AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್​ನಿಂದ ಮೂರು ತಂಡಗಳು ಔಟ್

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) ಪ್ಲೇಆಫ್ ರೇಸ್ ಮುಂದುವರೆದಿದೆ. ಸದ್ಯ 7 ತಂಡಗಳು ಮುಂದಿನ ಹಂತಕ್ಕೇರಲು ಪೈಪೋಟಿ ಮುಂದುವರೆಸಿದ್ದು, ಇದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಮುಂಚೂಣಿಯಲ್ಲಿದೆ. ಇದರ ನಡುವೆ ಮೂರು ತಂಡಗಳು ಟೂರ್ನಿಯಿಂದ ಹೊರಬಿದ್ದಿದೆ. ಆ ತಂಡಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

ಝಾಹಿರ್ ಯೂಸುಫ್
|

Updated on:May 06, 2025 | 9:55 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18ರ 61 ಪಂದ್ಯಗಳು ಮುಗಿದಿವೆ. ಈ ಆರವತ್ತೊಂದು ಪಂದ್ಯಗಳ ಮುಕ್ತಾಯದ ವೇಳೆಗೆ 2 ತಂಡಗಳು ಪ್ಲೇಆಫ್ ರೇಸ್​ನಲ್ಲಿ ಉಳಿದರೆ, 5 ತಂಡಗಳು ಹೊರಬಿದ್ದಿವೆ. ಹೀಗೆ ಲೀಗ್ ಹಂತದ ಪಂದ್ಯಗಳು ಮುಗಿಯುವ ಮುನ್ನವೇ ಪ್ಲೇಆಫ್ ರೇಸ್​ನಿಂದ ಹೊರಬಿದ್ದ 5 ತಂಡಗಳಾವುವು ಎಂದು ನೋಡುವುದಾದರೆ....

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18ರ 61 ಪಂದ್ಯಗಳು ಮುಗಿದಿವೆ. ಈ ಆರವತ್ತೊಂದು ಪಂದ್ಯಗಳ ಮುಕ್ತಾಯದ ವೇಳೆಗೆ 2 ತಂಡಗಳು ಪ್ಲೇಆಫ್ ರೇಸ್​ನಲ್ಲಿ ಉಳಿದರೆ, 5 ತಂಡಗಳು ಹೊರಬಿದ್ದಿವೆ. ಹೀಗೆ ಲೀಗ್ ಹಂತದ ಪಂದ್ಯಗಳು ಮುಗಿಯುವ ಮುನ್ನವೇ ಪ್ಲೇಆಫ್ ರೇಸ್​ನಿಂದ ಹೊರಬಿದ್ದ 5 ತಂಡಗಳಾವುವು ಎಂದು ನೋಡುವುದಾದರೆ....

1 / 5
ಚೆನ್ನೈ ಸೂಪರ್ ಕಿಂಗ್ಸ್: ಈ ಬಾರಿಯ ಐಪಿಎಲ್​ನಲ್ಲಿ ಈಗಾಗಲೇ 12 ಪಂದ್ಯಗಳನ್ನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು 9 ಪಂದ್ಯಗಳಲ್ಲಿ ಸೋಲನುಭವಿಸಿದರೆ, 3 ಮ್ಯಾಚ್​ಗಳಲ್ಲಿ ಮಾತ್ರ ಗೆಲುವು ದಾಖಲಿಸಿದೆ. ಸಿಎಸ್​ಕೆ ತಂಡಕ್ಕೆ ಇನ್ನೂ 2 ಪಂದ್ಯಗಳಿವೆ. ಈ ಪಂದ್ಯಗಳಲ್ಲಿ ಗೆದ್ದರೂ ಸಿಎಸ್​ಕೆ ತಂಡಕ್ಕೆ ಪ್ಲೇಆಫ್​ಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ. 

