AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡಕ್ಕೆ ಝಿಂಬಾಬ್ವೆ ವೇಗಿ ಎಂಟ್ರಿ

IPL 2025 RCB: ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇದೀಗ ಪ್ಲೇಆಫ್​ಗೆ ಪ್ರವೇಶಿಸಿದೆ. ಆದರೆ ಪ್ಲೇಆಫ್ ಪಂದ್ಯಕ್ಕೂ ಮುನ್ನ ಆರ್​ಸಿಬಿ ವೇಗಿ ಲುಂಗಿ ಎನ್​ಗಿಡಿ ತಂಡವನ್ನು ತೊರೆಯಲಿದ್ದಾರೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬದಲಿ ಆಟಗಾರನನ್ನು ಆಯ್ಕೆ ಮಾಡಿಕೊಂಡಿದೆ.

ಝಾಹಿರ್ ಯೂಸುಫ್
|

Updated on: May 19, 2025 | 12:55 PM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ಪಂದ್ಯಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ವೇಗಿ ಲುಂಗಿ ಎನ್​ಗಿಡಿ ತವರಿಗೆ ಮರಳುವುದು ಖಚಿತವಾಗಿದೆ. ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ತಯಾರಿಗಾಗಿ ಸೌತ್ ಆಫ್ರಿಕಾ ಆಟಗಾರರು ಮೇ 26 ರಂದು ತವರಿಗೆ ತೆರಳಲಿದ್ದಾರೆ. ಹೀಗಾಗಿ ಲುಂಗಿ ಎನ್​ಗಿಡಿ ಆರ್​ಸಿಬಿ ತಂಡದ ಪ್ಲೇಆಫ್ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ಪಂದ್ಯಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ವೇಗಿ ಲುಂಗಿ ಎನ್​ಗಿಡಿ ತವರಿಗೆ ಮರಳುವುದು ಖಚಿತವಾಗಿದೆ. ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ತಯಾರಿಗಾಗಿ ಸೌತ್ ಆಫ್ರಿಕಾ ಆಟಗಾರರು ಮೇ 26 ರಂದು ತವರಿಗೆ ತೆರಳಲಿದ್ದಾರೆ. ಹೀಗಾಗಿ ಲುಂಗಿ ಎನ್​ಗಿಡಿ ಆರ್​ಸಿಬಿ ತಂಡದ ಪ್ಲೇಆಫ್ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ.

1 / 5
ಇತ್ತ ಲುಂಗಿ ಎನ್​ಗಿಡಿ ಹೊರಗುಳಿಯುವುದು ಖಚಿತವಾಗುತ್ತಿದ್ದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬದಲಿ ಆಟಗಾರನನ್ನು ಆಯ್ಕೆ ಮಾಡಿಕೊಂಡಿದೆ. ಅದರಂತೆ ಆರ್​ಸಿಬಿ ತಂಡದ ಪ್ಲೇಆಫ್ ಪಂದ್ಯಗಳಿಗೆ ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿ ಆಯ್ಕೆಯಾಗಿದ್ದಾರೆ.

ಇತ್ತ ಲುಂಗಿ ಎನ್​ಗಿಡಿ ಹೊರಗುಳಿಯುವುದು ಖಚಿತವಾಗುತ್ತಿದ್ದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬದಲಿ ಆಟಗಾರನನ್ನು ಆಯ್ಕೆ ಮಾಡಿಕೊಂಡಿದೆ. ಅದರಂತೆ ಆರ್​ಸಿಬಿ ತಂಡದ ಪ್ಲೇಆಫ್ ಪಂದ್ಯಗಳಿಗೆ ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿ ಆಯ್ಕೆಯಾಗಿದ್ದಾರೆ.

