AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡಕ್ಕೆ ಝಿಂಬಾಬ್ವೆ ವೇಗಿ ಎಂಟ್ರಿ

IPL 2025 RCB: ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇದೀಗ ಪ್ಲೇಆಫ್​ಗೆ ಪ್ರವೇಶಿಸಿದೆ. ಆದರೆ ಪ್ಲೇಆಫ್ ಪಂದ್ಯಕ್ಕೂ ಮುನ್ನ ಆರ್​ಸಿಬಿ ವೇಗಿ ಲುಂಗಿ ಎನ್​ಗಿಡಿ ತಂಡವನ್ನು ತೊರೆಯಲಿದ್ದಾರೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬದಲಿ ಆಟಗಾರನನ್ನು ಆಯ್ಕೆ ಮಾಡಿಕೊಂಡಿದೆ.

ಝಾಹಿರ್ ಯೂಸುಫ್
|

Updated on: May 19, 2025 | 12:55 PM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ಪಂದ್ಯಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ವೇಗಿ ಲುಂಗಿ ಎನ್​ಗಿಡಿ ತವರಿಗೆ ಮರಳುವುದು ಖಚಿತವಾಗಿದೆ. ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ತಯಾರಿಗಾಗಿ ಸೌತ್ ಆಫ್ರಿಕಾ ಆಟಗಾರರು ಮೇ 26 ರಂದು ತವರಿಗೆ ತೆರಳಲಿದ್ದಾರೆ. ಹೀಗಾಗಿ ಲುಂಗಿ ಎನ್​ಗಿಡಿ ಆರ್​ಸಿಬಿ ತಂಡದ ಪ್ಲೇಆಫ್ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ಪಂದ್ಯಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ವೇಗಿ ಲುಂಗಿ ಎನ್​ಗಿಡಿ ತವರಿಗೆ ಮರಳುವುದು ಖಚಿತವಾಗಿದೆ. ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ತಯಾರಿಗಾಗಿ ಸೌತ್ ಆಫ್ರಿಕಾ ಆಟಗಾರರು ಮೇ 26 ರಂದು ತವರಿಗೆ ತೆರಳಲಿದ್ದಾರೆ. ಹೀಗಾಗಿ ಲುಂಗಿ ಎನ್​ಗಿಡಿ ಆರ್​ಸಿಬಿ ತಂಡದ ಪ್ಲೇಆಫ್ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ.

1 / 5
ಇತ್ತ ಲುಂಗಿ ಎನ್​ಗಿಡಿ ಹೊರಗುಳಿಯುವುದು ಖಚಿತವಾಗುತ್ತಿದ್ದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬದಲಿ ಆಟಗಾರನನ್ನು ಆಯ್ಕೆ ಮಾಡಿಕೊಂಡಿದೆ. ಅದರಂತೆ ಆರ್​ಸಿಬಿ ತಂಡದ ಪ್ಲೇಆಫ್ ಪಂದ್ಯಗಳಿಗೆ ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿ ಆಯ್ಕೆಯಾಗಿದ್ದಾರೆ.

ಇತ್ತ ಲುಂಗಿ ಎನ್​ಗಿಡಿ ಹೊರಗುಳಿಯುವುದು ಖಚಿತವಾಗುತ್ತಿದ್ದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬದಲಿ ಆಟಗಾರನನ್ನು ಆಯ್ಕೆ ಮಾಡಿಕೊಂಡಿದೆ. ಅದರಂತೆ ಆರ್​ಸಿಬಿ ತಂಡದ ಪ್ಲೇಆಫ್ ಪಂದ್ಯಗಳಿಗೆ ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿ ಆಯ್ಕೆಯಾಗಿದ್ದಾರೆ.

