AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: SRH ಪಡೆಯಲ್ಲಿ ಬೆಂಕಿ ಬಿರುಗಾಳಿ..!

IPL 2025 SRH: ಸನ್​​ರೈಸರ್ಸ್ ಹೈದರಾಬಾದ್ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದೆ. ಆದರೆ ಈ ಬಾರಿ ಎಸ್​ಆರ್​ಹೆಚ್ ತಂಡದ ಜೆರ್ಸಿ ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಅಂದರೆ ಕಳೆದ ಸೀಸನ್​ನಲ್ಲಿ ಧರಿಸಿದ್ದ ಬ್ಲ್ಯಾಕ್-ಆರೆಂಜ್​ ಬಣ್ಣದ ಜೆರ್ಸಿಯಲ್ಲೇ ಈ ಸಲ ಕೂಡ ಸನ್​ರೈಸರ್ಸ್ ಹೈದರಾಬಾದ್ ಪಡೆ ಕಣಕ್ಕಿಳಿಯಲಿದೆ.

ಝಾಹಿರ್ ಯೂಸುಫ್
|

Updated on: Mar 12, 2025 | 11:03 AM

Share
ಐಪಿಎಲ್ ಸೀಸನ್-18 ಗಾಗಿ ಸನ್​ರೈಸರ್ಸ್ ಹೈದರಾಬಾದ್ ಬಲಿಷ್ಠ ಪಡೆಯನ್ನೇ ರೂಪಿಸಿದೆ. ಈ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿಯಲಿರುವುದು ಸ್ಪೋಟಕ ದಾಂಡಿಗ ಟ್ರಾವಿಸ್ ಹೆಡ್ ಹಾಗೂ ವಿಸ್ಪೋಟಕ ಬ್ಯಾಟರ್ ಅಭಿಷೇಕ್ ಶರ್ಮಾ. ಇನ್ನು ಮೂರನೇ ಕ್ರಮಾಂಕದಲ್ಲಿ ಪಾಕೆಟ್ ಡೈನಾಮೊ ಖ್ಯಾತಿಯ ಇಶಾನ್ ಕಿಶನ್ ಬ್ಯಾಟ್ ಬೀಸುವುದು ಖಚಿತ.

ಐಪಿಎಲ್ ಸೀಸನ್-18 ಗಾಗಿ ಸನ್​ರೈಸರ್ಸ್ ಹೈದರಾಬಾದ್ ಬಲಿಷ್ಠ ಪಡೆಯನ್ನೇ ರೂಪಿಸಿದೆ. ಈ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿಯಲಿರುವುದು ಸ್ಪೋಟಕ ದಾಂಡಿಗ ಟ್ರಾವಿಸ್ ಹೆಡ್ ಹಾಗೂ ವಿಸ್ಪೋಟಕ ಬ್ಯಾಟರ್ ಅಭಿಷೇಕ್ ಶರ್ಮಾ. ಇನ್ನು ಮೂರನೇ ಕ್ರಮಾಂಕದಲ್ಲಿ ಪಾಕೆಟ್ ಡೈನಾಮೊ ಖ್ಯಾತಿಯ ಇಶಾನ್ ಕಿಶನ್ ಬ್ಯಾಟ್ ಬೀಸುವುದು ಖಚಿತ.

1 / 5
ಇನ್ನು ಮಧ್ಯಮ ಕ್ರಮಾಂಕಗಳಲ್ಲಿ ಹೆನ್ರಿಕ್ ಕ್ಲಾಸೆನ್, ನಿತೀಶ್ ಕುಮಾರ್ ರೆಡ್ಡಿ ಇದ್ದಾರೆ. ಇವರೊಂದಿಗೆ ಕರ್ನಾಟಕದ ಸ್ಪೋಟಕ ದಾಂಡಿಗ ಅಭಿನವ್ ಮನೋಹರ್ ಕೂಡ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಕೂಡಿಕೊಂಡಿದ್ದಾರೆ. ಹೀಗಾಗಿ ಈ ಬಾರಿ ಎಸ್​ಆರ್​ಹೆಚ್​ ಬ್ಯಾಟರ್​ಗಳಿಂದ ಬೆಂಕಿ ಬಿರುಗಾಳಿ ಪ್ರದರ್ಶನವನ್ನು ಎದುರು ನೋಡಬಹುದು.

ಇನ್ನು ಮಧ್ಯಮ ಕ್ರಮಾಂಕಗಳಲ್ಲಿ ಹೆನ್ರಿಕ್ ಕ್ಲಾಸೆನ್, ನಿತೀಶ್ ಕುಮಾರ್ ರೆಡ್ಡಿ ಇದ್ದಾರೆ. ಇವರೊಂದಿಗೆ ಕರ್ನಾಟಕದ ಸ್ಪೋಟಕ ದಾಂಡಿಗ ಅಭಿನವ್ ಮನೋಹರ್ ಕೂಡ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಕೂಡಿಕೊಂಡಿದ್ದಾರೆ. ಹೀಗಾಗಿ ಈ ಬಾರಿ ಎಸ್​ಆರ್​ಹೆಚ್​ ಬ್ಯಾಟರ್​ಗಳಿಂದ ಬೆಂಕಿ ಬಿರುಗಾಳಿ ಪ್ರದರ್ಶನವನ್ನು ಎದುರು ನೋಡಬಹುದು.

