AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ತಂಡಕ್ಕೆ ರೋಡೇಷಿಯನ್ ಆಟಗಾರ ಎಂಟ್ರಿ

IPL 2025 RCB: ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ಪ್ರದರ್ಶನ ನೀಡಿದೆ. ಈವರೆಗೆ ಆಡಿದ 13 ಪಂದ್ಯಗಳಲ್ಲಿ 8 ಗೆಲುವು ದಾಖಲಿಸಿದ್ದು, ಈ ಗೆಲುವುಗಳೊಂದಿಗೆ ಇದೀಗ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಆದರೆ ಪ್ಲೇಆಫ್ ಪಂದ್ಯಕ್ಕೂ ಮುನ್ನ ಆರ್​ಸಿಬಿ ತಂಡಕ್ಕೆ ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿ ಎಂಟ್ರಿ ಕೊಟ್ಟಿದ್ದಾರೆ.

ಝಾಹಿರ್ ಯೂಸುಫ್
|

Updated on:May 26, 2025 | 12:56 PM

Share
IPL 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಝಿಂಬಾಬ್ವೆ (ರೋಡೇಷಿಯನ್) ವೇಗಿ ಬ್ಲೆಸಿಂಗ್ ಮುಝರಬಾನಿ ಎಂಟ್ರಿ ಕೊಟ್ಟಿದ್ದಾರೆ. ಈ ಬಾರಿಯ ಐಪಿಎಲ್​ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಮುಝರಬಾನಿಯನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಆದರೆ ಇದೀಗ ಬದಲಿ ಆಟಗಾರನಾಗಿ ಆಗಮಿಸಿರುವ ಮುಝರಬಾನಿ ಲಕ್ನೋದಲ್ಲಿ ಆರ್​ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ.

IPL 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಝಿಂಬಾಬ್ವೆ (ರೋಡೇಷಿಯನ್) ವೇಗಿ ಬ್ಲೆಸಿಂಗ್ ಮುಝರಬಾನಿ ಎಂಟ್ರಿ ಕೊಟ್ಟಿದ್ದಾರೆ. ಈ ಬಾರಿಯ ಐಪಿಎಲ್​ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಮುಝರಬಾನಿಯನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಆದರೆ ಇದೀಗ ಬದಲಿ ಆಟಗಾರನಾಗಿ ಆಗಮಿಸಿರುವ ಮುಝರಬಾನಿ ಲಕ್ನೋದಲ್ಲಿ ಆರ್​ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ.

1 / 5
ಆರ್​ಸಿಬಿ ತಂಡದಲ್ಲಿದ್ದ ಸೌತ್ ಆಫ್ರಿಕಾ ವೇಗಿ ಲುಂಗಿ ಎನ್​ಗಿಡಿ ತವರಿಗೆ ಮರಳಿದ್ದಾರೆ. ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಅಭ್ಯಾಸಕ್ಕಾಗಿ ಎನ್​ಗಿಡಿ ಅರ್ಧದಲ್ಲೇ ಟೂರ್ನಿ ತೊರೆದಿದ್ದಾರೆ. ಹೀಗಾಗಿ ಅವರ ಬದಲಿಗೆ ಬ್ಲೆಸಿಂಗ್ ಮುಝರಬಾನಿಯನ್ನು ಆಯ್ಕೆ ಮಾಡಲಾಗಿದೆ.

ಆರ್​ಸಿಬಿ ತಂಡದಲ್ಲಿದ್ದ ಸೌತ್ ಆಫ್ರಿಕಾ ವೇಗಿ ಲುಂಗಿ ಎನ್​ಗಿಡಿ ತವರಿಗೆ ಮರಳಿದ್ದಾರೆ. ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಅಭ್ಯಾಸಕ್ಕಾಗಿ ಎನ್​ಗಿಡಿ ಅರ್ಧದಲ್ಲೇ ಟೂರ್ನಿ ತೊರೆದಿದ್ದಾರೆ. ಹೀಗಾಗಿ ಅವರ ಬದಲಿಗೆ ಬ್ಲೆಸಿಂಗ್ ಮುಝರಬಾನಿಯನ್ನು ಆಯ್ಕೆ ಮಾಡಲಾಗಿದೆ.

2 / 5
ಝಿಂಬಾಬ್ವೆ ಪರ  67 ಟಿ20 ಪಂದ್ಯಗಳಲ್ಲಿ ಬೌಲಿಂಗ್ ಮಾಡಿರುವ ಮುಝರಬಾನಿ ಬರೋಬ್ಬರಿ 78 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಅದು ಕೂಡ ಪ್ರತಿ ಓವರ್​ಗೆ 7.03 ಸರಾಸರಿಯಲ್ಲಿ ರನ್ ಬಿಟ್ಟು ಕೊಡುವ ಮೂಲಕ ಎಂಬುದು ವಿಶೇಷ. ಅಂದರೆ ಬ್ಲೆಸಿಂಗ್ ಮುಝರಬಾನಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯುತ್ತಮ ಎಕಾನಮಿ ರೇಟ್ ಹೊಂದಿದ್ದಾರೆ.

ಝಿಂಬಾಬ್ವೆ ಪರ  67 ಟಿ20 ಪಂದ್ಯಗಳಲ್ಲಿ ಬೌಲಿಂಗ್ ಮಾಡಿರುವ ಮುಝರಬಾನಿ ಬರೋಬ್ಬರಿ 78 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಅದು ಕೂಡ ಪ್ರತಿ ಓವರ್​ಗೆ 7.03 ಸರಾಸರಿಯಲ್ಲಿ ರನ್ ಬಿಟ್ಟು ಕೊಡುವ ಮೂಲಕ ಎಂಬುದು ವಿಶೇಷ. ಅಂದರೆ ಬ್ಲೆಸಿಂಗ್ ಮುಝರಬಾನಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯುತ್ತಮ ಎಕಾನಮಿ ರೇಟ್ ಹೊಂದಿದ್ದಾರೆ.