2 / 5
ಬ್ಲೆಸಿಂಗ್ ಮುಝರಬಾನಿ ಝಿಂಬಾಬ್ವೆ ಪರ ಈವರೆಗೆ 70 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 1449 ಎಸೆತಗಳನ್ನು ಎಸೆದಿರುವ ಅವರು 78 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅದು ಕೂಡ ಕೇವಲ 7.03 ರನ್ ಎಕಾನಮಿ ರೇಟ್​ನಲ್ಲಿ ಎಂಬುದು ವಿಶೇಷ. ಹೀಗಾಗಿಯೇ ಇದೀಗ ಬ್ಲೆಸಿಂಗ್ ಮುಝರಬಾನಿ ಅವರನ್ನು ಲುಂಗಿ ಎನ್​ಗಿಡಿ ಬದಲಿಯಾಗಿ ಆರ್​ಸಿಬಿ ಮಾಡಿಕೊಂಡಿದೆ.

ಬ್ಲೆಸಿಂಗ್ ಮುಝರಬಾನಿ ಝಿಂಬಾಬ್ವೆ ಪರ ಈವರೆಗೆ 70 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 1449 ಎಸೆತಗಳನ್ನು ಎಸೆದಿರುವ ಅವರು 78 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅದು ಕೂಡ ಕೇವಲ 7.03 ರನ್ ಎಕಾನಮಿ ರೇಟ್​ನಲ್ಲಿ ಎಂಬುದು ವಿಶೇಷ. ಹೀಗಾಗಿಯೇ ಇದೀಗ ಬ್ಲೆಸಿಂಗ್ ಮುಝರಬಾನಿ ಅವರನ್ನು ಲುಂಗಿ ಎನ್​ಗಿಡಿ ಬದಲಿಯಾಗಿ ಆರ್​ಸಿಬಿ ಮಾಡಿಕೊಂಡಿದೆ.

3 / 5
ಇನ್ನು ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಕಣಕ್ಕಿಳಿಯಲಿದೆ. ಮೇ 23 ರಂದು ನಡೆಯಲಿರುವ ಈ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಇದಾದ ಬಳಿಕ ಆರ್​ಸಿಬಿ ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಮೇ 27 ರಂದು ಲಕ್ನೋದಲ್ಲಿ ನಡೆಯಲಿದೆ.

ಇನ್ನು ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಕಣಕ್ಕಿಳಿಯಲಿದೆ. ಮೇ 23 ರಂದು ನಡೆಯಲಿರುವ ಈ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಇದಾದ ಬಳಿಕ ಆರ್​ಸಿಬಿ ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಮೇ 27 ರಂದು ಲಕ್ನೋದಲ್ಲಿ ನಡೆಯಲಿದೆ.

4 / 5
ಹೀಗಾಗಿ ಬ್ಲೆಸಿಂಗ್ ಮುಝರಬಾನಿ ಮೇ 27 ರಿಂದ ಆರ್​ಸಿಬಿ ಪರ ಕಣಕ್ಕಿಳಿಯಲು ಅರ್ಹರಾಗಲಿದ್ದಾರೆ. ಅದರಂತೆ ಆರ್​ಸಿಬಿ ತಂಡದ ಕೊನೆಯ ಲೀಗ್ ಮ್ಯಾಚ್ ಹಾಗೂ ಪ್ಲೇಆಫ್ ಪಂದ್ಯಗಳ ವೇಳೆ ಝಿಂಬಾಬ್ವೆ ವೇಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 

ಹೀಗಾಗಿ ಬ್ಲೆಸಿಂಗ್ ಮುಝರಬಾನಿ ಮೇ 27 ರಿಂದ ಆರ್​ಸಿಬಿ ಪರ ಕಣಕ್ಕಿಳಿಯಲು ಅರ್ಹರಾಗಲಿದ್ದಾರೆ. ಅದರಂತೆ ಆರ್​ಸಿಬಿ ತಂಡದ ಕೊನೆಯ ಲೀಗ್ ಮ್ಯಾಚ್ ಹಾಗೂ ಪ್ಲೇಆಫ್ ಪಂದ್ಯಗಳ ವೇಳೆ ಝಿಂಬಾಬ್ವೆ ವೇಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 

5 / 5
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