Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 5 ತಂಡಗಳಿಗೆ ಹೊಸ ಕ್ಯಾಪ್ಟನ್ಸ್

IPL 2025 Captains: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಗಾಗಿ 8 ತಂಡಗಳು ತಮ್ಮ ಕ್ಯಾಪ್ಟನ್​ಗಳನ್ನು ಘೋಷಿಸಿದ್ದಾರೆ. ಇದಾಗ್ಯೂ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಾಯಕರುಗಳು ಯಾರು ಎಂಬುದು ಇನ್ನೂ ಸಹ ಬಹಿರಂಗವಾಗಿಲ್ಲ. ಇನ್ನು ಈ ಬಾರಿಯ ಐಪಿಎಲ್​ಗೆ ನಾಯಕರುಗಳಾಗಿ ಆಯ್ಕೆಯಾಗಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on: Mar 02, 2025 | 11:53 AM

ಇಂಡಿಯನ್ ಪ್ರೀಮಿಯರ್ ಲೀಗ್​ನ 18ನೇ ಆವೃತ್ತಿ ಆರಂಭಕ್ಕೆ ಇನ್ನು ಉಳಿದಿರುವುದು ವಾರಗಳು ಮಾತ್ರ. ಮಾರ್ಚ್ 22 ರಿಂದ ಶುರುವಾಗಲಿರುವ ಈ ಟೂರ್ನಿಗಾಗಿ ಈಗಾಗಲೇ 8 ತಂಡಗಳು ತಮ್ಮ ನಾಯಕರುಗಳನ್ನು ಘೋಷಿಸಿದ್ದಾರೆ. ಇನ್ನೆರಡು ಟೀಮ್​ಗಳಿಗೆ ಹೊಸ ನಾಯಕರುಗಳು ಆಯ್ಕೆಯಾಗಬೇಕಿದೆ. ಹಾಗಿದ್ರೆ ಈ ಬಾರಿಯ ಐಪಿಎಲ್​ನಲ್ಲಿ ಕ್ಯಾಪ್ಟನ್​ಗಳಾಗಿ ಕಾಣಿಸಿಕೊಳ್ಳಲಿರುವ ಆಟಗಾರರು ಯಾರೆಲ್ಲಾ ಎಂದು ನೋಡೋಣ...

ಇಂಡಿಯನ್ ಪ್ರೀಮಿಯರ್ ಲೀಗ್​ನ 18ನೇ ಆವೃತ್ತಿ ಆರಂಭಕ್ಕೆ ಇನ್ನು ಉಳಿದಿರುವುದು ವಾರಗಳು ಮಾತ್ರ. ಮಾರ್ಚ್ 22 ರಿಂದ ಶುರುವಾಗಲಿರುವ ಈ ಟೂರ್ನಿಗಾಗಿ ಈಗಾಗಲೇ 8 ತಂಡಗಳು ತಮ್ಮ ನಾಯಕರುಗಳನ್ನು ಘೋಷಿಸಿದ್ದಾರೆ. ಇನ್ನೆರಡು ಟೀಮ್​ಗಳಿಗೆ ಹೊಸ ನಾಯಕರುಗಳು ಆಯ್ಕೆಯಾಗಬೇಕಿದೆ. ಹಾಗಿದ್ರೆ ಈ ಬಾರಿಯ ಐಪಿಎಲ್​ನಲ್ಲಿ ಕ್ಯಾಪ್ಟನ್​ಗಳಾಗಿ ಕಾಣಿಸಿಕೊಳ್ಳಲಿರುವ ಆಟಗಾರರು ಯಾರೆಲ್ಲಾ ಎಂದು ನೋಡೋಣ...

1 / 11
ಲಕ್ನೋ ಸೂಪರ್ ಜೈಂಟ್ಸ್: ಈ ಬಾರಿಯ ಐಪಿಎಲ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ರಿಷಭ್ ಪಂತ್ ಮುನ್ನಡೆಸಲಿದ್ದಾರೆ. ಕಳೆದ ಬಾರಿ ನಾಯಕರಾಗಿದ್ದ ಕೆಎಲ್ ರಾಹುಲ್ ಈ ಸಲ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಲಾಗಿದ್ದಾರೆ. ಹೀಗಾಗಿ ಪಂತ್​ಗೆ ಕ್ಯಾಪ್ಟನ್ ಪಟ್ಟ ನೀಡಲಾಗಿದೆ.

