AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ‘ನನ್ನ ಕೈಯಲ್ಲಿ ಏನೂ ಇಲ್ಲ’; ಐಪಿಎಲ್ ವಿದಾಯದ ಬಗ್ಗೆ ಧೋನಿ ಮಾತು

MS Dhoni: ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಂದಿನ ಆವೃತ್ತಿಯ ಐಪಿಎಲ್ ಆಡುತ್ತೀರಾ ಎಂಬ ಪ್ರಶ್ನೆಯನ್ನು ಧೋನಿಗೆ ಕೇಳಲಾಗಿದೆ. ಇದಕ್ಕೆ ಉತ್ತರಿಸಿದ ಧೋನಿ, ಇದೆಲ್ಲವೂ ತನ್ನ ಕೈಯಲ್ಲಿಲ್ಲ. ಐಪಿಎಲ್ 2025 ರ ಧಾರಣ ನಿಯಮಗಳನ್ನು ನೋಡಿದ ನಂತರವೇ ನಿರ್ಧಾರ ತೆಗೆದುಕೊಳ್ಳಲಾಗುವುದು. ಹೀಗಾಗಿ ಪ್ರಸ್ತುತ ಈ ನಿರ್ಧಾರವು ತನ್ನ ಕೈಯಲ್ಲಿಲ್ಲ ಎಂದು ಧೋನಿ ಹೇಳಿದ್ದಾರೆ.

ಪೃಥ್ವಿಶಂಕರ
|

Updated on: Aug 01, 2024 | 6:53 PM

Share
2025 ರ ಐಪಿಎಲ್ ಹಲವು ರೀತಿಯಲ್ಲಿ ವಿಶೇಷವಾಗಿರಲಿದೆ. ಅದಕ್ಕೆ ಪ್ರಮುಖ ಕಾರಣ ಐಪಿಎಲ್ ಆರಂಭಕ್ಕೂ ಮುನ್ನ ನಡೆಯುವ ಮೆಗಾ ಹರಾಜು. ಈ ಹರಾಜಿನಲ್ಲಿ ಹಲವು ವರ್ಷಗಳಿಂದ ಒಂದೇ ತಂಡದಲ್ಲಿ ಆಡುತ್ತಿರುವ ಆಟಗಾರರು ಮುಂದಿನ ಆವೃತ್ತಿಯಿಂದ ಬೇರೆ ತಂಡದಲ್ಲಿ ಆಡಬೇಕಾದ ಸಂದರ್ಭ ಬರಬಹುದು. ಅಥವಾ ಹಳೆಯ ತಂಡದಲ್ಲೇ ಆ ಆಟಗಾರ ಉಳಿದುಬಿಡಬಹುದು.

2025 ರ ಐಪಿಎಲ್ ಹಲವು ರೀತಿಯಲ್ಲಿ ವಿಶೇಷವಾಗಿರಲಿದೆ. ಅದಕ್ಕೆ ಪ್ರಮುಖ ಕಾರಣ ಐಪಿಎಲ್ ಆರಂಭಕ್ಕೂ ಮುನ್ನ ನಡೆಯುವ ಮೆಗಾ ಹರಾಜು. ಈ ಹರಾಜಿನಲ್ಲಿ ಹಲವು ವರ್ಷಗಳಿಂದ ಒಂದೇ ತಂಡದಲ್ಲಿ ಆಡುತ್ತಿರುವ ಆಟಗಾರರು ಮುಂದಿನ ಆವೃತ್ತಿಯಿಂದ ಬೇರೆ ತಂಡದಲ್ಲಿ ಆಡಬೇಕಾದ ಸಂದರ್ಭ ಬರಬಹುದು. ಅಥವಾ ಹಳೆಯ ತಂಡದಲ್ಲೇ ಆ ಆಟಗಾರ ಉಳಿದುಬಿಡಬಹುದು.

1 / 9
ಇದು ಮಾತ್ರವಲ್ಲದೆ ಮೆಗಾ ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳು ಕೇವಲ ನಾಲ್ಕು ಆಟಗಾರರನ್ನು ತಮ್ಮಲ್ಲೇ ಉಳಿಸಿಕೊಳ್ಳಬೇಕಾಗಿರುವುದರಿಂದ ಕೆಲವು ಆಟಗಾರರ ಐಪಿಎಲ್ ವೃತ್ತಿಜೀವನ ಅಲ್ಲಿಗೆ ಕೊನೆಯಾಗಬಹುದು. ಅಂತಹ ಆಟಗಾರರಲ್ಲಿ ಯಶಸ್ವಿ ನಾಯಕ ಎಂಎಸ್ ಧೋನಿ ಕೂಡ ಒಬ್ಬರು.

