AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 10 ಪಂದ್ಯಗಳಲ್ಲೇ CSK ತಂಡ ಗಂಟುಮೂಟೆ ಕಟ್ಟಿದ್ಯಾಕೆ ಗೊತ್ತಾ?

IPL 2025: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ( ಐಪಿಎಲ್ 2025 ) ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈವರೆಗೆ 10 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು ಕೇವಲ 2 ಮ್ಯಾಚ್​ಗಳಲ್ಲಿ ಮಾತ್ರ. ಇನ್ನುಳಿದ 8 ಪಂದ್ಯಗಳಲ್ಲಿ ಸೋತಿರುವ ಸಿಎಸ್​ಕೆ ತಂಡವು ಕೇವಲ 4 ಅಂಕಗಳನ್ನು ಮಾತ್ರ ಪಡೆದುಕೊಂಡಿದೆ.

ಝಾಹಿರ್ ಯೂಸುಫ್
|

Updated on:May 01, 2025 | 11:22 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ರಿಂದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಹೊರಬಿದ್ದಿದೆ. ಅದು ಕೂಡ 10 ಪಂದ್ಯಗಳ ಮುಕ್ತಾಯದ ಬೆನ್ನಲ್ಲೇ ಎಂಬುದು ವಿಶೇಷ. ಅಂದರೆ 10 ತಂಡಗಳಲ್ಲಿ ಯಾವುದೇ ತಂಡದ ಪ್ಲೇಆಫ್​​ಗೆ ಪ್ರವೇಶಿಸದಿದ್ದರೂ, ಇತ್ತ ಸಿಎಸ್​ಕೆ ತಂಡವು ಪ್ಲೇಆಫ್ ರೇಸ್​​ನಿಂದ ಹೊರಬಿದ್ದಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ರಿಂದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಹೊರಬಿದ್ದಿದೆ. ಅದು ಕೂಡ 10 ಪಂದ್ಯಗಳ ಮುಕ್ತಾಯದ ಬೆನ್ನಲ್ಲೇ ಎಂಬುದು ವಿಶೇಷ. ಅಂದರೆ 10 ತಂಡಗಳಲ್ಲಿ ಯಾವುದೇ ತಂಡದ ಪ್ಲೇಆಫ್​​ಗೆ ಪ್ರವೇಶಿಸದಿದ್ದರೂ, ಇತ್ತ ಸಿಎಸ್​ಕೆ ತಂಡವು ಪ್ಲೇಆಫ್ ರೇಸ್​​ನಿಂದ ಹೊರಬಿದ್ದಿದೆ.

1 / 6
ಪ್ರಸ್ತುತ ಅಂಕ ಪಟ್ಟಿಯಲ್ಲಿ 3ನೇ ಮತ್ತು 4ನೇ ಸ್ಥಾನಗಳಲ್ಲಿರುವ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ತಲಾ 12 ಅಂಕಗಳನ್ನು ಹೊಂದಿದೆ. ಅತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಂದಿನ 4 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ 12 ಅಂಕಗಳನ್ನು ಪಡೆಯಬಹುದು.

ಪ್ರಸ್ತುತ ಅಂಕ ಪಟ್ಟಿಯಲ್ಲಿ 3ನೇ ಮತ್ತು 4ನೇ ಸ್ಥಾನಗಳಲ್ಲಿರುವ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ತಲಾ 12 ಅಂಕಗಳನ್ನು ಹೊಂದಿದೆ. ಅತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಂದಿನ 4 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ 12 ಅಂಕಗಳನ್ನು ಪಡೆಯಬಹುದು.

2 / 6
ಇದಾಗ್ಯೂ ಸಿಎಸ್​ಕೆ ತಂಡವು ಕೇವಲ 10 ಪಂದ್ಯಗಳಲ್ಲೇ ಎಲಿಮಿನೇಟರ್ ಆಗಲು ಮುಖ್ಯ ಕಾರಣ ಮುಂಬೈ ಇಂಡಿಯನ್ಸ್,  ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ಮುಂದಿನ ಪಂದ್ಯಗಳು. ಮೇ 6 ರಂದು ನಡೆಯಲಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ 14 ಅಂಕಗಳನ್ನು ಪಡೆಯುವುದು ಖಚಿತ.

ಇದಾಗ್ಯೂ ಸಿಎಸ್​ಕೆ ತಂಡವು ಕೇವಲ 10 ಪಂದ್ಯಗಳಲ್ಲೇ ಎಲಿಮಿನೇಟರ್ ಆಗಲು ಮುಖ್ಯ ಕಾರಣ ಮುಂಬೈ ಇಂಡಿಯನ್ಸ್,  ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ಮುಂದಿನ ಪಂದ್ಯಗಳು. ಮೇ 6 ರಂದು ನಡೆಯಲಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ 14 ಅಂಕಗಳನ್ನು ಪಡೆಯುವುದು ಖಚಿತ.