ಚೆನ್ನೈ ಸೂಪರ್ ಕಿಂಗ್ಸ್: ಈ ಬಾರಿಯ ಐಪಿಎಲ್​ನಲ್ಲಿ ಈಗಾಗಲೇ 12 ಪಂದ್ಯಗಳನ್ನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು 9 ಪಂದ್ಯಗಳಲ್ಲಿ ಸೋಲನುಭವಿಸಿದರೆ, 3 ಮ್ಯಾಚ್​ಗಳಲ್ಲಿ ಮಾತ್ರ ಗೆಲುವು ದಾಖಲಿಸಿದೆ. ಸಿಎಸ್​ಕೆ ತಂಡಕ್ಕೆ ಇನ್ನೂ 2 ಪಂದ್ಯಗಳಿವೆ. ಈ ಪಂದ್ಯಗಳಲ್ಲಿ ಗೆದ್ದರೂ ಸಿಎಸ್​ಕೆ ತಂಡಕ್ಕೆ ಪ್ಲೇಆಫ್​ಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ. 

2 / 5
ರಾಜಸ್ಥಾನ್ ರಾಯಲ್ಸ್: ಆರ್​ಆರ್ ತಂಡವು ಈಗಾಗಲೇ 12 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು 3 ಮ್ಯಾಚ್​ಗಳಲ್ಲಿ ಮಾತ್ರ. ಇನ್ನುಳಿದ 2 ಪಂದ್ಯಗಳಲ್ಲಿ ಜಯ ಸಾಧಿಸಿದರೂ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಮುಂದಿನ ಹಂತಕ್ಕೇರಲು ಸಾಧ್ಯವಾಗುವುದಿಲ್ಲ. ಇದರೊಂದಿಗೆ ಆರ್​ಆರ್ ಪಡೆಯ ಪ್ಲೇಆಫ್ ಕನಸು ಕೂಡ ಕಮರಿದೆ.

ರಾಜಸ್ಥಾನ್ ರಾಯಲ್ಸ್: ಆರ್​ಆರ್ ತಂಡವು ಈಗಾಗಲೇ 12 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು 3 ಮ್ಯಾಚ್​ಗಳಲ್ಲಿ ಮಾತ್ರ. ಇನ್ನುಳಿದ 2 ಪಂದ್ಯಗಳಲ್ಲಿ ಜಯ ಸಾಧಿಸಿದರೂ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಮುಂದಿನ ಹಂತಕ್ಕೇರಲು ಸಾಧ್ಯವಾಗುವುದಿಲ್ಲ. ಇದರೊಂದಿಗೆ ಆರ್​ಆರ್ ಪಡೆಯ ಪ್ಲೇಆಫ್ ಕನಸು ಕೂಡ ಕಮರಿದೆ.

3 / 5
ಸನ್​ರೈಸರ್ಸ್ ಹೈದರಾಬಾದ್: ಎಸ್​ಆರ್​ಹೆಚ್​ ತಂಡವು ಈಗಾಗಲೇ 11 ಪಂದ್ಯಗಳನ್ನಾಡಿದೆ. ಈ ವೇಳೆ 3 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನುಳಿದ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೂ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಪ್ಲೇಆಫ್​ಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ. 

ಸನ್​ರೈಸರ್ಸ್ ಹೈದರಾಬಾದ್: ಎಸ್​ಆರ್​ಹೆಚ್​ ತಂಡವು ಈಗಾಗಲೇ 11 ಪಂದ್ಯಗಳನ್ನಾಡಿದೆ. ಈ ವೇಳೆ 3 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನುಳಿದ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೂ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಪ್ಲೇಆಫ್​ಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ. 

4 / 5
ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಪ್ಲೇಆಫ್​ಗೆ ಲಗ್ಗೆಯಿಟ್ಟಿದ್ದು, ಒಂದು ಸ್ಥಾನಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ಅಥವಾ ಡೆಲ್ಲಿ ಕ್ಯಾಪಿಟಲ್ಸ್ 4ನೇ ತಂಡವಾಗಿ ಪ್ಲೇಆಫ್​​ಗೆ ಎಂಟ್ರಿ ಕೊಡಲಿದೆ.

ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಪ್ಲೇಆಫ್​ಗೆ ಲಗ್ಗೆಯಿಟ್ಟಿದ್ದು, ಒಂದು ಸ್ಥಾನಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ಅಥವಾ ಡೆಲ್ಲಿ ಕ್ಯಾಪಿಟಲ್ಸ್ 4ನೇ ತಂಡವಾಗಿ ಪ್ಲೇಆಫ್​​ಗೆ ಎಂಟ್ರಿ ಕೊಡಲಿದೆ.

5 / 5

Published On - 9:53 am, Tue, 6 May 25

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