Rp (2)ಲಕ್ನೋ ಸೂಪರ್ ಜೈಂಟ್ಸ್: ಈ ಬಾರಿಯ ಐಪಿಎಲ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ರಿಷಭ್ ಪಂತ್ ಮುನ್ನಡೆಸಲಿದ್ದಾರೆ. ಕಳೆದ ಬಾರಿ ನಾಯಕರಾಗಿದ್ದ ಕೆಎಲ್ ರಾಹುಲ್ ಈ ಸಲ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಲಾಗಿದ್ದಾರೆ. ಹೀಗಾಗಿ ಪಂತ್​ಗೆ ಕ್ಯಾಪ್ಟನ್ ಪಟ್ಟ ನೀಡಲಾಗಿದೆ.

2 / 11
ಚೆನ್ನೈ ಸೂಪರ್ ಕಿಂಗ್ಸ್: ಸಿಎಸ್​ಕೆ ತಂಡವನ್ನು ಈ ಬಾರಿ ಕೂಡ ರುತುರಾಜ್ ಗಾಯಕ್ವಾಡ್ ಮುನ್ನಡೆಸಲಿದ್ದಾರೆ. ಇನ್ನು ರುತುರಾಜ್ ಅವರಿಗೆ ಮಾರ್ಗದರ್ಶಕರಾಗಿ ಮಹೇಂದ್ರ ಸಿಂಗ್ ಧೋನಿ ಕಾಣಿಸಿಕೊಳ್ಳಲಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್: ಸಿಎಸ್​ಕೆ ತಂಡವನ್ನು ಈ ಬಾರಿ ಕೂಡ ರುತುರಾಜ್ ಗಾಯಕ್ವಾಡ್ ಮುನ್ನಡೆಸಲಿದ್ದಾರೆ. ಇನ್ನು ರುತುರಾಜ್ ಅವರಿಗೆ ಮಾರ್ಗದರ್ಶಕರಾಗಿ ಮಹೇಂದ್ರ ಸಿಂಗ್ ಧೋನಿ ಕಾಣಿಸಿಕೊಳ್ಳಲಿದ್ದಾರೆ.

3 / 11
ಗುಜರಾತ್ ಟೈಟಾನ್ಸ್: ಕಳೆದ ಸೀಸನ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಶುಭ್​​ಮನ್ ಗಿಲ್ ಈ ಬಾರಿ ಕೂಡ ಕ್ಯಾಪ್ಟನ್ ಪಟ್ಟದೊಂದಿಗೆ ಕಣಕ್ಕಿಳಿಯಲಿದ್ದಾರೆ. ಗಿಲ್​ ಜೊತೆ ಉಪನಾಯಕನಾಗಿ ಅಫ್ಘಾನ್ ಆಲ್​ರೌಂಡರ್ ರಶೀದ್ ಖಾನ್ ಕಾಣಿಸಿಕೊಳ್ಳಲಿದ್ದಾರೆ.

ಗುಜರಾತ್ ಟೈಟಾನ್ಸ್: ಕಳೆದ ಸೀಸನ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಶುಭ್​​ಮನ್ ಗಿಲ್ ಈ ಬಾರಿ ಕೂಡ ಕ್ಯಾಪ್ಟನ್ ಪಟ್ಟದೊಂದಿಗೆ ಕಣಕ್ಕಿಳಿಯಲಿದ್ದಾರೆ. ಗಿಲ್​ ಜೊತೆ ಉಪನಾಯಕನಾಗಿ ಅಫ್ಘಾನ್ ಆಲ್​ರೌಂಡರ್ ರಶೀದ್ ಖಾನ್ ಕಾಣಿಸಿಕೊಳ್ಳಲಿದ್ದಾರೆ.

4 / 11
ಪಂಜಾಬ್ ಕಿಂಗ್ಸ್: ಕಳೆದ ಸೀಸನ್​ನಲ್ಲಿ ಶಿಖರ್ ಧವನ್ ಮುಂದಾಳತ್ವದಲ್ಲಿ ಕಣಕ್ಕಿಳಿದಿದ್ದ ಪಂಜಾಬ್ ಕಿಂಗ್ಸ್ ಈ ಬಾರಿ ಶ್ರೇಯಸ್ ಅಯ್ಯರ್ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಿದೆ. ಅಯ್ಯರ್ ಕಳೆದ ಬಾರಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕರಾಗಿದ್ದರು. ಇದೀಗ ಪಂಜಾಬ್ ಕಿಂಗ್ಸ್​ ಪರ ಹೊಸ ಇನಿಂಗ್ಸ್ ಆರಂಭಿಸಲು ಶ್ರೇಯಸ್ ಅಯ್ಯರ್ ತುದಿಗಾಲಲ್ಲಿ ನಿಂತಿದ್ದಾರೆ.

