 2 ಪಂದ್ಯಗಳನ್ನು ಗೆದ್ದಿದೆ.

Gt (1)

4 / 7
ಕಳೆದ ಸೀಸನ್​ನಲ್ಲಿ ಉಭಯ ತಂಡಗಳ ನಡುವೆ ಎರಡು ಪಂದ್ಯಗಳು ನಡೆದಿದ್ದು, ಎರಡರಲ್ಲೂ ಆರ್‌ಸಿಬಿ ಗೆಲುವು ಸಾಧಿಸಿತ್ತು. ಐಪಿಎಲ್ 2024 ರ ಮೊದಲ ಹಣಾಹಣಿ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದಿದ್ದು, ಅಲ್ಲಿ ಬೆಂಗಳೂರು ತಂಡ ಗುಜರಾತ್ ತಂಡವನ್ನು 9 ವಿಕೆಟ್‌ಗಳಿಂದ ಸೋಲಿಸಿತು. ಆ ನಂತರ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಆರ್‌ಸಿಬಿ, ಜಿಟಿ ತಂಡವನ್ನು 4 ವಿಕೆಟ್‌ಗಳಿಂದ ಸೋಲಿಸಿತು. ಈ ಬಾರಿ ಯಾವ ತಂಡ ಮೇಲುಗೈ ಸಾಧಿಸುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಕಳೆದ ಸೀಸನ್​ನಲ್ಲಿ ಉಭಯ ತಂಡಗಳ ನಡುವೆ ಎರಡು ಪಂದ್ಯಗಳು ನಡೆದಿದ್ದು, ಎರಡರಲ್ಲೂ ಆರ್‌ಸಿಬಿ ಗೆಲುವು ಸಾಧಿಸಿತ್ತು. ಐಪಿಎಲ್ 2024 ರ ಮೊದಲ ಹಣಾಹಣಿ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದಿದ್ದು, ಅಲ್ಲಿ ಬೆಂಗಳೂರು ತಂಡ ಗುಜರಾತ್ ತಂಡವನ್ನು 9 ವಿಕೆಟ್‌ಗಳಿಂದ ಸೋಲಿಸಿತು. ಆ ನಂತರ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಆರ್‌ಸಿಬಿ, ಜಿಟಿ ತಂಡವನ್ನು 4 ವಿಕೆಟ್‌ಗಳಿಂದ ಸೋಲಿಸಿತು. ಈ ಬಾರಿ ಯಾವ ತಂಡ ಮೇಲುಗೈ ಸಾಧಿಸುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

5 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್‌ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹೇಜಲ್‌ವುಡ್, ರಸಿಖ್ ದಾರ್ ಸಲಾಂ, ಸುಯಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ನುವಾನ್ ತುಷಾರ, ಮನೋಜ್ ಭಾಂಡಗೆ, ಜಾಕೋಬ್ ಬೆಥೆಲ್, ದೇವದತ್ ಪಡಿಕ್ಕಲ್, ಸ್ವಸ್ತಿಕ್ ಚಿಕಾರ, ಲುಂಗಿ ಎನ್‌ಗಿಡಿ, ಅಭಿನಂದನ್ ಸಿಂಗ್, ಮೋಹಿತ್ ರಾಠಿ, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್‌ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹೇಜಲ್‌ವುಡ್, ರಸಿಖ್ ದಾರ್ ಸಲಾಂ, ಸುಯಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ನುವಾನ್ ತುಷಾರ, ಮನೋಜ್ ಭಾಂಡಗೆ, ಜಾಕೋಬ್ ಬೆಥೆಲ್, ದೇವದತ್ ಪಡಿಕ್ಕಲ್, ಸ್ವಸ್ತಿಕ್ ಚಿಕಾರ, ಲುಂಗಿ ಎನ್‌ಗಿಡಿ, ಅಭಿನಂದನ್ ಸಿಂಗ್, ಮೋಹಿತ್ ರಾಠಿ, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್.

6 / 7
ಗುಜರಾತ್ ಟೈಟಾನ್ಸ್: ಶುಭ್​ಮನ್ ಗಿಲ್, ರಶೀದ್ ಖಾನ್, ಸಾಯಿ ಸುದರ್ಶನ್, ರಾಹುಲ್ ತೆವಾಟಿಯಾ, ಶಾರುಖ್ ಖಾನ್, ಜೋಸ್ ಬಟ್ಲರ್, ಮೊಹಮ್ಮದ್ ಸಿರಾಜ್, ಕಗಿಸೊ ರಬಾಡ, ಪ್ರಸಿದ್ಧ್ ಕೃಷ್ಣ, ವಾಷಿಂಗ್ಟನ್ ಸುಂದರ್, ಶೆರ್ಫೇನ್ ರುದರ್‌ಫೋರ್ಡ್, ಜೆರಾಲ್ಡ್ ಕೊಯೆಟ್ಜೆ, ಆರ್ ಸಾಯಿ ಕಿಶೋರ್, ಮಹಿಪಾಲ್ ಲೊಮ್ರೋರ್, ಗುರ್ನೂರ್ ಸಿಂಗ್ ಬ್ರಾರ್, ಮೊಹಮ್ಮದ್ ಅರ್ಷದ್ ಖಾನ್, ಇಶಾಂತ್ ಶರ್ಮಾ, ಕುಮಾರ್ ಕುಶಾಗ್ರಾ, ಮಾನವ್ ಸುತಾರ್, ಅನುಜ್ ರಾವತ್, ಜಯಂತ್ ಯಾದವ್, ಗ್ಲೆನ್ ಫಿಲಿಪ್ಸ್, ಕರೀಂ ಜನತ್, ಕುಲ್ವಂತ್ ಖೆಜುರ್ಲಿಯಾ.

ಗುಜರಾತ್ ಟೈಟಾನ್ಸ್: ಶುಭ್​ಮನ್ ಗಿಲ್, ರಶೀದ್ ಖಾನ್, ಸಾಯಿ ಸುದರ್ಶನ್, ರಾಹುಲ್ ತೆವಾಟಿಯಾ, ಶಾರುಖ್ ಖಾನ್, ಜೋಸ್ ಬಟ್ಲರ್, ಮೊಹಮ್ಮದ್ ಸಿರಾಜ್, ಕಗಿಸೊ ರಬಾಡ, ಪ್ರಸಿದ್ಧ್ ಕೃಷ್ಣ, ವಾಷಿಂಗ್ಟನ್ ಸುಂದರ್, ಶೆರ್ಫೇನ್ ರುದರ್‌ಫೋರ್ಡ್, ಜೆರಾಲ್ಡ್ ಕೊಯೆಟ್ಜೆ, ಆರ್ ಸಾಯಿ ಕಿಶೋರ್, ಮಹಿಪಾಲ್ ಲೊಮ್ರೋರ್, ಗುರ್ನೂರ್ ಸಿಂಗ್ ಬ್ರಾರ್, ಮೊಹಮ್ಮದ್ ಅರ್ಷದ್ ಖಾನ್, ಇಶಾಂತ್ ಶರ್ಮಾ, ಕುಮಾರ್ ಕುಶಾಗ್ರಾ, ಮಾನವ್ ಸುತಾರ್, ಅನುಜ್ ರಾವತ್, ಜಯಂತ್ ಯಾದವ್, ಗ್ಲೆನ್ ಫಿಲಿಪ್ಸ್, ಕರೀಂ ಜನತ್, ಕುಲ್ವಂತ್ ಖೆಜುರ್ಲಿಯಾ.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