2 / 5
ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಈಗಾಗಲೇ ಕ್ಯಾಂಪ್ ಆರಂಭಿಸಿದ್ದು, ಟೀಮ್ ಇಂಡಿಯಾದ ಯುವ ಆಟಗಾರರಾದ ಇಶಾನ್ ಕಿಶನ್, ಅಭಿಷೇಕ್ ಶರ್ಮಾ, ಅಭಿನವ್ ಮನೋಹರ್ ಸೇರಿದಂತೆ ಹಲವರು SRH ಕ್ಯಾಂಪ್ ಸೇರಿಕೊಂಡಿದ್ದಾರೆ. ಇನ್ನುಳಿದ ಆಟಗಾರರು ಇನ್ನೆರಡು ದಿನಗಳಲ್ಲಿ ಹೈದರಾಬಾದ್​ಗೆ ಬಂದಿಳಿಯಲಿದ್ದಾರೆ.

ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಈಗಾಗಲೇ ಕ್ಯಾಂಪ್ ಆರಂಭಿಸಿದ್ದು, ಟೀಮ್ ಇಂಡಿಯಾದ ಯುವ ಆಟಗಾರರಾದ ಇಶಾನ್ ಕಿಶನ್, ಅಭಿಷೇಕ್ ಶರ್ಮಾ, ಅಭಿನವ್ ಮನೋಹರ್ ಸೇರಿದಂತೆ ಹಲವರು SRH ಕ್ಯಾಂಪ್ ಸೇರಿಕೊಂಡಿದ್ದಾರೆ. ಇನ್ನುಳಿದ ಆಟಗಾರರು ಇನ್ನೆರಡು ದಿನಗಳಲ್ಲಿ ಹೈದರಾಬಾದ್​ಗೆ ಬಂದಿಳಿಯಲಿದ್ದಾರೆ.

3 / 5
ಸನ್​ರೈಸರ್ಸ್ ಹೈದರಾಬಾದ್ ತಂಡವು ಮಾರ್ಚ್ 23 ರಂದು ತನ್ನ ಮೊದಲ ಪಂದ್ಯವನ್ನಾಡಲಿದೆ. ಹೈದರಾಬಾದ್​ನಲ್ಲಿ ಜರುಗಲಿರುವ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದ್ದು, ಈ ಪಂದ್ಯದ ಮೂಲಕ SRH ಪಡೆ ಐಪಿಎಲ್ ಸೀಸನ್-18 ಅಭಿಯಾನ ಆರಂಭಿಸಲಿದೆ. ಇನ್ನು ಮಾರ್ಚ್ 27 ರಂದು ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಮುಖಾಮುಖಿಯಾಗಲಿದೆ. ಹಾಗೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್​ ಹೈದರಾಬಾದ್ ನಡುವಣ ಕದನವು ಮೇ 13 ರಂದು ನಡೆಯಲಿದೆ.

ಸನ್​ರೈಸರ್ಸ್ ಹೈದರಾಬಾದ್ ತಂಡವು ಮಾರ್ಚ್ 23 ರಂದು ತನ್ನ ಮೊದಲ ಪಂದ್ಯವನ್ನಾಡಲಿದೆ. ಹೈದರಾಬಾದ್​ನಲ್ಲಿ ಜರುಗಲಿರುವ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದ್ದು, ಈ ಪಂದ್ಯದ ಮೂಲಕ SRH ಪಡೆ ಐಪಿಎಲ್ ಸೀಸನ್-18 ಅಭಿಯಾನ ಆರಂಭಿಸಲಿದೆ. ಇನ್ನು ಮಾರ್ಚ್ 27 ರಂದು ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಮುಖಾಮುಖಿಯಾಗಲಿದೆ. ಹಾಗೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್​ ಹೈದರಾಬಾದ್ ನಡುವಣ ಕದನವು ಮೇ 13 ರಂದು ನಡೆಯಲಿದೆ.

4 / 5
SRH ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಅಭಿಷೇಕ್ ಶರ್ಮಾ, ನಿತೀಶ್ ರೆಡ್ಡಿ, ಹೆನ್ರಿಕ್ ಕ್ಲಾಸೆನ್, ಟ್ರಾವಿಸ್ ಹೆಡ್, ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ಇಶಾನ್ ಕಿಶನ್, ರಾಹುಲ್ ಚಹರ್, ಆ್ಯಡಂ ಝಂಪಾ, ಅಥರ್ವ ಟೈಡೆ, ಅಭಿನವ್ ಮನೋಹರ್, ಸಿಮರ್ಜೀತ್ ಸಿಂಗ್, ಜೀಶನ್ ಅನ್ಸಾರಿ, ಜಯದೇವ್ ಉನದ್ಕತ್, ಕಮಿಂದು ಮೆಂಡಿಸ್, ಸಚಿನ್ ಬೇಬಿ, ವಿಯಾನ್ ಮುಲ್ಡರ್, ಅನಿಕೇತ್ ವರ್ಮಾ, ಇಶಾನ್ ಮಲಿಂಗ.

SRH ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಅಭಿಷೇಕ್ ಶರ್ಮಾ, ನಿತೀಶ್ ರೆಡ್ಡಿ, ಹೆನ್ರಿಕ್ ಕ್ಲಾಸೆನ್, ಟ್ರಾವಿಸ್ ಹೆಡ್, ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ಇಶಾನ್ ಕಿಶನ್, ರಾಹುಲ್ ಚಹರ್, ಆ್ಯಡಂ ಝಂಪಾ, ಅಥರ್ವ ಟೈಡೆ, ಅಭಿನವ್ ಮನೋಹರ್, ಸಿಮರ್ಜೀತ್ ಸಿಂಗ್, ಜೀಶನ್ ಅನ್ಸಾರಿ, ಜಯದೇವ್ ಉನದ್ಕತ್, ಕಮಿಂದು ಮೆಂಡಿಸ್, ಸಚಿನ್ ಬೇಬಿ, ವಿಯಾನ್ ಮುಲ್ಡರ್, ಅನಿಕೇತ್ ವರ್ಮಾ, ಇಶಾನ್ ಮಲಿಂಗ.

5 / 5
Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