ಪಂಜಾಬ್ ಕಿಂಗ್ಸ್: ಕಳೆದ ಸೀಸನ್​ನಲ್ಲಿ ಶಿಖರ್ ಧವನ್ ಮುಂದಾಳತ್ವದಲ್ಲಿ ಕಣಕ್ಕಿಳಿದಿದ್ದ ಪಂಜಾಬ್ ಕಿಂಗ್ಸ್ ಈ ಬಾರಿ ಶ್ರೇಯಸ್ ಅಯ್ಯರ್ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಿದೆ. ಅಯ್ಯರ್ ಕಳೆದ ಬಾರಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕರಾಗಿದ್ದರು. ಇದೀಗ ಪಂಜಾಬ್ ಕಿಂಗ್ಸ್​ ಪರ ಹೊಸ ಇನಿಂಗ್ಸ್ ಆರಂಭಿಸಲು ಶ್ರೇಯಸ್ ಅಯ್ಯರ್ ತುದಿಗಾಲಲ್ಲಿ ನಿಂತಿದ್ದಾರೆ.

5 / 11
ಮುಂಬೈ ಇಂಡಿಯನ್ಸ್: ಐಪಿಎಲ್ 2024 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಹಾರ್ದಿಕ್ ಪಾಂಡ್ಯ ಈ ಬಾರಿ ಬಾರಿ ಕ್ಯಾಪ್ಟನ್ ಆಗಿ ಮುಂದುವರೆಯಲಿದ್ದಾರೆ. ಇನ್ನು ಉಪನಾಯಕನಾಗಿ ಸೂರ್ಯಕುಮಾರ್ ಯಾದವ್ ಅಥವಾ ಜಸ್​ಪ್ರೀತ್ ಬುಮ್ರಾ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಮುಂಬೈ ಇಂಡಿಯನ್ಸ್: ಐಪಿಎಲ್ 2024 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಹಾರ್ದಿಕ್ ಪಾಂಡ್ಯ ಈ ಬಾರಿ ಬಾರಿ ಕ್ಯಾಪ್ಟನ್ ಆಗಿ ಮುಂದುವರೆಯಲಿದ್ದಾರೆ. ಇನ್ನು ಉಪನಾಯಕನಾಗಿ ಸೂರ್ಯಕುಮಾರ್ ಯಾದವ್ ಅಥವಾ ಜಸ್​ಪ್ರೀತ್ ಬುಮ್ರಾ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

6 / 11
ರಾಜಸ್ಥಾನ್ ರಾಯಲ್ಸ್: ಆರ್​ಆರ್ ಫ್ರಾಂಚೈಸಿಯು ಈ ಬಾರಿ ಕೂಡ ಸಂಜು ಸ್ಯಾಮ್ಸನ್ ಅವರನ್ನೇ ನಾಯಕರನ್ನಾಗಿ ಮುಂದುವರೆಸುವುದಾಗಿ ತಿಳಿಸಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ಪಡೆಯುವ ಸ್ಯಾಮ್ಸನ್ ಮುಂದಾಳತ್ವದಲ್ಲಿ ಕಣಕ್ಕಿಳಿಯಲಿದೆ.

ರಾಜಸ್ಥಾನ್ ರಾಯಲ್ಸ್: ಆರ್​ಆರ್ ಫ್ರಾಂಚೈಸಿಯು ಈ ಬಾರಿ ಕೂಡ ಸಂಜು ಸ್ಯಾಮ್ಸನ್ ಅವರನ್ನೇ ನಾಯಕರನ್ನಾಗಿ ಮುಂದುವರೆಸುವುದಾಗಿ ತಿಳಿಸಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ಪಡೆಯುವ ಸ್ಯಾಮ್ಸನ್ ಮುಂದಾಳತ್ವದಲ್ಲಿ ಕಣಕ್ಕಿಳಿಯಲಿದೆ.

7 / 11
ಸನ್​ರೈಸರ್ಸ್ ಹೈದರಾಬಾದ್: ಕಳೆದ ಬಾರಿಯ ರನ್ನರ್ ಅಪ್ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಈ ಬಾರಿ ಕೂಡ ಪ್ಯಾಟ್ ಕಮಿನ್ಸ್ ಮುನ್ನಡೆಸಲಿದ್ದಾರೆ. ಅದರಂತೆ ಕಮಿನ್ಸ್ ಸಾರಥ್ಯದಲ್ಲಿ ಎಸ್​ಆರ್​ಹೆಚ್ ಕಣಕ್ಕಿಳಿಯಲಿದೆ.

ಸನ್​ರೈಸರ್ಸ್ ಹೈದರಾಬಾದ್: ಕಳೆದ ಬಾರಿಯ ರನ್ನರ್ ಅಪ್ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಈ ಬಾರಿ ಕೂಡ ಪ್ಯಾಟ್ ಕಮಿನ್ಸ್ ಮುನ್ನಡೆಸಲಿದ್ದಾರೆ. ಅದರಂತೆ ಕಮಿನ್ಸ್ ಸಾರಥ್ಯದಲ್ಲಿ ಎಸ್​ಆರ್​ಹೆಚ್ ಕಣಕ್ಕಿಳಿಯಲಿದೆ.