3 / 6
ಹಾಗೆಯೇ ಮೇ 11 ರಂದು ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡಗಳ ಪಾಯಿಂಟ್ಸ್ ಕೂಡ 14 ಆಗಲಿದೆ. ಅಂದರೆ ಮೇ 6 ರಂದು ಮುಂಬೈ ಗೆದ್ದರೆ  ತಂಡದ ಪಾಯಿಂಟ್ಸ್​ 14 ಆಗಲಿದೆ. ಇನ್ನು ಗುಜರಾತ್ ಟೈಟಾನ್ಸ್. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದರೆ ಅಥವಾ ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಟೈಟಾನ್ಸ್ ವಿರುದ್ಧ 14 ಅಂಕಗಳನ್ನು ಪಡೆಯಲಿದೆ.

ಹಾಗೆಯೇ ಮೇ 11 ರಂದು ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡಗಳ ಪಾಯಿಂಟ್ಸ್ ಕೂಡ 14 ಆಗಲಿದೆ. ಅಂದರೆ ಮೇ 6 ರಂದು ಮುಂಬೈ ಗೆದ್ದರೆ  ತಂಡದ ಪಾಯಿಂಟ್ಸ್​ 14 ಆಗಲಿದೆ. ಇನ್ನು ಗುಜರಾತ್ ಟೈಟಾನ್ಸ್. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದರೆ ಅಥವಾ ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಟೈಟಾನ್ಸ್ ವಿರುದ್ಧ 14 ಅಂಕಗಳನ್ನು ಪಡೆಯಲಿದೆ.

4 / 6
ಇನ್ನು ಮೇ. 15 ರಂದು ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಯಾರೇ ಗೆದ್ದರೂ ಸಹ ತಂಡದ ಪಾಯಿಂಟ್ಸ್ 14 ಕ್ಕೇರಲಿದೆ. ಅಂದರೆ ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಟೈಟಾನ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ಪಂದ್ಯಗಳಿಂದಾಗಿ ಎರಡು ತಂಡಗಳು 14 ಅಂಕಗಳನ್ನು ಪಡೆಯುವುದು ಖಚಿತ.

ಇನ್ನು ಮೇ. 15 ರಂದು ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಯಾರೇ ಗೆದ್ದರೂ ಸಹ ತಂಡದ ಪಾಯಿಂಟ್ಸ್ 14 ಕ್ಕೇರಲಿದೆ. ಅಂದರೆ ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಟೈಟಾನ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ಪಂದ್ಯಗಳಿಂದಾಗಿ ಎರಡು ತಂಡಗಳು 14 ಅಂಕಗಳನ್ನು ಪಡೆಯುವುದು ಖಚಿತ.

5 / 6
ಈ ಮೂಲಕ ಪಾಯಿಂಟ್ಸ್ ಟೇಬಲ್​ನಲ್ಲಿರುವ ಟಾಪ್-4 ತಂಡಗಳ ಅಂಕಗಳು 13 ದಾಟಲಿದೆ.  ಇತ್ತ ಚೆನ್ನೈ ಸೂಪರ್ ಕಿಂಗ್ಸ್​ ತಂಡವು ಮುಂದಿನ ಎಲ್ಲಾ ಪಂದ್ಯಗಳನ್ನು ಗೆದ್ದರೂ 12 ಅಂಕಗಳನ್ನು ಮಾತ್ರ ಪಡೆಯಲಿದೆ. ಹೀಗಾಗಿಯೇ ಸಿಎಸ್​ಕೆ ತಂಡದ 4 ಪಂದ್ಯಗಳು ಬಾಕಿಯಿದ್ದರೂ ಧೋನಿ ಪಡೆ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಇದರೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಟ್ರೋಫಿ ಗೆಲ್ಲುವ ಕನಸು ಕೂಡ ಕಮರಿದೆ.

ಈ ಮೂಲಕ ಪಾಯಿಂಟ್ಸ್ ಟೇಬಲ್​ನಲ್ಲಿರುವ ಟಾಪ್-4 ತಂಡಗಳ ಅಂಕಗಳು 13 ದಾಟಲಿದೆ.  ಇತ್ತ ಚೆನ್ನೈ ಸೂಪರ್ ಕಿಂಗ್ಸ್​ ತಂಡವು ಮುಂದಿನ ಎಲ್ಲಾ ಪಂದ್ಯಗಳನ್ನು ಗೆದ್ದರೂ 12 ಅಂಕಗಳನ್ನು ಮಾತ್ರ ಪಡೆಯಲಿದೆ. ಹೀಗಾಗಿಯೇ ಸಿಎಸ್​ಕೆ ತಂಡದ 4 ಪಂದ್ಯಗಳು ಬಾಕಿಯಿದ್ದರೂ ಧೋನಿ ಪಡೆ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಇದರೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಟ್ರೋಫಿ ಗೆಲ್ಲುವ ಕನಸು ಕೂಡ ಕಮರಿದೆ.

6 / 6

Published On - 7:37 am, Thu, 1 May 25

Follow us
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್