3 / 5
ಬ್ಲೆಸಿಂಗ್ ಮುಝರಬಾನಿಯನ್ನು ಆಯ್ಕೆ ಮಾಡಲು ಮುಖ್ಯ ಕಾರಣ ಆರ್​ಸಿಬಿ ತಂಡದ ಕೋಚ್ ಆ್ಯಂಡಿ ಫ್ಲವರ್. ಝಿಂಬಾಬ್ವೆ ಮೂಲದವರಾಗಿರುವ ಫ್ಲವರ್​ಗೆ ಮುಝರಬಾನಿ ಸಾಮರ್ಥ್ಯದ ಬಗ್ಗೆ ತುಂಬಾ ಚೆನ್ನಾಗಿ ಗೊತ್ತಿದೆ. ಈ ಹಿಂದೆ ಆ್ಯಂಡಿ ಫ್ಲವರ್​ ಕೋಚಿಂಗ್​ನಲ್ಲಿ ಇಂಟರ್​ನ್ಯಾಷನಲ್ ಟಿ20 ಲೀಗ್​ನಲ್ಲಿ ಗಲ್ಫ್ ಜೈಂಟ್ಸ್ ಮತ್ತು ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಮುಲ್ತಾನ್ ಸುಲ್ತಾನ್ಸ್ ಪರ ಬ್ಲೆಸಿಂಗ್ ಮುಝರಬಾನಿ ಕಣಕ್ಕಿಳಿದಿದ್ದರು.

ಬ್ಲೆಸಿಂಗ್ ಮುಝರಬಾನಿಯನ್ನು ಆಯ್ಕೆ ಮಾಡಲು ಮುಖ್ಯ ಕಾರಣ ಆರ್​ಸಿಬಿ ತಂಡದ ಕೋಚ್ ಆ್ಯಂಡಿ ಫ್ಲವರ್. ಝಿಂಬಾಬ್ವೆ ಮೂಲದವರಾಗಿರುವ ಫ್ಲವರ್​ಗೆ ಮುಝರಬಾನಿ ಸಾಮರ್ಥ್ಯದ ಬಗ್ಗೆ ತುಂಬಾ ಚೆನ್ನಾಗಿ ಗೊತ್ತಿದೆ. ಈ ಹಿಂದೆ ಆ್ಯಂಡಿ ಫ್ಲವರ್​ ಕೋಚಿಂಗ್​ನಲ್ಲಿ ಇಂಟರ್​ನ್ಯಾಷನಲ್ ಟಿ20 ಲೀಗ್​ನಲ್ಲಿ ಗಲ್ಫ್ ಜೈಂಟ್ಸ್ ಮತ್ತು ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಮುಲ್ತಾನ್ ಸುಲ್ತಾನ್ಸ್ ಪರ ಬ್ಲೆಸಿಂಗ್ ಮುಝರಬಾನಿ ಕಣಕ್ಕಿಳಿದಿದ್ದರು.

4 / 5
2021ರ ಪಿಎಸ್​ಎಲ್​ನಲ್ಲಿ ಕೋಚ್ ಆ್ಯಂಡಿ ಫ್ಲವರ್ ಮುಂದಾಳತ್ವದ ಮುಲ್ತಾನ್ ಸುಲ್ತಾನ್ಸ್ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಬ್ಲೆಸಿಂಗ್ ಮುಝರಬಾನಿ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿಯೇ ಆ್ಯಂಡಿ ಫ್ಲವರ್ ಝಿಂಬಾಬ್ವೆ ವೇಗಿಗೆ ಮಣೆ ಹಾಕಿದ್ದಾರೆ ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಯ್ಕೆಯಾದ ಮೊದಲ ಝಿಂಬಾಬ್ವೆ ಆಟಗಾರ ಎಂಬ ಹೆಗ್ಗಳಿಕೆಯನ್ನು ಬ್ಲೆಸಿಂಗ್ ಮುಝರಬಾನಿ ತಮ್ಮದಾಗಿಸಿಕೊಂಡಿದ್ದಾರೆ.

2021ರ ಪಿಎಸ್​ಎಲ್​ನಲ್ಲಿ ಕೋಚ್ ಆ್ಯಂಡಿ ಫ್ಲವರ್ ಮುಂದಾಳತ್ವದ ಮುಲ್ತಾನ್ ಸುಲ್ತಾನ್ಸ್ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಬ್ಲೆಸಿಂಗ್ ಮುಝರಬಾನಿ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿಯೇ ಆ್ಯಂಡಿ ಫ್ಲವರ್ ಝಿಂಬಾಬ್ವೆ ವೇಗಿಗೆ ಮಣೆ ಹಾಕಿದ್ದಾರೆ ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಯ್ಕೆಯಾದ ಮೊದಲ ಝಿಂಬಾಬ್ವೆ ಆಟಗಾರ ಎಂಬ ಹೆಗ್ಗಳಿಕೆಯನ್ನು ಬ್ಲೆಸಿಂಗ್ ಮುಝರಬಾನಿ ತಮ್ಮದಾಗಿಸಿಕೊಂಡಿದ್ದಾರೆ.

5 / 5

Published On - 12:54 pm, Mon, 26 May 25

‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!