ಇದು ಮಾತ್ರವಲ್ಲದೆ ಮೆಗಾ ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳು ಕೇವಲ ನಾಲ್ಕು ಆಟಗಾರರನ್ನು ತಮ್ಮಲ್ಲೇ ಉಳಿಸಿಕೊಳ್ಳಬೇಕಾಗಿರುವುದರಿಂದ ಕೆಲವು ಆಟಗಾರರ ಐಪಿಎಲ್ ವೃತ್ತಿಜೀವನ ಅಲ್ಲಿಗೆ ಕೊನೆಯಾಗಬಹುದು. ಅಂತಹ ಆಟಗಾರರಲ್ಲಿ ಯಶಸ್ವಿ ನಾಯಕ ಎಂಎಸ್ ಧೋನಿ ಕೂಡ ಒಬ್ಬರು.

2 / 9
ವಾಸ್ತವವಾಗಿ 2023 ರ ಆವೃತ್ತಿಯೇ ಧೋನಿಯ ಕೊನೆಯ ಐಪಿಎಲ್ ಎನ್ನಲಾಗುತ್ತಿತ್ತು. ಆದರೆ ಧೋನಿ 2024 ರ ಐಪಿಎಲ್​ನಲ್ಲಿ ಕಣಕ್ಕಿಳಿಯುವ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದರು. ಇದೀಗ ಧೋನಿ ಮುಂದಿನ ಆವೃತ್ತಿಯನ್ನು ಆಡುತ್ತಾರೋ, ಇಲ್ಲವೋ ಎಂಬುದರ ಬಗ್ಗೆ ಫ್ರಾಂಚೈಸಿಯಾಗಲಿ ಅಥವಾ ಧೋನಿಯಾಗಲಿ ಇದುವರೆಗೆ ಏನನ್ನು ಹೇಳಿಲ್ಲ.

ವಾಸ್ತವವಾಗಿ 2023 ರ ಆವೃತ್ತಿಯೇ ಧೋನಿಯ ಕೊನೆಯ ಐಪಿಎಲ್ ಎನ್ನಲಾಗುತ್ತಿತ್ತು. ಆದರೆ ಧೋನಿ 2024 ರ ಐಪಿಎಲ್​ನಲ್ಲಿ ಕಣಕ್ಕಿಳಿಯುವ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದರು. ಇದೀಗ ಧೋನಿ ಮುಂದಿನ ಆವೃತ್ತಿಯನ್ನು ಆಡುತ್ತಾರೋ, ಇಲ್ಲವೋ ಎಂಬುದರ ಬಗ್ಗೆ ಫ್ರಾಂಚೈಸಿಯಾಗಲಿ ಅಥವಾ ಧೋನಿಯಾಗಲಿ ಇದುವರೆಗೆ ಏನನ್ನು ಹೇಳಿಲ್ಲ.

3 / 9
ಆದರೆ ಈ ಕುರಿಯಾದ ಪ್ರಶ್ನೆಗೆ ಧೋನಿ ಇದೇ ಮೊದಲ ಬಾರಿಗೆ ಉತ್ತರಿಸಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಂದಿನ ಆವೃತ್ತಿಯ ಐಪಿಎಲ್ ಆಡುತ್ತೀರಾ ಎಂಬ ಪ್ರಶ್ನೆಯನ್ನು ಧೋನಿಗೆ ಕೇಳಲಾಗಿದೆ. ಇದಕ್ಕೆ ಉತ್ತರಿಸಿದ ಧೋನಿ, ಇದೆಲ್ಲವೂ ತನ್ನ ಕೈಯಲ್ಲಿಲ್ಲ. ಐಪಿಎಲ್ 2025 ರ ಧಾರಣ ನಿಯಮಗಳನ್ನು ನೋಡಿದ ನಂತರವೇ ನಿರ್ಧಾರ ತೆಗೆದುಕೊಳ್ಳಲಾಗುವುದು. ಹೀಗಾಗಿ ಪ್ರಸ್ತುತ ಈ ನಿರ್ಧಾರವು ತನ್ನ ಕೈಯಲ್ಲಿಲ್ಲ ಎಂದು ಧೋನಿ ಹೇಳಿದ್ದಾರೆ.