2 / 5
ಬ್ಲೆಸಿಂಗ್ ಮುಝರಬಾನಿ ಝಿಂಬಾಬ್ವೆ ಪರ ಈವರೆಗೆ 70 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 1449 ಎಸೆತಗಳನ್ನು ಎಸೆದಿರುವ ಅವರು 78 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅದು ಕೂಡ ಕೇವಲ 7.03 ರನ್ ಎಕಾನಮಿ ರೇಟ್​ನಲ್ಲಿ ಎಂಬುದು ವಿಶೇಷ. ಹೀಗಾಗಿಯೇ ಇದೀಗ ಬ್ಲೆಸಿಂಗ್ ಮುಝರಬಾನಿ ಅವರನ್ನು ಲುಂಗಿ ಎನ್​ಗಿಡಿ ಬದಲಿಯಾಗಿ ಆರ್​ಸಿಬಿ ಮಾಡಿಕೊಂಡಿದೆ.

ಬ್ಲೆಸಿಂಗ್ ಮುಝರಬಾನಿ ಝಿಂಬಾಬ್ವೆ ಪರ ಈವರೆಗೆ 70 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 1449 ಎಸೆತಗಳನ್ನು ಎಸೆದಿರುವ ಅವರು 78 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅದು ಕೂಡ ಕೇವಲ 7.03 ರನ್ ಎಕಾನಮಿ ರೇಟ್​ನಲ್ಲಿ ಎಂಬುದು ವಿಶೇಷ. ಹೀಗಾಗಿಯೇ ಇದೀಗ ಬ್ಲೆಸಿಂಗ್ ಮುಝರಬಾನಿ ಅವರನ್ನು ಲುಂಗಿ ಎನ್​ಗಿಡಿ ಬದಲಿಯಾಗಿ ಆರ್​ಸಿಬಿ ಮಾಡಿಕೊಂಡಿದೆ.

3 / 5
ಇನ್ನು ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಕಣಕ್ಕಿಳಿಯಲಿದೆ. ಮೇ 23 ರಂದು ನಡೆಯಲಿರುವ ಈ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಇದಾದ ಬಳಿಕ ಆರ್​ಸಿಬಿ ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಮೇ 27 ರಂದು ಲಕ್ನೋದಲ್ಲಿ ನಡೆಯಲಿದೆ.

ಇನ್ನು ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಕಣಕ್ಕಿಳಿಯಲಿದೆ. ಮೇ 23 ರಂದು ನಡೆಯಲಿರುವ ಈ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಇದಾದ ಬಳಿಕ ಆರ್​ಸಿಬಿ ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಮೇ 27 ರಂದು ಲಕ್ನೋದಲ್ಲಿ ನಡೆಯಲಿದೆ.

4 / 5
ಹೀಗಾಗಿ ಬ್ಲೆಸಿಂಗ್ ಮುಝರಬಾನಿ ಮೇ 27 ರಿಂದ ಆರ್​ಸಿಬಿ ಪರ ಕಣಕ್ಕಿಳಿಯಲು ಅರ್ಹರಾಗಲಿದ್ದಾರೆ. ಅದರಂತೆ ಆರ್​ಸಿಬಿ ತಂಡದ ಕೊನೆಯ ಲೀಗ್ ಮ್ಯಾಚ್ ಹಾಗೂ ಪ್ಲೇಆಫ್ ಪಂದ್ಯಗಳ ವೇಳೆ ಝಿಂಬಾಬ್ವೆ ವೇಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 

ಹೀಗಾಗಿ ಬ್ಲೆಸಿಂಗ್ ಮುಝರಬಾನಿ ಮೇ 27 ರಿಂದ ಆರ್​ಸಿಬಿ ಪರ ಕಣಕ್ಕಿಳಿಯಲು ಅರ್ಹರಾಗಲಿದ್ದಾರೆ. ಅದರಂತೆ ಆರ್​ಸಿಬಿ ತಂಡದ ಕೊನೆಯ ಲೀಗ್ ಮ್ಯಾಚ್ ಹಾಗೂ ಪ್ಲೇಆಫ್ ಪಂದ್ಯಗಳ ವೇಳೆ ಝಿಂಬಾಬ್ವೆ ವೇಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