8 / 11
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್​ಸಿಬಿ ತಂಡದ ಹೊಸ ನಾಯಕರಾಗಿ ರಜತ್ ಪಾಟಿದಾರ್ ಆಯ್ಕೆಯಾಗಿದ್ದಾರೆ. ಕಳೆದ ಬಾರಿ ಕ್ಯಾಪ್ಟನ್ ಆಗಿದ್ದ ಫಾಫ್ ಡುಪ್ಲೆಸಿಸ್ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿಯಲಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್​ಸಿಬಿ ತಂಡದ ಹೊಸ ನಾಯಕರಾಗಿ ರಜತ್ ಪಾಟಿದಾರ್ ಆಯ್ಕೆಯಾಗಿದ್ದಾರೆ. ಕಳೆದ ಬಾರಿ ಕ್ಯಾಪ್ಟನ್ ಆಗಿದ್ದ ಫಾಫ್ ಡುಪ್ಲೆಸಿಸ್ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿಯಲಿದ್ದಾರೆ.

9 / 11
ಕೊಲ್ಕತ್ತಾ ನೈಟ್ ರೈಡರ್ಸ್: ಹಾಲಿ ಚಾಂಪಿಯನ್ ಕೆಕೆಆರ್ ತಂಡವು ಹೊಸ ನಾಯಕನೊಂದಿಗೆ ಕಣಕ್ಕಿಳಿಯಲಿದೆ. ಈ ತಂಡದ ನಾಯಕತ್ವದ ರೇಸ್​ನಲ್ಲಿ ವೆಂಕಟೇಶ್ ಅಯ್ಯರ್, ಅಜಿಂಕ್ಯ ರಹಾನೆ ಹಾಗೂ ರಿಂಕು ಸಿಂಗ್ ಹೆಸರುಗಳು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ.

ಕೊಲ್ಕತ್ತಾ ನೈಟ್ ರೈಡರ್ಸ್: ಹಾಲಿ ಚಾಂಪಿಯನ್ ಕೆಕೆಆರ್ ತಂಡವು ಹೊಸ ನಾಯಕನೊಂದಿಗೆ ಕಣಕ್ಕಿಳಿಯಲಿದೆ. ಈ ತಂಡದ ನಾಯಕತ್ವದ ರೇಸ್​ನಲ್ಲಿ ವೆಂಕಟೇಶ್ ಅಯ್ಯರ್, ಅಜಿಂಕ್ಯ ರಹಾನೆ ಹಾಗೂ ರಿಂಕು ಸಿಂಗ್ ಹೆಸರುಗಳು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ.

10 / 11
ಡೆಲ್ಲಿ ಕ್ಯಾಪಿಟಲ್ಸ್: ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸಹ ಹೊಸ ನಾಯಕ ಮುನ್ನಡೆಸಲಿದ್ದಾರೆ. ಸದ್ಯ ನಾಯಕತ್ವದ ರೇಸ್​ನಲ್ಲಿ ಕೆಎಲ್ ರಾಹುಲ್, ಅಕ್ಷರ್ ಪಟೇಲ್ ಹಾಗೂ ಫಾಫ್ ಡುಪ್ಲೆಸಿಸ್ ಹೆಸರು ಮುಂಚೂಣಿಯಲ್ಲಿದ್ದು ಇವರಲ್ಲಿ ಯಾರಿಗೆ ಕ್ಯಾಪ್ಟನ್ ಪಟ್ಟ ಸಿಗಲಿದೆ ಕಾದು ನೋಡಬೇಕಿದೆ.

ಡೆಲ್ಲಿ ಕ್ಯಾಪಿಟಲ್ಸ್: ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸಹ ಹೊಸ ನಾಯಕ ಮುನ್ನಡೆಸಲಿದ್ದಾರೆ. ಸದ್ಯ ನಾಯಕತ್ವದ ರೇಸ್​ನಲ್ಲಿ ಕೆಎಲ್ ರಾಹುಲ್, ಅಕ್ಷರ್ ಪಟೇಲ್ ಹಾಗೂ ಫಾಫ್ ಡುಪ್ಲೆಸಿಸ್ ಹೆಸರು ಮುಂಚೂಣಿಯಲ್ಲಿದ್ದು ಇವರಲ್ಲಿ ಯಾರಿಗೆ ಕ್ಯಾಪ್ಟನ್ ಪಟ್ಟ ಸಿಗಲಿದೆ ಕಾದು ನೋಡಬೇಕಿದೆ.

11 / 11
Follow us
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