ಆದರೆ ಈ ಕುರಿಯಾದ ಪ್ರಶ್ನೆಗೆ ಧೋನಿ ಇದೇ ಮೊದಲ ಬಾರಿಗೆ ಉತ್ತರಿಸಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಂದಿನ ಆವೃತ್ತಿಯ ಐಪಿಎಲ್ ಆಡುತ್ತೀರಾ ಎಂಬ ಪ್ರಶ್ನೆಯನ್ನು ಧೋನಿಗೆ ಕೇಳಲಾಗಿದೆ. ಇದಕ್ಕೆ ಉತ್ತರಿಸಿದ ಧೋನಿ, ಇದೆಲ್ಲವೂ ತನ್ನ ಕೈಯಲ್ಲಿಲ್ಲ. ಐಪಿಎಲ್ 2025 ರ ಧಾರಣ ನಿಯಮಗಳನ್ನು ನೋಡಿದ ನಂತರವೇ ನಿರ್ಧಾರ ತೆಗೆದುಕೊಳ್ಳಲಾಗುವುದು. ಹೀಗಾಗಿ ಪ್ರಸ್ತುತ ಈ ನಿರ್ಧಾರವು ತನ್ನ ಕೈಯಲ್ಲಿಲ್ಲ ಎಂದು ಧೋನಿ ಹೇಳಿದ್ದಾರೆ.

4 / 9
ಮುಂದುವರೆದು ಧೋನಿ, ಆಟಗಾರರನ್ನು ಉಳಿಸಿಕೊಳ್ಳುವ ನಿರ್ಧಾರಕ್ಕಾಗಿ ನಾವು ಕಾಯಬೇಕಾಗಿದೆ. ಚೆಂಡು ಸದ್ಯಕ್ಕೆ ನಮ್ಮ ಅಂಗಳದಲ್ಲಿಲ್ಲ. ನಿಯಮಗಳು ಮತ್ತು ನಿಬಂಧನೆಗಳನ್ನು ಮಾಡಿದ ನಂತರ ನಾನು ನಿರ್ಧಾರ ತೆಗೆದುಕೊಳ್ಳುತ್ತೇನೆ. ತಂಡದ ಹಿತಾಸಕ್ತಿ ಪರಿಗಣಿಸಿದ ನಂತರವೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

ಮುಂದುವರೆದು ಧೋನಿ, ಆಟಗಾರರನ್ನು ಉಳಿಸಿಕೊಳ್ಳುವ ನಿರ್ಧಾರಕ್ಕಾಗಿ ನಾವು ಕಾಯಬೇಕಾಗಿದೆ. ಚೆಂಡು ಸದ್ಯಕ್ಕೆ ನಮ್ಮ ಅಂಗಳದಲ್ಲಿಲ್ಲ. ನಿಯಮಗಳು ಮತ್ತು ನಿಬಂಧನೆಗಳನ್ನು ಮಾಡಿದ ನಂತರ ನಾನು ನಿರ್ಧಾರ ತೆಗೆದುಕೊಳ್ಳುತ್ತೇನೆ. ತಂಡದ ಹಿತಾಸಕ್ತಿ ಪರಿಗಣಿಸಿದ ನಂತರವೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

5 / 9
ಪ್ರಸ್ತುತ ಎಂಎಸ್ ಧೋನಿ ಅವರಿಗೆ 43 ವರ್ಷ ವಯಸ್ಸಾಗಿದ್ದು, ಕಳೆದ ಸೀಸನ್​ನಲ್ಲಿ ಅವರು ಅದ್ಭುತ ಪ್ರದರ್ಶನ ನೀಡಿದ್ದಾರೆ. ಈಗ ಅವರ ಫಿಟ್ನೆಸ್ ಮೊದಲಿನಂತೆಯೇ ಇಲ್ಲವಾದರೂ, ಕಳೆದ ಆವೃತ್ತಿಯಲ್ಲಿ ಧೋನಿ, ವಿಕೆಟ್ ಕೀಪಿಂಗ್ ಜವಬ್ದಾರಿಯನ್ನು ಅತ್ಯುತ್ತಮವಾಗಿ ನಿರ್ವಹಿಸಿದ್ದರು. ಹೀಗಾಗಿ ಧೋನಿ ಫಿಟ್ ಇಲ್ಲ ಎಂದು ಹೇಳುವುದು ಅಸಾಧ್ಯ.

ಪ್ರಸ್ತುತ ಎಂಎಸ್ ಧೋನಿ ಅವರಿಗೆ 43 ವರ್ಷ ವಯಸ್ಸಾಗಿದ್ದು, ಕಳೆದ ಸೀಸನ್​ನಲ್ಲಿ ಅವರು ಅದ್ಭುತ ಪ್ರದರ್ಶನ ನೀಡಿದ್ದಾರೆ. ಈಗ ಅವರ ಫಿಟ್ನೆಸ್ ಮೊದಲಿನಂತೆಯೇ ಇಲ್ಲವಾದರೂ, ಕಳೆದ ಆವೃತ್ತಿಯಲ್ಲಿ ಧೋನಿ, ವಿಕೆಟ್ ಕೀಪಿಂಗ್ ಜವಬ್ದಾರಿಯನ್ನು ಅತ್ಯುತ್ತಮವಾಗಿ ನಿರ್ವಹಿಸಿದ್ದರು. ಹೀಗಾಗಿ ಧೋನಿ ಫಿಟ್ ಇಲ್ಲ ಎಂದು ಹೇಳುವುದು ಅಸಾಧ್ಯ.

6 / 9
ಪ್ರದರ್ಶನದ ದೃಷ್ಟಿಯಿಂದ, ಧೋನಿ ನಿವೃತ್ತಿಗೆ ಇದು ಸರಿಯಾದ ಸಮಯವಲ್ಲ. ಧೋನಿ ಕಳೆದ ಸೀಸನ್​ನಲ್ಲಿ ಫಿನಿಶರ್ ಆಗಿ ತಂಡಕ್ಕೆ ಸಾಕಷ್ಟು ಕೊಡುಗೆ ನೀಡಿದ್ದರು. ಧೋನಿ ಆಡಿದ 8 ಇನ್ನಿಂಗ್ಸ್‌ಗಳಲ್ಲಿ 53 ಕ್ಕಿಂತ ಹೆಚ್ಚು ಸರಾಸರಿ ಹಾಗೂ 220 ಕ್ಕಿಂತ ಹೆಚ್ಚು ಸ್ಟ್ರೈಕ್ ರೇಟ್​ನಲ್ಲಿ 161 ರನ್ ಗಳಿಸುವಲ್ಲಿ ಯಶಸ್ವಿಯಾಗಿದ್ದರು.

ಪ್ರದರ್ಶನದ ದೃಷ್ಟಿಯಿಂದ, ಧೋನಿ ನಿವೃತ್ತಿಗೆ ಇದು ಸರಿಯಾದ ಸಮಯವಲ್ಲ. ಧೋನಿ ಕಳೆದ ಸೀಸನ್​ನಲ್ಲಿ ಫಿನಿಶರ್ ಆಗಿ ತಂಡಕ್ಕೆ ಸಾಕಷ್ಟು ಕೊಡುಗೆ ನೀಡಿದ್ದರು. ಧೋನಿ ಆಡಿದ 8 ಇನ್ನಿಂಗ್ಸ್‌ಗಳಲ್ಲಿ 53 ಕ್ಕಿಂತ ಹೆಚ್ಚು ಸರಾಸರಿ ಹಾಗೂ 220 ಕ್ಕಿಂತ ಹೆಚ್ಚು ಸ್ಟ್ರೈಕ್ ರೇಟ್​ನಲ್ಲಿ 161 ರನ್ ಗಳಿಸುವಲ್ಲಿ ಯಶಸ್ವಿಯಾಗಿದ್ದರು.

7 / 9
ಮೆಗಾ ಹರಾಜಿನಲ್ಲಿ ಬಿಸಿಸಿಐ ನಾಲ್ವರು ಆಟಗಾರರನ್ನು ಮಾತ್ರ ಉಳಿಸಿಕೊಳ್ಳುವ ನಿಯಮ ರೂಪಿಸಿದರೆ ಮುಂದಿನ ಸೀಸನ್​ನಲ್ಲಿ ಧೋನಿ ಆಡುವುದು ಕಷ್ಟ ಎಂಬ ವರದಿ ಇದೆ. ವರದಿಯ ಪ್ರಕಾರ, ಬಿಸಿಸಿಐ ಮುಂದಿನ ಸೀಸನ್​ಗೂ ಮೊದಲು ಐದರಿಂದ ಆರು ಆಟಗಾರರನ್ನು ಉಳಿಸಿಕೊಳ್ಳುವ ನಿಯಮವನ್ನು ಮಾಡಿದರೆ ಮಾತ್ರ, ಚೆನ್ನೈ ತಂಡವು ಧೋನಿಯನ್ನು ಉಳಿಸಿಕೊಳ್ಳುತ್ತದೆ ಎಂದು ಹೇಳಲಾಗುತ್ತಿದೆ.

ಮೆಗಾ ಹರಾಜಿನಲ್ಲಿ ಬಿಸಿಸಿಐ ನಾಲ್ವರು ಆಟಗಾರರನ್ನು ಮಾತ್ರ ಉಳಿಸಿಕೊಳ್ಳುವ ನಿಯಮ ರೂಪಿಸಿದರೆ ಮುಂದಿನ ಸೀಸನ್​ನಲ್ಲಿ ಧೋನಿ ಆಡುವುದು ಕಷ್ಟ ಎಂಬ ವರದಿ ಇದೆ. ವರದಿಯ ಪ್ರಕಾರ, ಬಿಸಿಸಿಐ ಮುಂದಿನ ಸೀಸನ್​ಗೂ ಮೊದಲು ಐದರಿಂದ ಆರು ಆಟಗಾರರನ್ನು ಉಳಿಸಿಕೊಳ್ಳುವ ನಿಯಮವನ್ನು ಮಾಡಿದರೆ ಮಾತ್ರ, ಚೆನ್ನೈ ತಂಡವು ಧೋನಿಯನ್ನು ಉಳಿಸಿಕೊಳ್ಳುತ್ತದೆ ಎಂದು ಹೇಳಲಾಗುತ್ತಿದೆ.

8 / 9
ಆದರೆ ಕೇವಲ ನಾಲ್ವರು ಆಟಗಾರರನ್ನು ಮಾತ್ರ ಉಳಿಸಿಕೊಳ್ಳಬೇಕಾಗಿ ಬಂದರೆ ನಾಯಕ ರುತುರಾಜ್ ಗಾಯಕ್ವಾಡ್, ರವೀಂದ್ರ ಜಡೇಜಾ, ಮತಿಶ ಪತಿರಾನ ಮತ್ತು ಶಿವಂ ದುಬೆ ಅವರನ್ನು ಉಳಿಸಿಕೊಳ್ಳಬಹುದು ಎಂದು ಹೇಳಲಾಗುತ್ತಿದೆ. ಹೀಗಾಗಿ ಇದೀಗ ಎಲ್ಲರ ಕಣ್ಣು ಐಪಿಎಲ್ ಆಡಳಿತ ಮಂಡಳಿಯ ನಿರ್ಧಾರದ ಮೇಲೆ ನೆಟ್ಟಿದೆ.

ಆದರೆ ಕೇವಲ ನಾಲ್ವರು ಆಟಗಾರರನ್ನು ಮಾತ್ರ ಉಳಿಸಿಕೊಳ್ಳಬೇಕಾಗಿ ಬಂದರೆ ನಾಯಕ ರುತುರಾಜ್ ಗಾಯಕ್ವಾಡ್, ರವೀಂದ್ರ ಜಡೇಜಾ, ಮತಿಶ ಪತಿರಾನ ಮತ್ತು ಶಿವಂ ದುಬೆ ಅವರನ್ನು ಉಳಿಸಿಕೊಳ್ಳಬಹುದು ಎಂದು ಹೇಳಲಾಗುತ್ತಿದೆ. ಹೀಗಾಗಿ ಇದೀಗ ಎಲ್ಲರ ಕಣ್ಣು ಐಪಿಎಲ್ ಆಡಳಿತ ಮಂಡಳಿಯ ನಿರ್ಧಾರದ ಮೇಲೆ ನೆಟ್ಟಿದೆ.

9 / 9
Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